Homeಮುಖಪುಟಪಶ್ಚಿಮ ಬಂಗಾಳದ ಸೋಲಿನ ಬಳಿಕ 'ಇಂಡಿಯಾದ ಆಸರೆ' ಬಯಸಿದ ಮಮತಾ

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

- Advertisement -
- Advertisement -

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ?

ದೀರ್ಘಕಾಲದವರೆಗೆ ಮಮತಾ ಬ್ಯಾನರ್ಜಿ ‘ಇಂಡಿಯಾ’ ಒಕ್ಕೂಟದ ಅಧಿಕೃತ ಸಭೆಗಳಿಂದ ಒಂದು ರೀತಿಯ ಅಂತರ ಕಾಯ್ದುಕೊಂಡಿದ್ದರು. ಆದರೆ ಮಮತ ಈಗ ಇಂಡಿಯಾ ಸಭೆಗಳಿಗೆ ಹಾಜರಾಗುತ್ತಿದ್ದಾರೆ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ವಿರೋಧ ಪಕ್ಷಗಳನ್ನು ಒಗ್ಗೂಡಿಸಲು ಹೊಸ ಉತ್ಸಾಹ ತೋರಿಸುತ್ತಿದ್ದಾರೆ.

ಇಲ್ಲಿ ಗಮನಿಸಬೇಕಾದ ಮುಖ್ಯ ವಿಷಯವೇನೆಂದರೆ, 2026ರ ಬಂಗಾಳ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ (TMC) ಮತ್ತು ಕಾಂಗ್ರೆಸ್ ಪಕ್ಷದ ನಡುವೆ ಯಾವುದೇ ಮೈತ್ರಿ ಇರಲಿಲ್ಲ. ಕಾಂಗ್ರೆಸ್ ರಾಜ್ಯ ಅಧ್ಯಕ್ಷ ಶುಭಂಕರ್ ಸರ್ಕಾರ್ ಅವರೇ ಇತ್ತೀಚೆಗೆ ಬಹಿರಂಗವಾಗಿ ಒಪ್ಪಿಕೊಂಡಂತೆ, ಅವರಿಗೆ ಮಮತಾ ಬ್ಯಾನರ್ಜಿ ಅವರೊಂದಿಗೆ ಸೀಟು ಹೊಂದಾಣಿಕೆ ಮಾಡಿಕೊಳ್ಳುವ ವೈಯಕ್ತಿಕ ಇಚ್ಛೆಯಿತ್ತು. ಬಂಗಾಳದ ಕಾಂಗ್ರೆಸ್ ನಾಯಕತ್ವವು ಮೈತ್ರಿಗೆ ಸಿದ್ಧವಿತ್ತಾದರೂ, ಆ ಸಮಯದಲ್ಲಿ ಮಮತಾ ಬ್ಯಾನರ್ಜಿ ಅವರು ಇದಕ್ಕೆ ಆಸಕ್ತಿ ತೋರಿಸಿರಲಿಲ್ಲ. ಪ್ರಾಯಶಃ ಅಂದಿನ ಚುನಾವಣಾ ಫಲಿತಾಂಶ ಇಷ್ಟೊಂದು ಭೀಕರವಾಗಿ ಬರಬಹುದು ಎಂದು ಅವರು ಊಹಿಸಿರಲಿಲ್ಲ ಅನಿಸುತ್ತದೆ.

ಚುನಾವಣಾ ಹಿನ್ನಡೆಯ ನಂತರ ಈಗ ರಾಜಕೀಯ ಪರಿಸ್ಥಿತಿ ಸಂಪೂರ್ಣವಾಗಿ ಬದಲಾಗಿದೆ. ಮಮತಾ ಬ್ಯಾನರ್ಜಿ ಅವರು ದೆಹಲಿ ರಾಜಕಾರಣದತ್ತ ಗಮನ ಹರಿಸಲು ಮೊದಲ ಮತ್ತು ತಕ್ಷಣದ ಕಾರಣ ಬಂಗಾಳದ ಸದ್ಯದ ಪರಿಸ್ಥಿತಿಯೇ ಆಗಿದೆ.

2026ರ ಸೋಲಿನ ನಂತರ, ಸದ್ಯಕ್ಕೆ ಬಂಗಾಳದಲ್ಲಿ ಯಾವುದೇ ವಿಧಾನಸಭಾ ಚುನಾವಣೆ ಎದುರಿಗಿಲ್ಲ ಅಥವಾ ತಕ್ಷಣವೇ ಅಲ್ಲಿ ಸರ್ಕಾರ ಬದಲಾಗುವ ಸಾಧ್ಯತೆಯೂ ಇಲ್ಲ. ಆದರೆ ಅದೇ ಸಮಯದಲ್ಲಿ, ತೃಣಮೂಲ ಕಾಂಗ್ರೆಸ್ ವಿರುದ್ಧ ಬಿಜೆಪಿಯ ರಾಜಕೀಯ ವಾಗ್ದಾಳಿ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ.

ಟಿಎಂಸಿ ನಾಯಕರ ಮೇಲಿನ ಭ್ರಷ್ಟಾಚಾರದ ಆರೋಪಗಳು ರಾಜ್ಯ ರಾಜಕಾರಣದಲ್ಲಿ ಮುನ್ನೆಲೆಗೆ ಬರುತ್ತಿವೆ. ಹಲವು ಶಾಸಕರು (MLAs) ಈಗಾಗಲೇ ಪಕ್ಷ ತೊರೆದಿದ್ದಾರೆ. ಒಂದು ರೀತಿಯಲ್ಲಿ ತೃಣಮೂಲ ಕಾಂಗ್ರೆಸ್‌ನ ಆಂತರಿಕ ಶಾಸಕಾಂಗ ರಚನೆ ದುರ್ಬಲಗೊಂಡಿದೆ. ಕೋಲ್ಕತ್ತಾ ಮಹಾನಗರ ಪಾಲಿಕೆಯಲ್ಲೂ (KMC) ಹಲವು ಕೌನ್ಸಿಲರ್‌ಗಳು ರಾಜೀನಾಮೆ ನೀಡಿದ್ದಾರೆ ಅಥವಾ ನಾಯಕತ್ವದ ವಿರುದ್ಧ ಬಹಿರಂಗವಾಗಿ ಬಂಡಾಯವೆದ್ದಿದ್ದಾರೆ.

ಇಂತಹ ರಕ್ಷಣಾತ್ಮಕ (Defensive) ಪರಿಸ್ಥಿತಿಯಲ್ಲಿ, ಮಮತಾ ಬ್ಯಾನರ್ಜಿ ಅವರು ರಾಜಕೀಯ ಚರ್ಚೆಯ ಕೇಂದ್ರಬಿಂದುವನ್ನು ಬಂಗಾಳದ ಆಡಳಿತ ವಿರೋಧಿ ಅಲೆಯಿಂದ ಹೊರಗೆ ತಂದು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಹೆಚ್ಚು ಆಕ್ರಮಣಕಾರಿಯಾಗಿ ಗುರಿಯಾಗಿಸಬಹುದಾದ ದೊಡ್ಡ ರಾಷ್ಟ್ರೀಯ ವಿಷಯಗಳ ಕಡೆಗೆ ತಿರುಗಿಸಲು ಪ್ರಯತ್ನಿಸುತ್ತಿದ್ದಾರೆ.

ಇದು ರಾಜಕೀಯ ಕಾರ್ಯತಂತ್ರದ ನಡೆಯಾಗಿದೆ. ರಾಷ್ಟ್ರೀಯ ಮಟ್ಟದಲ್ಲಿ ನರೇಂದ್ರ ಮೋದಿ ಸರ್ಕಾರವನ್ನು ಕಟ್ಟಿಹಾಕಲು ನಿರುದ್ಯೋಗ, ಅಡುಗೆ ಅನಿಲ ಮತ್ತು ಇಂಧನ ಬೆಲೆ ಏರಿಕೆ, ಆರ್ಥಿಕ ಅನಿಶ್ಚಿತತೆ, ವಿದೇಶಾಂಗ ನೀತಿಯ ಮೇಲಿನ ಟೀಕೆಗಳು ಮತ್ತು ಅಮೆರಿಕದೊಂದಿಗಿನ ಪ್ರಮುಖ ಅಂತರರಾಷ್ಟ್ರೀಯ ವ್ಯಾಪಾರ ಒಪ್ಪಂದಗಳ ವಿಳಂಬದಂತಹ ಹಲವು ಸೂಕ್ಷ್ಮ ವಿಷಯಗಳಿವೆ ಎಂದು ವಿರೋಧ ಪಕ್ಷಗಳು ನಂಬಿವೆ. ಮಮತಾ ಬ್ಯಾನರ್ಜಿ ಈಗ ಈ ವಿಶಾಲವಾದ ಜನವಿರೋಧಿ ಅಲೆಯಲ್ಲಿ ತಮಗೊಂದು ಪ್ರಮುಖ ಸ್ಥಾನವನ್ನು ಹುಡುಕಿಕೊಳ್ಳುತ್ತಿದ್ದಾರೆ.

ಮತ್ತೊಂದು ಮುಖ್ಯ ಅಂಶವೆಂದರೆ, ಇತ್ತೀಚಿನ ಚುನಾವಣೆಯ ಸಮಯದಲ್ಲಿ ಬಂಗಾಳವು ಎದುರಿಸಿದ ಆಡಳಿತಾತ್ಮಕ, ಚುನಾವಣಾ ಮತ್ತು ಎಸ್‌ಐಆರ್ ನ ಮತದಾರರ ನಿರ್ವಹಣೆಯ ವಿವಾದಗಳು ದೇಶದ ಪ್ರಜಾಪ್ರಭುತ್ವದ ದೊಡ್ಡ ಆತಂಕ ಎಂಬದನ್ನು ರಾಷ್ಟ್ರೀಯ ಮಟ್ಟದಲ್ಲಿ ಪ್ರತಿಧ್ವನಿಸಲು ವಿರೋಧ ಪಕ್ಷಗಳು ನಿರ್ಧರಿಸಿವೆ. ಬಂಗಾಳವನ್ನು ಒಂದು “ಮಾದರಿ ಪ್ರಕರಣ” (Model Case) ವನ್ನಾಗಿ ಮಾಡಿಕೊಂಡು ಬಿಜೆಪಿಯ ವಿರುದ್ಧ ಜಂಟಿ ದಾಳಿ ನಡೆಸಲು ಚರ್ಚೆಗಳು ಆರಂಭವಾಗಿವೆ. ಇದೇ ವೇಳೆ ಕಾಂಗ್ರೆಸ್ ಜೊತೆಗಿನ ಮಮತಾ ಅವರ ಸಂಬಂಧವೂ ಹೊಸ ಹಂತಕ್ಕೆ ಪ್ರವೇಶಿಸುತ್ತಿದೆ.

ಆದರೆ ಇಲ್ಲಿ ಒಂದು ಪ್ರಮುಖ ವಿಷಯವನ್ನು ಸ್ಪಷ್ಟವಾಗಿ ಅರ್ಥಮಾಡಿಕೊಳ್ಳಬೇಕು. ಈ ಕ್ಷಣದಲ್ಲಿ ಮಮತಾ ಬ್ಯಾನರ್ಜಿ ಅವರು ಇಡೀ ವಿರೋಧ ಪಕ್ಷದ ಒಕ್ಕೂಟದ “ಏಕೈಕ ನಾಯಕಿ” ಎಂದು ತಮ್ಮನ್ನು ತಾವು ಬಿಂಬಿಸಿಕೊಳ್ಳಲು ಹಿಂದಿನಂತೆ ಪ್ರಯತ್ನಿಸುತ್ತಿಲ್ಲ. ಈ ಹಿಂದೆ, ಮಮತಾ ರಾಷ್ಟ್ರೀಯ ಮಟ್ಟದಲ್ಲಿ ಮೈತ್ರಿಕೂಟದ ನಾಯಕತ್ವ ವಹಿಸಿಕೊಳ್ಳಲು ಬಯಸಿದ್ದಾರೆಯೇ ಎಂಬ ಚರ್ಚೆ ಪ್ರಾದೇಶಿಕ ಪಕ್ಷಗಳ ನಡುವೆ ಭಿನ್ನಾಭಿಪ್ರಾಯ ಮೂಡಿಸಿತ್ತು.

ಆದರೆ ಸದ್ಯದ ಮಟ್ಟಿಗಾದರೂ ಮಮತಾ ಅವರು ನೇರ ನಾಯಕತ್ವದ ಪೈಪೋಟಿಯಿಂದ ದೂರ ಉಳಿದಿದ್ದಾರೆ. ತಕ್ಷಣಕ್ಕೆ ಪ್ರಧಾನಿ ಅಭ್ಯರ್ಥಿಯಾಗುವ ಆಸೆಯನ್ನು ಪ್ರದರ್ಶಿಸುವ ಬದಲು, ವಿರೋಧ ಪಕ್ಷಗಳ ನಡುವೆ ಹೆಚ್ಚಿನ ಒಗ್ಗಟ್ಟನ್ನು ಮೂಡಿಸುವಲ್ಲಿ ಅವರು ಸಹಕರಿಸುತ್ತಿದ್ದಾರೆ.

ಮುಂದಿನ ಸಂಸತ್ತಿನ ಮುಂಗಾರು ಅಧಿವೇಶನ (Monsoon Session) ಹತ್ತಿರ ಬರುತ್ತಿರುವುದರಿಂದ ಈ ಸಮಯ ಅತ್ಯಂತ ಪ್ರಮುಖವಾಗಿದೆ. ಸಂಸತ್ತಿನ ಒಳಗೆ ಸಮನ್ವಯತೆ ಸುಧಾರಿಸಿದರೆ ಆರ್ಥಿಕ ಬಿಕ್ಕಟ್ಟು ಮತ್ತು ಹಣದುಬ್ಬರ ಸೇರಿದಂತೆ ಹಲವು ವಿಷಯಗಳ ಮೇಲೆ ಸರ್ಕಾರವನ್ನು ಕೋನರ್ ಮಾಡಬಹುದು ಎಂಬುದು ವಿರೋಧ ಪಕ್ಷಗಳ ಪ್ಲಾನ್ ಆಗಿದೆ. 2029ರ ಲೋಕಸಭಾ ಚುನಾವಣೆಯೇ ನಿಜವಾದ ಟಾರ್ಗೆಟ್ ಆಗಿದ್ದರೂ, ಮಮತಾ ಬ್ಯಾನರ್ಜಿ ಈಗಿನಿಂದಲೇ ಸಿದ್ಧತೆ ಆರಂಭಿಸಿದ್ದಾರೆ.

ಚುನಾವಣಾ ಫಲಿತಾಂಶ ಪ್ರಕಟವಾದ ನಂತರ ಮಮತಾ ಬ್ಯಾನರ್ಜಿ ಮೌನಕ್ಕೆ ಶರಣಾಗಿದ್ದರು. ಆದರೆ ಈಗ, ಅವರು ಪೂರ್ಣ ಪ್ರಮಾಣದ ‘ಡ್ಯಾಮೇಜ್ ಕಂಟ್ರೋಲ್’ (ಹಾನಿ ನಿಯಂತ್ರಣ) ಕಸರತ್ತಿಗೆ ಇಳಿದಿದ್ದಾರೆ. ಇದಕ್ಕೆ ಕಾರಣ ಸ್ಪಷ್ಟವಾಗಿದೆ; ಪಕ್ಷದೊಳಗೆ ಆರಂಭವಾಗಿರುವ ವಲಸೆ ರಾಜಕೀಯವು ಟಿಎಂಸಿ ನಾಯಕತ್ವದಲ್ಲಿ ತೀವ್ರ ಕಳವಳ ಮೂಡಿಸಿದೆ. ಶಾಸಕರ ನಡುವಿನ ಬಿರುಕಿನ ನಂತರ, ಲೋಕಸಭೆ ಮತ್ತು ರಾಜ್ಯಸಭೆಯ ಸಂಸದರಲ್ಲೂ ಇಂತಹ ಒಡಕು ಮೂಡಬಹುದು ಎಂಬ ಆತಂಕ ಶುರುವಾಗಿದೆ.

ಸುಖೇಂದು ಶೇಖರ್ ರಾಯ್ ಅವರಂತಹ ಹಿರಿಯ ನಾಯಕರ ರಾಜೀನಾಮೆ ಮತ್ತು ನಟಿ ಕೋಯಲ್ ಮಲ್ಲಿಕ್ ರಾಜೀನಾಮೆ ನೀಡಲು ಬಯಸಿದ್ದಾರೆ ಎಂಬ ವರದಿಗಳು ಪಕ್ಷದೊಳಗಿನ ಅನಿಶ್ಚಿತತೆಯನ್ನು ಹೆಚ್ಚಿಸಿವೆ. ಈ ಕಠಿಣ ಪರಿಸ್ಥಿತಿಯಲ್ಲಿ, ಮಮತಾ ಬ್ಯಾನರ್ಜಿ ಮತ್ತು ಅಭಿಷೇಕ್ ಬ್ಯಾನರ್ಜಿ ಅವರು ವೈಯಕ್ತಿಕವಾಗಿ ಎಲ್ಲಾ ಸಂಸದರನ್ನು ಸಂಪರ್ಕಿಸಿ, ಧೈರ್ಯ ತುಂಬಿ ಸಂಘಟನೆಯನ್ನು ಒಟ್ಟಾಗಿ ಇಡಲು ಪ್ರಯತ್ನಿಸುತ್ತಿದ್ದಾರೆ.

ಆದರೆ ಪಕ್ಷದ ಮೂಲಗಳ ಪ್ರಕಾರ, ಎಲ್ಲ ಸಂಸದರಿಂದ ಸಕಾರಾತ್ಮಕ ಪ್ರತಿಕ್ರಿಯೆ ಸಿಗುತ್ತಿಲ್ಲ. ಕೆಲವು ಸಂಸದರು ಫೋನ್ ಕರೆಗಳಿಗೂ ಸಿಗುತ್ತಿಲ್ಲ ಎನ್ನಲಾಗಿದೆ. ಮತ್ತೊಂದೆಡೆ, ಟಿಎಂಸಿ ವೋಟ್ ಬ್ಯಾಂಕ್ ಅಷ್ಟು ಸುಲಭವಾಗಿ ಕರಗುವುದಿಲ್ಲ, ಪರಿಸ್ಥಿತಿ ಮತ್ತೆ ಬಂಗಾಳದಲ್ಲಿ ನಮ್ಮ ಪರವಾಗಲಿದೆ ಎಂದು ಕೆಲವು ನಾಯಕರು ಆಶಾವಾದ ಹೊಂದಿದ್ದಾರೆ.

ಪ್ರಸ್ತುತ ತೃಣಮೂಲ ಕಾಂಗ್ರೆಸ್ ಮೂರು ಕಡೆಯಿಂದ ಒತ್ತಡ ಎದುರಿಸುತ್ತಿದೆ. ಒಂದೆಡೆ ಬಿಜೆಪಿ ಅವರ ಸಾಂಪ್ರದಾಯಿಕ ಮತಬ್ಯಾಂಕ್‌ಗೆ ಕೈಹಾಕುತ್ತಿದ್ದರೆ, ಮತ್ತೊಂದೆಡೆ ಕಾಂಗ್ರೆಸ್ ಮತ್ತು ಎಡಪಕ್ಷಗಳು (Left) ಕಳೆದುಹೋದ ತಮ್ಮ ನೆಲೆಯನ್ನು ಮರಳಿ ಪಡೆಯಲು ಹೋರಾಡುತ್ತಿವೆ. ಇಂತಹ ಸಂದರ್ಭದಲ್ಲಿ ‘ಇಂಡಿಯಾ’ ಒಕ್ಕೂಟವನ್ನು ಪುನಶ್ಚೇತನಗೊಳಿಸುವುದು ಮಮತಾ ಬ್ಯಾನರ್ಜಿ ಅವರಿಗೆ ರಾಜಕೀಯ ಅನಿವಾರ್ಯತೆಯಾಗಿದೆ. ರಾಷ್ಟ್ರೀಯ ಮಟ್ಟದಲ್ಲಿ ಒಕ್ಕೂಟದ ಧ್ವನಿ ಜೋರಾದರೆ, ಬಂಗಾಳದೊಳಗಿನ ಪಕ್ಷದ ಆಂತರಿಕ ಅಸ್ಥಿರತೆಯಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಬಹುದು ಎಂಬುದು ದೀದಿಯ ಮಾಸ್ಟರ್ ಪ್ಲಾನ್.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...