Homeಮುಖಪುಟಪಶ್ಚಿಮ ಬಂಗಾಳದ ಸೋಲಿನ ಬಳಿಕ 'ಇಂಡಿಯಾದ ಆಸರೆ' ಬಯಸಿದ ಮಮತಾ

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

- Advertisement -
- Advertisement -

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ?

ದೀರ್ಘಕಾಲದವರೆಗೆ ಮಮತಾ ಬ್ಯಾನರ್ಜಿ ‘ಇಂಡಿಯಾ’ ಒಕ್ಕೂಟದ ಅಧಿಕೃತ ಸಭೆಗಳಿಂದ ಒಂದು ರೀತಿಯ ಅಂತರ ಕಾಯ್ದುಕೊಂಡಿದ್ದರು. ಆದರೆ ಮಮತ ಈಗ ಇಂಡಿಯಾ ಸಭೆಗಳಿಗೆ ಹಾಜರಾಗುತ್ತಿದ್ದಾರೆ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ವಿರೋಧ ಪಕ್ಷಗಳನ್ನು ಒಗ್ಗೂಡಿಸಲು ಹೊಸ ಉತ್ಸಾಹ ತೋರಿಸುತ್ತಿದ್ದಾರೆ.

ಇಲ್ಲಿ ಗಮನಿಸಬೇಕಾದ ಮುಖ್ಯ ವಿಷಯವೇನೆಂದರೆ, 2026ರ ಬಂಗಾಳ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ (TMC) ಮತ್ತು ಕಾಂಗ್ರೆಸ್ ಪಕ್ಷದ ನಡುವೆ ಯಾವುದೇ ಮೈತ್ರಿ ಇರಲಿಲ್ಲ. ಕಾಂಗ್ರೆಸ್ ರಾಜ್ಯ ಅಧ್ಯಕ್ಷ ಶುಭಂಕರ್ ಸರ್ಕಾರ್ ಅವರೇ ಇತ್ತೀಚೆಗೆ ಬಹಿರಂಗವಾಗಿ ಒಪ್ಪಿಕೊಂಡಂತೆ, ಅವರಿಗೆ ಮಮತಾ ಬ್ಯಾನರ್ಜಿ ಅವರೊಂದಿಗೆ ಸೀಟು ಹೊಂದಾಣಿಕೆ ಮಾಡಿಕೊಳ್ಳುವ ವೈಯಕ್ತಿಕ ಇಚ್ಛೆಯಿತ್ತು. ಬಂಗಾಳದ ಕಾಂಗ್ರೆಸ್ ನಾಯಕತ್ವವು ಮೈತ್ರಿಗೆ ಸಿದ್ಧವಿತ್ತಾದರೂ, ಆ ಸಮಯದಲ್ಲಿ ಮಮತಾ ಬ್ಯಾನರ್ಜಿ ಅವರು ಇದಕ್ಕೆ ಆಸಕ್ತಿ ತೋರಿಸಿರಲಿಲ್ಲ. ಪ್ರಾಯಶಃ ಅಂದಿನ ಚುನಾವಣಾ ಫಲಿತಾಂಶ ಇಷ್ಟೊಂದು ಭೀಕರವಾಗಿ ಬರಬಹುದು ಎಂದು ಅವರು ಊಹಿಸಿರಲಿಲ್ಲ ಅನಿಸುತ್ತದೆ.

ಚುನಾವಣಾ ಹಿನ್ನಡೆಯ ನಂತರ ಈಗ ರಾಜಕೀಯ ಪರಿಸ್ಥಿತಿ ಸಂಪೂರ್ಣವಾಗಿ ಬದಲಾಗಿದೆ. ಮಮತಾ ಬ್ಯಾನರ್ಜಿ ಅವರು ದೆಹಲಿ ರಾಜಕಾರಣದತ್ತ ಗಮನ ಹರಿಸಲು ಮೊದಲ ಮತ್ತು ತಕ್ಷಣದ ಕಾರಣ ಬಂಗಾಳದ ಸದ್ಯದ ಪರಿಸ್ಥಿತಿಯೇ ಆಗಿದೆ.

2026ರ ಸೋಲಿನ ನಂತರ, ಸದ್ಯಕ್ಕೆ ಬಂಗಾಳದಲ್ಲಿ ಯಾವುದೇ ವಿಧಾನಸಭಾ ಚುನಾವಣೆ ಎದುರಿಗಿಲ್ಲ ಅಥವಾ ತಕ್ಷಣವೇ ಅಲ್ಲಿ ಸರ್ಕಾರ ಬದಲಾಗುವ ಸಾಧ್ಯತೆಯೂ ಇಲ್ಲ. ಆದರೆ ಅದೇ ಸಮಯದಲ್ಲಿ, ತೃಣಮೂಲ ಕಾಂಗ್ರೆಸ್ ವಿರುದ್ಧ ಬಿಜೆಪಿಯ ರಾಜಕೀಯ ವಾಗ್ದಾಳಿ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ.

ಟಿಎಂಸಿ ನಾಯಕರ ಮೇಲಿನ ಭ್ರಷ್ಟಾಚಾರದ ಆರೋಪಗಳು ರಾಜ್ಯ ರಾಜಕಾರಣದಲ್ಲಿ ಮುನ್ನೆಲೆಗೆ ಬರುತ್ತಿವೆ. ಹಲವು ಶಾಸಕರು (MLAs) ಈಗಾಗಲೇ ಪಕ್ಷ ತೊರೆದಿದ್ದಾರೆ. ಒಂದು ರೀತಿಯಲ್ಲಿ ತೃಣಮೂಲ ಕಾಂಗ್ರೆಸ್‌ನ ಆಂತರಿಕ ಶಾಸಕಾಂಗ ರಚನೆ ದುರ್ಬಲಗೊಂಡಿದೆ. ಕೋಲ್ಕತ್ತಾ ಮಹಾನಗರ ಪಾಲಿಕೆಯಲ್ಲೂ (KMC) ಹಲವು ಕೌನ್ಸಿಲರ್‌ಗಳು ರಾಜೀನಾಮೆ ನೀಡಿದ್ದಾರೆ ಅಥವಾ ನಾಯಕತ್ವದ ವಿರುದ್ಧ ಬಹಿರಂಗವಾಗಿ ಬಂಡಾಯವೆದ್ದಿದ್ದಾರೆ.

ಇಂತಹ ರಕ್ಷಣಾತ್ಮಕ (Defensive) ಪರಿಸ್ಥಿತಿಯಲ್ಲಿ, ಮಮತಾ ಬ್ಯಾನರ್ಜಿ ಅವರು ರಾಜಕೀಯ ಚರ್ಚೆಯ ಕೇಂದ್ರಬಿಂದುವನ್ನು ಬಂಗಾಳದ ಆಡಳಿತ ವಿರೋಧಿ ಅಲೆಯಿಂದ ಹೊರಗೆ ತಂದು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಹೆಚ್ಚು ಆಕ್ರಮಣಕಾರಿಯಾಗಿ ಗುರಿಯಾಗಿಸಬಹುದಾದ ದೊಡ್ಡ ರಾಷ್ಟ್ರೀಯ ವಿಷಯಗಳ ಕಡೆಗೆ ತಿರುಗಿಸಲು ಪ್ರಯತ್ನಿಸುತ್ತಿದ್ದಾರೆ.

ಇದು ರಾಜಕೀಯ ಕಾರ್ಯತಂತ್ರದ ನಡೆಯಾಗಿದೆ. ರಾಷ್ಟ್ರೀಯ ಮಟ್ಟದಲ್ಲಿ ನರೇಂದ್ರ ಮೋದಿ ಸರ್ಕಾರವನ್ನು ಕಟ್ಟಿಹಾಕಲು ನಿರುದ್ಯೋಗ, ಅಡುಗೆ ಅನಿಲ ಮತ್ತು ಇಂಧನ ಬೆಲೆ ಏರಿಕೆ, ಆರ್ಥಿಕ ಅನಿಶ್ಚಿತತೆ, ವಿದೇಶಾಂಗ ನೀತಿಯ ಮೇಲಿನ ಟೀಕೆಗಳು ಮತ್ತು ಅಮೆರಿಕದೊಂದಿಗಿನ ಪ್ರಮುಖ ಅಂತರರಾಷ್ಟ್ರೀಯ ವ್ಯಾಪಾರ ಒಪ್ಪಂದಗಳ ವಿಳಂಬದಂತಹ ಹಲವು ಸೂಕ್ಷ್ಮ ವಿಷಯಗಳಿವೆ ಎಂದು ವಿರೋಧ ಪಕ್ಷಗಳು ನಂಬಿವೆ. ಮಮತಾ ಬ್ಯಾನರ್ಜಿ ಈಗ ಈ ವಿಶಾಲವಾದ ಜನವಿರೋಧಿ ಅಲೆಯಲ್ಲಿ ತಮಗೊಂದು ಪ್ರಮುಖ ಸ್ಥಾನವನ್ನು ಹುಡುಕಿಕೊಳ್ಳುತ್ತಿದ್ದಾರೆ.

ಮತ್ತೊಂದು ಮುಖ್ಯ ಅಂಶವೆಂದರೆ, ಇತ್ತೀಚಿನ ಚುನಾವಣೆಯ ಸಮಯದಲ್ಲಿ ಬಂಗಾಳವು ಎದುರಿಸಿದ ಆಡಳಿತಾತ್ಮಕ, ಚುನಾವಣಾ ಮತ್ತು ಮತದಾರರ ನಿರ್ವಹಣೆಯ ವಿವಾದಗಳನ್ನು ದೇಶದ ಪ್ರಜಾಪ್ರಭುತ್ವದ ದೊಡ್ಡ ಆತಂಕ ಎಂಬಂತೆ ರಾಷ್ಟ್ರೀಯ ಮಟ್ಟದಲ್ಲಿ ಬಿಂಬಿಸಲು ವಿರೋಧ ಪಕ್ಷಗಳು ನಿರ್ಧರಿಸಿವೆ. ಬಂಗಾಳವನ್ನು ಒಂದು “ಮಾದರಿ ಪ್ರಕರಣ” (Model Case) ವನ್ನಾಗಿ ಮಾಡಿಕೊಂಡು ಬಿಜೆಪಿಯ ವಿರುದ್ಧ ಜಂಟಿ ದಾಳಿ ನಡೆಸಲು ಚರ್ಚೆಗಳು ಆರಂಭವಾಗಿವೆ. ಇದೇ ವೇಳೆ ಕಾಂಗ್ರೆಸ್ ಜೊತೆಗಿನ ಮಮತಾ ಅವರ ಸಂಬಂಧವೂ ಹೊಸ ಹಂತಕ್ಕೆ ಪ್ರವೇಶಿಸುತ್ತಿದೆ.

ಆದರೆ ಇಲ್ಲಿ ಒಂದು ಪ್ರಮುಖ ವಿಷಯವನ್ನು ಸ್ಪಷ್ಟವಾಗಿ ಅರ್ಥಮಾಡಿಕೊಳ್ಳಬೇಕು. ಈ ಕ್ಷಣದಲ್ಲಿ ಮಮತಾ ಬ್ಯಾನರ್ಜಿ ಅವರು ಇಡೀ ವಿರೋಧ ಪಕ್ಷದ ಒಕ್ಕೂಟದ “ಏಕೈಕ ನಾಯಕಿ” ಎಂದು ತಮ್ಮನ್ನು ತಾವು ಬಿಂಬಿಸಿಕೊಳ್ಳಲು ಹಿಂದಿನಂತೆ ಪ್ರಯತ್ನಿಸುತ್ತಿಲ್ಲ. ಈ ಹಿಂದೆ, ಮಮತಾ ರಾಷ್ಟ್ರೀಯ ಮಟ್ಟದಲ್ಲಿ ಮೈತ್ರಿಕೂಟದ ನಾಯಕತ್ವ ವಹಿಸಿಕೊಳ್ಳಲು ಬಯಸಿದ್ದಾರೆಯೇ ಎಂಬ ಚರ್ಚೆ ಪ್ರಾದೇಶಿಕ ಪಕ್ಷಗಳ ನಡುವೆ ಭಿನ್ನಾಭಿಪ್ರಾಯ ಮೂಡಿಸಿತ್ತು.

ಆದರೆ ಸದ್ಯದ ಮಟ್ಟಿಗಾದರೂ ಮಮತಾ ಅವರು ನೇರ ನಾಯಕತ್ವದ ಪೈಪೋಟಿಯಿಂದ ದೂರ ಉಳಿದಿದ್ದಾರೆ. ತಕ್ಷಣಕ್ಕೆ ಪ್ರಧಾನಿ ಅಭ್ಯರ್ಥಿಯಾಗುವ ಆಸೆಯನ್ನು ಪ್ರದರ್ಶಿಸುವ ಬದಲು, ವಿರೋಧ ಪಕ್ಷಗಳ ನಡುವೆ ಹೆಚ್ಚಿನ ಒಗ್ಗಟ್ಟನ್ನು ಮೂಡಿಸುವಲ್ಲಿ ಅವರು ಸಹಕರಿಸುತ್ತಿದ್ದಾರೆ.

ಮುಂದಿನ ಸಂಸತ್ತಿನ ಮುಂಗಾರು ಅಧಿವೇಶನ (Monsoon Session) ಹತ್ತಿರ ಬರುತ್ತಿರುವುದರಿಂದ ಈ ಸಮಯ ಅತ್ಯಂತ ಪ್ರಮುಖವಾಗಿದೆ. ಸಂಸತ್ತಿನ ಒಳಗೆ ಸಮನ್ವಯತೆ ಸುಧಾರಿಸಿದರೆ ಆರ್ಥಿಕ ಬಿಕ್ಕಟ್ಟು ಮತ್ತು ಹಣದುಬ್ಬರ ಸೇರಿದಂತೆ ಹಲವು ವಿಷಯಗಳ ಮೇಲೆ ಸರ್ಕಾರವನ್ನು ಕೋನರ್ ಮಾಡಬಹುದು ಎಂಬುದು ವಿರೋಧ ಪಕ್ಷಗಳ ಪ್ಲಾನ್ ಆಗಿದೆ. 2029ರ ಲೋಕಸಭಾ ಚುನಾವಣೆಯೇ ನಿಜವಾದ ಟಾರ್ಗೆಟ್ ಆಗಿದ್ದರೂ, ಮಮತಾ ಬ್ಯಾನರ್ಜಿ ಈಗಿನಿಂದಲೇ ಸಿದ್ಧತೆ ಆರಂಭಿಸಿದ್ದಾರೆ.

ಚುನಾವಣಾ ಫಲಿತಾಂಶ ಪ್ರಕಟವಾದ ನಂತರ ಮಮತಾ ಬ್ಯಾನರ್ಜಿ ಮೌನಕ್ಕೆ ಶರಣಾಗಿದ್ದರು. ಆದರೆ ಈಗ, ಅವರು ಪೂರ್ಣ ಪ್ರಮಾಣದ ‘ಡ್ಯಾಮೇಜ್ ಕಂಟ್ರೋಲ್’ (ಹಾನಿ ನಿಯಂತ್ರಣ) ಕಸರತ್ತಿಗೆ ಇಳಿದಿದ್ದಾರೆ. ಇದಕ್ಕೆ ಕಾರಣ ಸ್ಪಷ್ಟವಾಗಿದೆ; ಪಕ್ಷದೊಳಗೆ ಆರಂಭವಾಗಿರುವ ವಲಸೆ ರಾಜಕೀಯವು ಟಿಎಂಸಿ ನಾಯಕತ್ವದಲ್ಲಿ ತೀವ್ರ ಕಳವಳ ಮೂಡಿಸಿದೆ. ಶಾಸಕರ ನಡುವಿನ ಬಿರುಕಿನ ನಂತರ, ಲೋಕಸಭೆ ಮತ್ತು ರಾಜ್ಯಸಭೆಯ ಸಂಸದರಲ್ಲೂ ಇಂತಹ ಒಡಕು ಮೂಡಬಹುದು ಎಂಬ ಆತಂಕ ಶುರುವಾಗಿದೆ.

ಸುಖೇಂದು ಶೇಖರ್ ರಾಯ್ ಅವರಂತಹ ಹಿರಿಯ ನಾಯಕರ ರಾಜೀನಾಮೆ ಮತ್ತು ನಟಿ ಕೋಯಲ್ ಮಲ್ಲಿಕ್ ರಾಜೀನಾಮೆ ನೀಡಲು ಬಯಸಿದ್ದಾರೆ ಎಂಬ ವರದಿಗಳು ಪಕ್ಷದೊಳಗಿನ ಅನಿಶ್ಚಿತತೆಯನ್ನು ಹೆಚ್ಚಿಸಿವೆ. ಈ ಕಠಿಣ ಪರಿಸ್ಥಿತಿಯಲ್ಲಿ, ಮಮತಾ ಬ್ಯಾನರ್ಜಿ ಮತ್ತು ಅಭಿಷೇಕ್ ಬ್ಯಾನರ್ಜಿ ಅವರು ವೈಯಕ್ತಿಕವಾಗಿ ಎಲ್ಲಾ ಸಂಸದರನ್ನು ಸಂಪರ್ಕಿಸಿ, ಧೈರ್ಯ ತುಂಬಿ ಸಂಘಟನೆಯನ್ನು ಒಟ್ಟಾಗಿ ಇಡಲು ಪ್ರಯತ್ನಿಸುತ್ತಿದ್ದಾರೆ.

ಆದರೆ ಪಕ್ಷದ ಮೂಲಗಳ ಪ್ರಕಾರ, ಎಲ್ಲ ಸಂಸದರಿಂದ ಸಕಾರಾತ್ಮಕ ಪ್ರತಿಕ್ರಿಯೆ ಸಿಗುತ್ತಿಲ್ಲ. ಕೆಲವು ಸಂಸದರು ಫೋನ್ ಕರೆಗಳಿಗೂ ಸಿಗುತ್ತಿಲ್ಲ ಎನ್ನಲಾಗಿದೆ. ಮತ್ತೊಂದೆಡೆ, ಟಿಎಂಸಿ ವೋಟ್ ಬ್ಯಾಂಕ್ ಅಷ್ಟು ಸುಲಭವಾಗಿ ಕರಗುವುದಿಲ್ಲ, ಪರಿಸ್ಥಿತಿ ಮತ್ತೆ ಬಂಗಾಳದಲ್ಲಿ ನಮ್ಮ ಪರವಾಗಲಿದೆ ಎಂದು ಕೆಲವು ನಾಯಕರು ಆಶಾವಾದ ಹೊಂದಿದ್ದಾರೆ.

ಪ್ರಸ್ತುತ ತೃಣಮೂಲ ಕಾಂಗ್ರೆಸ್ ಮೂರು ಕಡೆಯಿಂದ ಒತ್ತಡ ಎದುರಿಸುತ್ತಿದೆ. ಒಂದೆಡೆ ಬಿಜೆಪಿ ಅವರ ಸಾಂಪ್ರದಾಯಿಕ ಮತಬ್ಯಾಂಕ್‌ಗೆ ಕೈಹಾಕುತ್ತಿದ್ದರೆ, ಮತ್ತೊಂದೆಡೆ ಕಾಂಗ್ರೆಸ್ ಮತ್ತು ಎಡಪಕ್ಷಗಳು (Left) ಕಳೆದುಹೋದ ತಮ್ಮ ನೆಲೆಯನ್ನು ಮರಳಿ ಪಡೆಯಲು ಹೋರಾಡುತ್ತಿವೆ. ಇಂತಹ ಸಂದರ್ಭದಲ್ಲಿ ‘ಇಂಡಿಯಾ’ ಒಕ್ಕೂಟವನ್ನು ಪುನಶ್ಚೇತನಗೊಳಿಸುವುದು ಮಮತಾ ಬ್ಯಾನರ್ಜಿ ಅವರಿಗೆ ರಾಜಕೀಯ ಅನಿವಾರ್ಯತೆಯಾಗಿದೆ. ರಾಷ್ಟ್ರೀಯ ಮಟ್ಟದಲ್ಲಿ ಒಕ್ಕೂಟದ ಧ್ವನಿ ಜೋರಾದರೆ, ಬಂಗಾಳದೊಳಗಿನ ಪಕ್ಷದ ಆಂತರಿಕ ಅಸ್ಥಿರತೆಯಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಬಹುದು ಎಂಬುದು ದೀದಿಯ ಮಾಸ್ಟರ್ ಪ್ಲಾನ್.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...