Homeಮುಖಪುಟ40 ವರ್ಷದ ಬಳಿಕ ಸುಪ್ರೀಂಕೋರ್ಟ್‌ನಿಂದ ನ್ಯಾಯ ಪಡೆದ ಅತ್ಯಾಚಾರ ಸಂತ್ರಸ್ತೆ!

40 ವರ್ಷದ ಬಳಿಕ ಸುಪ್ರೀಂಕೋರ್ಟ್‌ನಿಂದ ನ್ಯಾಯ ಪಡೆದ ಅತ್ಯಾಚಾರ ಸಂತ್ರಸ್ತೆ!

- Advertisement -
- Advertisement -

ಮೂವತ್ತೊಂಬತ್ತು ವರ್ಷ ಹಳೆಯ ಅತ್ಯಾಚಾರ ಪ್ರಕರಣವೊಂದರಲ್ಲಿ ಅಪರಾಧಿ ವಿರುದ್ಧದ ಶಿಕ್ಷೆಯನ್ನು ಎತ್ತಿಹಿಡಿದ ಸುಪ್ರೀಂಕೋರ್ಟ್, ಪ್ರಕರಣ ಇತ್ಯರ್ಥವಾಗಲು ಸುಧೀರ್ಘ ಕಾಯುವಿಕೆಗಾಗಿ ಮಹಿಳೆ ಮತ್ತು ಆಕೆಯ ಕುಟುಂಬದ ಬಗ್ಗೆ ಅನುಕಂಪ ವ್ಯಕ್ತಪಡಿಸಿದೆ.

“ಅಪ್ರಾಪ್ತ ವಯಸ್ಸಿನ ಯುವತಿ ಮತ್ತು ಆಕೆಯ ಕುಟುಂಬ ತಮ್ಮ ಜೀವನದಲ್ಲಿ ಭಯಾನಕ ಅಧ್ಯಾಯವನ್ನು ಕೊನೆಗೊಳಿಸಲು ನಾಲ್ಕು ದಶಕಗಳ ಕಾಲ ಕಾಯಬೇಕಾದ ಪರಿಸ್ಥಿತಿ ಬಂದಿರುವುದು ತೀವ್ರ ಖೇದಕರ” ಎಂದಿರುವ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂಜಯ್ ಕರೋಲ್ ಅವರನ್ನು ಒಳಗೊಂಡ ಸುಪ್ರೀಂಕೋರ್ಟ್ ನ್ಯಾಯಪೀಠ, 2013ರ ಜುಲೈನಲ್ಲಿ ಆರೋಪಿಯನ್ನು ದೋಷಮುಕ್ತಗೊಳಿಸಿ ರಾಜಸ್ಥಾನ ಹೈಕೋರ್ಟ್ ನೀಡಿದ್ದ ತೀರ್ಪನ್ನು ತಳ್ಳಿಹಾಕಿದೆ.

1986ರಲ್ಲಿ ಅಪ್ರಾಪ್ತ ವಯಸ್ಕಳಾಗಿದ್ದ ಮಹಿಳೆಯ ಮೇಲೆ 21 ವರ್ಷದ ಯುವಕನೊಬ್ಬ ಅತ್ಯಾಚಾರ ಎಸಗಿದ್ದ. 1987ರ ನವೆಂಬರ್‌ನಲ್ಲಿ ವಿಚಾರಣಾ ನ್ಯಾಯಾಲಯವು ಆತನನ್ನು ದೋಷಿ ಎಂದು ಘೋಷಿಸಿ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.

ಆ ಬಳಿಕ ಹಲವು ನ್ಯಾಯಾಲಯಗಳನ್ನು ಸುತ್ತುಹೊಡೆದ ಪ್ರಕರಣ, ಅಂತಿಮವಾಗಿ ರಾಜಸ್ಥಾನ ಹೈಕೋರ್ಟ್ ತಲುಪಿದೆ. ಪ್ರಾಸಿಕ್ಯೂಷನ್‌ ಸಾಕ್ಷಿಗಳಿಂದ ಪ್ರಬಲ ಹೇಳಿಕೆಗಳು ಇಲ್ಲ ಎಂಬ ಕಾರಣ ನೀಡಿ ಹೈಕೋರ್ಟ್, ಆರೋಪಿಯನ್ನು ದೋಷಮುಕ್ತಗೊಳಿಸಿತ್ತು.

“ಬಾಲ ಸಾಕ್ಷಿ (ಸಂತ್ರಸ್ತೆ) ಆಕೆಯ ವಿರುದ್ಧ ಅಪರಾಧ ಎಸಗಿರುವ ಬಗ್ಗೆ ಯಾವುದೇ ಸಾಕ್ಷ್ಯವನ್ನು ನೀಡಿಲ್ಲ. ಘಟನೆ ಬಗ್ಗೆ ಕೇಳಿದಾಗ, ಸಂತ್ರಸ್ತೆ ಮೌನವಾಗಿದ್ದರು ಎಂದು ವಿಚಾರಣಾ ನ್ಯಾಯಾಧೀಶರು ದಾಖಲಿಸಿಕೊಂಡಿದ್ದರು. ಮತ್ತೆ ಕೇಳಿದಾಗ ಮೌನವಾಗಿ ಕಣ್ಣೀರು ಸುರಿಸಿದ್ದು ಬಿಟ್ಟರೆ ಮತ್ತೇನೂ ಹೇಳಿರಲಿಲ್ಲ” ಎಂದು ನ್ಯಾಯಾಲಯ ಹೇಳಿತ್ತು.

ಆದರೆ, ಇದನ್ನು ಆರೋಪಿಯ ಪರ ಅಂಶ ಎಂದು ಪರಿಗಣಿಸಲಾಗದು. ಬಾಲಕಿಯ ಮೌನದ ಹಿಂದೆ ಆಘಾತ ಕೆಲಸ ಮಾಡಿದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ. ಮಗುವಿನ ಮೌನವನ್ನು ವಯಸ್ಕ ಸಂತ್ರಸ್ತೆಯ ಮೌನದ ಜೊತೆ ತಾಳೆ ಮಾಡುವಂತಿಲ್ಲ. ಸಂದರ್ಭಕ್ಕೆ ಅನುಸಾರವಾಗಿ ಇದನ್ನು ಅಳೆಯಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಹೇಳಿದ್ದಾರೆ.

“ತನ್ನ ಮೇಲಾದ ದೌರ್ಜನ್ಯದಿಂದ ಚಿಕ್ಕ ವಯಸ್ಸಿನಲ್ಲಿಯೇ ಆಘಾತಕ್ಕೊಳಗಾದ ಮಗು, ಆರೋಪಿಯನ್ನು ಜೈಲಿಗೆ ಹಾಕಲು ಆಧಾರವಾಗಲು ಸಾಧ್ಯವಿಲ್ಲ. ಇಡೀ ಪ್ರಾಸಿಕ್ಯೂಷನ್‌ನ ಭಾರವನ್ನು ಆಕೆಯ ಎಳೆಯ ಹೆಗಲ ಮೇಲೆ ಹೇರುವುದು ಅನ್ಯಾಯ” ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ.

ಖಂಡನಾ ಹೇಳಿಕೆ ಇಲ್ಲದಿದ್ದರೂ, ವಿಶೇಷವಾಗಿ ವೈದ್ಯಕೀಯ ಮತ್ತು ಸಾಂದರ್ಭಿಕ ಪುರಾವೆಗಳು ಲಭ್ಯವಿದ್ದಾಗ, ಶಿಕ್ಷೆಯು ನಿಲ್ಲಲು ಸಾಧ್ಯವಿಲ್ಲ ಎಂಬ ಯಾವುದೇ ಕಠಿಣ ನಿಯಮವಿಲ್ಲ ಎಂದು ನ್ಯಾಯಪೀಠ ತಿಳಿಸಿದೆ.

ಲೈಂಗಿಕ ದೌರ್ಜನ್ಯಕ್ಕೊಳಗಾದ ಮಕ್ಕಳ ಮೇಲಿನ ತನ್ನ ತೀರ್ಪುಗಳನ್ನು ಉಲ್ಲೇಖಿಸಿದ ಪೀಠ, ಕೆಳ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿಯುವ ಮತ್ತು ತಳ್ಳಿ ಹಾಕುವ ಮೊದಲು ಹೈಕೋರ್ಟ್ ಸಾಕ್ಷ್ಯಗಳನ್ನು ಸ್ವತಂತ್ರವಾಗಿ ಪರಿಶೀಲಿಸಬೇಕು ಎಂದಿದೆ.

ಹೈಕೋರ್ಟ್ ಈ ವಿಷಯವನ್ನು ನಿಭಾಯಿಸಿದ ರೀತಿಗೆ ಸುಪ್ರೀಂ ಕೋರ್ಟ್ ಆಶ್ಚರ್ಯ ವ್ಯಕ್ತಪಡಿಸಿದೆ. ತನ್ನ ತೀರ್ಪಿನಲ್ಲಿ ಸಂತ್ರಸ್ತೆಯ ಹೆಸರನ್ನು ಉಲ್ಲೇಖಿಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದೆ.

ಆರೋಪಿಯು ಈಗಾಗಲೇ ಶಿಕ್ಷೆ ಅನುಭವಿಸಿಲ್ಲದಿದ್ದರೆ, ವಿಚಾರಣಾ ನ್ಯಾಯಾಲಯವು ವಿಧಿಸಿರುವ ಶಿಕ್ಷೆಯನ್ನು ಅನುಭವಿಸಲು ನಾಲ್ಕು ವಾರಗಳಲ್ಲಿ ಶರಣಾಗುವಂತೆ ಆದೇಶಿಸಲಾಗಿದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಕೇಸರಿ ಬಟ್ಟೆಯಲ್ಲಿ ಕಡತ ಸಾಗಣೆ ಆರೋಪ: ಉಪವಾಸ ನಿರತ ಸರ್ಕಾರಿ ಮುಸ್ಲಿಂ ಸಿಬ್ಬಂದಿ ಬೆನ್ನಟ್ಟಿ ಮಾರಾಣಾಂತಿಕ ಹಲ್ಲೆ; ವೀಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...