Homeಮುಖಪುಟಅಲಿಘರ್ ನಗರದ ಹೆಸರು ಹರಿಘರ್ ಎಂದು ಬದಲಾಯಿಸಲು ಅನುಮೋದನೆ

ಅಲಿಘರ್ ನಗರದ ಹೆಸರು ಹರಿಘರ್ ಎಂದು ಬದಲಾಯಿಸಲು ಅನುಮೋದನೆ

- Advertisement -
- Advertisement -

ಅಲಹಾಬಾದ್ ಮತ್ತು ಫೈಜಾಬಾದ್‌ ಬಳಿಕ ಇದೀಗ ಉತ್ತರ ಪ್ರದೇಶದ ಮತ್ತೊಂದು ಪ್ರಮುಖ ನಗರದ ಹೆಸರು ಬದಲಾವಣೆಗೆ ಅನುಮೋದನೆ ನೀಡಲಾಗಿದೆ. ಅಲಿಘರ್ ಮುನ್ಸಿಪಲ್ ಕಾರ್ಪೊರೇಷನ್ ನಗರದ ಹೆಸರನ್ನು ಹರಿಘರ್ ಎಂದು ಬದಲಾಯಿಸುವ ಪ್ರಸ್ತಾಪವನ್ನು ಸರ್ವಾನುಮತದಿಂದ ಅಂಗೀಕರಿಸಿದೆ.

ನಿನ್ನೆ ನಡೆದ ಸಭೆಯಲ್ಲಿ ಮೇಯರ್ ಪ್ರಶಾಂತ್ ಸಿಂಘಾಲ್ ಪ್ರಸ್ತಾವನೆ ಸಲ್ಲಿಸಿದ್ದು, ಎಲ್ಲಾ ಕೌನ್ಸಿಲರ್‌ಗಳು ಪ್ರಸ್ತಾವನೆಗೆ ಬೆಂಬಲಿಸಿದ್ದಾರೆ. ಈ ಪ್ರಸ್ತಾವನೆಗೆ ಉತ್ತರಪ್ರದೇಶ ಸರ್ಕಾರ ಅನುಮೋದನೆ ನೀಡಿದರೆ ಯೋಗಿ ಆಡಳಿತದಲ್ಲಿ ಹೆಸರು ಬದಲಾವಣೆಗೊಂಡ ಮೂರನೇ ನಗರ ಇದಾಗಲಿದೆ. ಜನವರಿ 2019ರಲ್ಲಿ ಅಲಹಾಬಾದ್‌ ಹೆಸರನ್ನು ಪ್ರಯಾಗರಾಜ್‌ ಎಂದು ಬದಲಿಸಲಾಗಿತ್ತು.

ಅಲಿಘರ್ ಮೇಯರ್ ಪ್ರಶಾಂತ್ ಸಿಂಘಾಲ್ ಈ ಬಗ್ಗೆ ಮಾತನಾಡುತ್ತಾ, ನಿನ್ನೆ ನಡೆದ ಸಭೆಯಲ್ಲಿ ಅಲಿಘರ್ ಹೆಸರನ್ನು ಹರಿಘರ್ ಎಂದು ಬದಲಾಯಿಸುವ ಪ್ರಸ್ತಾವನೆಯನ್ನು ಮಂಡಿಸಲಾಯಿತು. ಎಲ್ಲಾ ಕೌನ್ಸಿಲರ್‌ಗಳು ಇದನ್ನು ಸರ್ವಾನುಮತದಿಂದ ಬೆಂಬಲಿಸಿದರು. ಈಗ ಈ ಪ್ರಸ್ತಾವನೆಯನ್ನು ಸರಕಾರಕ್ಕೆ ಕಳುಹಿಸಲಾಗುವುದು. ಸರಕಾರವು ಇದರ ಬಗ್ಗೆ ಗಮನಹರಿಸಿ ನಮ್ಮ ಬೇಡಿಕೆಯನ್ನು ಈಡೇರಿಸುತ್ತದೆ ಎಂದು ನಾನು ಭಾವಿಸುತ್ತೇನೆ. ಅಲಿಗಢದ ಹೆಸರನ್ನು ಹರಿಗಢ ಎಂದು ಬದಲಾಯಿಸಲು ಬಹಳ ಸಮಯದಿಂದ ಬೇಡಿಕೆ ಬಂದಿತ್ತು ಎಂದು  ಹೇಳಿದ್ದಾರೆ.
ರಾಜ್ಯ ಸರ್ಕಾರವು ರಾಜ್ಯದೊಳಗಿನ ಯಾವುದೇ ನಗರ ಅಥವಾ ಗ್ರಾಮೀಣ ಪ್ರದೇಶದ ಹೆಸರನ್ನು ಬದಲಾಯಿಸಬಹುದು. ಹೆಸರು ಬದಲಾವಣೆಯ ನಿರ್ಣಯವನ್ನು ಸ್ಥಳೀಯ ಆಡಳಿತ ಸರ್ವಾನುಮತದಿಂದ ಅನುಮೋದಿಸಿದ ನಂತರ ಅದನ್ನು ರಾಜ್ಯ ಸರ್ಕಾರದ ಮುಂದಿಡಲಾಗುತ್ತದೆ. ನಂತರ ನಿರ್ಣಯವನ್ನು ರಾಜ್ಯ ಸರ್ಕಾರವು ಅನುಮೋದನೆಗಾಗಿ ಗೃಹ ಸಚಿವಾಲಯಕ್ಕೆ ಕಳುಹಿಸುತ್ತದೆ. ಸಚಿವಾಲಯ ಮತ್ತು ಇತರ ಸಂಬಂಧಿತ ಇಲಾಖೆಗಳು ನಿರ್ಣಯವನ್ನು ಅನುಮೋದಿಸಿದರೆ,  ರಾಜ್ಯ ಸರ್ಕಾರವು ಅಧಿಕೃತವಾಗಿ ಹೆಸರನ್ನು ಬದಲಾಯಿಸಬಹುದು.
ಈ ಹಿಂದೆ 2021ರಲ್ಲಿ ಆಗಿನ ಜಿಲ್ಲಾ ಪಂಚಾಯತ್‌ ಕೂಡ ಆಲಿಘರ್‌ ಹೆಸರನ್ನು ಹರಿಘರ್‌ ಎಂದು ಬದಲಾಯಿಸಬೇಕೆಂಬ ಪ್ರಸ್ತಾವನೆ ಸಲ್ಲಿಸಿತ್ತು. 2017ರಲ್ಲಿ ಆದಿತ್ಯನಾಥ್‌ ಸರ್ಕಾರ ರಚನೆ ಬಳಿಕ ಪೂರ್ವಾಂಚಲ್‌ ಎಕ್ಸ್‌ಪ್ರೆಸ್‌ವೇ ಸಹಿತ ಹಲವು ಯೋಜನೆಗಳ ಹೆಸರು ಬದಲಾಯಿಸಿದೆ. ಹಿಂದಿನ ಸಮಾಜವಾದಿ ಪಕ್ಷದ ಸರ್ಕಾರದ ಅವಧಿಯಲ್ಲಿದ್ದ ಸಮಾಜವಾದಿ ಅಂಬುಲೆನ್ಸ್‌ ಸ್ವಾಸ್ಥ್ಯ ಸೇವಾ ಅಂಬುಲೆನ್ಸ್‌ ಸೇವೆಯ ಹೆಸರಿನಲ್ಲಿನ ಸಮಾಜವಾದಿ ಪದವನ್ನು ಈಗಿನ ಸರ್ಕಾರ ತೆಗೆದು ಹಾಕಿದೆ.
ನಮಗೆ ಒಳ್ಳೆಯದೆಂದು ಅನಿಸಿದ್ದನ್ನು ಮಾಡಿದ್ದೇವೆ. ನಾವು ಮೊಘಲ್ ಸರಾಯ್‌ನ್ನು ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ನಗರ ಎಂದು ಮರುನಾಮಕರಣ ಮಾಡಿದ್ದೇವೆ. ಅಲಹಾಬಾದ್‌ನ್ನು ಪ್ರಯಾಗ್‌ರಾಜ್‌ ಎಂದು ಮತ್ತು ಫೈಜಾಬಾದ್ ಜಿಲ್ಲೆಯನ್ನು ಅಯೋಧ್ಯೆ ಜಿಲ್ಲೆ ಎಂದು ಮರುನಾಮಕರಣ ಮಾಡಿದ್ದೇವೆ. ಅಗತ್ಯವಿರುವಲ್ಲಿ ಸರ್ಕಾರ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಯೋಗಿ ಆದಿತ್ಯನಾಥ್ ಈ ಮೊದಲು ಹೇಳಿದ್ದರು.
ಇದನ್ನು ಓದಿ: ಅಲಿಘರ್ ನಗರದ ಹೆಸರು ಹರಿಘರ್ ಎಂದು ಬದಲಾಯಿಸಲು ಅನುಮೋದನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...