Homeಮುಖಪುಟ40 ವರ್ಷದ ಬಳಿಕ ಸುಪ್ರೀಂಕೋರ್ಟ್‌ನಿಂದ ನ್ಯಾಯ ಪಡೆದ ಅತ್ಯಾಚಾರ ಸಂತ್ರಸ್ತೆ!

40 ವರ್ಷದ ಬಳಿಕ ಸುಪ್ರೀಂಕೋರ್ಟ್‌ನಿಂದ ನ್ಯಾಯ ಪಡೆದ ಅತ್ಯಾಚಾರ ಸಂತ್ರಸ್ತೆ!

- Advertisement -
- Advertisement -

ಮೂವತ್ತೊಂಬತ್ತು ವರ್ಷ ಹಳೆಯ ಅತ್ಯಾಚಾರ ಪ್ರಕರಣವೊಂದರಲ್ಲಿ ಅಪರಾಧಿ ವಿರುದ್ಧದ ಶಿಕ್ಷೆಯನ್ನು ಎತ್ತಿಹಿಡಿದ ಸುಪ್ರೀಂಕೋರ್ಟ್, ಪ್ರಕರಣ ಇತ್ಯರ್ಥವಾಗಲು ಸುಧೀರ್ಘ ಕಾಯುವಿಕೆಗಾಗಿ ಮಹಿಳೆ ಮತ್ತು ಆಕೆಯ ಕುಟುಂಬದ ಬಗ್ಗೆ ಅನುಕಂಪ ವ್ಯಕ್ತಪಡಿಸಿದೆ.

“ಅಪ್ರಾಪ್ತ ವಯಸ್ಸಿನ ಯುವತಿ ಮತ್ತು ಆಕೆಯ ಕುಟುಂಬ ತಮ್ಮ ಜೀವನದಲ್ಲಿ ಭಯಾನಕ ಅಧ್ಯಾಯವನ್ನು ಕೊನೆಗೊಳಿಸಲು ನಾಲ್ಕು ದಶಕಗಳ ಕಾಲ ಕಾಯಬೇಕಾದ ಪರಿಸ್ಥಿತಿ ಬಂದಿರುವುದು ತೀವ್ರ ಖೇದಕರ” ಎಂದಿರುವ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂಜಯ್ ಕರೋಲ್ ಅವರನ್ನು ಒಳಗೊಂಡ ಸುಪ್ರೀಂಕೋರ್ಟ್ ನ್ಯಾಯಪೀಠ, 2013ರ ಜುಲೈನಲ್ಲಿ ಆರೋಪಿಯನ್ನು ದೋಷಮುಕ್ತಗೊಳಿಸಿ ರಾಜಸ್ಥಾನ ಹೈಕೋರ್ಟ್ ನೀಡಿದ್ದ ತೀರ್ಪನ್ನು ತಳ್ಳಿಹಾಕಿದೆ.

1986ರಲ್ಲಿ ಅಪ್ರಾಪ್ತ ವಯಸ್ಕಳಾಗಿದ್ದ ಮಹಿಳೆಯ ಮೇಲೆ 21 ವರ್ಷದ ಯುವಕನೊಬ್ಬ ಅತ್ಯಾಚಾರ ಎಸಗಿದ್ದ. 1987ರ ನವೆಂಬರ್‌ನಲ್ಲಿ ವಿಚಾರಣಾ ನ್ಯಾಯಾಲಯವು ಆತನನ್ನು ದೋಷಿ ಎಂದು ಘೋಷಿಸಿ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.

ಆ ಬಳಿಕ ಹಲವು ನ್ಯಾಯಾಲಯಗಳನ್ನು ಸುತ್ತುಹೊಡೆದ ಪ್ರಕರಣ, ಅಂತಿಮವಾಗಿ ರಾಜಸ್ಥಾನ ಹೈಕೋರ್ಟ್ ತಲುಪಿದೆ. ಪ್ರಾಸಿಕ್ಯೂಷನ್‌ ಸಾಕ್ಷಿಗಳಿಂದ ಪ್ರಬಲ ಹೇಳಿಕೆಗಳು ಇಲ್ಲ ಎಂಬ ಕಾರಣ ನೀಡಿ ಹೈಕೋರ್ಟ್, ಆರೋಪಿಯನ್ನು ದೋಷಮುಕ್ತಗೊಳಿಸಿತ್ತು.

“ಬಾಲ ಸಾಕ್ಷಿ (ಸಂತ್ರಸ್ತೆ) ಆಕೆಯ ವಿರುದ್ಧ ಅಪರಾಧ ಎಸಗಿರುವ ಬಗ್ಗೆ ಯಾವುದೇ ಸಾಕ್ಷ್ಯವನ್ನು ನೀಡಿಲ್ಲ. ಘಟನೆ ಬಗ್ಗೆ ಕೇಳಿದಾಗ, ಸಂತ್ರಸ್ತೆ ಮೌನವಾಗಿದ್ದರು ಎಂದು ವಿಚಾರಣಾ ನ್ಯಾಯಾಧೀಶರು ದಾಖಲಿಸಿಕೊಂಡಿದ್ದರು. ಮತ್ತೆ ಕೇಳಿದಾಗ ಮೌನವಾಗಿ ಕಣ್ಣೀರು ಸುರಿಸಿದ್ದು ಬಿಟ್ಟರೆ ಮತ್ತೇನೂ ಹೇಳಿರಲಿಲ್ಲ” ಎಂದು ನ್ಯಾಯಾಲಯ ಹೇಳಿತ್ತು.

ಆದರೆ, ಇದನ್ನು ಆರೋಪಿಯ ಪರ ಅಂಶ ಎಂದು ಪರಿಗಣಿಸಲಾಗದು. ಬಾಲಕಿಯ ಮೌನದ ಹಿಂದೆ ಆಘಾತ ಕೆಲಸ ಮಾಡಿದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ. ಮಗುವಿನ ಮೌನವನ್ನು ವಯಸ್ಕ ಸಂತ್ರಸ್ತೆಯ ಮೌನದ ಜೊತೆ ತಾಳೆ ಮಾಡುವಂತಿಲ್ಲ. ಸಂದರ್ಭಕ್ಕೆ ಅನುಸಾರವಾಗಿ ಇದನ್ನು ಅಳೆಯಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಹೇಳಿದ್ದಾರೆ.

“ತನ್ನ ಮೇಲಾದ ದೌರ್ಜನ್ಯದಿಂದ ಚಿಕ್ಕ ವಯಸ್ಸಿನಲ್ಲಿಯೇ ಆಘಾತಕ್ಕೊಳಗಾದ ಮಗು, ಆರೋಪಿಯನ್ನು ಜೈಲಿಗೆ ಹಾಕಲು ಆಧಾರವಾಗಲು ಸಾಧ್ಯವಿಲ್ಲ. ಇಡೀ ಪ್ರಾಸಿಕ್ಯೂಷನ್‌ನ ಭಾರವನ್ನು ಆಕೆಯ ಎಳೆಯ ಹೆಗಲ ಮೇಲೆ ಹೇರುವುದು ಅನ್ಯಾಯ” ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ.

ಖಂಡನಾ ಹೇಳಿಕೆ ಇಲ್ಲದಿದ್ದರೂ, ವಿಶೇಷವಾಗಿ ವೈದ್ಯಕೀಯ ಮತ್ತು ಸಾಂದರ್ಭಿಕ ಪುರಾವೆಗಳು ಲಭ್ಯವಿದ್ದಾಗ, ಶಿಕ್ಷೆಯು ನಿಲ್ಲಲು ಸಾಧ್ಯವಿಲ್ಲ ಎಂಬ ಯಾವುದೇ ಕಠಿಣ ನಿಯಮವಿಲ್ಲ ಎಂದು ನ್ಯಾಯಪೀಠ ತಿಳಿಸಿದೆ.

ಲೈಂಗಿಕ ದೌರ್ಜನ್ಯಕ್ಕೊಳಗಾದ ಮಕ್ಕಳ ಮೇಲಿನ ತನ್ನ ತೀರ್ಪುಗಳನ್ನು ಉಲ್ಲೇಖಿಸಿದ ಪೀಠ, ಕೆಳ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿಯುವ ಮತ್ತು ತಳ್ಳಿ ಹಾಕುವ ಮೊದಲು ಹೈಕೋರ್ಟ್ ಸಾಕ್ಷ್ಯಗಳನ್ನು ಸ್ವತಂತ್ರವಾಗಿ ಪರಿಶೀಲಿಸಬೇಕು ಎಂದಿದೆ.

ಹೈಕೋರ್ಟ್ ಈ ವಿಷಯವನ್ನು ನಿಭಾಯಿಸಿದ ರೀತಿಗೆ ಸುಪ್ರೀಂ ಕೋರ್ಟ್ ಆಶ್ಚರ್ಯ ವ್ಯಕ್ತಪಡಿಸಿದೆ. ತನ್ನ ತೀರ್ಪಿನಲ್ಲಿ ಸಂತ್ರಸ್ತೆಯ ಹೆಸರನ್ನು ಉಲ್ಲೇಖಿಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದೆ.

ಆರೋಪಿಯು ಈಗಾಗಲೇ ಶಿಕ್ಷೆ ಅನುಭವಿಸಿಲ್ಲದಿದ್ದರೆ, ವಿಚಾರಣಾ ನ್ಯಾಯಾಲಯವು ವಿಧಿಸಿರುವ ಶಿಕ್ಷೆಯನ್ನು ಅನುಭವಿಸಲು ನಾಲ್ಕು ವಾರಗಳಲ್ಲಿ ಶರಣಾಗುವಂತೆ ಆದೇಶಿಸಲಾಗಿದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಕೇಸರಿ ಬಟ್ಟೆಯಲ್ಲಿ ಕಡತ ಸಾಗಣೆ ಆರೋಪ: ಉಪವಾಸ ನಿರತ ಸರ್ಕಾರಿ ಮುಸ್ಲಿಂ ಸಿಬ್ಬಂದಿ ಬೆನ್ನಟ್ಟಿ ಮಾರಾಣಾಂತಿಕ ಹಲ್ಲೆ; ವೀಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...