Homeಕರೋನಾ ತಲ್ಲಣ3 ತಿಂಗಳ ನಂತರ, ದಿನಕ್ಕೆ ಕಡಿಮೆ ಪ್ರಕರಣಗಳನ್ನು ವರದಿ ಮಾಡಿದ ಮುಂಬೈ.

3 ತಿಂಗಳ ನಂತರ, ದಿನಕ್ಕೆ ಕಡಿಮೆ ಪ್ರಕರಣಗಳನ್ನು ವರದಿ ಮಾಡಿದ ಮುಂಬೈ.

ದೇಶದ ಹಣಕಾಸು ರಾಜಧಾನಿಯಾದ ಮುಂಬೈ, ಭಾನುವಾರ ನಡೆಸಿದ ಪರೀಕ್ಷೆಗಳಿಂದ 1,033 ಕೊರೊನಾ ಪ್ರಕರಣಗಳನ್ನು ಸೋಮವಾರ ವರದಿ ಮಾಡಿದೆ.

- Advertisement -
- Advertisement -

ಕೊರೊನಾ ವೈರಸ್‌ನಿಂದ ತೀವ್ರ ಕೆಟ್ಟ ಹೊಡೆತ ಅನುಭವಿಸಿದ್ದ ಮುಂಬೈನಲ್ಲಿ ಸೋಮವಾರ ನಡೆಸಿದ 8,776 ಕೊರೊನಾ ವೈರಸ್‌ ಪರೀಕ್ಷೆಗಳ ಫಲಿತಾಂಶ ಹೊರಬಿದಿದ್ದು ಅದರಲ್ಲಿ ಸುಮಾರು 700 ಮಾದರಿಗಳು ಮಾತ್ರ ಪಾಸಿಟಿವ್ ಆಗಿದೆ. ಇದು ಕಳೆದ 100 ದಿನಗಳಲ್ಲಿ ಅತ್ಯಂತ ಕಡಿಮೆ ಪ್ರಕರಣ ದಾಖಲು ಮಾಡಿದ ದಿನವಾಗಿದೆ.

ದೇಶದ ಹಣಕಾಸು ರಾಜಧಾನಿಯಾದ ಮುಂಬೈ, ಭಾನುವಾರ ನಡೆಸಿದ ಪರೀಕ್ಷೆಗಳಿಂದ 1,033 ಕೊರೊನಾ ಪ್ರಕರಣಗಳನ್ನು ವರದಿ ಮಾಡಿತ್ತು. ಪ್ರಕರಣಗಳು ದ್ವಿಗುಣವಾಗಲು ಈಗ 68 ದಿನಗಳನ್ನು ತೆಗೆದುಕೊಳ್ಳುತ್ತಿದ್ದು, ಮುಂಬೈನ ಚೇತರಿಕೆ ಪ್ರಮಾಣವು ಶೇಕಡಾ 73 ರಷ್ಟಿದೆ. ಜುಲೈ 20 ರಿಂದ ಜುಲೈ 26 ರವರೆಗೆ ಮುಂಬೈನಲ್ಲಿನ ಕೊರೊನಾವೈರಸ್ ಪ್ರಕರಣಗಳ ಒಟ್ಟಾರೆ ಬೆಳವಣಿಗೆಯ ದರವು ಶೇಕಡಾ 1.03 ರಷ್ಟಿತ್ತು ಎನ್ನಲಾಗಿದೆ.

ಸೋಮವಾರ, ಇಡೀ ಮಹಾರಾಷ್ಟ್ರದಲ್ಲಿ 7,924 ಪ್ರಕರಣಗಳು ಮತ್ತು 227 ಸಾವುಗಳು ದಾಖಲಾಗಿವೆ. ಮುಂಬೈಯಲ್ಲಿ ಇದುವರೆಗೆ 6,132 ಸಾವುಗಳು ಸಂಭವಿಸಿವೆ.

“ಮುಂಬೈನಲ್ಲಿ ಒಂದೇ ದಿನದಲ್ಲಿ ಅತಿ ಹೆಚ್ಚು ಪರೀಕ್ಷೆ ನಡೆಸಿ (8,776) ಕೇವಲ 700 ಪ್ರಕರಣಗಳು ದಾಖಲಾಗಿವೆ. ಇದರಿಂದ ವೈರಸ್ ಅನ್ನು ಪೂರ್ಣ ಪ್ರಮಾಣದಲ್ಲಿ ಹಿಮ್ಮೆಟ್ಟಿಸಲು ಸಾಧ್ಯವಾಗಿದೆ. 3 ತಿಂಗಳ ನಂತರ ಒಂದು ದೊಡ್ಡ ಸಮಾಧಾನ ಸಿಕ್ಕಂತಾಗಿದೆ. ನಿಮ್ಮ ಮಾಸ್ಕ್ ಅನ್ನು ಮುಖದಿಂದ ಕೆಳಗೆ ಇಳಿಸಬೇಡಿ! ಸಂಖ್ಯೆಗಳನ್ನು ಮಾತ್ರ ಇಳಿಸಿ!” ಎಂದು ಮಹಾರಾಷ್ಟ್ರದ ಸಚಿವ ಆದಿತ್ಯ ಠಾಕ್ರೆ ಟ್ವೀಟ್‌ ಮಾಡಿದ್ದಾರೆ.

ಮುಂಬೈನಲ್ಲಿ ಒಟ್ಟು 1,10,182 ಪ್ರಕರಣಗಳಿದ್ದು, ಈ ಪೈಕಿ 21,812 ಪ್ರಕರಣಗಳು ಮಾತ್ರ ಸಕ್ರಿಯ ಪ್ರಕರಣಗಳಾಗಿವೆ. ನೆರೆಯ ಥಾಣೆಯಲ್ಲಿ 34,471 ಸಕ್ರಿಯ ಪ್ರಕರಣಗಳು ಮತ್ತು ಪುಣೆಯಲ್ಲಿ 48,672 ಸಕ್ರಿಯ ಪ್ರಕರಣಗಳಿವೆ.

ಆದಾಗ್ಯೂ, ಅಧಿಕಾರಿಗಳು ಎರಡನೇ ಅಲೆಗೆ ಹೆದರುತ್ತಿದ್ದಾರೆ. ಲಸಿಕೆ ಬರಲು ಇನ್ನೂ ಸ್ವಲ್ಪ ಸಮಯವಿದೆ ಎಂದು ಹೇಳುತ್ತಿರುವುದರಿಂದ ಬಹಳ ಎಚ್ಚರಿಕೆಯಿಂದಿದ್ದಾರೆ.

ಮುಂಬೈನಲ್ಲಿರುವ ಧಾರವಿ ಏಷ್ಯಾದ ಅತಿದೊಡ್ಡ ಸ್ಲಂ ಆಗಿದ್ದು ಪ್ರಕರಣಗಳ ಸಂಖ್ಯೆಯನ್ನು ಕಡಿಮೆ ಮಾಡುವಲ್ಲಿ ಯಶಸ್ವಿಯಾಗಿದೆ. ಈ ಪ್ರದೇಶದಲ್ಲಿ ಈಗ 98 ಸಕ್ರಿಯ ಪ್ರಕರಣಗಳಿವೆ. ಸೋಮವಾರ ಕೇವಲ ಒಂಬತ್ತು ಹೊಸ ಪ್ರಕರಣಗಳು ವರದಿಯಾಗಿವೆ. ಧಾರವಿ ಯಲ್ಲಿ ಒಟ್ಟು 2,540 ಪ್ರಕರಣಗಳು ವರದಿಯಾಗಿವೆ.


ಇದನ್ನೂ ಓದಿ: ಉತ್ತರ ಪ್ರದೇಶದ ಕೊರೊನಾ ರೋಗಿಯ ವೀಡಿಯೋ: ಆತನ ಸಾವಿನ ನಂತರ ವೈರಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...