Homeಮುಖಪುಟದೆಹಲಿ ಹೈಕೋರ್ಟ್ ಛೀಮಾರಿ: ನ್ಯೂಸ್ ಲಾಂಡ್ರಿ ಪತ್ರಕರ್ತೆಯರ ವಿರುದ್ಧದ ಪೋಸ್ಟ್ ತೆಗೆಯಲು ಅಭಿಜಿತ್ ಅಯ್ಯರ್ ಒಪ್ಪಿಗೆ

ದೆಹಲಿ ಹೈಕೋರ್ಟ್ ಛೀಮಾರಿ: ನ್ಯೂಸ್ ಲಾಂಡ್ರಿ ಪತ್ರಕರ್ತೆಯರ ವಿರುದ್ಧದ ಪೋಸ್ಟ್ ತೆಗೆಯಲು ಅಭಿಜಿತ್ ಅಯ್ಯರ್ ಒಪ್ಪಿಗೆ

- Advertisement -
- Advertisement -

ಡಿಜಿಟಲ್ ಸುದ್ದಿ ವೇದಿಕೆ ನ್ಯೂಸ್‌ ಲಾಂಡ್ರಿಯ ಪತ್ರಕರ್ತೆಯರನ್ನು ‘ವೇಶ್ಯೆಯರು’ ಮತ್ತು ಅವರು ಕೆಲಸ ಮಾಡುವ ಸ್ಥಳವನ್ನು ‘ವೇಶ್ಯಾಗೃಹ’ ಎಂದು ನಿಂದಿಸಿ ಪೋಸ್ಟ್ ಹಾಕಿದ್ದ ರಾಜಕೀಯ ವಿಶ್ಲೇಷಕ ಅಭಿಜಿತ್‌ ಅಯ್ಯರ್‌ ಮಿತ್ರಗೆ ದೆಹಲಿ ಹೈಕೋರ್ಟ್‌ ಬುಧವಾರ (ಮೇ.21) ಛೀಮಾರಿ ಹಾಕಿದೆ ಎಂದು ವರದಿಯಾಗಿದೆ.

ನಿಂದನೀಯ ಪೋಸ್ಟ್‌ಗಳನ್ನು ತೆಗೆದು ಹಾಕುವಂತೆ ಅಭಿಜಿತ್‌ಗೆ ಸೂಚಿಸಿರುವ ಕೋರ್ಟ್, ಪೋಸ್ಟ್ ತೆಗೆಯುವರೆಗೆ ಅವರ ವಾದ ಆಲಿಸುವುದಿಲ್ಲ ಎಂದಿರುವುದಾಗಿ livelaw.in ವರದಿ ಮಾಡಿದೆ.

ಅಭಿಜಿತ್‌ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ತಮ್ಮ ವಿರುದ್ದ ಲೈಂಗಿಕ ನಿಂದನಾತ್ಮಕ ಪೋಸ್ಟ್ ಹಾಕಿದ್ದಾರೆ ಎಂದು ಪತ್ರಕರ್ತೆಯರು ಆರೋಪಿಸಿದ್ದಾರೆ.

ಅಭಿಜಿತ್ ಅವರ ಎಕ್ಸ್  ಪೋಸ್ಟ್‌ಗಳನ್ನು ಪರಿಶೀಲಿಸಿದ ನ್ಯಾಯಮೂರ್ತಿ ಪುರುಷೀಂದ್ರ ಕುಮಾರ್ ಕೌರವ್ ಅವರು “ನೀವು ನಿಮ್ಮ ಪೋಸ್ಟ್ ಅನ್ನು ಸಮರ್ಥಿಸಿಕೊಳ್ಳುತ್ತೀರಾ? ಹಿನ್ನೆಲೆ ಏನೇ ಇರಲಿ, ಮಹಿಳೆಯರ ವಿರುದ್ದ ಈ ರೀತಿಯ ಪದಗಳನ್ನು ಬಳಸುವುದು ಈ ಸಮಾಜದಲ್ಲಿ ಅನುವದನೀಯವೇ? ಮೊದಲು ನೀವು ನಿಮ್ಮ ಪೋಸ್ಟ್ ತೆಗೆದು ಹಾಕಿ, ಆ ನಂತರ ನಿಮ್ಮ ಮಾತು ಕೇಳುತ್ತೇವೆ” ಎಂದು ಅಭಿಜಿತ್‌ ಅಯ್ಯರ್‌ಗೆ ಮೌಖಿವಾಗಿ ಹೇಳಿದ್ದಾರೆ.

ಅಯ್ಯರ್ ಪರ ಹಾಜರಿದ್ದ ವಕೀಲ ಜೈ ಅನಂತ್ ದೇಹಾದ್ರಾಯಿ ವಾದ ಮಂಡಿಸಿ “ನಮ್ಮ ಕಕ್ಷಿದಾರರ ಒಂದೇ ಒಂದು ಪೋಸ್ಟ್ ಕೂಡ ಪತ್ರಕರ್ತರಿಗೆ ವೈಯಕ್ತಿಕವಾಗಿ ಸಂಬಂಧಿಸಿಲ್ಲ” ಎಂದಿದ್ದಾರೆ.

ಈ ವಾದವನ್ನು ಒಪ್ಪಿಕೊಳ್ಳದ ನ್ಯಾಯಾಧೀಶರು, “ನೀವು ಆ ರೀತಿ ಅಂದುಕೊಂಡಿದ್ದರೆ, ಅದು ಪ್ರತಿವಾದಿಗಳಿಗೆ (ಪತ್ರಕರ್ತರಿಗೆ) ನೇರವಾಗಿ ಸಂಬಂಧಿಸಿವೆ ಎಂದು ನಾನು ಹೇಳುತ್ತೇನೆ” ಎಂದಿದ್ದಾರೆ.

ಈ ವೇಳೆ ಪ್ರತಿಕ್ರಿಯೆ ನೀಡಿದ ವಕೀಲ ದೇಹಾದ್ರಾಯಿ, “ನ್ಯೂಸ್ ಲಾಂಡ್ರಿ ಹೇಳಿಕೊಳ್ಳುವಂತಹ ಸಂಸ್ಥೆಯೇನು ಅಲ್ಲ. ಅದರ ಆದಾಯದ ಪ್ರಶ್ನಾರ್ಹ ಮೂಲಗಳ ಬಗ್ಗೆಯೂ ಅಯ್ಯರ್ ಹಲವಾರು ಟ್ವೀಟ್‌ಗಳನ್ನು ಮಾಡಿದ್ದಾರೆ” ಎಂದಿದ್ದಾರೆ.

ಮುಂದುವರಿದು, “ಆ ಸಂಸ್ಥೆಯ ಆದಾಯ ಮೂಲಗಳ ವಿಶ್ವಾಸಾರ್ಹತೆಯ ಬಗ್ಗೆ ಪ್ರಶ್ನೆಯಿದೆ. ಹಾಗಾಗಿ, ಅದನ್ನು ವೇಶ್ಯಾಗೃಹ ಎಂದು ಉಲ್ಲೇಖಿಸಲಾಗಿದೆ” ಎಂಬ ದಾಟಿಯಲ್ಲಿ ಅಯ್ಯರ್ ಪೋಸ್ಟ್ ಅನ್ನು ಸಮರ್ಥಿಸಿಕೊಂಡಿದ್ದಾರೆ.

ಇದಕ್ಕೆ ಖಾರವಾಗಿ ಪ್ರತಿಕ್ರಿಯೆ ನ್ಯಾಯಾಧೀಶರು,”ಪ್ರಶ್ನಾರ್ಹ ಆದಾಯ ಏನೇ ಇರಲಿ, ಇಂದು ಇಲ್ಲಿ ಪ್ರಶ್ನಿಸದ ಯಾವುದನ್ನೂ ಪರಿಶೀಲಿಸಲು ಸಾಧ್ಯವಿಲ್ಲ. ವೇಶ್ಯಾಗೃಹದ ವ್ಯಾಖ್ಯಾನವನ್ನು ಅವರು (ಅಭಿಜಿತ್ ಅಯ್ಯರ್) ಅರ್ಥಮಾಡಿಕೊಂಡಿದ್ದಾರಾ? ಪ್ರಶ್ನಾರ್ಹ ಮೂಲಗಳಿಂದ ಹಣಕಾಸಿನ ನೆರವು ಪಡೆಯುವ ಏನೇ ಆದರೂ ಅದನ್ನು ವೇಶ್ಯಾಗೃಹ ಎಂದು ಕರೆಯಬಹುದೇ?. ಪ್ರತಿವಾದಿಯ ವಿರುದ್ದ ಹಲವು ದೂರುಗಳು ಮತ್ತು ನಿಮ್ಮ ಕಕ್ಷಿದಾರರ ಪರ ಹಲವು ಸಮರ್ಥನೀಯ ವಾದಗಳು ನಿಮ್ಮಲ್ಲಿ ಇರಬಹುದು. ಹಾಗಾಂತ, ನಿಮ್ಮ ಕಕ್ಷಿದಾರರು ಬಳಕೆ ಮಾಡಿರುವ ಪದಗಳು ಸಮಾಜದಲ್ಲಿ ಸಮರ್ಥನೀಯವಲ್ಲ. ಯಾರಿಗೆ ಸಂಬಂಧಿಸದಿದ್ದರೂ, ಯಾವುದೇ ಕಲ್ಪನೆಯ ಮೇಲೆಯೂ ಸಾರ್ವಜನಿಕ ವೇದಿಕೆಯಲ್ಲಿ ಅಂತಹ ಪದ ಬಳಕೆ ಮಾಡಬಾರದು” ಎಂದು ಹೇಳಿದ್ದಾರೆ.

ಸಾರ್ವಜನಿಕ ವೇದಿಕೆಯಲ್ಲಿ ಮಹಿಳೆಯರ ವಿರುದ್ಧ ನಿಂದನೀಯ ಪದಗಳನ್ನು ಬಳಸಿದ್ದಕ್ಕಾಗಿ ಅಯ್ಯರ್ ವಿರುದ್ಧ ಸ್ವಯಂಪ್ರೇರಿತವಾಗಿ ಎಫ್‌ಐಆರ್ ದಾಖಲಿಸುವಂತೆ ಆದೇಶಿಸಲು ಪೀಠ ಮುಂದಾದಾಗ, ಪೋಸ್ಟ್‌ಗಳನ್ನು ತಕ್ಷಣವೇ ತೆಗೆದುಹಾಕಲು ಅಯ್ಯರ್ ಪರ ವಕೀಲರು ಒಪ್ಪಿಕೊಂಡರು. ನ್ಯಾಯಾಲಯ ವಿಚಾರಣೆಯನ್ನು ಮುಂದಿನ ವಾರಕ್ಕೆ ನಿಗದಿ ಮಾಡಿದ್ದಾರೆ.

ನ್ಯೂಸ್ ಲಾಂಡ್ರಿಯ ಪತ್ರಕರ್ತೆಯರು ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ಅಯ್ಯರ್‌ ಮಿತ್ರಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು, ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ತೆಗೆಯಬೇಕು ಮತ್ತು ಪರಿಹಾರವಾಗಿ 2 ಕೋಟಿ ರೂಪಾಯಿ ನೀಡಬೇಕು ಎಂದು ಕೋರಲಾಗಿದೆ.

ಮಹಿಳಾ ಪತ್ರಕರ್ತರಾದ ಮನೀಶಾ ಪಾಂಡೆ, ಇಶಿತಾ ಪ್ರದೀಪ್, ಸುಹಾಸಿನಿ ಬಿಸ್ವಾಸ್, ಸುಮೇಧಾ ಮಿತ್ತಲ್, ಟಿಸ್ತಾ ರಾಯ್ ಚೌಧರಿ, ತಸ್ನೀಮ್ ಫಾತಿಮಾ, ಪ್ರಿಯಾ ಜೈನ್, ಜಯಶ್ರೀ ಅರುಣಾಚಲಂ ಮತ್ತು ಪ್ರಿಯಾಲಿ ಧಿಂಗ್ರಾ ಮೊಕದ್ದಮೆ ಹೂಡಿದ್ದಾರೆ. ಪ್ರಕರಣದ ಪಕ್ಷಕಾರರಲ್ಲಿ ನ್ಯೂಸ್ ಲಾಂಡ್ರಿಯೂ ಸೇರಿದೆ.

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಅಭಿಜಿತ್ ಅಯ್ಯರ್ ಹಾಕಿರುವ ಪೋಸ್ಟ್‌ಗಳು ಮಾನಹಾನಿಕರ ಆಧಾರರಹಿತ ಮತ್ತು ತಪ್ಪು ಕಲ್ಪನೆಯಿಂದ ಕೂಡಿದ್ದು, ಮಹಿಳಾ ಉದ್ಯೋಗಿಗಳ ಘನತೆ ಮತ್ತು ಖ್ಯಾತಿಗೆ ಹಾನಿ ಮಾಡುವ ಉದ್ದೇಶ ಹೊಂದಿದೆ ಎಂದು ಮೊಕದ್ದಮೆಯಲ್ಲಿ ತಿಳಿಸಲಾಗಿದೆ.

ಪತ್ರಿಕೋದ್ಯಮದ ಕೆಲಸದ ಬಗ್ಗೆ ನ್ಯಾಯಯುತ ಟೀಕೆ ಸ್ವಾಗತಾರ್ಹವಾದರೂ, ಯಾರೂ ವೈಯಕ್ತಿಕವಾಗಿ ಅವಮಾನಕ್ಕೊಳಗಾಗಲು ಅರ್ಹರಲ್ಲ ಎಂದು ಪತ್ರಕರ್ತೆಯರು ಹೇಳಿದ್ದಾರೆ.

ಅಭಿಜಿತ್ ಅಯ್ಯರ್ ತನ್ನ ಸರಣಿ ಎಕ್ಸ್‌ ಪೋಸ್ಟ್‌ನಲ್ಲಿ ಮಹಿಳಾ ಉದ್ಯೋಗಿಗಳ ವಿರುದ್ದ ದುರುದ್ದೇಶಪೂರಿತ ಮತ್ತು ನಿಂದನೀಯ ಪದಗಳನ್ನು ಬಳಸಿದ್ದಾರೆ. ನಮ್ಮನ್ನು ವೇಶ್ಯೆಯರು ಮತ್ತು ನಾನು ಕೆಲಸ ಮಾಡುವ ಸ್ಥಳವನ್ನು ವೇಶ್ಯಾಗೃಹ ಎಂದು ಕರೆದಿರುವುದಾಗಿ ತಿಳಿಸಿದ್ದಾರೆ.

ವೈದ್ಯರಿಂದ ಹಿಡಿದು ವಕೀಲರು, ನ್ಯಾಯಾಧೀಶರು, ಶಿಕ್ಷಕರು, ವಿಜ್ಞಾನಿಗಳು, ವಾಸ್ತುಶಿಲ್ಪಿಗಳು, ಇಂಜಿನಿಯರ್‌ಗಳು ಮತ್ತು ಇತರರ ವರ್ಗದವರು ಎಂಬ ಗೌರವ ಇಲ್ಲದೆ, ನ್ಯೂಸ್ ಲಾಂಡ್ರಿಯ ಎಲ್ಲಾ ಚಂದಾದಾರರನ್ನು ‘ವೇಶ್ಯೆಯರು’ ಎಂದು ಉಲ್ಲೇಖಿಸಿರುವುದಾಗಿ ವಿವರಿಸಿದ್ದಾರೆ.

ಲೈಂಗಿಕ ಕಾರ್ಯಕರ್ತೆಯರಿಗೂ ಸಹ ಘನತೆ ಇದೆ. ‘ವೇಶ್ಯೆ’ ಎಂಬ ಪದವು ಮಹಿಳಾ ಪತ್ರಕರ್ತರ ಮೇಲಿನ ದಾಳಿ ಮಾತ್ರವಲ್ಲ, ಲೈಂಗಿಕ ಕಾರ್ಯಕರ್ತೆಯರ ವಿರುದ್ಧದ ಅಸಹನೆ ಮತ್ತು ಹಿಂಸಾತ್ಮಕ ಮನೋಭಾವವನ್ನು ಬಿಂಬಿಸುತ್ತದೆ. ಈಗಾಗಲೇ ಅನೇಕ ಲೈಂಗಿಕ ಕಾರ್ಯಕರ್ತೆಯರ ಈ ರೀತಿಯ ಹಿಂಸೆಗಳನ್ನು ಅನುಭವಿಸುತ್ತಿದ್ದಾರೆ ಎಂದು ತಮ್ಮ ಅರ್ಜಿಯಲ್ಲಿ ಪತ್ರಕರ್ತೆಯರ ಹೇಳಿದ್ದಾರೆ.

ಯಾವುದೇ ವ್ಯಕ್ತಿ/ ಮಹಿಳೆ ಅವಮಾನವೀಯ ಕೃತ್ಯಗಳಿಗೆ ಒಳಪಡಬೇಕಾದವರಲ್ಲ. ಯಾವುದೇ ವೃತ್ತಿಯನ್ನು ಅವಮಾನವೆಂದು ಶಸ್ತ್ರಸಜ್ಜಿತಗೊಳಿಸಲು ಸಾಧ್ಯವಿಲ್ಲ. ಅಭಿಜಿತ್ ಅಯ್ಯರ್ ಪೋಸ್ಟ್ ಪತ್ರಕರ್ತರಾಗಿರಲಿ ಅಥವಾ ಲೈಂಗಿಕ ಕಾರ್ಯಕರ್ತರಾಗಿರಲಿ ಮಹಿಳೆಯರ ಸಂಸ್ಥೆ, ಗೌರವವನ್ನು ಕಸಿದುಕೊಳ್ಳುತ್ತದೆ. ಅಭಿವ್ಯಕ್ತಿ ಸ್ವಾತಂತ್ರ್ಯ, ಪತ್ರಿಕೋದ್ಯಮ ಟೀಕೆ ಅಥವಾ ವಿಡಂಬನೆ ಅಥವಾ ನ್ಯಾಯಯುತ ಹೇಳಿಕೆ ಎಂದು ಇದನ್ನು ಸಮರ್ಥಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ಅಭಿಜಿತ್ ಅವರ ಪೋಸ್ಟ್ ನ್ಯೂಸ್ ಲಾಂಡ್ರಿಯ ಮಹಿಳಾ ವೃತ್ತಿಪರರನ್ನು ಅವಮಾನಿಸುವ ಗುರಿಯನ್ನು ಹೊಂದಿರುವ ಲೈಂಗಿಕ ನಿಂದನೆಗಳಾಗಿವೆ. ನ್ಯೂಸ್ ಲಾಂಡ್ರಿಯ ಮೇಲಿನ ದಾಳಿಯ ಹೊರತಾಗಿ, ಭಯ ಅಥವಾ ಲೈಂಗಿಕ ಕಿರುಕುಳವಿಲ್ಲದೆ ಕೆಲಸ ಮಾಡುವ ಮಹಿಳೆಯರ ಘನತೆ ಮತ್ತು ಹಕ್ಕಿನ ಮೇಲಿನ ನೇರ ದಾಳಿಯಾಗಿದೆ ಎಂದು ಹೇಳಿದ್ದಾರೆ.

ಪತ್ರಕರ್ತೆಯರು ವಕೀಲ ಉದ್ಧವ್ ಖನ್ನಾ ಮತ್ತು ಧ್ರುವ ವಿಗ್ ಮೂಲಕ ಈ ಮೊಕದ್ದಮೆ ಹೂಡಿದ್ದಾರೆ. ವರದಿಗಳ ಪ್ರಕಾರ, ನ್ಯಾಯಾಲಯದ ಕ್ಷಮೆ ಕೇಳಿರುವ ಅಭಿಜಿತ್ ಅಯ್ಯರ್ ಪರ ವಕೀಲ ದೇಹದ್ರಾಯ್‌ ಅವರು, 5 ಗಂಟೆಗಳ ಒಳಗೆ ಪೋಸ್ಟ್ ಅಳಿಸಿಹಾಕುವುದಾಗಿ ತಿಳಿಸಿದ್ದಾರೆ.

ನಗದು ಪತ್ತೆ ಪ್ರಕರಣ | ನ್ಯಾಯಮೂರ್ತಿ ವಿರುದ್ಧ ಎಫ್‌ಐಆರ್ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...