Homeಕರ್ನಾಟಕಕೋವಿಡ್‌ ನಿರ್ಬಂಧ ತೆರವು: ದೊಡ್ಡ ಆಲದ ಮರಕ್ಕೆ ಪ್ರವಾಸಿಗರ ದಂಡು

ಕೋವಿಡ್‌ ನಿರ್ಬಂಧ ತೆರವು: ದೊಡ್ಡ ಆಲದ ಮರಕ್ಕೆ ಪ್ರವಾಸಿಗರ ದಂಡು

ಕೊರೊನಾ ಮತ್ತು ಲಾಕ್‌ ಡೌನ್ ಮನುಷ್ಯ ಪ್ರಾಣಿಗಳ ಬೇಧವಿಲ್ಲದೇ ಎಲ್ಲರನ್ನೂ ಕಂಗೆಡಿಸಿದೆ. ಪ್ರವಾಸಿಗರು ನೀಡುವ ಹಣ್ಣು ಹಂಪಲು ತಿಂಡಿಗಳಿಗೆ ಅಭ್ಯಾಸವಾಗಿದ್ದ ಕೋತಿಗಳು ಕಳೆದ 3 ತಿಂಗಳಿನಲ್ಲಿ ಆಹಾರ ವಿಲ್ಲದೇ ಮೃತಪಟ್ಟಿವೆ.

- Advertisement -
- Advertisement -

ಕೋವಿಡ್‌ ನಿರ್ಬಂಧಗಳು ತೆರವಾಗುತ್ತಿದ್ದಂತೆ ಬೆಂಗಳೂರಿಗೆ ಬರುವ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಮೆಜೆಸ್ಟಿಕ್, ಯಶವಂತಪುರ ರೈಲ್ವೆ ನಿಲ್ಧಾಣಗಳು ಪ್ರಯಾಣಿಕರಿಂದ ತುಂಬಿ ತುಳುಕಾಡುತ್ತಿವೆ. ಹಾಗೆ ಬೆಂಗಳೂರಿನ ಪ್ರವಾಸಿ ತಾಣಗಳಲ್ಲಿ ಕಲರವ ಕೇಳಿ ಬರಲಾರಂಭಿಸಿದ್ದು ನಗರದ ಸುತ್ತಮುತ್ತದ ಸ್ಥಳಗಳಿಗೆ ಜನರು ಭೇಟಿ ನೀಡುತ್ತಿದ್ದಾರೆ. ಮಳೆಯ ತಂಪಾದ ವಾತಾವರಣ ಕೂಡ ಇದಕ್ಕೆ ಸಹಕಾರ ನೀಡಿದ್ದು ಇಂದು ನಗರದ ಅನೇಕ ಕಡೆ ಆರ್ಥಿಕ ಮತ್ತು ಪ್ರವಾಸೋದ್ಯಮದ ಚಟುವಟಿಕೆಗಳು ಚೇತರಿಸಿಕೊಂಡಿರುವುದು ಕಂಡು ಬಂದಿದೆ.

ನಗರದ ಹೊರ ವಲಯದಲ್ಲಿರುವ ಪುರಾತನ ದೊಡ್ಡ ಆಲದ ಮರವನ್ನು ನೋಡಲು ಇಂದು ಪ್ರವಾಸಿಗಳು  ಭೇಟಿ ನೀಡಿದ್ದು ಸುತ್ತಲಿನ ವ್ಯಾಪರಸ್ಥರ ಮುಖದಲ್ಲಿ ಒಂದಷ್ಟು ಗೆಲುವಿನ ಕಳೆ ಮೂಡಿದೆ.

ಇದನ್ನೂ ಓದಿ: ಮೈದುಂಬಿ ಹರಿಯುವ ನದಿಗಳು, ಧುಮ್ಮಿಕ್ಕುತ್ತಿರುವ ಜಲಪಾತಗಳ ನಡುವೆ ಬಣಗುಡುತ್ತಿರುವ ಮಲೆನಾಡಿನ ಪ್ರವಾಸಿ ತಾಣಗಳು

ಸರಿ ಸುಮಾರು ಮೂರು ತಿಂಗಳಿನಿಂದ ಬಂದ್‌ ಆಗಿದ್ದ ದೊಡ್ಡ ಆಲದ ಮರ ಈ ವಾರ ಸಾರ್ವಜನಿಕರ ಪ್ರವೇಶಕ್ಕೆ ತೆರೆದಿದೆ. ತಿಂಗಳುಗಳ ಕಾಲ ಮನೆಯಲ್ಲಿಯೇ ಕುಳಿತಿದ್ದ ಜನರು ಇಂದು ತಮ್ಮ ತಮ್ಮ ವಾಹನ ಮತ್ತು ಆಟೋ ರಿಕ್ಷಾದಲ್ಲಿ ಪುರಾತನ ದೊಡ್ಡ ಆಲದ ಮರಕ್ಕೆ ತೆರಳಿ ಪುಳಕಗೊಂಡರು.

ಬೆಂಗಳೂರಿನಲ್ಲಿ ಅನೇಕರಿಗೆ ದೊಡ್ಡ ಆಲದ ಮರದ ಪರಿಚಯ ಇದೆ. ಇನ್ನು ಕೆಲವರಿಗೆ ನಮ್ಮ ಸುತ್ತಲಿನ ಪ್ರದೇಶದ ಮಾಹಿತಿ ಇಲ್ಲ. ದೊಡ್ಡ ಆಲದ ಮರದ ವಿಶೇಷತೆ ಏನು? ಯಾಕಿದು ಪ್ರವಾಸಿ ತಾಣ ಎಂಬುದು ಹೆಚ್ಚು ಮುನ್ನೆಲೆಗೆ ಬಂದಿಲ್ಲ.

ಇದನ್ನೂ ಓದಿ: ಮುತ್ತು ಸುತ್ತು; ಸಾವನದುರ್ಗ: ಪ್ರಪಂಚದ ಅತಿದೊಡ್ಡ ಏಕಶಿಲಾ ಬೆಟ್ಟವಿದು, ಶಕ್ತಿಯಿದ್ದಷ್ಟು ಹತ್ತಿ ನೋಡ!

ದೊಡ್ಡ ಆಲದ ಮರ ಅಥವಾ ಬಿಗ್ ಬ್ಯಾನಿಯನ್ ಟ್ರೀ 

4-

ಇದೇನಪ್ಪಾ ಆಲದ ಮರವನ್ನು ಯಾವತ್ತೂ ನೋಡೇ ಇಲ್ವಾ ಅಂತಾ ನೀವು ಯೋಚಿಸಿರುವಿರಿ. ಆದರೆ ಇವತ್ತು ನಾವು ನಿಮಗೆ ಹೊರಟಿರುವ ಆಲದ ಮರ ಅಂತಿಂಥ ಆಲದ ಮರವಲ್ಲ. ಇದು ಸುಮಾರು 95  ಫೀಟ್‌ ಎತ್ತರ ಹಾಗೂ 400 ವರ್ಷಗಳ ಇತಿಹಾಸವನ್ನು ಹೊಂದಿರುವ ವಿಶೇಷ ಆಲದ ಮರ. ಬೆಂಗಳೂರು ದಕ್ಷಿಣದ ಕೇತೋಹಳ್ಳಿಯಲ್ಲಿರುವ ಈ ಆಲದ ಮರವನ್ನು ದೊಡ್ಡ ಆಲದ ಮರ ಅಥವಾ ಬಿಗ್ ಬ್ಯಾನಿಯನ್ ಟ್ರೀ ಎಂದೂ ಕರೆಯುತ್ತಾರೆ. ಇದು ಕಳೆದ ಕೆಲವು ವರ್ಷಗಳಿಂದ ಬೆಂಗಳೂರಿನಲ್ಲಿರುವ ಪ್ರವಾಸಿ ಆಕರ್ಷಣೆಯಾಗಿ ಬೆಳೆದಿದ್ದು ರಾಜ್ಯದ ಇಕೋ ಟೂರಿಸಂನ ಒಂದು ಭಾಗವಾಗಿದೆ.

ಇದನ್ನೂ ಓದಿ: ಕರ್ನಾಟಕಕ್ಕೂ ಬಂತು ವಿಸ್ಟಾಡೋಮ್ ರೈಲು: ಮಂಗಳೂರು-ಬೆಂಗಳೂರು ನಡುವೆ ಮೊದಲ ಓಡಾಟ

400-

ಈ ಆಲದ ಮರವು ಭಾರತದ ಪುರಾತನ ಆಲದ ಮರಗಳಲ್ಲಿ ನಾಲ್ಕನೆಯ ಸ್ಥಾನವನ್ನು ಪಡೆದುಕೊಂಡಿದೆ. ಆಂಧ್ರಪ್ರದೇಶದ ಮೆಹಬೂಬ್ ನಗರ, ಪಶ್ಚಿಮ ಬಂಗಾಳದ ಕೊಲ್ಕತ್ತ ಹಾಗೂ ತಮಿಳುನಾಡಿನ ಚೆನ್ನೈನಲ್ಲ್ಲಿ ಕ್ರಮವಾಗಿ ಮೊದಲ ಮೂರು ದೈತ್ಯ ಆಲದ ಮರಗಳಿವೆ. ಇಲ್ಲಿ ಒಂದು ಪುರಾತನ ಮುನೀಶ್ವರ ದೇವರ ದೇವಾಲಯ ಕೂಡಾ ಇದೆ.

ಇದನ್ನೂ ಓದಿ: ಕೋವಿಡ್‌ ನಿರ್ಬಂಧ ತೆರವು : ಪ್ರವಾಸಿ ತಾಣಗಳತ್ತ ಜನ-ಹಂಪಿಯಲ್ಲಿ ಜನ ಜಂಗುಳಿ

ಕರ್ನಾಟಕ ರಾಜ್ಯ ಸರ್ಕಾರದ ತೋಟಗಾರಿಕೆ ಇಲಾಖೆಯು ಈ ದೊಡ್ಡ ಆಲದ ಮರದ ಸಂರಕ್ಷಣೆಯ ಜವಾಬ್ದಾರಿಯನ್ನು ಹೊತ್ತುಕೊಂಡಿದೆ. ಆಲದ ಮರದ ಸುತ್ತಮುತ್ತಲಿನ ಪ್ರದೇಶಕ್ಕೆ ಕಬ್ಬಿಣದ ಗ್ರಿಲ್ ಹಾಕಲಾಗಿದೆ. ಪ್ರವಾಸೋದ್ಯಮ ಇಲಾಖೆ ದೊಡ್ಡ ಆಲದ ಮರವನ್ನು ಪಾರಂಪರಿಕ ವೃಕ್ಷವೆಂದು ಘೋಷಿಸಿ ತಾಣವನ್ನು ಪ್ರವಾಸಿ ಕೇಂದ್ರವನ್ನಾಗಿ ಮಾಡಿದೆ. ಈ ಮರದ ಸುತ್ತಲೂ ಪ್ರವಾಸಿಗರಿಗೆ ಕುಳಿತುಕೊಳ್ಳಲು ಕಲ್ಲಿನ ಬೆಂಚುಗಳನ್ನು ಹಾಕಲಾಗಿದೆ.

ಈಗ ನೋಡುತ್ತಿರುವ ಆಲದ ಮರವು ಹಲವು ವರ್ಷಗಳ ಹಿಂದೆ ಇನ್ನೂ ದೊಡ್ಡದಾಗಿತ್ತು, ಆದರೆ ಯಾವುದೋ ನೈಸರ್ಗಿಕ ಕಾಯಿಲೆಗೆ ಒಳಗಾಗಿ ನಶಿಸಿತು. ಆದ್ದರಿಂದ ಮರವು ಈಗ ಅನೇಕ ವಿಭಿನ್ನ ಮರಗಳಂತೆ ಕಾಣಿಸುತ್ತದೆ.

ಒಟ್ಟಾರೆಯಾಗಿ ವೀಕೆಂಡ್‌ ಕರ್ಪ್ಯೂ ತೆರವಾದ ಮೊದಲ ವೀಕೆಂಡ್‌ನಲ್ಲಿ ಭಾನುವಾರ ಸಂಜೆ ಹೊತ್ತಿನಲ್ಲಿ  ಹತ್ತಾರು ಪ್ರವಾಸಿಗರು ಪ್ರಶಾಂತವಾಗಿ ಕಾಲಕಳೆದಿದ್ದಾರೆ.  ಕಲ್ಲು ಬೆಂಚುಗಳಲ್ಲಿ ಕುಳಿತು ಹರಟೆ ಹೊಡೆಯುತ್ತಾ  ಕೋತಿಗಳ ಚೇಷ್ಟೆಯನ್ನು ಎಂಜಾಯ್ ಮಾಡುತ್ತಾ ಕಾಲ ಕಳೆದಿದ್ದಾರೆ.

ದೊಡ್ಡ ಆಲದ ಮರದಲ್ಲಿ ಕೋತಿಗಳ ಸಂಭ್ರಮ

ಪ್ರವಾಸಿಗರು ನೀಡುವ ಹಣ್ಣು ಹಂಪಲು ತಿಂಡಿಗಳಿಗೆ ಅಭ್ಯಾಸವಾಗಿದ್ದ ಕೋತಿಗಳು ಕಳೆದ 3 ತಿಂಗಳು ಸಾಕಷ್ಟು ಕಷ್ಟಪಟ್ಟವು. ಕೆಲವು ನಗರ ಪ್ರದೇಶಕ್ಕೆ ಹೋದವು. ಒಂದಷ್ಟು ಚಿಕ್ಕ ಕೋತಿಗಳು ಹಸಿವಿನಿಂದ ಮೃತಪಟ್ಟಿವೆ ಎಂದು ಸ್ಥಳೀಯ ವ್ಯಾಪಾರಿಯೊಬ್ಬರು ತಿಳಿಸಿದ್ದಾರೆ.

ಕೊರೊನಾ ಮತ್ತು ಲಾಕ್‌ ಡೌನ್ ಮನುಷ್ಯ ಪ್ರಾಣಿಗಳ ಬೇಧವಿಲ್ಲದೇ ಎಲ್ಲರನ್ನೂ ಕಂಗೆಡಿಸಿದೆ.  3ನೇ ಅಲೆಯ ಭೀತಿಯ ನಡುವೆ ನಿಟ್ಟುಸಿರಿಗೊಂದಷ್ಟು ಅವಕಾಶ ಸಿಕ್ಕಿದೆ. ಎಚ್ಚರಿಕೆಯ ನಡುವೆ ಅಚ್ಚರಿಯ ಹುಡುಕಾಟಕ್ಕೆ ದೊಡ್ಡ ಆಲದ ಮರ ಒಂದು ಪ್ರಶಸ್ತ ತಾಣ. ವಿಶ್ರಾಂತಿ, ವಿಜ್ಞಾನ ಎರಡನ್ನೂ ಒಟ್ಟಿಗೆ ನೀಡುವ ಬಿಗ್‌ ಬ್ಯಾನಿಯನ್‌  ಟ್ರೀ ನಮ್ಮ ಮುಂದಿನ ಪ್ರವಾಸಕ್ಕೆ ಪ್ರಶಸ್ತ ನಿಲ್ಧಾಣ.

-ರಾಜೇಶ್‌ ಹೆಬ್ಬಾರ್‌

ಇದನ್ನೂ ಓದಿ: ಕೈ ಬೀಸಿ ಕರೆಯಲಿರುವ ಕೇರಳ…ಪ್ರವಾಸಿ ತಾಣಗಳು ಪುನರಾರಂಭ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...