Homeಮುಖಪುಟದೆಹಲಿ ಹೈಕೋರ್ಟ್ ಛೀಮಾರಿ: ನ್ಯೂಸ್ ಲಾಂಡ್ರಿ ಪತ್ರಕರ್ತೆಯರ ವಿರುದ್ಧದ ಪೋಸ್ಟ್ ತೆಗೆಯಲು ಅಭಿಜಿತ್ ಅಯ್ಯರ್ ಒಪ್ಪಿಗೆ

ದೆಹಲಿ ಹೈಕೋರ್ಟ್ ಛೀಮಾರಿ: ನ್ಯೂಸ್ ಲಾಂಡ್ರಿ ಪತ್ರಕರ್ತೆಯರ ವಿರುದ್ಧದ ಪೋಸ್ಟ್ ತೆಗೆಯಲು ಅಭಿಜಿತ್ ಅಯ್ಯರ್ ಒಪ್ಪಿಗೆ

- Advertisement -
- Advertisement -

ಡಿಜಿಟಲ್ ಸುದ್ದಿ ವೇದಿಕೆ ನ್ಯೂಸ್‌ ಲಾಂಡ್ರಿಯ ಪತ್ರಕರ್ತೆಯರನ್ನು ‘ವೇಶ್ಯೆಯರು’ ಮತ್ತು ಅವರು ಕೆಲಸ ಮಾಡುವ ಸ್ಥಳವನ್ನು ‘ವೇಶ್ಯಾಗೃಹ’ ಎಂದು ನಿಂದಿಸಿ ಪೋಸ್ಟ್ ಹಾಕಿದ್ದ ರಾಜಕೀಯ ವಿಶ್ಲೇಷಕ ಅಭಿಜಿತ್‌ ಅಯ್ಯರ್‌ ಮಿತ್ರಗೆ ದೆಹಲಿ ಹೈಕೋರ್ಟ್‌ ಬುಧವಾರ (ಮೇ.21) ಛೀಮಾರಿ ಹಾಕಿದೆ ಎಂದು ವರದಿಯಾಗಿದೆ.

ನಿಂದನೀಯ ಪೋಸ್ಟ್‌ಗಳನ್ನು ತೆಗೆದು ಹಾಕುವಂತೆ ಅಭಿಜಿತ್‌ಗೆ ಸೂಚಿಸಿರುವ ಕೋರ್ಟ್, ಪೋಸ್ಟ್ ತೆಗೆಯುವರೆಗೆ ಅವರ ವಾದ ಆಲಿಸುವುದಿಲ್ಲ ಎಂದಿರುವುದಾಗಿ livelaw.in ವರದಿ ಮಾಡಿದೆ.

ಅಭಿಜಿತ್‌ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ತಮ್ಮ ವಿರುದ್ದ ಲೈಂಗಿಕ ನಿಂದನಾತ್ಮಕ ಪೋಸ್ಟ್ ಹಾಕಿದ್ದಾರೆ ಎಂದು ಪತ್ರಕರ್ತೆಯರು ಆರೋಪಿಸಿದ್ದಾರೆ.

ಅಭಿಜಿತ್ ಅವರ ಎಕ್ಸ್  ಪೋಸ್ಟ್‌ಗಳನ್ನು ಪರಿಶೀಲಿಸಿದ ನ್ಯಾಯಮೂರ್ತಿ ಪುರುಷೀಂದ್ರ ಕುಮಾರ್ ಕೌರವ್ ಅವರು “ನೀವು ನಿಮ್ಮ ಪೋಸ್ಟ್ ಅನ್ನು ಸಮರ್ಥಿಸಿಕೊಳ್ಳುತ್ತೀರಾ? ಹಿನ್ನೆಲೆ ಏನೇ ಇರಲಿ, ಮಹಿಳೆಯರ ವಿರುದ್ದ ಈ ರೀತಿಯ ಪದಗಳನ್ನು ಬಳಸುವುದು ಈ ಸಮಾಜದಲ್ಲಿ ಅನುವದನೀಯವೇ? ಮೊದಲು ನೀವು ನಿಮ್ಮ ಪೋಸ್ಟ್ ತೆಗೆದು ಹಾಕಿ, ಆ ನಂತರ ನಿಮ್ಮ ಮಾತು ಕೇಳುತ್ತೇವೆ” ಎಂದು ಅಭಿಜಿತ್‌ ಅಯ್ಯರ್‌ಗೆ ಮೌಖಿವಾಗಿ ಹೇಳಿದ್ದಾರೆ.

ಅಯ್ಯರ್ ಪರ ಹಾಜರಿದ್ದ ವಕೀಲ ಜೈ ಅನಂತ್ ದೇಹಾದ್ರಾಯಿ ವಾದ ಮಂಡಿಸಿ “ನಮ್ಮ ಕಕ್ಷಿದಾರರ ಒಂದೇ ಒಂದು ಪೋಸ್ಟ್ ಕೂಡ ಪತ್ರಕರ್ತರಿಗೆ ವೈಯಕ್ತಿಕವಾಗಿ ಸಂಬಂಧಿಸಿಲ್ಲ” ಎಂದಿದ್ದಾರೆ.

ಈ ವಾದವನ್ನು ಒಪ್ಪಿಕೊಳ್ಳದ ನ್ಯಾಯಾಧೀಶರು, “ನೀವು ಆ ರೀತಿ ಅಂದುಕೊಂಡಿದ್ದರೆ, ಅದು ಪ್ರತಿವಾದಿಗಳಿಗೆ (ಪತ್ರಕರ್ತರಿಗೆ) ನೇರವಾಗಿ ಸಂಬಂಧಿಸಿವೆ ಎಂದು ನಾನು ಹೇಳುತ್ತೇನೆ” ಎಂದಿದ್ದಾರೆ.

ಈ ವೇಳೆ ಪ್ರತಿಕ್ರಿಯೆ ನೀಡಿದ ವಕೀಲ ದೇಹಾದ್ರಾಯಿ, “ನ್ಯೂಸ್ ಲಾಂಡ್ರಿ ಹೇಳಿಕೊಳ್ಳುವಂತಹ ಸಂಸ್ಥೆಯೇನು ಅಲ್ಲ. ಅದರ ಆದಾಯದ ಪ್ರಶ್ನಾರ್ಹ ಮೂಲಗಳ ಬಗ್ಗೆಯೂ ಅಯ್ಯರ್ ಹಲವಾರು ಟ್ವೀಟ್‌ಗಳನ್ನು ಮಾಡಿದ್ದಾರೆ” ಎಂದಿದ್ದಾರೆ.

ಮುಂದುವರಿದು, “ಆ ಸಂಸ್ಥೆಯ ಆದಾಯ ಮೂಲಗಳ ವಿಶ್ವಾಸಾರ್ಹತೆಯ ಬಗ್ಗೆ ಪ್ರಶ್ನೆಯಿದೆ. ಹಾಗಾಗಿ, ಅದನ್ನು ವೇಶ್ಯಾಗೃಹ ಎಂದು ಉಲ್ಲೇಖಿಸಲಾಗಿದೆ” ಎಂಬ ದಾಟಿಯಲ್ಲಿ ಅಯ್ಯರ್ ಪೋಸ್ಟ್ ಅನ್ನು ಸಮರ್ಥಿಸಿಕೊಂಡಿದ್ದಾರೆ.

ಇದಕ್ಕೆ ಖಾರವಾಗಿ ಪ್ರತಿಕ್ರಿಯೆ ನ್ಯಾಯಾಧೀಶರು,”ಪ್ರಶ್ನಾರ್ಹ ಆದಾಯ ಏನೇ ಇರಲಿ, ಇಂದು ಇಲ್ಲಿ ಪ್ರಶ್ನಿಸದ ಯಾವುದನ್ನೂ ಪರಿಶೀಲಿಸಲು ಸಾಧ್ಯವಿಲ್ಲ. ವೇಶ್ಯಾಗೃಹದ ವ್ಯಾಖ್ಯಾನವನ್ನು ಅವರು (ಅಭಿಜಿತ್ ಅಯ್ಯರ್) ಅರ್ಥಮಾಡಿಕೊಂಡಿದ್ದಾರಾ? ಪ್ರಶ್ನಾರ್ಹ ಮೂಲಗಳಿಂದ ಹಣಕಾಸಿನ ನೆರವು ಪಡೆಯುವ ಏನೇ ಆದರೂ ಅದನ್ನು ವೇಶ್ಯಾಗೃಹ ಎಂದು ಕರೆಯಬಹುದೇ?. ಪ್ರತಿವಾದಿಯ ವಿರುದ್ದ ಹಲವು ದೂರುಗಳು ಮತ್ತು ನಿಮ್ಮ ಕಕ್ಷಿದಾರರ ಪರ ಹಲವು ಸಮರ್ಥನೀಯ ವಾದಗಳು ನಿಮ್ಮಲ್ಲಿ ಇರಬಹುದು. ಹಾಗಾಂತ, ನಿಮ್ಮ ಕಕ್ಷಿದಾರರು ಬಳಕೆ ಮಾಡಿರುವ ಪದಗಳು ಸಮಾಜದಲ್ಲಿ ಸಮರ್ಥನೀಯವಲ್ಲ. ಯಾರಿಗೆ ಸಂಬಂಧಿಸದಿದ್ದರೂ, ಯಾವುದೇ ಕಲ್ಪನೆಯ ಮೇಲೆಯೂ ಸಾರ್ವಜನಿಕ ವೇದಿಕೆಯಲ್ಲಿ ಅಂತಹ ಪದ ಬಳಕೆ ಮಾಡಬಾರದು” ಎಂದು ಹೇಳಿದ್ದಾರೆ.

ಸಾರ್ವಜನಿಕ ವೇದಿಕೆಯಲ್ಲಿ ಮಹಿಳೆಯರ ವಿರುದ್ಧ ನಿಂದನೀಯ ಪದಗಳನ್ನು ಬಳಸಿದ್ದಕ್ಕಾಗಿ ಅಯ್ಯರ್ ವಿರುದ್ಧ ಸ್ವಯಂಪ್ರೇರಿತವಾಗಿ ಎಫ್‌ಐಆರ್ ದಾಖಲಿಸುವಂತೆ ಆದೇಶಿಸಲು ಪೀಠ ಮುಂದಾದಾಗ, ಪೋಸ್ಟ್‌ಗಳನ್ನು ತಕ್ಷಣವೇ ತೆಗೆದುಹಾಕಲು ಅಯ್ಯರ್ ಪರ ವಕೀಲರು ಒಪ್ಪಿಕೊಂಡರು. ನ್ಯಾಯಾಲಯ ವಿಚಾರಣೆಯನ್ನು ಮುಂದಿನ ವಾರಕ್ಕೆ ನಿಗದಿ ಮಾಡಿದ್ದಾರೆ.

ನ್ಯೂಸ್ ಲಾಂಡ್ರಿಯ ಪತ್ರಕರ್ತೆಯರು ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ಅಯ್ಯರ್‌ ಮಿತ್ರಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು, ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ತೆಗೆಯಬೇಕು ಮತ್ತು ಪರಿಹಾರವಾಗಿ 2 ಕೋಟಿ ರೂಪಾಯಿ ನೀಡಬೇಕು ಎಂದು ಕೋರಲಾಗಿದೆ.

ಮಹಿಳಾ ಪತ್ರಕರ್ತರಾದ ಮನೀಶಾ ಪಾಂಡೆ, ಇಶಿತಾ ಪ್ರದೀಪ್, ಸುಹಾಸಿನಿ ಬಿಸ್ವಾಸ್, ಸುಮೇಧಾ ಮಿತ್ತಲ್, ಟಿಸ್ತಾ ರಾಯ್ ಚೌಧರಿ, ತಸ್ನೀಮ್ ಫಾತಿಮಾ, ಪ್ರಿಯಾ ಜೈನ್, ಜಯಶ್ರೀ ಅರುಣಾಚಲಂ ಮತ್ತು ಪ್ರಿಯಾಲಿ ಧಿಂಗ್ರಾ ಮೊಕದ್ದಮೆ ಹೂಡಿದ್ದಾರೆ. ಪ್ರಕರಣದ ಪಕ್ಷಕಾರರಲ್ಲಿ ನ್ಯೂಸ್ ಲಾಂಡ್ರಿಯೂ ಸೇರಿದೆ.

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಅಭಿಜಿತ್ ಅಯ್ಯರ್ ಹಾಕಿರುವ ಪೋಸ್ಟ್‌ಗಳು ಮಾನಹಾನಿಕರ ಆಧಾರರಹಿತ ಮತ್ತು ತಪ್ಪು ಕಲ್ಪನೆಯಿಂದ ಕೂಡಿದ್ದು, ಮಹಿಳಾ ಉದ್ಯೋಗಿಗಳ ಘನತೆ ಮತ್ತು ಖ್ಯಾತಿಗೆ ಹಾನಿ ಮಾಡುವ ಉದ್ದೇಶ ಹೊಂದಿದೆ ಎಂದು ಮೊಕದ್ದಮೆಯಲ್ಲಿ ತಿಳಿಸಲಾಗಿದೆ.

ಪತ್ರಿಕೋದ್ಯಮದ ಕೆಲಸದ ಬಗ್ಗೆ ನ್ಯಾಯಯುತ ಟೀಕೆ ಸ್ವಾಗತಾರ್ಹವಾದರೂ, ಯಾರೂ ವೈಯಕ್ತಿಕವಾಗಿ ಅವಮಾನಕ್ಕೊಳಗಾಗಲು ಅರ್ಹರಲ್ಲ ಎಂದು ಪತ್ರಕರ್ತೆಯರು ಹೇಳಿದ್ದಾರೆ.

ಅಭಿಜಿತ್ ಅಯ್ಯರ್ ತನ್ನ ಸರಣಿ ಎಕ್ಸ್‌ ಪೋಸ್ಟ್‌ನಲ್ಲಿ ಮಹಿಳಾ ಉದ್ಯೋಗಿಗಳ ವಿರುದ್ದ ದುರುದ್ದೇಶಪೂರಿತ ಮತ್ತು ನಿಂದನೀಯ ಪದಗಳನ್ನು ಬಳಸಿದ್ದಾರೆ. ನಮ್ಮನ್ನು ವೇಶ್ಯೆಯರು ಮತ್ತು ನಾನು ಕೆಲಸ ಮಾಡುವ ಸ್ಥಳವನ್ನು ವೇಶ್ಯಾಗೃಹ ಎಂದು ಕರೆದಿರುವುದಾಗಿ ತಿಳಿಸಿದ್ದಾರೆ.

ವೈದ್ಯರಿಂದ ಹಿಡಿದು ವಕೀಲರು, ನ್ಯಾಯಾಧೀಶರು, ಶಿಕ್ಷಕರು, ವಿಜ್ಞಾನಿಗಳು, ವಾಸ್ತುಶಿಲ್ಪಿಗಳು, ಇಂಜಿನಿಯರ್‌ಗಳು ಮತ್ತು ಇತರರ ವರ್ಗದವರು ಎಂಬ ಗೌರವ ಇಲ್ಲದೆ, ನ್ಯೂಸ್ ಲಾಂಡ್ರಿಯ ಎಲ್ಲಾ ಚಂದಾದಾರರನ್ನು ‘ವೇಶ್ಯೆಯರು’ ಎಂದು ಉಲ್ಲೇಖಿಸಿರುವುದಾಗಿ ವಿವರಿಸಿದ್ದಾರೆ.

ಲೈಂಗಿಕ ಕಾರ್ಯಕರ್ತೆಯರಿಗೂ ಸಹ ಘನತೆ ಇದೆ. ‘ವೇಶ್ಯೆ’ ಎಂಬ ಪದವು ಮಹಿಳಾ ಪತ್ರಕರ್ತರ ಮೇಲಿನ ದಾಳಿ ಮಾತ್ರವಲ್ಲ, ಲೈಂಗಿಕ ಕಾರ್ಯಕರ್ತೆಯರ ವಿರುದ್ಧದ ಅಸಹನೆ ಮತ್ತು ಹಿಂಸಾತ್ಮಕ ಮನೋಭಾವವನ್ನು ಬಿಂಬಿಸುತ್ತದೆ. ಈಗಾಗಲೇ ಅನೇಕ ಲೈಂಗಿಕ ಕಾರ್ಯಕರ್ತೆಯರ ಈ ರೀತಿಯ ಹಿಂಸೆಗಳನ್ನು ಅನುಭವಿಸುತ್ತಿದ್ದಾರೆ ಎಂದು ತಮ್ಮ ಅರ್ಜಿಯಲ್ಲಿ ಪತ್ರಕರ್ತೆಯರ ಹೇಳಿದ್ದಾರೆ.

ಯಾವುದೇ ವ್ಯಕ್ತಿ/ ಮಹಿಳೆ ಅವಮಾನವೀಯ ಕೃತ್ಯಗಳಿಗೆ ಒಳಪಡಬೇಕಾದವರಲ್ಲ. ಯಾವುದೇ ವೃತ್ತಿಯನ್ನು ಅವಮಾನವೆಂದು ಶಸ್ತ್ರಸಜ್ಜಿತಗೊಳಿಸಲು ಸಾಧ್ಯವಿಲ್ಲ. ಅಭಿಜಿತ್ ಅಯ್ಯರ್ ಪೋಸ್ಟ್ ಪತ್ರಕರ್ತರಾಗಿರಲಿ ಅಥವಾ ಲೈಂಗಿಕ ಕಾರ್ಯಕರ್ತರಾಗಿರಲಿ ಮಹಿಳೆಯರ ಸಂಸ್ಥೆ, ಗೌರವವನ್ನು ಕಸಿದುಕೊಳ್ಳುತ್ತದೆ. ಅಭಿವ್ಯಕ್ತಿ ಸ್ವಾತಂತ್ರ್ಯ, ಪತ್ರಿಕೋದ್ಯಮ ಟೀಕೆ ಅಥವಾ ವಿಡಂಬನೆ ಅಥವಾ ನ್ಯಾಯಯುತ ಹೇಳಿಕೆ ಎಂದು ಇದನ್ನು ಸಮರ್ಥಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ಅಭಿಜಿತ್ ಅವರ ಪೋಸ್ಟ್ ನ್ಯೂಸ್ ಲಾಂಡ್ರಿಯ ಮಹಿಳಾ ವೃತ್ತಿಪರರನ್ನು ಅವಮಾನಿಸುವ ಗುರಿಯನ್ನು ಹೊಂದಿರುವ ಲೈಂಗಿಕ ನಿಂದನೆಗಳಾಗಿವೆ. ನ್ಯೂಸ್ ಲಾಂಡ್ರಿಯ ಮೇಲಿನ ದಾಳಿಯ ಹೊರತಾಗಿ, ಭಯ ಅಥವಾ ಲೈಂಗಿಕ ಕಿರುಕುಳವಿಲ್ಲದೆ ಕೆಲಸ ಮಾಡುವ ಮಹಿಳೆಯರ ಘನತೆ ಮತ್ತು ಹಕ್ಕಿನ ಮೇಲಿನ ನೇರ ದಾಳಿಯಾಗಿದೆ ಎಂದು ಹೇಳಿದ್ದಾರೆ.

ಪತ್ರಕರ್ತೆಯರು ವಕೀಲ ಉದ್ಧವ್ ಖನ್ನಾ ಮತ್ತು ಧ್ರುವ ವಿಗ್ ಮೂಲಕ ಈ ಮೊಕದ್ದಮೆ ಹೂಡಿದ್ದಾರೆ. ವರದಿಗಳ ಪ್ರಕಾರ, ನ್ಯಾಯಾಲಯದ ಕ್ಷಮೆ ಕೇಳಿರುವ ಅಭಿಜಿತ್ ಅಯ್ಯರ್ ಪರ ವಕೀಲ ದೇಹದ್ರಾಯ್‌ ಅವರು, 5 ಗಂಟೆಗಳ ಒಳಗೆ ಪೋಸ್ಟ್ ಅಳಿಸಿಹಾಕುವುದಾಗಿ ತಿಳಿಸಿದ್ದಾರೆ.

ನಗದು ಪತ್ತೆ ಪ್ರಕರಣ | ನ್ಯಾಯಮೂರ್ತಿ ವಿರುದ್ಧ ಎಫ್‌ಐಆರ್ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...