Homeಕರ್ನಾಟಕಕೋವಿಡ್‌ ನಿರ್ಬಂಧ ತೆರವು: ದೊಡ್ಡ ಆಲದ ಮರಕ್ಕೆ ಪ್ರವಾಸಿಗರ ದಂಡು

ಕೋವಿಡ್‌ ನಿರ್ಬಂಧ ತೆರವು: ದೊಡ್ಡ ಆಲದ ಮರಕ್ಕೆ ಪ್ರವಾಸಿಗರ ದಂಡು

ಕೊರೊನಾ ಮತ್ತು ಲಾಕ್‌ ಡೌನ್ ಮನುಷ್ಯ ಪ್ರಾಣಿಗಳ ಬೇಧವಿಲ್ಲದೇ ಎಲ್ಲರನ್ನೂ ಕಂಗೆಡಿಸಿದೆ. ಪ್ರವಾಸಿಗರು ನೀಡುವ ಹಣ್ಣು ಹಂಪಲು ತಿಂಡಿಗಳಿಗೆ ಅಭ್ಯಾಸವಾಗಿದ್ದ ಕೋತಿಗಳು ಕಳೆದ 3 ತಿಂಗಳಿನಲ್ಲಿ ಆಹಾರ ವಿಲ್ಲದೇ ಮೃತಪಟ್ಟಿವೆ.

- Advertisement -
- Advertisement -

ಕೋವಿಡ್‌ ನಿರ್ಬಂಧಗಳು ತೆರವಾಗುತ್ತಿದ್ದಂತೆ ಬೆಂಗಳೂರಿಗೆ ಬರುವ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಮೆಜೆಸ್ಟಿಕ್, ಯಶವಂತಪುರ ರೈಲ್ವೆ ನಿಲ್ಧಾಣಗಳು ಪ್ರಯಾಣಿಕರಿಂದ ತುಂಬಿ ತುಳುಕಾಡುತ್ತಿವೆ. ಹಾಗೆ ಬೆಂಗಳೂರಿನ ಪ್ರವಾಸಿ ತಾಣಗಳಲ್ಲಿ ಕಲರವ ಕೇಳಿ ಬರಲಾರಂಭಿಸಿದ್ದು ನಗರದ ಸುತ್ತಮುತ್ತದ ಸ್ಥಳಗಳಿಗೆ ಜನರು ಭೇಟಿ ನೀಡುತ್ತಿದ್ದಾರೆ. ಮಳೆಯ ತಂಪಾದ ವಾತಾವರಣ ಕೂಡ ಇದಕ್ಕೆ ಸಹಕಾರ ನೀಡಿದ್ದು ಇಂದು ನಗರದ ಅನೇಕ ಕಡೆ ಆರ್ಥಿಕ ಮತ್ತು ಪ್ರವಾಸೋದ್ಯಮದ ಚಟುವಟಿಕೆಗಳು ಚೇತರಿಸಿಕೊಂಡಿರುವುದು ಕಂಡು ಬಂದಿದೆ.

ನಗರದ ಹೊರ ವಲಯದಲ್ಲಿರುವ ಪುರಾತನ ದೊಡ್ಡ ಆಲದ ಮರವನ್ನು ನೋಡಲು ಇಂದು ಪ್ರವಾಸಿಗಳು  ಭೇಟಿ ನೀಡಿದ್ದು ಸುತ್ತಲಿನ ವ್ಯಾಪರಸ್ಥರ ಮುಖದಲ್ಲಿ ಒಂದಷ್ಟು ಗೆಲುವಿನ ಕಳೆ ಮೂಡಿದೆ.

ಇದನ್ನೂ ಓದಿ: ಮೈದುಂಬಿ ಹರಿಯುವ ನದಿಗಳು, ಧುಮ್ಮಿಕ್ಕುತ್ತಿರುವ ಜಲಪಾತಗಳ ನಡುವೆ ಬಣಗುಡುತ್ತಿರುವ ಮಲೆನಾಡಿನ ಪ್ರವಾಸಿ ತಾಣಗಳು

ಸರಿ ಸುಮಾರು ಮೂರು ತಿಂಗಳಿನಿಂದ ಬಂದ್‌ ಆಗಿದ್ದ ದೊಡ್ಡ ಆಲದ ಮರ ಈ ವಾರ ಸಾರ್ವಜನಿಕರ ಪ್ರವೇಶಕ್ಕೆ ತೆರೆದಿದೆ. ತಿಂಗಳುಗಳ ಕಾಲ ಮನೆಯಲ್ಲಿಯೇ ಕುಳಿತಿದ್ದ ಜನರು ಇಂದು ತಮ್ಮ ತಮ್ಮ ವಾಹನ ಮತ್ತು ಆಟೋ ರಿಕ್ಷಾದಲ್ಲಿ ಪುರಾತನ ದೊಡ್ಡ ಆಲದ ಮರಕ್ಕೆ ತೆರಳಿ ಪುಳಕಗೊಂಡರು.

ಬೆಂಗಳೂರಿನಲ್ಲಿ ಅನೇಕರಿಗೆ ದೊಡ್ಡ ಆಲದ ಮರದ ಪರಿಚಯ ಇದೆ. ಇನ್ನು ಕೆಲವರಿಗೆ ನಮ್ಮ ಸುತ್ತಲಿನ ಪ್ರದೇಶದ ಮಾಹಿತಿ ಇಲ್ಲ. ದೊಡ್ಡ ಆಲದ ಮರದ ವಿಶೇಷತೆ ಏನು? ಯಾಕಿದು ಪ್ರವಾಸಿ ತಾಣ ಎಂಬುದು ಹೆಚ್ಚು ಮುನ್ನೆಲೆಗೆ ಬಂದಿಲ್ಲ.

ಇದನ್ನೂ ಓದಿ: ಮುತ್ತು ಸುತ್ತು; ಸಾವನದುರ್ಗ: ಪ್ರಪಂಚದ ಅತಿದೊಡ್ಡ ಏಕಶಿಲಾ ಬೆಟ್ಟವಿದು, ಶಕ್ತಿಯಿದ್ದಷ್ಟು ಹತ್ತಿ ನೋಡ!

ದೊಡ್ಡ ಆಲದ ಮರ ಅಥವಾ ಬಿಗ್ ಬ್ಯಾನಿಯನ್ ಟ್ರೀ 

4-

ಇದೇನಪ್ಪಾ ಆಲದ ಮರವನ್ನು ಯಾವತ್ತೂ ನೋಡೇ ಇಲ್ವಾ ಅಂತಾ ನೀವು ಯೋಚಿಸಿರುವಿರಿ. ಆದರೆ ಇವತ್ತು ನಾವು ನಿಮಗೆ ಹೊರಟಿರುವ ಆಲದ ಮರ ಅಂತಿಂಥ ಆಲದ ಮರವಲ್ಲ. ಇದು ಸುಮಾರು 95  ಫೀಟ್‌ ಎತ್ತರ ಹಾಗೂ 400 ವರ್ಷಗಳ ಇತಿಹಾಸವನ್ನು ಹೊಂದಿರುವ ವಿಶೇಷ ಆಲದ ಮರ. ಬೆಂಗಳೂರು ದಕ್ಷಿಣದ ಕೇತೋಹಳ್ಳಿಯಲ್ಲಿರುವ ಈ ಆಲದ ಮರವನ್ನು ದೊಡ್ಡ ಆಲದ ಮರ ಅಥವಾ ಬಿಗ್ ಬ್ಯಾನಿಯನ್ ಟ್ರೀ ಎಂದೂ ಕರೆಯುತ್ತಾರೆ. ಇದು ಕಳೆದ ಕೆಲವು ವರ್ಷಗಳಿಂದ ಬೆಂಗಳೂರಿನಲ್ಲಿರುವ ಪ್ರವಾಸಿ ಆಕರ್ಷಣೆಯಾಗಿ ಬೆಳೆದಿದ್ದು ರಾಜ್ಯದ ಇಕೋ ಟೂರಿಸಂನ ಒಂದು ಭಾಗವಾಗಿದೆ.

ಇದನ್ನೂ ಓದಿ: ಕರ್ನಾಟಕಕ್ಕೂ ಬಂತು ವಿಸ್ಟಾಡೋಮ್ ರೈಲು: ಮಂಗಳೂರು-ಬೆಂಗಳೂರು ನಡುವೆ ಮೊದಲ ಓಡಾಟ

400-

ಈ ಆಲದ ಮರವು ಭಾರತದ ಪುರಾತನ ಆಲದ ಮರಗಳಲ್ಲಿ ನಾಲ್ಕನೆಯ ಸ್ಥಾನವನ್ನು ಪಡೆದುಕೊಂಡಿದೆ. ಆಂಧ್ರಪ್ರದೇಶದ ಮೆಹಬೂಬ್ ನಗರ, ಪಶ್ಚಿಮ ಬಂಗಾಳದ ಕೊಲ್ಕತ್ತ ಹಾಗೂ ತಮಿಳುನಾಡಿನ ಚೆನ್ನೈನಲ್ಲ್ಲಿ ಕ್ರಮವಾಗಿ ಮೊದಲ ಮೂರು ದೈತ್ಯ ಆಲದ ಮರಗಳಿವೆ. ಇಲ್ಲಿ ಒಂದು ಪುರಾತನ ಮುನೀಶ್ವರ ದೇವರ ದೇವಾಲಯ ಕೂಡಾ ಇದೆ.

ಇದನ್ನೂ ಓದಿ: ಕೋವಿಡ್‌ ನಿರ್ಬಂಧ ತೆರವು : ಪ್ರವಾಸಿ ತಾಣಗಳತ್ತ ಜನ-ಹಂಪಿಯಲ್ಲಿ ಜನ ಜಂಗುಳಿ

ಕರ್ನಾಟಕ ರಾಜ್ಯ ಸರ್ಕಾರದ ತೋಟಗಾರಿಕೆ ಇಲಾಖೆಯು ಈ ದೊಡ್ಡ ಆಲದ ಮರದ ಸಂರಕ್ಷಣೆಯ ಜವಾಬ್ದಾರಿಯನ್ನು ಹೊತ್ತುಕೊಂಡಿದೆ. ಆಲದ ಮರದ ಸುತ್ತಮುತ್ತಲಿನ ಪ್ರದೇಶಕ್ಕೆ ಕಬ್ಬಿಣದ ಗ್ರಿಲ್ ಹಾಕಲಾಗಿದೆ. ಪ್ರವಾಸೋದ್ಯಮ ಇಲಾಖೆ ದೊಡ್ಡ ಆಲದ ಮರವನ್ನು ಪಾರಂಪರಿಕ ವೃಕ್ಷವೆಂದು ಘೋಷಿಸಿ ತಾಣವನ್ನು ಪ್ರವಾಸಿ ಕೇಂದ್ರವನ್ನಾಗಿ ಮಾಡಿದೆ. ಈ ಮರದ ಸುತ್ತಲೂ ಪ್ರವಾಸಿಗರಿಗೆ ಕುಳಿತುಕೊಳ್ಳಲು ಕಲ್ಲಿನ ಬೆಂಚುಗಳನ್ನು ಹಾಕಲಾಗಿದೆ.

ಈಗ ನೋಡುತ್ತಿರುವ ಆಲದ ಮರವು ಹಲವು ವರ್ಷಗಳ ಹಿಂದೆ ಇನ್ನೂ ದೊಡ್ಡದಾಗಿತ್ತು, ಆದರೆ ಯಾವುದೋ ನೈಸರ್ಗಿಕ ಕಾಯಿಲೆಗೆ ಒಳಗಾಗಿ ನಶಿಸಿತು. ಆದ್ದರಿಂದ ಮರವು ಈಗ ಅನೇಕ ವಿಭಿನ್ನ ಮರಗಳಂತೆ ಕಾಣಿಸುತ್ತದೆ.

ಒಟ್ಟಾರೆಯಾಗಿ ವೀಕೆಂಡ್‌ ಕರ್ಪ್ಯೂ ತೆರವಾದ ಮೊದಲ ವೀಕೆಂಡ್‌ನಲ್ಲಿ ಭಾನುವಾರ ಸಂಜೆ ಹೊತ್ತಿನಲ್ಲಿ  ಹತ್ತಾರು ಪ್ರವಾಸಿಗರು ಪ್ರಶಾಂತವಾಗಿ ಕಾಲಕಳೆದಿದ್ದಾರೆ.  ಕಲ್ಲು ಬೆಂಚುಗಳಲ್ಲಿ ಕುಳಿತು ಹರಟೆ ಹೊಡೆಯುತ್ತಾ  ಕೋತಿಗಳ ಚೇಷ್ಟೆಯನ್ನು ಎಂಜಾಯ್ ಮಾಡುತ್ತಾ ಕಾಲ ಕಳೆದಿದ್ದಾರೆ.

ದೊಡ್ಡ ಆಲದ ಮರದಲ್ಲಿ ಕೋತಿಗಳ ಸಂಭ್ರಮ

ಪ್ರವಾಸಿಗರು ನೀಡುವ ಹಣ್ಣು ಹಂಪಲು ತಿಂಡಿಗಳಿಗೆ ಅಭ್ಯಾಸವಾಗಿದ್ದ ಕೋತಿಗಳು ಕಳೆದ 3 ತಿಂಗಳು ಸಾಕಷ್ಟು ಕಷ್ಟಪಟ್ಟವು. ಕೆಲವು ನಗರ ಪ್ರದೇಶಕ್ಕೆ ಹೋದವು. ಒಂದಷ್ಟು ಚಿಕ್ಕ ಕೋತಿಗಳು ಹಸಿವಿನಿಂದ ಮೃತಪಟ್ಟಿವೆ ಎಂದು ಸ್ಥಳೀಯ ವ್ಯಾಪಾರಿಯೊಬ್ಬರು ತಿಳಿಸಿದ್ದಾರೆ.

ಕೊರೊನಾ ಮತ್ತು ಲಾಕ್‌ ಡೌನ್ ಮನುಷ್ಯ ಪ್ರಾಣಿಗಳ ಬೇಧವಿಲ್ಲದೇ ಎಲ್ಲರನ್ನೂ ಕಂಗೆಡಿಸಿದೆ.  3ನೇ ಅಲೆಯ ಭೀತಿಯ ನಡುವೆ ನಿಟ್ಟುಸಿರಿಗೊಂದಷ್ಟು ಅವಕಾಶ ಸಿಕ್ಕಿದೆ. ಎಚ್ಚರಿಕೆಯ ನಡುವೆ ಅಚ್ಚರಿಯ ಹುಡುಕಾಟಕ್ಕೆ ದೊಡ್ಡ ಆಲದ ಮರ ಒಂದು ಪ್ರಶಸ್ತ ತಾಣ. ವಿಶ್ರಾಂತಿ, ವಿಜ್ಞಾನ ಎರಡನ್ನೂ ಒಟ್ಟಿಗೆ ನೀಡುವ ಬಿಗ್‌ ಬ್ಯಾನಿಯನ್‌  ಟ್ರೀ ನಮ್ಮ ಮುಂದಿನ ಪ್ರವಾಸಕ್ಕೆ ಪ್ರಶಸ್ತ ನಿಲ್ಧಾಣ.

-ರಾಜೇಶ್‌ ಹೆಬ್ಬಾರ್‌

ಇದನ್ನೂ ಓದಿ: ಕೈ ಬೀಸಿ ಕರೆಯಲಿರುವ ಕೇರಳ…ಪ್ರವಾಸಿ ತಾಣಗಳು ಪುನರಾರಂಭ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...