Homeಮುಖಪುಟದೆಹಲಿ ಹೈಕೋರ್ಟ್ ಛೀಮಾರಿ: ನ್ಯೂಸ್ ಲಾಂಡ್ರಿ ಪತ್ರಕರ್ತೆಯರ ವಿರುದ್ಧದ ಪೋಸ್ಟ್ ತೆಗೆಯಲು ಅಭಿಜಿತ್ ಅಯ್ಯರ್ ಒಪ್ಪಿಗೆ

ದೆಹಲಿ ಹೈಕೋರ್ಟ್ ಛೀಮಾರಿ: ನ್ಯೂಸ್ ಲಾಂಡ್ರಿ ಪತ್ರಕರ್ತೆಯರ ವಿರುದ್ಧದ ಪೋಸ್ಟ್ ತೆಗೆಯಲು ಅಭಿಜಿತ್ ಅಯ್ಯರ್ ಒಪ್ಪಿಗೆ

- Advertisement -
- Advertisement -

ಡಿಜಿಟಲ್ ಸುದ್ದಿ ವೇದಿಕೆ ನ್ಯೂಸ್‌ ಲಾಂಡ್ರಿಯ ಪತ್ರಕರ್ತೆಯರನ್ನು ‘ವೇಶ್ಯೆಯರು’ ಮತ್ತು ಅವರು ಕೆಲಸ ಮಾಡುವ ಸ್ಥಳವನ್ನು ‘ವೇಶ್ಯಾಗೃಹ’ ಎಂದು ನಿಂದಿಸಿ ಪೋಸ್ಟ್ ಹಾಕಿದ್ದ ರಾಜಕೀಯ ವಿಶ್ಲೇಷಕ ಅಭಿಜಿತ್‌ ಅಯ್ಯರ್‌ ಮಿತ್ರಗೆ ದೆಹಲಿ ಹೈಕೋರ್ಟ್‌ ಬುಧವಾರ (ಮೇ.21) ಛೀಮಾರಿ ಹಾಕಿದೆ ಎಂದು ವರದಿಯಾಗಿದೆ.

ನಿಂದನೀಯ ಪೋಸ್ಟ್‌ಗಳನ್ನು ತೆಗೆದು ಹಾಕುವಂತೆ ಅಭಿಜಿತ್‌ಗೆ ಸೂಚಿಸಿರುವ ಕೋರ್ಟ್, ಪೋಸ್ಟ್ ತೆಗೆಯುವರೆಗೆ ಅವರ ವಾದ ಆಲಿಸುವುದಿಲ್ಲ ಎಂದಿರುವುದಾಗಿ livelaw.in ವರದಿ ಮಾಡಿದೆ.

ಅಭಿಜಿತ್‌ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ತಮ್ಮ ವಿರುದ್ದ ಲೈಂಗಿಕ ನಿಂದನಾತ್ಮಕ ಪೋಸ್ಟ್ ಹಾಕಿದ್ದಾರೆ ಎಂದು ಪತ್ರಕರ್ತೆಯರು ಆರೋಪಿಸಿದ್ದಾರೆ.

ಅಭಿಜಿತ್ ಅವರ ಎಕ್ಸ್  ಪೋಸ್ಟ್‌ಗಳನ್ನು ಪರಿಶೀಲಿಸಿದ ನ್ಯಾಯಮೂರ್ತಿ ಪುರುಷೀಂದ್ರ ಕುಮಾರ್ ಕೌರವ್ ಅವರು “ನೀವು ನಿಮ್ಮ ಪೋಸ್ಟ್ ಅನ್ನು ಸಮರ್ಥಿಸಿಕೊಳ್ಳುತ್ತೀರಾ? ಹಿನ್ನೆಲೆ ಏನೇ ಇರಲಿ, ಮಹಿಳೆಯರ ವಿರುದ್ದ ಈ ರೀತಿಯ ಪದಗಳನ್ನು ಬಳಸುವುದು ಈ ಸಮಾಜದಲ್ಲಿ ಅನುವದನೀಯವೇ? ಮೊದಲು ನೀವು ನಿಮ್ಮ ಪೋಸ್ಟ್ ತೆಗೆದು ಹಾಕಿ, ಆ ನಂತರ ನಿಮ್ಮ ಮಾತು ಕೇಳುತ್ತೇವೆ” ಎಂದು ಅಭಿಜಿತ್‌ ಅಯ್ಯರ್‌ಗೆ ಮೌಖಿವಾಗಿ ಹೇಳಿದ್ದಾರೆ.

ಅಯ್ಯರ್ ಪರ ಹಾಜರಿದ್ದ ವಕೀಲ ಜೈ ಅನಂತ್ ದೇಹಾದ್ರಾಯಿ ವಾದ ಮಂಡಿಸಿ “ನಮ್ಮ ಕಕ್ಷಿದಾರರ ಒಂದೇ ಒಂದು ಪೋಸ್ಟ್ ಕೂಡ ಪತ್ರಕರ್ತರಿಗೆ ವೈಯಕ್ತಿಕವಾಗಿ ಸಂಬಂಧಿಸಿಲ್ಲ” ಎಂದಿದ್ದಾರೆ.

ಈ ವಾದವನ್ನು ಒಪ್ಪಿಕೊಳ್ಳದ ನ್ಯಾಯಾಧೀಶರು, “ನೀವು ಆ ರೀತಿ ಅಂದುಕೊಂಡಿದ್ದರೆ, ಅದು ಪ್ರತಿವಾದಿಗಳಿಗೆ (ಪತ್ರಕರ್ತರಿಗೆ) ನೇರವಾಗಿ ಸಂಬಂಧಿಸಿವೆ ಎಂದು ನಾನು ಹೇಳುತ್ತೇನೆ” ಎಂದಿದ್ದಾರೆ.

ಈ ವೇಳೆ ಪ್ರತಿಕ್ರಿಯೆ ನೀಡಿದ ವಕೀಲ ದೇಹಾದ್ರಾಯಿ, “ನ್ಯೂಸ್ ಲಾಂಡ್ರಿ ಹೇಳಿಕೊಳ್ಳುವಂತಹ ಸಂಸ್ಥೆಯೇನು ಅಲ್ಲ. ಅದರ ಆದಾಯದ ಪ್ರಶ್ನಾರ್ಹ ಮೂಲಗಳ ಬಗ್ಗೆಯೂ ಅಯ್ಯರ್ ಹಲವಾರು ಟ್ವೀಟ್‌ಗಳನ್ನು ಮಾಡಿದ್ದಾರೆ” ಎಂದಿದ್ದಾರೆ.

ಮುಂದುವರಿದು, “ಆ ಸಂಸ್ಥೆಯ ಆದಾಯ ಮೂಲಗಳ ವಿಶ್ವಾಸಾರ್ಹತೆಯ ಬಗ್ಗೆ ಪ್ರಶ್ನೆಯಿದೆ. ಹಾಗಾಗಿ, ಅದನ್ನು ವೇಶ್ಯಾಗೃಹ ಎಂದು ಉಲ್ಲೇಖಿಸಲಾಗಿದೆ” ಎಂಬ ದಾಟಿಯಲ್ಲಿ ಅಯ್ಯರ್ ಪೋಸ್ಟ್ ಅನ್ನು ಸಮರ್ಥಿಸಿಕೊಂಡಿದ್ದಾರೆ.

ಇದಕ್ಕೆ ಖಾರವಾಗಿ ಪ್ರತಿಕ್ರಿಯೆ ನ್ಯಾಯಾಧೀಶರು,”ಪ್ರಶ್ನಾರ್ಹ ಆದಾಯ ಏನೇ ಇರಲಿ, ಇಂದು ಇಲ್ಲಿ ಪ್ರಶ್ನಿಸದ ಯಾವುದನ್ನೂ ಪರಿಶೀಲಿಸಲು ಸಾಧ್ಯವಿಲ್ಲ. ವೇಶ್ಯಾಗೃಹದ ವ್ಯಾಖ್ಯಾನವನ್ನು ಅವರು (ಅಭಿಜಿತ್ ಅಯ್ಯರ್) ಅರ್ಥಮಾಡಿಕೊಂಡಿದ್ದಾರಾ? ಪ್ರಶ್ನಾರ್ಹ ಮೂಲಗಳಿಂದ ಹಣಕಾಸಿನ ನೆರವು ಪಡೆಯುವ ಏನೇ ಆದರೂ ಅದನ್ನು ವೇಶ್ಯಾಗೃಹ ಎಂದು ಕರೆಯಬಹುದೇ?. ಪ್ರತಿವಾದಿಯ ವಿರುದ್ದ ಹಲವು ದೂರುಗಳು ಮತ್ತು ನಿಮ್ಮ ಕಕ್ಷಿದಾರರ ಪರ ಹಲವು ಸಮರ್ಥನೀಯ ವಾದಗಳು ನಿಮ್ಮಲ್ಲಿ ಇರಬಹುದು. ಹಾಗಾಂತ, ನಿಮ್ಮ ಕಕ್ಷಿದಾರರು ಬಳಕೆ ಮಾಡಿರುವ ಪದಗಳು ಸಮಾಜದಲ್ಲಿ ಸಮರ್ಥನೀಯವಲ್ಲ. ಯಾರಿಗೆ ಸಂಬಂಧಿಸದಿದ್ದರೂ, ಯಾವುದೇ ಕಲ್ಪನೆಯ ಮೇಲೆಯೂ ಸಾರ್ವಜನಿಕ ವೇದಿಕೆಯಲ್ಲಿ ಅಂತಹ ಪದ ಬಳಕೆ ಮಾಡಬಾರದು” ಎಂದು ಹೇಳಿದ್ದಾರೆ.

ಸಾರ್ವಜನಿಕ ವೇದಿಕೆಯಲ್ಲಿ ಮಹಿಳೆಯರ ವಿರುದ್ಧ ನಿಂದನೀಯ ಪದಗಳನ್ನು ಬಳಸಿದ್ದಕ್ಕಾಗಿ ಅಯ್ಯರ್ ವಿರುದ್ಧ ಸ್ವಯಂಪ್ರೇರಿತವಾಗಿ ಎಫ್‌ಐಆರ್ ದಾಖಲಿಸುವಂತೆ ಆದೇಶಿಸಲು ಪೀಠ ಮುಂದಾದಾಗ, ಪೋಸ್ಟ್‌ಗಳನ್ನು ತಕ್ಷಣವೇ ತೆಗೆದುಹಾಕಲು ಅಯ್ಯರ್ ಪರ ವಕೀಲರು ಒಪ್ಪಿಕೊಂಡರು. ನ್ಯಾಯಾಲಯ ವಿಚಾರಣೆಯನ್ನು ಮುಂದಿನ ವಾರಕ್ಕೆ ನಿಗದಿ ಮಾಡಿದ್ದಾರೆ.

ನ್ಯೂಸ್ ಲಾಂಡ್ರಿಯ ಪತ್ರಕರ್ತೆಯರು ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ಅಯ್ಯರ್‌ ಮಿತ್ರಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು, ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ತೆಗೆಯಬೇಕು ಮತ್ತು ಪರಿಹಾರವಾಗಿ 2 ಕೋಟಿ ರೂಪಾಯಿ ನೀಡಬೇಕು ಎಂದು ಕೋರಲಾಗಿದೆ.

ಮಹಿಳಾ ಪತ್ರಕರ್ತರಾದ ಮನೀಶಾ ಪಾಂಡೆ, ಇಶಿತಾ ಪ್ರದೀಪ್, ಸುಹಾಸಿನಿ ಬಿಸ್ವಾಸ್, ಸುಮೇಧಾ ಮಿತ್ತಲ್, ಟಿಸ್ತಾ ರಾಯ್ ಚೌಧರಿ, ತಸ್ನೀಮ್ ಫಾತಿಮಾ, ಪ್ರಿಯಾ ಜೈನ್, ಜಯಶ್ರೀ ಅರುಣಾಚಲಂ ಮತ್ತು ಪ್ರಿಯಾಲಿ ಧಿಂಗ್ರಾ ಮೊಕದ್ದಮೆ ಹೂಡಿದ್ದಾರೆ. ಪ್ರಕರಣದ ಪಕ್ಷಕಾರರಲ್ಲಿ ನ್ಯೂಸ್ ಲಾಂಡ್ರಿಯೂ ಸೇರಿದೆ.

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಅಭಿಜಿತ್ ಅಯ್ಯರ್ ಹಾಕಿರುವ ಪೋಸ್ಟ್‌ಗಳು ಮಾನಹಾನಿಕರ ಆಧಾರರಹಿತ ಮತ್ತು ತಪ್ಪು ಕಲ್ಪನೆಯಿಂದ ಕೂಡಿದ್ದು, ಮಹಿಳಾ ಉದ್ಯೋಗಿಗಳ ಘನತೆ ಮತ್ತು ಖ್ಯಾತಿಗೆ ಹಾನಿ ಮಾಡುವ ಉದ್ದೇಶ ಹೊಂದಿದೆ ಎಂದು ಮೊಕದ್ದಮೆಯಲ್ಲಿ ತಿಳಿಸಲಾಗಿದೆ.

ಪತ್ರಿಕೋದ್ಯಮದ ಕೆಲಸದ ಬಗ್ಗೆ ನ್ಯಾಯಯುತ ಟೀಕೆ ಸ್ವಾಗತಾರ್ಹವಾದರೂ, ಯಾರೂ ವೈಯಕ್ತಿಕವಾಗಿ ಅವಮಾನಕ್ಕೊಳಗಾಗಲು ಅರ್ಹರಲ್ಲ ಎಂದು ಪತ್ರಕರ್ತೆಯರು ಹೇಳಿದ್ದಾರೆ.

ಅಭಿಜಿತ್ ಅಯ್ಯರ್ ತನ್ನ ಸರಣಿ ಎಕ್ಸ್‌ ಪೋಸ್ಟ್‌ನಲ್ಲಿ ಮಹಿಳಾ ಉದ್ಯೋಗಿಗಳ ವಿರುದ್ದ ದುರುದ್ದೇಶಪೂರಿತ ಮತ್ತು ನಿಂದನೀಯ ಪದಗಳನ್ನು ಬಳಸಿದ್ದಾರೆ. ನಮ್ಮನ್ನು ವೇಶ್ಯೆಯರು ಮತ್ತು ನಾನು ಕೆಲಸ ಮಾಡುವ ಸ್ಥಳವನ್ನು ವೇಶ್ಯಾಗೃಹ ಎಂದು ಕರೆದಿರುವುದಾಗಿ ತಿಳಿಸಿದ್ದಾರೆ.

ವೈದ್ಯರಿಂದ ಹಿಡಿದು ವಕೀಲರು, ನ್ಯಾಯಾಧೀಶರು, ಶಿಕ್ಷಕರು, ವಿಜ್ಞಾನಿಗಳು, ವಾಸ್ತುಶಿಲ್ಪಿಗಳು, ಇಂಜಿನಿಯರ್‌ಗಳು ಮತ್ತು ಇತರರ ವರ್ಗದವರು ಎಂಬ ಗೌರವ ಇಲ್ಲದೆ, ನ್ಯೂಸ್ ಲಾಂಡ್ರಿಯ ಎಲ್ಲಾ ಚಂದಾದಾರರನ್ನು ‘ವೇಶ್ಯೆಯರು’ ಎಂದು ಉಲ್ಲೇಖಿಸಿರುವುದಾಗಿ ವಿವರಿಸಿದ್ದಾರೆ.

ಲೈಂಗಿಕ ಕಾರ್ಯಕರ್ತೆಯರಿಗೂ ಸಹ ಘನತೆ ಇದೆ. ‘ವೇಶ್ಯೆ’ ಎಂಬ ಪದವು ಮಹಿಳಾ ಪತ್ರಕರ್ತರ ಮೇಲಿನ ದಾಳಿ ಮಾತ್ರವಲ್ಲ, ಲೈಂಗಿಕ ಕಾರ್ಯಕರ್ತೆಯರ ವಿರುದ್ಧದ ಅಸಹನೆ ಮತ್ತು ಹಿಂಸಾತ್ಮಕ ಮನೋಭಾವವನ್ನು ಬಿಂಬಿಸುತ್ತದೆ. ಈಗಾಗಲೇ ಅನೇಕ ಲೈಂಗಿಕ ಕಾರ್ಯಕರ್ತೆಯರ ಈ ರೀತಿಯ ಹಿಂಸೆಗಳನ್ನು ಅನುಭವಿಸುತ್ತಿದ್ದಾರೆ ಎಂದು ತಮ್ಮ ಅರ್ಜಿಯಲ್ಲಿ ಪತ್ರಕರ್ತೆಯರ ಹೇಳಿದ್ದಾರೆ.

ಯಾವುದೇ ವ್ಯಕ್ತಿ/ ಮಹಿಳೆ ಅವಮಾನವೀಯ ಕೃತ್ಯಗಳಿಗೆ ಒಳಪಡಬೇಕಾದವರಲ್ಲ. ಯಾವುದೇ ವೃತ್ತಿಯನ್ನು ಅವಮಾನವೆಂದು ಶಸ್ತ್ರಸಜ್ಜಿತಗೊಳಿಸಲು ಸಾಧ್ಯವಿಲ್ಲ. ಅಭಿಜಿತ್ ಅಯ್ಯರ್ ಪೋಸ್ಟ್ ಪತ್ರಕರ್ತರಾಗಿರಲಿ ಅಥವಾ ಲೈಂಗಿಕ ಕಾರ್ಯಕರ್ತರಾಗಿರಲಿ ಮಹಿಳೆಯರ ಸಂಸ್ಥೆ, ಗೌರವವನ್ನು ಕಸಿದುಕೊಳ್ಳುತ್ತದೆ. ಅಭಿವ್ಯಕ್ತಿ ಸ್ವಾತಂತ್ರ್ಯ, ಪತ್ರಿಕೋದ್ಯಮ ಟೀಕೆ ಅಥವಾ ವಿಡಂಬನೆ ಅಥವಾ ನ್ಯಾಯಯುತ ಹೇಳಿಕೆ ಎಂದು ಇದನ್ನು ಸಮರ್ಥಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ಅಭಿಜಿತ್ ಅವರ ಪೋಸ್ಟ್ ನ್ಯೂಸ್ ಲಾಂಡ್ರಿಯ ಮಹಿಳಾ ವೃತ್ತಿಪರರನ್ನು ಅವಮಾನಿಸುವ ಗುರಿಯನ್ನು ಹೊಂದಿರುವ ಲೈಂಗಿಕ ನಿಂದನೆಗಳಾಗಿವೆ. ನ್ಯೂಸ್ ಲಾಂಡ್ರಿಯ ಮೇಲಿನ ದಾಳಿಯ ಹೊರತಾಗಿ, ಭಯ ಅಥವಾ ಲೈಂಗಿಕ ಕಿರುಕುಳವಿಲ್ಲದೆ ಕೆಲಸ ಮಾಡುವ ಮಹಿಳೆಯರ ಘನತೆ ಮತ್ತು ಹಕ್ಕಿನ ಮೇಲಿನ ನೇರ ದಾಳಿಯಾಗಿದೆ ಎಂದು ಹೇಳಿದ್ದಾರೆ.

ಪತ್ರಕರ್ತೆಯರು ವಕೀಲ ಉದ್ಧವ್ ಖನ್ನಾ ಮತ್ತು ಧ್ರುವ ವಿಗ್ ಮೂಲಕ ಈ ಮೊಕದ್ದಮೆ ಹೂಡಿದ್ದಾರೆ. ವರದಿಗಳ ಪ್ರಕಾರ, ನ್ಯಾಯಾಲಯದ ಕ್ಷಮೆ ಕೇಳಿರುವ ಅಭಿಜಿತ್ ಅಯ್ಯರ್ ಪರ ವಕೀಲ ದೇಹದ್ರಾಯ್‌ ಅವರು, 5 ಗಂಟೆಗಳ ಒಳಗೆ ಪೋಸ್ಟ್ ಅಳಿಸಿಹಾಕುವುದಾಗಿ ತಿಳಿಸಿದ್ದಾರೆ.

ನಗದು ಪತ್ತೆ ಪ್ರಕರಣ | ನ್ಯಾಯಮೂರ್ತಿ ವಿರುದ್ಧ ಎಫ್‌ಐಆರ್ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...