Homeಕರ್ನಾಟಕಕೋವಿಡ್‌ ನಿರ್ಬಂಧ ತೆರವು: ದೊಡ್ಡ ಆಲದ ಮರಕ್ಕೆ ಪ್ರವಾಸಿಗರ ದಂಡು

ಕೋವಿಡ್‌ ನಿರ್ಬಂಧ ತೆರವು: ದೊಡ್ಡ ಆಲದ ಮರಕ್ಕೆ ಪ್ರವಾಸಿಗರ ದಂಡು

ಕೊರೊನಾ ಮತ್ತು ಲಾಕ್‌ ಡೌನ್ ಮನುಷ್ಯ ಪ್ರಾಣಿಗಳ ಬೇಧವಿಲ್ಲದೇ ಎಲ್ಲರನ್ನೂ ಕಂಗೆಡಿಸಿದೆ. ಪ್ರವಾಸಿಗರು ನೀಡುವ ಹಣ್ಣು ಹಂಪಲು ತಿಂಡಿಗಳಿಗೆ ಅಭ್ಯಾಸವಾಗಿದ್ದ ಕೋತಿಗಳು ಕಳೆದ 3 ತಿಂಗಳಿನಲ್ಲಿ ಆಹಾರ ವಿಲ್ಲದೇ ಮೃತಪಟ್ಟಿವೆ.

- Advertisement -
- Advertisement -

ಕೋವಿಡ್‌ ನಿರ್ಬಂಧಗಳು ತೆರವಾಗುತ್ತಿದ್ದಂತೆ ಬೆಂಗಳೂರಿಗೆ ಬರುವ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಮೆಜೆಸ್ಟಿಕ್, ಯಶವಂತಪುರ ರೈಲ್ವೆ ನಿಲ್ಧಾಣಗಳು ಪ್ರಯಾಣಿಕರಿಂದ ತುಂಬಿ ತುಳುಕಾಡುತ್ತಿವೆ. ಹಾಗೆ ಬೆಂಗಳೂರಿನ ಪ್ರವಾಸಿ ತಾಣಗಳಲ್ಲಿ ಕಲರವ ಕೇಳಿ ಬರಲಾರಂಭಿಸಿದ್ದು ನಗರದ ಸುತ್ತಮುತ್ತದ ಸ್ಥಳಗಳಿಗೆ ಜನರು ಭೇಟಿ ನೀಡುತ್ತಿದ್ದಾರೆ. ಮಳೆಯ ತಂಪಾದ ವಾತಾವರಣ ಕೂಡ ಇದಕ್ಕೆ ಸಹಕಾರ ನೀಡಿದ್ದು ಇಂದು ನಗರದ ಅನೇಕ ಕಡೆ ಆರ್ಥಿಕ ಮತ್ತು ಪ್ರವಾಸೋದ್ಯಮದ ಚಟುವಟಿಕೆಗಳು ಚೇತರಿಸಿಕೊಂಡಿರುವುದು ಕಂಡು ಬಂದಿದೆ.

ನಗರದ ಹೊರ ವಲಯದಲ್ಲಿರುವ ಪುರಾತನ ದೊಡ್ಡ ಆಲದ ಮರವನ್ನು ನೋಡಲು ಇಂದು ಪ್ರವಾಸಿಗಳು  ಭೇಟಿ ನೀಡಿದ್ದು ಸುತ್ತಲಿನ ವ್ಯಾಪರಸ್ಥರ ಮುಖದಲ್ಲಿ ಒಂದಷ್ಟು ಗೆಲುವಿನ ಕಳೆ ಮೂಡಿದೆ.

ಇದನ್ನೂ ಓದಿ: ಮೈದುಂಬಿ ಹರಿಯುವ ನದಿಗಳು, ಧುಮ್ಮಿಕ್ಕುತ್ತಿರುವ ಜಲಪಾತಗಳ ನಡುವೆ ಬಣಗುಡುತ್ತಿರುವ ಮಲೆನಾಡಿನ ಪ್ರವಾಸಿ ತಾಣಗಳು

ಸರಿ ಸುಮಾರು ಮೂರು ತಿಂಗಳಿನಿಂದ ಬಂದ್‌ ಆಗಿದ್ದ ದೊಡ್ಡ ಆಲದ ಮರ ಈ ವಾರ ಸಾರ್ವಜನಿಕರ ಪ್ರವೇಶಕ್ಕೆ ತೆರೆದಿದೆ. ತಿಂಗಳುಗಳ ಕಾಲ ಮನೆಯಲ್ಲಿಯೇ ಕುಳಿತಿದ್ದ ಜನರು ಇಂದು ತಮ್ಮ ತಮ್ಮ ವಾಹನ ಮತ್ತು ಆಟೋ ರಿಕ್ಷಾದಲ್ಲಿ ಪುರಾತನ ದೊಡ್ಡ ಆಲದ ಮರಕ್ಕೆ ತೆರಳಿ ಪುಳಕಗೊಂಡರು.

ಬೆಂಗಳೂರಿನಲ್ಲಿ ಅನೇಕರಿಗೆ ದೊಡ್ಡ ಆಲದ ಮರದ ಪರಿಚಯ ಇದೆ. ಇನ್ನು ಕೆಲವರಿಗೆ ನಮ್ಮ ಸುತ್ತಲಿನ ಪ್ರದೇಶದ ಮಾಹಿತಿ ಇಲ್ಲ. ದೊಡ್ಡ ಆಲದ ಮರದ ವಿಶೇಷತೆ ಏನು? ಯಾಕಿದು ಪ್ರವಾಸಿ ತಾಣ ಎಂಬುದು ಹೆಚ್ಚು ಮುನ್ನೆಲೆಗೆ ಬಂದಿಲ್ಲ.

ಇದನ್ನೂ ಓದಿ: ಮುತ್ತು ಸುತ್ತು; ಸಾವನದುರ್ಗ: ಪ್ರಪಂಚದ ಅತಿದೊಡ್ಡ ಏಕಶಿಲಾ ಬೆಟ್ಟವಿದು, ಶಕ್ತಿಯಿದ್ದಷ್ಟು ಹತ್ತಿ ನೋಡ!

ದೊಡ್ಡ ಆಲದ ಮರ ಅಥವಾ ಬಿಗ್ ಬ್ಯಾನಿಯನ್ ಟ್ರೀ 

4-

ಇದೇನಪ್ಪಾ ಆಲದ ಮರವನ್ನು ಯಾವತ್ತೂ ನೋಡೇ ಇಲ್ವಾ ಅಂತಾ ನೀವು ಯೋಚಿಸಿರುವಿರಿ. ಆದರೆ ಇವತ್ತು ನಾವು ನಿಮಗೆ ಹೊರಟಿರುವ ಆಲದ ಮರ ಅಂತಿಂಥ ಆಲದ ಮರವಲ್ಲ. ಇದು ಸುಮಾರು 95  ಫೀಟ್‌ ಎತ್ತರ ಹಾಗೂ 400 ವರ್ಷಗಳ ಇತಿಹಾಸವನ್ನು ಹೊಂದಿರುವ ವಿಶೇಷ ಆಲದ ಮರ. ಬೆಂಗಳೂರು ದಕ್ಷಿಣದ ಕೇತೋಹಳ್ಳಿಯಲ್ಲಿರುವ ಈ ಆಲದ ಮರವನ್ನು ದೊಡ್ಡ ಆಲದ ಮರ ಅಥವಾ ಬಿಗ್ ಬ್ಯಾನಿಯನ್ ಟ್ರೀ ಎಂದೂ ಕರೆಯುತ್ತಾರೆ. ಇದು ಕಳೆದ ಕೆಲವು ವರ್ಷಗಳಿಂದ ಬೆಂಗಳೂರಿನಲ್ಲಿರುವ ಪ್ರವಾಸಿ ಆಕರ್ಷಣೆಯಾಗಿ ಬೆಳೆದಿದ್ದು ರಾಜ್ಯದ ಇಕೋ ಟೂರಿಸಂನ ಒಂದು ಭಾಗವಾಗಿದೆ.

ಇದನ್ನೂ ಓದಿ: ಕರ್ನಾಟಕಕ್ಕೂ ಬಂತು ವಿಸ್ಟಾಡೋಮ್ ರೈಲು: ಮಂಗಳೂರು-ಬೆಂಗಳೂರು ನಡುವೆ ಮೊದಲ ಓಡಾಟ

400-

ಈ ಆಲದ ಮರವು ಭಾರತದ ಪುರಾತನ ಆಲದ ಮರಗಳಲ್ಲಿ ನಾಲ್ಕನೆಯ ಸ್ಥಾನವನ್ನು ಪಡೆದುಕೊಂಡಿದೆ. ಆಂಧ್ರಪ್ರದೇಶದ ಮೆಹಬೂಬ್ ನಗರ, ಪಶ್ಚಿಮ ಬಂಗಾಳದ ಕೊಲ್ಕತ್ತ ಹಾಗೂ ತಮಿಳುನಾಡಿನ ಚೆನ್ನೈನಲ್ಲ್ಲಿ ಕ್ರಮವಾಗಿ ಮೊದಲ ಮೂರು ದೈತ್ಯ ಆಲದ ಮರಗಳಿವೆ. ಇಲ್ಲಿ ಒಂದು ಪುರಾತನ ಮುನೀಶ್ವರ ದೇವರ ದೇವಾಲಯ ಕೂಡಾ ಇದೆ.

ಇದನ್ನೂ ಓದಿ: ಕೋವಿಡ್‌ ನಿರ್ಬಂಧ ತೆರವು : ಪ್ರವಾಸಿ ತಾಣಗಳತ್ತ ಜನ-ಹಂಪಿಯಲ್ಲಿ ಜನ ಜಂಗುಳಿ

ಕರ್ನಾಟಕ ರಾಜ್ಯ ಸರ್ಕಾರದ ತೋಟಗಾರಿಕೆ ಇಲಾಖೆಯು ಈ ದೊಡ್ಡ ಆಲದ ಮರದ ಸಂರಕ್ಷಣೆಯ ಜವಾಬ್ದಾರಿಯನ್ನು ಹೊತ್ತುಕೊಂಡಿದೆ. ಆಲದ ಮರದ ಸುತ್ತಮುತ್ತಲಿನ ಪ್ರದೇಶಕ್ಕೆ ಕಬ್ಬಿಣದ ಗ್ರಿಲ್ ಹಾಕಲಾಗಿದೆ. ಪ್ರವಾಸೋದ್ಯಮ ಇಲಾಖೆ ದೊಡ್ಡ ಆಲದ ಮರವನ್ನು ಪಾರಂಪರಿಕ ವೃಕ್ಷವೆಂದು ಘೋಷಿಸಿ ತಾಣವನ್ನು ಪ್ರವಾಸಿ ಕೇಂದ್ರವನ್ನಾಗಿ ಮಾಡಿದೆ. ಈ ಮರದ ಸುತ್ತಲೂ ಪ್ರವಾಸಿಗರಿಗೆ ಕುಳಿತುಕೊಳ್ಳಲು ಕಲ್ಲಿನ ಬೆಂಚುಗಳನ್ನು ಹಾಕಲಾಗಿದೆ.

ಈಗ ನೋಡುತ್ತಿರುವ ಆಲದ ಮರವು ಹಲವು ವರ್ಷಗಳ ಹಿಂದೆ ಇನ್ನೂ ದೊಡ್ಡದಾಗಿತ್ತು, ಆದರೆ ಯಾವುದೋ ನೈಸರ್ಗಿಕ ಕಾಯಿಲೆಗೆ ಒಳಗಾಗಿ ನಶಿಸಿತು. ಆದ್ದರಿಂದ ಮರವು ಈಗ ಅನೇಕ ವಿಭಿನ್ನ ಮರಗಳಂತೆ ಕಾಣಿಸುತ್ತದೆ.

ಒಟ್ಟಾರೆಯಾಗಿ ವೀಕೆಂಡ್‌ ಕರ್ಪ್ಯೂ ತೆರವಾದ ಮೊದಲ ವೀಕೆಂಡ್‌ನಲ್ಲಿ ಭಾನುವಾರ ಸಂಜೆ ಹೊತ್ತಿನಲ್ಲಿ  ಹತ್ತಾರು ಪ್ರವಾಸಿಗರು ಪ್ರಶಾಂತವಾಗಿ ಕಾಲಕಳೆದಿದ್ದಾರೆ.  ಕಲ್ಲು ಬೆಂಚುಗಳಲ್ಲಿ ಕುಳಿತು ಹರಟೆ ಹೊಡೆಯುತ್ತಾ  ಕೋತಿಗಳ ಚೇಷ್ಟೆಯನ್ನು ಎಂಜಾಯ್ ಮಾಡುತ್ತಾ ಕಾಲ ಕಳೆದಿದ್ದಾರೆ.

ದೊಡ್ಡ ಆಲದ ಮರದಲ್ಲಿ ಕೋತಿಗಳ ಸಂಭ್ರಮ

ಪ್ರವಾಸಿಗರು ನೀಡುವ ಹಣ್ಣು ಹಂಪಲು ತಿಂಡಿಗಳಿಗೆ ಅಭ್ಯಾಸವಾಗಿದ್ದ ಕೋತಿಗಳು ಕಳೆದ 3 ತಿಂಗಳು ಸಾಕಷ್ಟು ಕಷ್ಟಪಟ್ಟವು. ಕೆಲವು ನಗರ ಪ್ರದೇಶಕ್ಕೆ ಹೋದವು. ಒಂದಷ್ಟು ಚಿಕ್ಕ ಕೋತಿಗಳು ಹಸಿವಿನಿಂದ ಮೃತಪಟ್ಟಿವೆ ಎಂದು ಸ್ಥಳೀಯ ವ್ಯಾಪಾರಿಯೊಬ್ಬರು ತಿಳಿಸಿದ್ದಾರೆ.

ಕೊರೊನಾ ಮತ್ತು ಲಾಕ್‌ ಡೌನ್ ಮನುಷ್ಯ ಪ್ರಾಣಿಗಳ ಬೇಧವಿಲ್ಲದೇ ಎಲ್ಲರನ್ನೂ ಕಂಗೆಡಿಸಿದೆ.  3ನೇ ಅಲೆಯ ಭೀತಿಯ ನಡುವೆ ನಿಟ್ಟುಸಿರಿಗೊಂದಷ್ಟು ಅವಕಾಶ ಸಿಕ್ಕಿದೆ. ಎಚ್ಚರಿಕೆಯ ನಡುವೆ ಅಚ್ಚರಿಯ ಹುಡುಕಾಟಕ್ಕೆ ದೊಡ್ಡ ಆಲದ ಮರ ಒಂದು ಪ್ರಶಸ್ತ ತಾಣ. ವಿಶ್ರಾಂತಿ, ವಿಜ್ಞಾನ ಎರಡನ್ನೂ ಒಟ್ಟಿಗೆ ನೀಡುವ ಬಿಗ್‌ ಬ್ಯಾನಿಯನ್‌  ಟ್ರೀ ನಮ್ಮ ಮುಂದಿನ ಪ್ರವಾಸಕ್ಕೆ ಪ್ರಶಸ್ತ ನಿಲ್ಧಾಣ.

-ರಾಜೇಶ್‌ ಹೆಬ್ಬಾರ್‌

ಇದನ್ನೂ ಓದಿ: ಕೈ ಬೀಸಿ ಕರೆಯಲಿರುವ ಕೇರಳ…ಪ್ರವಾಸಿ ತಾಣಗಳು ಪುನರಾರಂಭ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...