Homeಮುಖಪುಟಪಶ್ಚಿಮ ಬಂಗಾಳದ ಸೋಲಿನ ಬಳಿಕ 'ಇಂಡಿಯಾದ ಆಸರೆ' ಬಯಸಿದ ಮಮತಾ

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

- Advertisement -
- Advertisement -

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ?

ದೀರ್ಘಕಾಲದವರೆಗೆ ಮಮತಾ ಬ್ಯಾನರ್ಜಿ ‘ಇಂಡಿಯಾ’ ಒಕ್ಕೂಟದ ಅಧಿಕೃತ ಸಭೆಗಳಿಂದ ಒಂದು ರೀತಿಯ ಅಂತರ ಕಾಯ್ದುಕೊಂಡಿದ್ದರು. ಆದರೆ ಮಮತ ಈಗ ಇಂಡಿಯಾ ಸಭೆಗಳಿಗೆ ಹಾಜರಾಗುತ್ತಿದ್ದಾರೆ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ವಿರೋಧ ಪಕ್ಷಗಳನ್ನು ಒಗ್ಗೂಡಿಸಲು ಹೊಸ ಉತ್ಸಾಹ ತೋರಿಸುತ್ತಿದ್ದಾರೆ.

ಇಲ್ಲಿ ಗಮನಿಸಬೇಕಾದ ಮುಖ್ಯ ವಿಷಯವೇನೆಂದರೆ, 2026ರ ಬಂಗಾಳ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ (TMC) ಮತ್ತು ಕಾಂಗ್ರೆಸ್ ಪಕ್ಷದ ನಡುವೆ ಯಾವುದೇ ಮೈತ್ರಿ ಇರಲಿಲ್ಲ. ಕಾಂಗ್ರೆಸ್ ರಾಜ್ಯ ಅಧ್ಯಕ್ಷ ಶುಭಂಕರ್ ಸರ್ಕಾರ್ ಅವರೇ ಇತ್ತೀಚೆಗೆ ಬಹಿರಂಗವಾಗಿ ಒಪ್ಪಿಕೊಂಡಂತೆ, ಅವರಿಗೆ ಮಮತಾ ಬ್ಯಾನರ್ಜಿ ಅವರೊಂದಿಗೆ ಸೀಟು ಹೊಂದಾಣಿಕೆ ಮಾಡಿಕೊಳ್ಳುವ ವೈಯಕ್ತಿಕ ಇಚ್ಛೆಯಿತ್ತು. ಬಂಗಾಳದ ಕಾಂಗ್ರೆಸ್ ನಾಯಕತ್ವವು ಮೈತ್ರಿಗೆ ಸಿದ್ಧವಿತ್ತಾದರೂ, ಆ ಸಮಯದಲ್ಲಿ ಮಮತಾ ಬ್ಯಾನರ್ಜಿ ಅವರು ಇದಕ್ಕೆ ಆಸಕ್ತಿ ತೋರಿಸಿರಲಿಲ್ಲ. ಪ್ರಾಯಶಃ ಅಂದಿನ ಚುನಾವಣಾ ಫಲಿತಾಂಶ ಇಷ್ಟೊಂದು ಭೀಕರವಾಗಿ ಬರಬಹುದು ಎಂದು ಅವರು ಊಹಿಸಿರಲಿಲ್ಲ ಅನಿಸುತ್ತದೆ.

ಚುನಾವಣಾ ಹಿನ್ನಡೆಯ ನಂತರ ಈಗ ರಾಜಕೀಯ ಪರಿಸ್ಥಿತಿ ಸಂಪೂರ್ಣವಾಗಿ ಬದಲಾಗಿದೆ. ಮಮತಾ ಬ್ಯಾನರ್ಜಿ ಅವರು ದೆಹಲಿ ರಾಜಕಾರಣದತ್ತ ಗಮನ ಹರಿಸಲು ಮೊದಲ ಮತ್ತು ತಕ್ಷಣದ ಕಾರಣ ಬಂಗಾಳದ ಸದ್ಯದ ಪರಿಸ್ಥಿತಿಯೇ ಆಗಿದೆ.

2026ರ ಸೋಲಿನ ನಂತರ, ಸದ್ಯಕ್ಕೆ ಬಂಗಾಳದಲ್ಲಿ ಯಾವುದೇ ವಿಧಾನಸಭಾ ಚುನಾವಣೆ ಎದುರಿಗಿಲ್ಲ ಅಥವಾ ತಕ್ಷಣವೇ ಅಲ್ಲಿ ಸರ್ಕಾರ ಬದಲಾಗುವ ಸಾಧ್ಯತೆಯೂ ಇಲ್ಲ. ಆದರೆ ಅದೇ ಸಮಯದಲ್ಲಿ, ತೃಣಮೂಲ ಕಾಂಗ್ರೆಸ್ ವಿರುದ್ಧ ಬಿಜೆಪಿಯ ರಾಜಕೀಯ ವಾಗ್ದಾಳಿ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ.

ಟಿಎಂಸಿ ನಾಯಕರ ಮೇಲಿನ ಭ್ರಷ್ಟಾಚಾರದ ಆರೋಪಗಳು ರಾಜ್ಯ ರಾಜಕಾರಣದಲ್ಲಿ ಮುನ್ನೆಲೆಗೆ ಬರುತ್ತಿವೆ. ಹಲವು ಶಾಸಕರು (MLAs) ಈಗಾಗಲೇ ಪಕ್ಷ ತೊರೆದಿದ್ದಾರೆ. ಒಂದು ರೀತಿಯಲ್ಲಿ ತೃಣಮೂಲ ಕಾಂಗ್ರೆಸ್‌ನ ಆಂತರಿಕ ಶಾಸಕಾಂಗ ರಚನೆ ದುರ್ಬಲಗೊಂಡಿದೆ. ಕೋಲ್ಕತ್ತಾ ಮಹಾನಗರ ಪಾಲಿಕೆಯಲ್ಲೂ (KMC) ಹಲವು ಕೌನ್ಸಿಲರ್‌ಗಳು ರಾಜೀನಾಮೆ ನೀಡಿದ್ದಾರೆ ಅಥವಾ ನಾಯಕತ್ವದ ವಿರುದ್ಧ ಬಹಿರಂಗವಾಗಿ ಬಂಡಾಯವೆದ್ದಿದ್ದಾರೆ.

ಇಂತಹ ರಕ್ಷಣಾತ್ಮಕ (Defensive) ಪರಿಸ್ಥಿತಿಯಲ್ಲಿ, ಮಮತಾ ಬ್ಯಾನರ್ಜಿ ಅವರು ರಾಜಕೀಯ ಚರ್ಚೆಯ ಕೇಂದ್ರಬಿಂದುವನ್ನು ಬಂಗಾಳದ ಆಡಳಿತ ವಿರೋಧಿ ಅಲೆಯಿಂದ ಹೊರಗೆ ತಂದು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಹೆಚ್ಚು ಆಕ್ರಮಣಕಾರಿಯಾಗಿ ಗುರಿಯಾಗಿಸಬಹುದಾದ ದೊಡ್ಡ ರಾಷ್ಟ್ರೀಯ ವಿಷಯಗಳ ಕಡೆಗೆ ತಿರುಗಿಸಲು ಪ್ರಯತ್ನಿಸುತ್ತಿದ್ದಾರೆ.

ಇದು ರಾಜಕೀಯ ಕಾರ್ಯತಂತ್ರದ ನಡೆಯಾಗಿದೆ. ರಾಷ್ಟ್ರೀಯ ಮಟ್ಟದಲ್ಲಿ ನರೇಂದ್ರ ಮೋದಿ ಸರ್ಕಾರವನ್ನು ಕಟ್ಟಿಹಾಕಲು ನಿರುದ್ಯೋಗ, ಅಡುಗೆ ಅನಿಲ ಮತ್ತು ಇಂಧನ ಬೆಲೆ ಏರಿಕೆ, ಆರ್ಥಿಕ ಅನಿಶ್ಚಿತತೆ, ವಿದೇಶಾಂಗ ನೀತಿಯ ಮೇಲಿನ ಟೀಕೆಗಳು ಮತ್ತು ಅಮೆರಿಕದೊಂದಿಗಿನ ಪ್ರಮುಖ ಅಂತರರಾಷ್ಟ್ರೀಯ ವ್ಯಾಪಾರ ಒಪ್ಪಂದಗಳ ವಿಳಂಬದಂತಹ ಹಲವು ಸೂಕ್ಷ್ಮ ವಿಷಯಗಳಿವೆ ಎಂದು ವಿರೋಧ ಪಕ್ಷಗಳು ನಂಬಿವೆ. ಮಮತಾ ಬ್ಯಾನರ್ಜಿ ಈಗ ಈ ವಿಶಾಲವಾದ ಜನವಿರೋಧಿ ಅಲೆಯಲ್ಲಿ ತಮಗೊಂದು ಪ್ರಮುಖ ಸ್ಥಾನವನ್ನು ಹುಡುಕಿಕೊಳ್ಳುತ್ತಿದ್ದಾರೆ.

ಮತ್ತೊಂದು ಮುಖ್ಯ ಅಂಶವೆಂದರೆ, ಇತ್ತೀಚಿನ ಚುನಾವಣೆಯ ಸಮಯದಲ್ಲಿ ಬಂಗಾಳವು ಎದುರಿಸಿದ ಆಡಳಿತಾತ್ಮಕ, ಚುನಾವಣಾ ಮತ್ತು ಎಸ್‌ಐಆರ್ ನ ಮತದಾರರ ನಿರ್ವಹಣೆಯ ವಿವಾದಗಳು ದೇಶದ ಪ್ರಜಾಪ್ರಭುತ್ವದ ದೊಡ್ಡ ಆತಂಕ ಎಂಬದನ್ನು ರಾಷ್ಟ್ರೀಯ ಮಟ್ಟದಲ್ಲಿ ಪ್ರತಿಧ್ವನಿಸಲು ವಿರೋಧ ಪಕ್ಷಗಳು ನಿರ್ಧರಿಸಿವೆ. ಬಂಗಾಳವನ್ನು ಒಂದು “ಮಾದರಿ ಪ್ರಕರಣ” (Model Case) ವನ್ನಾಗಿ ಮಾಡಿಕೊಂಡು ಬಿಜೆಪಿಯ ವಿರುದ್ಧ ಜಂಟಿ ದಾಳಿ ನಡೆಸಲು ಚರ್ಚೆಗಳು ಆರಂಭವಾಗಿವೆ. ಇದೇ ವೇಳೆ ಕಾಂಗ್ರೆಸ್ ಜೊತೆಗಿನ ಮಮತಾ ಅವರ ಸಂಬಂಧವೂ ಹೊಸ ಹಂತಕ್ಕೆ ಪ್ರವೇಶಿಸುತ್ತಿದೆ.

ಆದರೆ ಇಲ್ಲಿ ಒಂದು ಪ್ರಮುಖ ವಿಷಯವನ್ನು ಸ್ಪಷ್ಟವಾಗಿ ಅರ್ಥಮಾಡಿಕೊಳ್ಳಬೇಕು. ಈ ಕ್ಷಣದಲ್ಲಿ ಮಮತಾ ಬ್ಯಾನರ್ಜಿ ಅವರು ಇಡೀ ವಿರೋಧ ಪಕ್ಷದ ಒಕ್ಕೂಟದ “ಏಕೈಕ ನಾಯಕಿ” ಎಂದು ತಮ್ಮನ್ನು ತಾವು ಬಿಂಬಿಸಿಕೊಳ್ಳಲು ಹಿಂದಿನಂತೆ ಪ್ರಯತ್ನಿಸುತ್ತಿಲ್ಲ. ಈ ಹಿಂದೆ, ಮಮತಾ ರಾಷ್ಟ್ರೀಯ ಮಟ್ಟದಲ್ಲಿ ಮೈತ್ರಿಕೂಟದ ನಾಯಕತ್ವ ವಹಿಸಿಕೊಳ್ಳಲು ಬಯಸಿದ್ದಾರೆಯೇ ಎಂಬ ಚರ್ಚೆ ಪ್ರಾದೇಶಿಕ ಪಕ್ಷಗಳ ನಡುವೆ ಭಿನ್ನಾಭಿಪ್ರಾಯ ಮೂಡಿಸಿತ್ತು.

ಆದರೆ ಸದ್ಯದ ಮಟ್ಟಿಗಾದರೂ ಮಮತಾ ಅವರು ನೇರ ನಾಯಕತ್ವದ ಪೈಪೋಟಿಯಿಂದ ದೂರ ಉಳಿದಿದ್ದಾರೆ. ತಕ್ಷಣಕ್ಕೆ ಪ್ರಧಾನಿ ಅಭ್ಯರ್ಥಿಯಾಗುವ ಆಸೆಯನ್ನು ಪ್ರದರ್ಶಿಸುವ ಬದಲು, ವಿರೋಧ ಪಕ್ಷಗಳ ನಡುವೆ ಹೆಚ್ಚಿನ ಒಗ್ಗಟ್ಟನ್ನು ಮೂಡಿಸುವಲ್ಲಿ ಅವರು ಸಹಕರಿಸುತ್ತಿದ್ದಾರೆ.

ಮುಂದಿನ ಸಂಸತ್ತಿನ ಮುಂಗಾರು ಅಧಿವೇಶನ (Monsoon Session) ಹತ್ತಿರ ಬರುತ್ತಿರುವುದರಿಂದ ಈ ಸಮಯ ಅತ್ಯಂತ ಪ್ರಮುಖವಾಗಿದೆ. ಸಂಸತ್ತಿನ ಒಳಗೆ ಸಮನ್ವಯತೆ ಸುಧಾರಿಸಿದರೆ ಆರ್ಥಿಕ ಬಿಕ್ಕಟ್ಟು ಮತ್ತು ಹಣದುಬ್ಬರ ಸೇರಿದಂತೆ ಹಲವು ವಿಷಯಗಳ ಮೇಲೆ ಸರ್ಕಾರವನ್ನು ಕೋನರ್ ಮಾಡಬಹುದು ಎಂಬುದು ವಿರೋಧ ಪಕ್ಷಗಳ ಪ್ಲಾನ್ ಆಗಿದೆ. 2029ರ ಲೋಕಸಭಾ ಚುನಾವಣೆಯೇ ನಿಜವಾದ ಟಾರ್ಗೆಟ್ ಆಗಿದ್ದರೂ, ಮಮತಾ ಬ್ಯಾನರ್ಜಿ ಈಗಿನಿಂದಲೇ ಸಿದ್ಧತೆ ಆರಂಭಿಸಿದ್ದಾರೆ.

ಚುನಾವಣಾ ಫಲಿತಾಂಶ ಪ್ರಕಟವಾದ ನಂತರ ಮಮತಾ ಬ್ಯಾನರ್ಜಿ ಮೌನಕ್ಕೆ ಶರಣಾಗಿದ್ದರು. ಆದರೆ ಈಗ, ಅವರು ಪೂರ್ಣ ಪ್ರಮಾಣದ ‘ಡ್ಯಾಮೇಜ್ ಕಂಟ್ರೋಲ್’ (ಹಾನಿ ನಿಯಂತ್ರಣ) ಕಸರತ್ತಿಗೆ ಇಳಿದಿದ್ದಾರೆ. ಇದಕ್ಕೆ ಕಾರಣ ಸ್ಪಷ್ಟವಾಗಿದೆ; ಪಕ್ಷದೊಳಗೆ ಆರಂಭವಾಗಿರುವ ವಲಸೆ ರಾಜಕೀಯವು ಟಿಎಂಸಿ ನಾಯಕತ್ವದಲ್ಲಿ ತೀವ್ರ ಕಳವಳ ಮೂಡಿಸಿದೆ. ಶಾಸಕರ ನಡುವಿನ ಬಿರುಕಿನ ನಂತರ, ಲೋಕಸಭೆ ಮತ್ತು ರಾಜ್ಯಸಭೆಯ ಸಂಸದರಲ್ಲೂ ಇಂತಹ ಒಡಕು ಮೂಡಬಹುದು ಎಂಬ ಆತಂಕ ಶುರುವಾಗಿದೆ.

ಸುಖೇಂದು ಶೇಖರ್ ರಾಯ್ ಅವರಂತಹ ಹಿರಿಯ ನಾಯಕರ ರಾಜೀನಾಮೆ ಮತ್ತು ನಟಿ ಕೋಯಲ್ ಮಲ್ಲಿಕ್ ರಾಜೀನಾಮೆ ನೀಡಲು ಬಯಸಿದ್ದಾರೆ ಎಂಬ ವರದಿಗಳು ಪಕ್ಷದೊಳಗಿನ ಅನಿಶ್ಚಿತತೆಯನ್ನು ಹೆಚ್ಚಿಸಿವೆ. ಈ ಕಠಿಣ ಪರಿಸ್ಥಿತಿಯಲ್ಲಿ, ಮಮತಾ ಬ್ಯಾನರ್ಜಿ ಮತ್ತು ಅಭಿಷೇಕ್ ಬ್ಯಾನರ್ಜಿ ಅವರು ವೈಯಕ್ತಿಕವಾಗಿ ಎಲ್ಲಾ ಸಂಸದರನ್ನು ಸಂಪರ್ಕಿಸಿ, ಧೈರ್ಯ ತುಂಬಿ ಸಂಘಟನೆಯನ್ನು ಒಟ್ಟಾಗಿ ಇಡಲು ಪ್ರಯತ್ನಿಸುತ್ತಿದ್ದಾರೆ.

ಆದರೆ ಪಕ್ಷದ ಮೂಲಗಳ ಪ್ರಕಾರ, ಎಲ್ಲ ಸಂಸದರಿಂದ ಸಕಾರಾತ್ಮಕ ಪ್ರತಿಕ್ರಿಯೆ ಸಿಗುತ್ತಿಲ್ಲ. ಕೆಲವು ಸಂಸದರು ಫೋನ್ ಕರೆಗಳಿಗೂ ಸಿಗುತ್ತಿಲ್ಲ ಎನ್ನಲಾಗಿದೆ. ಮತ್ತೊಂದೆಡೆ, ಟಿಎಂಸಿ ವೋಟ್ ಬ್ಯಾಂಕ್ ಅಷ್ಟು ಸುಲಭವಾಗಿ ಕರಗುವುದಿಲ್ಲ, ಪರಿಸ್ಥಿತಿ ಮತ್ತೆ ಬಂಗಾಳದಲ್ಲಿ ನಮ್ಮ ಪರವಾಗಲಿದೆ ಎಂದು ಕೆಲವು ನಾಯಕರು ಆಶಾವಾದ ಹೊಂದಿದ್ದಾರೆ.

ಪ್ರಸ್ತುತ ತೃಣಮೂಲ ಕಾಂಗ್ರೆಸ್ ಮೂರು ಕಡೆಯಿಂದ ಒತ್ತಡ ಎದುರಿಸುತ್ತಿದೆ. ಒಂದೆಡೆ ಬಿಜೆಪಿ ಅವರ ಸಾಂಪ್ರದಾಯಿಕ ಮತಬ್ಯಾಂಕ್‌ಗೆ ಕೈಹಾಕುತ್ತಿದ್ದರೆ, ಮತ್ತೊಂದೆಡೆ ಕಾಂಗ್ರೆಸ್ ಮತ್ತು ಎಡಪಕ್ಷಗಳು (Left) ಕಳೆದುಹೋದ ತಮ್ಮ ನೆಲೆಯನ್ನು ಮರಳಿ ಪಡೆಯಲು ಹೋರಾಡುತ್ತಿವೆ. ಇಂತಹ ಸಂದರ್ಭದಲ್ಲಿ ‘ಇಂಡಿಯಾ’ ಒಕ್ಕೂಟವನ್ನು ಪುನಶ್ಚೇತನಗೊಳಿಸುವುದು ಮಮತಾ ಬ್ಯಾನರ್ಜಿ ಅವರಿಗೆ ರಾಜಕೀಯ ಅನಿವಾರ್ಯತೆಯಾಗಿದೆ. ರಾಷ್ಟ್ರೀಯ ಮಟ್ಟದಲ್ಲಿ ಒಕ್ಕೂಟದ ಧ್ವನಿ ಜೋರಾದರೆ, ಬಂಗಾಳದೊಳಗಿನ ಪಕ್ಷದ ಆಂತರಿಕ ಅಸ್ಥಿರತೆಯಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಬಹುದು ಎಂಬುದು ದೀದಿಯ ಮಾಸ್ಟರ್ ಪ್ಲಾನ್.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...