Homeಮುಖಪುಟಅಲಿಘರ್ ನಗರದ ಹೆಸರು ಹರಿಘರ್ ಎಂದು ಬದಲಾಯಿಸಲು ಅನುಮೋದನೆ

ಅಲಿಘರ್ ನಗರದ ಹೆಸರು ಹರಿಘರ್ ಎಂದು ಬದಲಾಯಿಸಲು ಅನುಮೋದನೆ

- Advertisement -
- Advertisement -

ಅಲಹಾಬಾದ್ ಮತ್ತು ಫೈಜಾಬಾದ್‌ ಬಳಿಕ ಇದೀಗ ಉತ್ತರ ಪ್ರದೇಶದ ಮತ್ತೊಂದು ಪ್ರಮುಖ ನಗರದ ಹೆಸರು ಬದಲಾವಣೆಗೆ ಅನುಮೋದನೆ ನೀಡಲಾಗಿದೆ. ಅಲಿಘರ್ ಮುನ್ಸಿಪಲ್ ಕಾರ್ಪೊರೇಷನ್ ನಗರದ ಹೆಸರನ್ನು ಹರಿಘರ್ ಎಂದು ಬದಲಾಯಿಸುವ ಪ್ರಸ್ತಾಪವನ್ನು ಸರ್ವಾನುಮತದಿಂದ ಅಂಗೀಕರಿಸಿದೆ.

ನಿನ್ನೆ ನಡೆದ ಸಭೆಯಲ್ಲಿ ಮೇಯರ್ ಪ್ರಶಾಂತ್ ಸಿಂಘಾಲ್ ಪ್ರಸ್ತಾವನೆ ಸಲ್ಲಿಸಿದ್ದು, ಎಲ್ಲಾ ಕೌನ್ಸಿಲರ್‌ಗಳು ಪ್ರಸ್ತಾವನೆಗೆ ಬೆಂಬಲಿಸಿದ್ದಾರೆ. ಈ ಪ್ರಸ್ತಾವನೆಗೆ ಉತ್ತರಪ್ರದೇಶ ಸರ್ಕಾರ ಅನುಮೋದನೆ ನೀಡಿದರೆ ಯೋಗಿ ಆಡಳಿತದಲ್ಲಿ ಹೆಸರು ಬದಲಾವಣೆಗೊಂಡ ಮೂರನೇ ನಗರ ಇದಾಗಲಿದೆ. ಜನವರಿ 2019ರಲ್ಲಿ ಅಲಹಾಬಾದ್‌ ಹೆಸರನ್ನು ಪ್ರಯಾಗರಾಜ್‌ ಎಂದು ಬದಲಿಸಲಾಗಿತ್ತು.

ಅಲಿಘರ್ ಮೇಯರ್ ಪ್ರಶಾಂತ್ ಸಿಂಘಾಲ್ ಈ ಬಗ್ಗೆ ಮಾತನಾಡುತ್ತಾ, ನಿನ್ನೆ ನಡೆದ ಸಭೆಯಲ್ಲಿ ಅಲಿಘರ್ ಹೆಸರನ್ನು ಹರಿಘರ್ ಎಂದು ಬದಲಾಯಿಸುವ ಪ್ರಸ್ತಾವನೆಯನ್ನು ಮಂಡಿಸಲಾಯಿತು. ಎಲ್ಲಾ ಕೌನ್ಸಿಲರ್‌ಗಳು ಇದನ್ನು ಸರ್ವಾನುಮತದಿಂದ ಬೆಂಬಲಿಸಿದರು. ಈಗ ಈ ಪ್ರಸ್ತಾವನೆಯನ್ನು ಸರಕಾರಕ್ಕೆ ಕಳುಹಿಸಲಾಗುವುದು. ಸರಕಾರವು ಇದರ ಬಗ್ಗೆ ಗಮನಹರಿಸಿ ನಮ್ಮ ಬೇಡಿಕೆಯನ್ನು ಈಡೇರಿಸುತ್ತದೆ ಎಂದು ನಾನು ಭಾವಿಸುತ್ತೇನೆ. ಅಲಿಗಢದ ಹೆಸರನ್ನು ಹರಿಗಢ ಎಂದು ಬದಲಾಯಿಸಲು ಬಹಳ ಸಮಯದಿಂದ ಬೇಡಿಕೆ ಬಂದಿತ್ತು ಎಂದು  ಹೇಳಿದ್ದಾರೆ.
ರಾಜ್ಯ ಸರ್ಕಾರವು ರಾಜ್ಯದೊಳಗಿನ ಯಾವುದೇ ನಗರ ಅಥವಾ ಗ್ರಾಮೀಣ ಪ್ರದೇಶದ ಹೆಸರನ್ನು ಬದಲಾಯಿಸಬಹುದು. ಹೆಸರು ಬದಲಾವಣೆಯ ನಿರ್ಣಯವನ್ನು ಸ್ಥಳೀಯ ಆಡಳಿತ ಸರ್ವಾನುಮತದಿಂದ ಅನುಮೋದಿಸಿದ ನಂತರ ಅದನ್ನು ರಾಜ್ಯ ಸರ್ಕಾರದ ಮುಂದಿಡಲಾಗುತ್ತದೆ. ನಂತರ ನಿರ್ಣಯವನ್ನು ರಾಜ್ಯ ಸರ್ಕಾರವು ಅನುಮೋದನೆಗಾಗಿ ಗೃಹ ಸಚಿವಾಲಯಕ್ಕೆ ಕಳುಹಿಸುತ್ತದೆ. ಸಚಿವಾಲಯ ಮತ್ತು ಇತರ ಸಂಬಂಧಿತ ಇಲಾಖೆಗಳು ನಿರ್ಣಯವನ್ನು ಅನುಮೋದಿಸಿದರೆ,  ರಾಜ್ಯ ಸರ್ಕಾರವು ಅಧಿಕೃತವಾಗಿ ಹೆಸರನ್ನು ಬದಲಾಯಿಸಬಹುದು.
ಈ ಹಿಂದೆ 2021ರಲ್ಲಿ ಆಗಿನ ಜಿಲ್ಲಾ ಪಂಚಾಯತ್‌ ಕೂಡ ಆಲಿಘರ್‌ ಹೆಸರನ್ನು ಹರಿಘರ್‌ ಎಂದು ಬದಲಾಯಿಸಬೇಕೆಂಬ ಪ್ರಸ್ತಾವನೆ ಸಲ್ಲಿಸಿತ್ತು. 2017ರಲ್ಲಿ ಆದಿತ್ಯನಾಥ್‌ ಸರ್ಕಾರ ರಚನೆ ಬಳಿಕ ಪೂರ್ವಾಂಚಲ್‌ ಎಕ್ಸ್‌ಪ್ರೆಸ್‌ವೇ ಸಹಿತ ಹಲವು ಯೋಜನೆಗಳ ಹೆಸರು ಬದಲಾಯಿಸಿದೆ. ಹಿಂದಿನ ಸಮಾಜವಾದಿ ಪಕ್ಷದ ಸರ್ಕಾರದ ಅವಧಿಯಲ್ಲಿದ್ದ ಸಮಾಜವಾದಿ ಅಂಬುಲೆನ್ಸ್‌ ಸ್ವಾಸ್ಥ್ಯ ಸೇವಾ ಅಂಬುಲೆನ್ಸ್‌ ಸೇವೆಯ ಹೆಸರಿನಲ್ಲಿನ ಸಮಾಜವಾದಿ ಪದವನ್ನು ಈಗಿನ ಸರ್ಕಾರ ತೆಗೆದು ಹಾಕಿದೆ.
ನಮಗೆ ಒಳ್ಳೆಯದೆಂದು ಅನಿಸಿದ್ದನ್ನು ಮಾಡಿದ್ದೇವೆ. ನಾವು ಮೊಘಲ್ ಸರಾಯ್‌ನ್ನು ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ನಗರ ಎಂದು ಮರುನಾಮಕರಣ ಮಾಡಿದ್ದೇವೆ. ಅಲಹಾಬಾದ್‌ನ್ನು ಪ್ರಯಾಗ್‌ರಾಜ್‌ ಎಂದು ಮತ್ತು ಫೈಜಾಬಾದ್ ಜಿಲ್ಲೆಯನ್ನು ಅಯೋಧ್ಯೆ ಜಿಲ್ಲೆ ಎಂದು ಮರುನಾಮಕರಣ ಮಾಡಿದ್ದೇವೆ. ಅಗತ್ಯವಿರುವಲ್ಲಿ ಸರ್ಕಾರ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಯೋಗಿ ಆದಿತ್ಯನಾಥ್ ಈ ಮೊದಲು ಹೇಳಿದ್ದರು.
ಇದನ್ನು ಓದಿ: ಅಲಿಘರ್ ನಗರದ ಹೆಸರು ಹರಿಘರ್ ಎಂದು ಬದಲಾಯಿಸಲು ಅನುಮೋದನೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...