Homeಮುಖಪುಟಅಲಿಘರ್ ನಗರದ ಹೆಸರು ಹರಿಘರ್ ಎಂದು ಬದಲಾಯಿಸಲು ಅನುಮೋದನೆ

ಅಲಿಘರ್ ನಗರದ ಹೆಸರು ಹರಿಘರ್ ಎಂದು ಬದಲಾಯಿಸಲು ಅನುಮೋದನೆ

- Advertisement -
- Advertisement -

ಅಲಹಾಬಾದ್ ಮತ್ತು ಫೈಜಾಬಾದ್‌ ಬಳಿಕ ಇದೀಗ ಉತ್ತರ ಪ್ರದೇಶದ ಮತ್ತೊಂದು ಪ್ರಮುಖ ನಗರದ ಹೆಸರು ಬದಲಾವಣೆಗೆ ಅನುಮೋದನೆ ನೀಡಲಾಗಿದೆ. ಅಲಿಘರ್ ಮುನ್ಸಿಪಲ್ ಕಾರ್ಪೊರೇಷನ್ ನಗರದ ಹೆಸರನ್ನು ಹರಿಘರ್ ಎಂದು ಬದಲಾಯಿಸುವ ಪ್ರಸ್ತಾಪವನ್ನು ಸರ್ವಾನುಮತದಿಂದ ಅಂಗೀಕರಿಸಿದೆ.

ನಿನ್ನೆ ನಡೆದ ಸಭೆಯಲ್ಲಿ ಮೇಯರ್ ಪ್ರಶಾಂತ್ ಸಿಂಘಾಲ್ ಪ್ರಸ್ತಾವನೆ ಸಲ್ಲಿಸಿದ್ದು, ಎಲ್ಲಾ ಕೌನ್ಸಿಲರ್‌ಗಳು ಪ್ರಸ್ತಾವನೆಗೆ ಬೆಂಬಲಿಸಿದ್ದಾರೆ. ಈ ಪ್ರಸ್ತಾವನೆಗೆ ಉತ್ತರಪ್ರದೇಶ ಸರ್ಕಾರ ಅನುಮೋದನೆ ನೀಡಿದರೆ ಯೋಗಿ ಆಡಳಿತದಲ್ಲಿ ಹೆಸರು ಬದಲಾವಣೆಗೊಂಡ ಮೂರನೇ ನಗರ ಇದಾಗಲಿದೆ. ಜನವರಿ 2019ರಲ್ಲಿ ಅಲಹಾಬಾದ್‌ ಹೆಸರನ್ನು ಪ್ರಯಾಗರಾಜ್‌ ಎಂದು ಬದಲಿಸಲಾಗಿತ್ತು.

ಅಲಿಘರ್ ಮೇಯರ್ ಪ್ರಶಾಂತ್ ಸಿಂಘಾಲ್ ಈ ಬಗ್ಗೆ ಮಾತನಾಡುತ್ತಾ, ನಿನ್ನೆ ನಡೆದ ಸಭೆಯಲ್ಲಿ ಅಲಿಘರ್ ಹೆಸರನ್ನು ಹರಿಘರ್ ಎಂದು ಬದಲಾಯಿಸುವ ಪ್ರಸ್ತಾವನೆಯನ್ನು ಮಂಡಿಸಲಾಯಿತು. ಎಲ್ಲಾ ಕೌನ್ಸಿಲರ್‌ಗಳು ಇದನ್ನು ಸರ್ವಾನುಮತದಿಂದ ಬೆಂಬಲಿಸಿದರು. ಈಗ ಈ ಪ್ರಸ್ತಾವನೆಯನ್ನು ಸರಕಾರಕ್ಕೆ ಕಳುಹಿಸಲಾಗುವುದು. ಸರಕಾರವು ಇದರ ಬಗ್ಗೆ ಗಮನಹರಿಸಿ ನಮ್ಮ ಬೇಡಿಕೆಯನ್ನು ಈಡೇರಿಸುತ್ತದೆ ಎಂದು ನಾನು ಭಾವಿಸುತ್ತೇನೆ. ಅಲಿಗಢದ ಹೆಸರನ್ನು ಹರಿಗಢ ಎಂದು ಬದಲಾಯಿಸಲು ಬಹಳ ಸಮಯದಿಂದ ಬೇಡಿಕೆ ಬಂದಿತ್ತು ಎಂದು  ಹೇಳಿದ್ದಾರೆ.
ರಾಜ್ಯ ಸರ್ಕಾರವು ರಾಜ್ಯದೊಳಗಿನ ಯಾವುದೇ ನಗರ ಅಥವಾ ಗ್ರಾಮೀಣ ಪ್ರದೇಶದ ಹೆಸರನ್ನು ಬದಲಾಯಿಸಬಹುದು. ಹೆಸರು ಬದಲಾವಣೆಯ ನಿರ್ಣಯವನ್ನು ಸ್ಥಳೀಯ ಆಡಳಿತ ಸರ್ವಾನುಮತದಿಂದ ಅನುಮೋದಿಸಿದ ನಂತರ ಅದನ್ನು ರಾಜ್ಯ ಸರ್ಕಾರದ ಮುಂದಿಡಲಾಗುತ್ತದೆ. ನಂತರ ನಿರ್ಣಯವನ್ನು ರಾಜ್ಯ ಸರ್ಕಾರವು ಅನುಮೋದನೆಗಾಗಿ ಗೃಹ ಸಚಿವಾಲಯಕ್ಕೆ ಕಳುಹಿಸುತ್ತದೆ. ಸಚಿವಾಲಯ ಮತ್ತು ಇತರ ಸಂಬಂಧಿತ ಇಲಾಖೆಗಳು ನಿರ್ಣಯವನ್ನು ಅನುಮೋದಿಸಿದರೆ,  ರಾಜ್ಯ ಸರ್ಕಾರವು ಅಧಿಕೃತವಾಗಿ ಹೆಸರನ್ನು ಬದಲಾಯಿಸಬಹುದು.
ಈ ಹಿಂದೆ 2021ರಲ್ಲಿ ಆಗಿನ ಜಿಲ್ಲಾ ಪಂಚಾಯತ್‌ ಕೂಡ ಆಲಿಘರ್‌ ಹೆಸರನ್ನು ಹರಿಘರ್‌ ಎಂದು ಬದಲಾಯಿಸಬೇಕೆಂಬ ಪ್ರಸ್ತಾವನೆ ಸಲ್ಲಿಸಿತ್ತು. 2017ರಲ್ಲಿ ಆದಿತ್ಯನಾಥ್‌ ಸರ್ಕಾರ ರಚನೆ ಬಳಿಕ ಪೂರ್ವಾಂಚಲ್‌ ಎಕ್ಸ್‌ಪ್ರೆಸ್‌ವೇ ಸಹಿತ ಹಲವು ಯೋಜನೆಗಳ ಹೆಸರು ಬದಲಾಯಿಸಿದೆ. ಹಿಂದಿನ ಸಮಾಜವಾದಿ ಪಕ್ಷದ ಸರ್ಕಾರದ ಅವಧಿಯಲ್ಲಿದ್ದ ಸಮಾಜವಾದಿ ಅಂಬುಲೆನ್ಸ್‌ ಸ್ವಾಸ್ಥ್ಯ ಸೇವಾ ಅಂಬುಲೆನ್ಸ್‌ ಸೇವೆಯ ಹೆಸರಿನಲ್ಲಿನ ಸಮಾಜವಾದಿ ಪದವನ್ನು ಈಗಿನ ಸರ್ಕಾರ ತೆಗೆದು ಹಾಕಿದೆ.
ನಮಗೆ ಒಳ್ಳೆಯದೆಂದು ಅನಿಸಿದ್ದನ್ನು ಮಾಡಿದ್ದೇವೆ. ನಾವು ಮೊಘಲ್ ಸರಾಯ್‌ನ್ನು ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ನಗರ ಎಂದು ಮರುನಾಮಕರಣ ಮಾಡಿದ್ದೇವೆ. ಅಲಹಾಬಾದ್‌ನ್ನು ಪ್ರಯಾಗ್‌ರಾಜ್‌ ಎಂದು ಮತ್ತು ಫೈಜಾಬಾದ್ ಜಿಲ್ಲೆಯನ್ನು ಅಯೋಧ್ಯೆ ಜಿಲ್ಲೆ ಎಂದು ಮರುನಾಮಕರಣ ಮಾಡಿದ್ದೇವೆ. ಅಗತ್ಯವಿರುವಲ್ಲಿ ಸರ್ಕಾರ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಯೋಗಿ ಆದಿತ್ಯನಾಥ್ ಈ ಮೊದಲು ಹೇಳಿದ್ದರು.
ಇದನ್ನು ಓದಿ: ಅಲಿಘರ್ ನಗರದ ಹೆಸರು ಹರಿಘರ್ ಎಂದು ಬದಲಾಯಿಸಲು ಅನುಮೋದನೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...