Homeಮುಖಪುಟ40 ವರ್ಷದ ಬಳಿಕ ಸುಪ್ರೀಂಕೋರ್ಟ್‌ನಿಂದ ನ್ಯಾಯ ಪಡೆದ ಅತ್ಯಾಚಾರ ಸಂತ್ರಸ್ತೆ!

40 ವರ್ಷದ ಬಳಿಕ ಸುಪ್ರೀಂಕೋರ್ಟ್‌ನಿಂದ ನ್ಯಾಯ ಪಡೆದ ಅತ್ಯಾಚಾರ ಸಂತ್ರಸ್ತೆ!

- Advertisement -
- Advertisement -

ಮೂವತ್ತೊಂಬತ್ತು ವರ್ಷ ಹಳೆಯ ಅತ್ಯಾಚಾರ ಪ್ರಕರಣವೊಂದರಲ್ಲಿ ಅಪರಾಧಿ ವಿರುದ್ಧದ ಶಿಕ್ಷೆಯನ್ನು ಎತ್ತಿಹಿಡಿದ ಸುಪ್ರೀಂಕೋರ್ಟ್, ಪ್ರಕರಣ ಇತ್ಯರ್ಥವಾಗಲು ಸುಧೀರ್ಘ ಕಾಯುವಿಕೆಗಾಗಿ ಮಹಿಳೆ ಮತ್ತು ಆಕೆಯ ಕುಟುಂಬದ ಬಗ್ಗೆ ಅನುಕಂಪ ವ್ಯಕ್ತಪಡಿಸಿದೆ.

“ಅಪ್ರಾಪ್ತ ವಯಸ್ಸಿನ ಯುವತಿ ಮತ್ತು ಆಕೆಯ ಕುಟುಂಬ ತಮ್ಮ ಜೀವನದಲ್ಲಿ ಭಯಾನಕ ಅಧ್ಯಾಯವನ್ನು ಕೊನೆಗೊಳಿಸಲು ನಾಲ್ಕು ದಶಕಗಳ ಕಾಲ ಕಾಯಬೇಕಾದ ಪರಿಸ್ಥಿತಿ ಬಂದಿರುವುದು ತೀವ್ರ ಖೇದಕರ” ಎಂದಿರುವ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂಜಯ್ ಕರೋಲ್ ಅವರನ್ನು ಒಳಗೊಂಡ ಸುಪ್ರೀಂಕೋರ್ಟ್ ನ್ಯಾಯಪೀಠ, 2013ರ ಜುಲೈನಲ್ಲಿ ಆರೋಪಿಯನ್ನು ದೋಷಮುಕ್ತಗೊಳಿಸಿ ರಾಜಸ್ಥಾನ ಹೈಕೋರ್ಟ್ ನೀಡಿದ್ದ ತೀರ್ಪನ್ನು ತಳ್ಳಿಹಾಕಿದೆ.

1986ರಲ್ಲಿ ಅಪ್ರಾಪ್ತ ವಯಸ್ಕಳಾಗಿದ್ದ ಮಹಿಳೆಯ ಮೇಲೆ 21 ವರ್ಷದ ಯುವಕನೊಬ್ಬ ಅತ್ಯಾಚಾರ ಎಸಗಿದ್ದ. 1987ರ ನವೆಂಬರ್‌ನಲ್ಲಿ ವಿಚಾರಣಾ ನ್ಯಾಯಾಲಯವು ಆತನನ್ನು ದೋಷಿ ಎಂದು ಘೋಷಿಸಿ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.

ಆ ಬಳಿಕ ಹಲವು ನ್ಯಾಯಾಲಯಗಳನ್ನು ಸುತ್ತುಹೊಡೆದ ಪ್ರಕರಣ, ಅಂತಿಮವಾಗಿ ರಾಜಸ್ಥಾನ ಹೈಕೋರ್ಟ್ ತಲುಪಿದೆ. ಪ್ರಾಸಿಕ್ಯೂಷನ್‌ ಸಾಕ್ಷಿಗಳಿಂದ ಪ್ರಬಲ ಹೇಳಿಕೆಗಳು ಇಲ್ಲ ಎಂಬ ಕಾರಣ ನೀಡಿ ಹೈಕೋರ್ಟ್, ಆರೋಪಿಯನ್ನು ದೋಷಮುಕ್ತಗೊಳಿಸಿತ್ತು.

“ಬಾಲ ಸಾಕ್ಷಿ (ಸಂತ್ರಸ್ತೆ) ಆಕೆಯ ವಿರುದ್ಧ ಅಪರಾಧ ಎಸಗಿರುವ ಬಗ್ಗೆ ಯಾವುದೇ ಸಾಕ್ಷ್ಯವನ್ನು ನೀಡಿಲ್ಲ. ಘಟನೆ ಬಗ್ಗೆ ಕೇಳಿದಾಗ, ಸಂತ್ರಸ್ತೆ ಮೌನವಾಗಿದ್ದರು ಎಂದು ವಿಚಾರಣಾ ನ್ಯಾಯಾಧೀಶರು ದಾಖಲಿಸಿಕೊಂಡಿದ್ದರು. ಮತ್ತೆ ಕೇಳಿದಾಗ ಮೌನವಾಗಿ ಕಣ್ಣೀರು ಸುರಿಸಿದ್ದು ಬಿಟ್ಟರೆ ಮತ್ತೇನೂ ಹೇಳಿರಲಿಲ್ಲ” ಎಂದು ನ್ಯಾಯಾಲಯ ಹೇಳಿತ್ತು.

ಆದರೆ, ಇದನ್ನು ಆರೋಪಿಯ ಪರ ಅಂಶ ಎಂದು ಪರಿಗಣಿಸಲಾಗದು. ಬಾಲಕಿಯ ಮೌನದ ಹಿಂದೆ ಆಘಾತ ಕೆಲಸ ಮಾಡಿದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ. ಮಗುವಿನ ಮೌನವನ್ನು ವಯಸ್ಕ ಸಂತ್ರಸ್ತೆಯ ಮೌನದ ಜೊತೆ ತಾಳೆ ಮಾಡುವಂತಿಲ್ಲ. ಸಂದರ್ಭಕ್ಕೆ ಅನುಸಾರವಾಗಿ ಇದನ್ನು ಅಳೆಯಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಹೇಳಿದ್ದಾರೆ.

“ತನ್ನ ಮೇಲಾದ ದೌರ್ಜನ್ಯದಿಂದ ಚಿಕ್ಕ ವಯಸ್ಸಿನಲ್ಲಿಯೇ ಆಘಾತಕ್ಕೊಳಗಾದ ಮಗು, ಆರೋಪಿಯನ್ನು ಜೈಲಿಗೆ ಹಾಕಲು ಆಧಾರವಾಗಲು ಸಾಧ್ಯವಿಲ್ಲ. ಇಡೀ ಪ್ರಾಸಿಕ್ಯೂಷನ್‌ನ ಭಾರವನ್ನು ಆಕೆಯ ಎಳೆಯ ಹೆಗಲ ಮೇಲೆ ಹೇರುವುದು ಅನ್ಯಾಯ” ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ.

ಖಂಡನಾ ಹೇಳಿಕೆ ಇಲ್ಲದಿದ್ದರೂ, ವಿಶೇಷವಾಗಿ ವೈದ್ಯಕೀಯ ಮತ್ತು ಸಾಂದರ್ಭಿಕ ಪುರಾವೆಗಳು ಲಭ್ಯವಿದ್ದಾಗ, ಶಿಕ್ಷೆಯು ನಿಲ್ಲಲು ಸಾಧ್ಯವಿಲ್ಲ ಎಂಬ ಯಾವುದೇ ಕಠಿಣ ನಿಯಮವಿಲ್ಲ ಎಂದು ನ್ಯಾಯಪೀಠ ತಿಳಿಸಿದೆ.

ಲೈಂಗಿಕ ದೌರ್ಜನ್ಯಕ್ಕೊಳಗಾದ ಮಕ್ಕಳ ಮೇಲಿನ ತನ್ನ ತೀರ್ಪುಗಳನ್ನು ಉಲ್ಲೇಖಿಸಿದ ಪೀಠ, ಕೆಳ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿಯುವ ಮತ್ತು ತಳ್ಳಿ ಹಾಕುವ ಮೊದಲು ಹೈಕೋರ್ಟ್ ಸಾಕ್ಷ್ಯಗಳನ್ನು ಸ್ವತಂತ್ರವಾಗಿ ಪರಿಶೀಲಿಸಬೇಕು ಎಂದಿದೆ.

ಹೈಕೋರ್ಟ್ ಈ ವಿಷಯವನ್ನು ನಿಭಾಯಿಸಿದ ರೀತಿಗೆ ಸುಪ್ರೀಂ ಕೋರ್ಟ್ ಆಶ್ಚರ್ಯ ವ್ಯಕ್ತಪಡಿಸಿದೆ. ತನ್ನ ತೀರ್ಪಿನಲ್ಲಿ ಸಂತ್ರಸ್ತೆಯ ಹೆಸರನ್ನು ಉಲ್ಲೇಖಿಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದೆ.

ಆರೋಪಿಯು ಈಗಾಗಲೇ ಶಿಕ್ಷೆ ಅನುಭವಿಸಿಲ್ಲದಿದ್ದರೆ, ವಿಚಾರಣಾ ನ್ಯಾಯಾಲಯವು ವಿಧಿಸಿರುವ ಶಿಕ್ಷೆಯನ್ನು ಅನುಭವಿಸಲು ನಾಲ್ಕು ವಾರಗಳಲ್ಲಿ ಶರಣಾಗುವಂತೆ ಆದೇಶಿಸಲಾಗಿದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಕೇಸರಿ ಬಟ್ಟೆಯಲ್ಲಿ ಕಡತ ಸಾಗಣೆ ಆರೋಪ: ಉಪವಾಸ ನಿರತ ಸರ್ಕಾರಿ ಮುಸ್ಲಿಂ ಸಿಬ್ಬಂದಿ ಬೆನ್ನಟ್ಟಿ ಮಾರಾಣಾಂತಿಕ ಹಲ್ಲೆ; ವೀಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...