Homeಮುಖಪುಟದೆಹಲಿ ಹೈಕೋರ್ಟ್ ಛೀಮಾರಿ: ನ್ಯೂಸ್ ಲಾಂಡ್ರಿ ಪತ್ರಕರ್ತೆಯರ ವಿರುದ್ಧದ ಪೋಸ್ಟ್ ತೆಗೆಯಲು ಅಭಿಜಿತ್ ಅಯ್ಯರ್ ಒಪ್ಪಿಗೆ

ದೆಹಲಿ ಹೈಕೋರ್ಟ್ ಛೀಮಾರಿ: ನ್ಯೂಸ್ ಲಾಂಡ್ರಿ ಪತ್ರಕರ್ತೆಯರ ವಿರುದ್ಧದ ಪೋಸ್ಟ್ ತೆಗೆಯಲು ಅಭಿಜಿತ್ ಅಯ್ಯರ್ ಒಪ್ಪಿಗೆ

- Advertisement -
- Advertisement -

ಡಿಜಿಟಲ್ ಸುದ್ದಿ ವೇದಿಕೆ ನ್ಯೂಸ್‌ ಲಾಂಡ್ರಿಯ ಪತ್ರಕರ್ತೆಯರನ್ನು ‘ವೇಶ್ಯೆಯರು’ ಮತ್ತು ಅವರು ಕೆಲಸ ಮಾಡುವ ಸ್ಥಳವನ್ನು ‘ವೇಶ್ಯಾಗೃಹ’ ಎಂದು ನಿಂದಿಸಿ ಪೋಸ್ಟ್ ಹಾಕಿದ್ದ ರಾಜಕೀಯ ವಿಶ್ಲೇಷಕ ಅಭಿಜಿತ್‌ ಅಯ್ಯರ್‌ ಮಿತ್ರಗೆ ದೆಹಲಿ ಹೈಕೋರ್ಟ್‌ ಬುಧವಾರ (ಮೇ.21) ಛೀಮಾರಿ ಹಾಕಿದೆ ಎಂದು ವರದಿಯಾಗಿದೆ.

ನಿಂದನೀಯ ಪೋಸ್ಟ್‌ಗಳನ್ನು ತೆಗೆದು ಹಾಕುವಂತೆ ಅಭಿಜಿತ್‌ಗೆ ಸೂಚಿಸಿರುವ ಕೋರ್ಟ್, ಪೋಸ್ಟ್ ತೆಗೆಯುವರೆಗೆ ಅವರ ವಾದ ಆಲಿಸುವುದಿಲ್ಲ ಎಂದಿರುವುದಾಗಿ livelaw.in ವರದಿ ಮಾಡಿದೆ.

ಅಭಿಜಿತ್‌ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ತಮ್ಮ ವಿರುದ್ದ ಲೈಂಗಿಕ ನಿಂದನಾತ್ಮಕ ಪೋಸ್ಟ್ ಹಾಕಿದ್ದಾರೆ ಎಂದು ಪತ್ರಕರ್ತೆಯರು ಆರೋಪಿಸಿದ್ದಾರೆ.

ಅಭಿಜಿತ್ ಅವರ ಎಕ್ಸ್  ಪೋಸ್ಟ್‌ಗಳನ್ನು ಪರಿಶೀಲಿಸಿದ ನ್ಯಾಯಮೂರ್ತಿ ಪುರುಷೀಂದ್ರ ಕುಮಾರ್ ಕೌರವ್ ಅವರು “ನೀವು ನಿಮ್ಮ ಪೋಸ್ಟ್ ಅನ್ನು ಸಮರ್ಥಿಸಿಕೊಳ್ಳುತ್ತೀರಾ? ಹಿನ್ನೆಲೆ ಏನೇ ಇರಲಿ, ಮಹಿಳೆಯರ ವಿರುದ್ದ ಈ ರೀತಿಯ ಪದಗಳನ್ನು ಬಳಸುವುದು ಈ ಸಮಾಜದಲ್ಲಿ ಅನುವದನೀಯವೇ? ಮೊದಲು ನೀವು ನಿಮ್ಮ ಪೋಸ್ಟ್ ತೆಗೆದು ಹಾಕಿ, ಆ ನಂತರ ನಿಮ್ಮ ಮಾತು ಕೇಳುತ್ತೇವೆ” ಎಂದು ಅಭಿಜಿತ್‌ ಅಯ್ಯರ್‌ಗೆ ಮೌಖಿವಾಗಿ ಹೇಳಿದ್ದಾರೆ.

ಅಯ್ಯರ್ ಪರ ಹಾಜರಿದ್ದ ವಕೀಲ ಜೈ ಅನಂತ್ ದೇಹಾದ್ರಾಯಿ ವಾದ ಮಂಡಿಸಿ “ನಮ್ಮ ಕಕ್ಷಿದಾರರ ಒಂದೇ ಒಂದು ಪೋಸ್ಟ್ ಕೂಡ ಪತ್ರಕರ್ತರಿಗೆ ವೈಯಕ್ತಿಕವಾಗಿ ಸಂಬಂಧಿಸಿಲ್ಲ” ಎಂದಿದ್ದಾರೆ.

ಈ ವಾದವನ್ನು ಒಪ್ಪಿಕೊಳ್ಳದ ನ್ಯಾಯಾಧೀಶರು, “ನೀವು ಆ ರೀತಿ ಅಂದುಕೊಂಡಿದ್ದರೆ, ಅದು ಪ್ರತಿವಾದಿಗಳಿಗೆ (ಪತ್ರಕರ್ತರಿಗೆ) ನೇರವಾಗಿ ಸಂಬಂಧಿಸಿವೆ ಎಂದು ನಾನು ಹೇಳುತ್ತೇನೆ” ಎಂದಿದ್ದಾರೆ.

ಈ ವೇಳೆ ಪ್ರತಿಕ್ರಿಯೆ ನೀಡಿದ ವಕೀಲ ದೇಹಾದ್ರಾಯಿ, “ನ್ಯೂಸ್ ಲಾಂಡ್ರಿ ಹೇಳಿಕೊಳ್ಳುವಂತಹ ಸಂಸ್ಥೆಯೇನು ಅಲ್ಲ. ಅದರ ಆದಾಯದ ಪ್ರಶ್ನಾರ್ಹ ಮೂಲಗಳ ಬಗ್ಗೆಯೂ ಅಯ್ಯರ್ ಹಲವಾರು ಟ್ವೀಟ್‌ಗಳನ್ನು ಮಾಡಿದ್ದಾರೆ” ಎಂದಿದ್ದಾರೆ.

ಮುಂದುವರಿದು, “ಆ ಸಂಸ್ಥೆಯ ಆದಾಯ ಮೂಲಗಳ ವಿಶ್ವಾಸಾರ್ಹತೆಯ ಬಗ್ಗೆ ಪ್ರಶ್ನೆಯಿದೆ. ಹಾಗಾಗಿ, ಅದನ್ನು ವೇಶ್ಯಾಗೃಹ ಎಂದು ಉಲ್ಲೇಖಿಸಲಾಗಿದೆ” ಎಂಬ ದಾಟಿಯಲ್ಲಿ ಅಯ್ಯರ್ ಪೋಸ್ಟ್ ಅನ್ನು ಸಮರ್ಥಿಸಿಕೊಂಡಿದ್ದಾರೆ.

ಇದಕ್ಕೆ ಖಾರವಾಗಿ ಪ್ರತಿಕ್ರಿಯೆ ನ್ಯಾಯಾಧೀಶರು,”ಪ್ರಶ್ನಾರ್ಹ ಆದಾಯ ಏನೇ ಇರಲಿ, ಇಂದು ಇಲ್ಲಿ ಪ್ರಶ್ನಿಸದ ಯಾವುದನ್ನೂ ಪರಿಶೀಲಿಸಲು ಸಾಧ್ಯವಿಲ್ಲ. ವೇಶ್ಯಾಗೃಹದ ವ್ಯಾಖ್ಯಾನವನ್ನು ಅವರು (ಅಭಿಜಿತ್ ಅಯ್ಯರ್) ಅರ್ಥಮಾಡಿಕೊಂಡಿದ್ದಾರಾ? ಪ್ರಶ್ನಾರ್ಹ ಮೂಲಗಳಿಂದ ಹಣಕಾಸಿನ ನೆರವು ಪಡೆಯುವ ಏನೇ ಆದರೂ ಅದನ್ನು ವೇಶ್ಯಾಗೃಹ ಎಂದು ಕರೆಯಬಹುದೇ?. ಪ್ರತಿವಾದಿಯ ವಿರುದ್ದ ಹಲವು ದೂರುಗಳು ಮತ್ತು ನಿಮ್ಮ ಕಕ್ಷಿದಾರರ ಪರ ಹಲವು ಸಮರ್ಥನೀಯ ವಾದಗಳು ನಿಮ್ಮಲ್ಲಿ ಇರಬಹುದು. ಹಾಗಾಂತ, ನಿಮ್ಮ ಕಕ್ಷಿದಾರರು ಬಳಕೆ ಮಾಡಿರುವ ಪದಗಳು ಸಮಾಜದಲ್ಲಿ ಸಮರ್ಥನೀಯವಲ್ಲ. ಯಾರಿಗೆ ಸಂಬಂಧಿಸದಿದ್ದರೂ, ಯಾವುದೇ ಕಲ್ಪನೆಯ ಮೇಲೆಯೂ ಸಾರ್ವಜನಿಕ ವೇದಿಕೆಯಲ್ಲಿ ಅಂತಹ ಪದ ಬಳಕೆ ಮಾಡಬಾರದು” ಎಂದು ಹೇಳಿದ್ದಾರೆ.

ಸಾರ್ವಜನಿಕ ವೇದಿಕೆಯಲ್ಲಿ ಮಹಿಳೆಯರ ವಿರುದ್ಧ ನಿಂದನೀಯ ಪದಗಳನ್ನು ಬಳಸಿದ್ದಕ್ಕಾಗಿ ಅಯ್ಯರ್ ವಿರುದ್ಧ ಸ್ವಯಂಪ್ರೇರಿತವಾಗಿ ಎಫ್‌ಐಆರ್ ದಾಖಲಿಸುವಂತೆ ಆದೇಶಿಸಲು ಪೀಠ ಮುಂದಾದಾಗ, ಪೋಸ್ಟ್‌ಗಳನ್ನು ತಕ್ಷಣವೇ ತೆಗೆದುಹಾಕಲು ಅಯ್ಯರ್ ಪರ ವಕೀಲರು ಒಪ್ಪಿಕೊಂಡರು. ನ್ಯಾಯಾಲಯ ವಿಚಾರಣೆಯನ್ನು ಮುಂದಿನ ವಾರಕ್ಕೆ ನಿಗದಿ ಮಾಡಿದ್ದಾರೆ.

ನ್ಯೂಸ್ ಲಾಂಡ್ರಿಯ ಪತ್ರಕರ್ತೆಯರು ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ಅಯ್ಯರ್‌ ಮಿತ್ರಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು, ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ತೆಗೆಯಬೇಕು ಮತ್ತು ಪರಿಹಾರವಾಗಿ 2 ಕೋಟಿ ರೂಪಾಯಿ ನೀಡಬೇಕು ಎಂದು ಕೋರಲಾಗಿದೆ.

ಮಹಿಳಾ ಪತ್ರಕರ್ತರಾದ ಮನೀಶಾ ಪಾಂಡೆ, ಇಶಿತಾ ಪ್ರದೀಪ್, ಸುಹಾಸಿನಿ ಬಿಸ್ವಾಸ್, ಸುಮೇಧಾ ಮಿತ್ತಲ್, ಟಿಸ್ತಾ ರಾಯ್ ಚೌಧರಿ, ತಸ್ನೀಮ್ ಫಾತಿಮಾ, ಪ್ರಿಯಾ ಜೈನ್, ಜಯಶ್ರೀ ಅರುಣಾಚಲಂ ಮತ್ತು ಪ್ರಿಯಾಲಿ ಧಿಂಗ್ರಾ ಮೊಕದ್ದಮೆ ಹೂಡಿದ್ದಾರೆ. ಪ್ರಕರಣದ ಪಕ್ಷಕಾರರಲ್ಲಿ ನ್ಯೂಸ್ ಲಾಂಡ್ರಿಯೂ ಸೇರಿದೆ.

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಅಭಿಜಿತ್ ಅಯ್ಯರ್ ಹಾಕಿರುವ ಪೋಸ್ಟ್‌ಗಳು ಮಾನಹಾನಿಕರ ಆಧಾರರಹಿತ ಮತ್ತು ತಪ್ಪು ಕಲ್ಪನೆಯಿಂದ ಕೂಡಿದ್ದು, ಮಹಿಳಾ ಉದ್ಯೋಗಿಗಳ ಘನತೆ ಮತ್ತು ಖ್ಯಾತಿಗೆ ಹಾನಿ ಮಾಡುವ ಉದ್ದೇಶ ಹೊಂದಿದೆ ಎಂದು ಮೊಕದ್ದಮೆಯಲ್ಲಿ ತಿಳಿಸಲಾಗಿದೆ.

ಪತ್ರಿಕೋದ್ಯಮದ ಕೆಲಸದ ಬಗ್ಗೆ ನ್ಯಾಯಯುತ ಟೀಕೆ ಸ್ವಾಗತಾರ್ಹವಾದರೂ, ಯಾರೂ ವೈಯಕ್ತಿಕವಾಗಿ ಅವಮಾನಕ್ಕೊಳಗಾಗಲು ಅರ್ಹರಲ್ಲ ಎಂದು ಪತ್ರಕರ್ತೆಯರು ಹೇಳಿದ್ದಾರೆ.

ಅಭಿಜಿತ್ ಅಯ್ಯರ್ ತನ್ನ ಸರಣಿ ಎಕ್ಸ್‌ ಪೋಸ್ಟ್‌ನಲ್ಲಿ ಮಹಿಳಾ ಉದ್ಯೋಗಿಗಳ ವಿರುದ್ದ ದುರುದ್ದೇಶಪೂರಿತ ಮತ್ತು ನಿಂದನೀಯ ಪದಗಳನ್ನು ಬಳಸಿದ್ದಾರೆ. ನಮ್ಮನ್ನು ವೇಶ್ಯೆಯರು ಮತ್ತು ನಾನು ಕೆಲಸ ಮಾಡುವ ಸ್ಥಳವನ್ನು ವೇಶ್ಯಾಗೃಹ ಎಂದು ಕರೆದಿರುವುದಾಗಿ ತಿಳಿಸಿದ್ದಾರೆ.

ವೈದ್ಯರಿಂದ ಹಿಡಿದು ವಕೀಲರು, ನ್ಯಾಯಾಧೀಶರು, ಶಿಕ್ಷಕರು, ವಿಜ್ಞಾನಿಗಳು, ವಾಸ್ತುಶಿಲ್ಪಿಗಳು, ಇಂಜಿನಿಯರ್‌ಗಳು ಮತ್ತು ಇತರರ ವರ್ಗದವರು ಎಂಬ ಗೌರವ ಇಲ್ಲದೆ, ನ್ಯೂಸ್ ಲಾಂಡ್ರಿಯ ಎಲ್ಲಾ ಚಂದಾದಾರರನ್ನು ‘ವೇಶ್ಯೆಯರು’ ಎಂದು ಉಲ್ಲೇಖಿಸಿರುವುದಾಗಿ ವಿವರಿಸಿದ್ದಾರೆ.

ಲೈಂಗಿಕ ಕಾರ್ಯಕರ್ತೆಯರಿಗೂ ಸಹ ಘನತೆ ಇದೆ. ‘ವೇಶ್ಯೆ’ ಎಂಬ ಪದವು ಮಹಿಳಾ ಪತ್ರಕರ್ತರ ಮೇಲಿನ ದಾಳಿ ಮಾತ್ರವಲ್ಲ, ಲೈಂಗಿಕ ಕಾರ್ಯಕರ್ತೆಯರ ವಿರುದ್ಧದ ಅಸಹನೆ ಮತ್ತು ಹಿಂಸಾತ್ಮಕ ಮನೋಭಾವವನ್ನು ಬಿಂಬಿಸುತ್ತದೆ. ಈಗಾಗಲೇ ಅನೇಕ ಲೈಂಗಿಕ ಕಾರ್ಯಕರ್ತೆಯರ ಈ ರೀತಿಯ ಹಿಂಸೆಗಳನ್ನು ಅನುಭವಿಸುತ್ತಿದ್ದಾರೆ ಎಂದು ತಮ್ಮ ಅರ್ಜಿಯಲ್ಲಿ ಪತ್ರಕರ್ತೆಯರ ಹೇಳಿದ್ದಾರೆ.

ಯಾವುದೇ ವ್ಯಕ್ತಿ/ ಮಹಿಳೆ ಅವಮಾನವೀಯ ಕೃತ್ಯಗಳಿಗೆ ಒಳಪಡಬೇಕಾದವರಲ್ಲ. ಯಾವುದೇ ವೃತ್ತಿಯನ್ನು ಅವಮಾನವೆಂದು ಶಸ್ತ್ರಸಜ್ಜಿತಗೊಳಿಸಲು ಸಾಧ್ಯವಿಲ್ಲ. ಅಭಿಜಿತ್ ಅಯ್ಯರ್ ಪೋಸ್ಟ್ ಪತ್ರಕರ್ತರಾಗಿರಲಿ ಅಥವಾ ಲೈಂಗಿಕ ಕಾರ್ಯಕರ್ತರಾಗಿರಲಿ ಮಹಿಳೆಯರ ಸಂಸ್ಥೆ, ಗೌರವವನ್ನು ಕಸಿದುಕೊಳ್ಳುತ್ತದೆ. ಅಭಿವ್ಯಕ್ತಿ ಸ್ವಾತಂತ್ರ್ಯ, ಪತ್ರಿಕೋದ್ಯಮ ಟೀಕೆ ಅಥವಾ ವಿಡಂಬನೆ ಅಥವಾ ನ್ಯಾಯಯುತ ಹೇಳಿಕೆ ಎಂದು ಇದನ್ನು ಸಮರ್ಥಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ಅಭಿಜಿತ್ ಅವರ ಪೋಸ್ಟ್ ನ್ಯೂಸ್ ಲಾಂಡ್ರಿಯ ಮಹಿಳಾ ವೃತ್ತಿಪರರನ್ನು ಅವಮಾನಿಸುವ ಗುರಿಯನ್ನು ಹೊಂದಿರುವ ಲೈಂಗಿಕ ನಿಂದನೆಗಳಾಗಿವೆ. ನ್ಯೂಸ್ ಲಾಂಡ್ರಿಯ ಮೇಲಿನ ದಾಳಿಯ ಹೊರತಾಗಿ, ಭಯ ಅಥವಾ ಲೈಂಗಿಕ ಕಿರುಕುಳವಿಲ್ಲದೆ ಕೆಲಸ ಮಾಡುವ ಮಹಿಳೆಯರ ಘನತೆ ಮತ್ತು ಹಕ್ಕಿನ ಮೇಲಿನ ನೇರ ದಾಳಿಯಾಗಿದೆ ಎಂದು ಹೇಳಿದ್ದಾರೆ.

ಪತ್ರಕರ್ತೆಯರು ವಕೀಲ ಉದ್ಧವ್ ಖನ್ನಾ ಮತ್ತು ಧ್ರುವ ವಿಗ್ ಮೂಲಕ ಈ ಮೊಕದ್ದಮೆ ಹೂಡಿದ್ದಾರೆ. ವರದಿಗಳ ಪ್ರಕಾರ, ನ್ಯಾಯಾಲಯದ ಕ್ಷಮೆ ಕೇಳಿರುವ ಅಭಿಜಿತ್ ಅಯ್ಯರ್ ಪರ ವಕೀಲ ದೇಹದ್ರಾಯ್‌ ಅವರು, 5 ಗಂಟೆಗಳ ಒಳಗೆ ಪೋಸ್ಟ್ ಅಳಿಸಿಹಾಕುವುದಾಗಿ ತಿಳಿಸಿದ್ದಾರೆ.

ನಗದು ಪತ್ತೆ ಪ್ರಕರಣ | ನ್ಯಾಯಮೂರ್ತಿ ವಿರುದ್ಧ ಎಫ್‌ಐಆರ್ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...