Homeಮುಖಪುಟದೆಹಲಿ ಹೈಕೋರ್ಟ್ ಛೀಮಾರಿ: ನ್ಯೂಸ್ ಲಾಂಡ್ರಿ ಪತ್ರಕರ್ತೆಯರ ವಿರುದ್ಧದ ಪೋಸ್ಟ್ ತೆಗೆಯಲು ಅಭಿಜಿತ್ ಅಯ್ಯರ್ ಒಪ್ಪಿಗೆ

ದೆಹಲಿ ಹೈಕೋರ್ಟ್ ಛೀಮಾರಿ: ನ್ಯೂಸ್ ಲಾಂಡ್ರಿ ಪತ್ರಕರ್ತೆಯರ ವಿರುದ್ಧದ ಪೋಸ್ಟ್ ತೆಗೆಯಲು ಅಭಿಜಿತ್ ಅಯ್ಯರ್ ಒಪ್ಪಿಗೆ

- Advertisement -
- Advertisement -

ಡಿಜಿಟಲ್ ಸುದ್ದಿ ವೇದಿಕೆ ನ್ಯೂಸ್‌ ಲಾಂಡ್ರಿಯ ಪತ್ರಕರ್ತೆಯರನ್ನು ‘ವೇಶ್ಯೆಯರು’ ಮತ್ತು ಅವರು ಕೆಲಸ ಮಾಡುವ ಸ್ಥಳವನ್ನು ‘ವೇಶ್ಯಾಗೃಹ’ ಎಂದು ನಿಂದಿಸಿ ಪೋಸ್ಟ್ ಹಾಕಿದ್ದ ರಾಜಕೀಯ ವಿಶ್ಲೇಷಕ ಅಭಿಜಿತ್‌ ಅಯ್ಯರ್‌ ಮಿತ್ರಗೆ ದೆಹಲಿ ಹೈಕೋರ್ಟ್‌ ಬುಧವಾರ (ಮೇ.21) ಛೀಮಾರಿ ಹಾಕಿದೆ ಎಂದು ವರದಿಯಾಗಿದೆ.

ನಿಂದನೀಯ ಪೋಸ್ಟ್‌ಗಳನ್ನು ತೆಗೆದು ಹಾಕುವಂತೆ ಅಭಿಜಿತ್‌ಗೆ ಸೂಚಿಸಿರುವ ಕೋರ್ಟ್, ಪೋಸ್ಟ್ ತೆಗೆಯುವರೆಗೆ ಅವರ ವಾದ ಆಲಿಸುವುದಿಲ್ಲ ಎಂದಿರುವುದಾಗಿ livelaw.in ವರದಿ ಮಾಡಿದೆ.

ಅಭಿಜಿತ್‌ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ತಮ್ಮ ವಿರುದ್ದ ಲೈಂಗಿಕ ನಿಂದನಾತ್ಮಕ ಪೋಸ್ಟ್ ಹಾಕಿದ್ದಾರೆ ಎಂದು ಪತ್ರಕರ್ತೆಯರು ಆರೋಪಿಸಿದ್ದಾರೆ.

ಅಭಿಜಿತ್ ಅವರ ಎಕ್ಸ್  ಪೋಸ್ಟ್‌ಗಳನ್ನು ಪರಿಶೀಲಿಸಿದ ನ್ಯಾಯಮೂರ್ತಿ ಪುರುಷೀಂದ್ರ ಕುಮಾರ್ ಕೌರವ್ ಅವರು “ನೀವು ನಿಮ್ಮ ಪೋಸ್ಟ್ ಅನ್ನು ಸಮರ್ಥಿಸಿಕೊಳ್ಳುತ್ತೀರಾ? ಹಿನ್ನೆಲೆ ಏನೇ ಇರಲಿ, ಮಹಿಳೆಯರ ವಿರುದ್ದ ಈ ರೀತಿಯ ಪದಗಳನ್ನು ಬಳಸುವುದು ಈ ಸಮಾಜದಲ್ಲಿ ಅನುವದನೀಯವೇ? ಮೊದಲು ನೀವು ನಿಮ್ಮ ಪೋಸ್ಟ್ ತೆಗೆದು ಹಾಕಿ, ಆ ನಂತರ ನಿಮ್ಮ ಮಾತು ಕೇಳುತ್ತೇವೆ” ಎಂದು ಅಭಿಜಿತ್‌ ಅಯ್ಯರ್‌ಗೆ ಮೌಖಿವಾಗಿ ಹೇಳಿದ್ದಾರೆ.

ಅಯ್ಯರ್ ಪರ ಹಾಜರಿದ್ದ ವಕೀಲ ಜೈ ಅನಂತ್ ದೇಹಾದ್ರಾಯಿ ವಾದ ಮಂಡಿಸಿ “ನಮ್ಮ ಕಕ್ಷಿದಾರರ ಒಂದೇ ಒಂದು ಪೋಸ್ಟ್ ಕೂಡ ಪತ್ರಕರ್ತರಿಗೆ ವೈಯಕ್ತಿಕವಾಗಿ ಸಂಬಂಧಿಸಿಲ್ಲ” ಎಂದಿದ್ದಾರೆ.

ಈ ವಾದವನ್ನು ಒಪ್ಪಿಕೊಳ್ಳದ ನ್ಯಾಯಾಧೀಶರು, “ನೀವು ಆ ರೀತಿ ಅಂದುಕೊಂಡಿದ್ದರೆ, ಅದು ಪ್ರತಿವಾದಿಗಳಿಗೆ (ಪತ್ರಕರ್ತರಿಗೆ) ನೇರವಾಗಿ ಸಂಬಂಧಿಸಿವೆ ಎಂದು ನಾನು ಹೇಳುತ್ತೇನೆ” ಎಂದಿದ್ದಾರೆ.

ಈ ವೇಳೆ ಪ್ರತಿಕ್ರಿಯೆ ನೀಡಿದ ವಕೀಲ ದೇಹಾದ್ರಾಯಿ, “ನ್ಯೂಸ್ ಲಾಂಡ್ರಿ ಹೇಳಿಕೊಳ್ಳುವಂತಹ ಸಂಸ್ಥೆಯೇನು ಅಲ್ಲ. ಅದರ ಆದಾಯದ ಪ್ರಶ್ನಾರ್ಹ ಮೂಲಗಳ ಬಗ್ಗೆಯೂ ಅಯ್ಯರ್ ಹಲವಾರು ಟ್ವೀಟ್‌ಗಳನ್ನು ಮಾಡಿದ್ದಾರೆ” ಎಂದಿದ್ದಾರೆ.

ಮುಂದುವರಿದು, “ಆ ಸಂಸ್ಥೆಯ ಆದಾಯ ಮೂಲಗಳ ವಿಶ್ವಾಸಾರ್ಹತೆಯ ಬಗ್ಗೆ ಪ್ರಶ್ನೆಯಿದೆ. ಹಾಗಾಗಿ, ಅದನ್ನು ವೇಶ್ಯಾಗೃಹ ಎಂದು ಉಲ್ಲೇಖಿಸಲಾಗಿದೆ” ಎಂಬ ದಾಟಿಯಲ್ಲಿ ಅಯ್ಯರ್ ಪೋಸ್ಟ್ ಅನ್ನು ಸಮರ್ಥಿಸಿಕೊಂಡಿದ್ದಾರೆ.

ಇದಕ್ಕೆ ಖಾರವಾಗಿ ಪ್ರತಿಕ್ರಿಯೆ ನ್ಯಾಯಾಧೀಶರು,”ಪ್ರಶ್ನಾರ್ಹ ಆದಾಯ ಏನೇ ಇರಲಿ, ಇಂದು ಇಲ್ಲಿ ಪ್ರಶ್ನಿಸದ ಯಾವುದನ್ನೂ ಪರಿಶೀಲಿಸಲು ಸಾಧ್ಯವಿಲ್ಲ. ವೇಶ್ಯಾಗೃಹದ ವ್ಯಾಖ್ಯಾನವನ್ನು ಅವರು (ಅಭಿಜಿತ್ ಅಯ್ಯರ್) ಅರ್ಥಮಾಡಿಕೊಂಡಿದ್ದಾರಾ? ಪ್ರಶ್ನಾರ್ಹ ಮೂಲಗಳಿಂದ ಹಣಕಾಸಿನ ನೆರವು ಪಡೆಯುವ ಏನೇ ಆದರೂ ಅದನ್ನು ವೇಶ್ಯಾಗೃಹ ಎಂದು ಕರೆಯಬಹುದೇ?. ಪ್ರತಿವಾದಿಯ ವಿರುದ್ದ ಹಲವು ದೂರುಗಳು ಮತ್ತು ನಿಮ್ಮ ಕಕ್ಷಿದಾರರ ಪರ ಹಲವು ಸಮರ್ಥನೀಯ ವಾದಗಳು ನಿಮ್ಮಲ್ಲಿ ಇರಬಹುದು. ಹಾಗಾಂತ, ನಿಮ್ಮ ಕಕ್ಷಿದಾರರು ಬಳಕೆ ಮಾಡಿರುವ ಪದಗಳು ಸಮಾಜದಲ್ಲಿ ಸಮರ್ಥನೀಯವಲ್ಲ. ಯಾರಿಗೆ ಸಂಬಂಧಿಸದಿದ್ದರೂ, ಯಾವುದೇ ಕಲ್ಪನೆಯ ಮೇಲೆಯೂ ಸಾರ್ವಜನಿಕ ವೇದಿಕೆಯಲ್ಲಿ ಅಂತಹ ಪದ ಬಳಕೆ ಮಾಡಬಾರದು” ಎಂದು ಹೇಳಿದ್ದಾರೆ.

ಸಾರ್ವಜನಿಕ ವೇದಿಕೆಯಲ್ಲಿ ಮಹಿಳೆಯರ ವಿರುದ್ಧ ನಿಂದನೀಯ ಪದಗಳನ್ನು ಬಳಸಿದ್ದಕ್ಕಾಗಿ ಅಯ್ಯರ್ ವಿರುದ್ಧ ಸ್ವಯಂಪ್ರೇರಿತವಾಗಿ ಎಫ್‌ಐಆರ್ ದಾಖಲಿಸುವಂತೆ ಆದೇಶಿಸಲು ಪೀಠ ಮುಂದಾದಾಗ, ಪೋಸ್ಟ್‌ಗಳನ್ನು ತಕ್ಷಣವೇ ತೆಗೆದುಹಾಕಲು ಅಯ್ಯರ್ ಪರ ವಕೀಲರು ಒಪ್ಪಿಕೊಂಡರು. ನ್ಯಾಯಾಲಯ ವಿಚಾರಣೆಯನ್ನು ಮುಂದಿನ ವಾರಕ್ಕೆ ನಿಗದಿ ಮಾಡಿದ್ದಾರೆ.

ನ್ಯೂಸ್ ಲಾಂಡ್ರಿಯ ಪತ್ರಕರ್ತೆಯರು ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ಅಯ್ಯರ್‌ ಮಿತ್ರಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು, ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ತೆಗೆಯಬೇಕು ಮತ್ತು ಪರಿಹಾರವಾಗಿ 2 ಕೋಟಿ ರೂಪಾಯಿ ನೀಡಬೇಕು ಎಂದು ಕೋರಲಾಗಿದೆ.

ಮಹಿಳಾ ಪತ್ರಕರ್ತರಾದ ಮನೀಶಾ ಪಾಂಡೆ, ಇಶಿತಾ ಪ್ರದೀಪ್, ಸುಹಾಸಿನಿ ಬಿಸ್ವಾಸ್, ಸುಮೇಧಾ ಮಿತ್ತಲ್, ಟಿಸ್ತಾ ರಾಯ್ ಚೌಧರಿ, ತಸ್ನೀಮ್ ಫಾತಿಮಾ, ಪ್ರಿಯಾ ಜೈನ್, ಜಯಶ್ರೀ ಅರುಣಾಚಲಂ ಮತ್ತು ಪ್ರಿಯಾಲಿ ಧಿಂಗ್ರಾ ಮೊಕದ್ದಮೆ ಹೂಡಿದ್ದಾರೆ. ಪ್ರಕರಣದ ಪಕ್ಷಕಾರರಲ್ಲಿ ನ್ಯೂಸ್ ಲಾಂಡ್ರಿಯೂ ಸೇರಿದೆ.

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಅಭಿಜಿತ್ ಅಯ್ಯರ್ ಹಾಕಿರುವ ಪೋಸ್ಟ್‌ಗಳು ಮಾನಹಾನಿಕರ ಆಧಾರರಹಿತ ಮತ್ತು ತಪ್ಪು ಕಲ್ಪನೆಯಿಂದ ಕೂಡಿದ್ದು, ಮಹಿಳಾ ಉದ್ಯೋಗಿಗಳ ಘನತೆ ಮತ್ತು ಖ್ಯಾತಿಗೆ ಹಾನಿ ಮಾಡುವ ಉದ್ದೇಶ ಹೊಂದಿದೆ ಎಂದು ಮೊಕದ್ದಮೆಯಲ್ಲಿ ತಿಳಿಸಲಾಗಿದೆ.

ಪತ್ರಿಕೋದ್ಯಮದ ಕೆಲಸದ ಬಗ್ಗೆ ನ್ಯಾಯಯುತ ಟೀಕೆ ಸ್ವಾಗತಾರ್ಹವಾದರೂ, ಯಾರೂ ವೈಯಕ್ತಿಕವಾಗಿ ಅವಮಾನಕ್ಕೊಳಗಾಗಲು ಅರ್ಹರಲ್ಲ ಎಂದು ಪತ್ರಕರ್ತೆಯರು ಹೇಳಿದ್ದಾರೆ.

ಅಭಿಜಿತ್ ಅಯ್ಯರ್ ತನ್ನ ಸರಣಿ ಎಕ್ಸ್‌ ಪೋಸ್ಟ್‌ನಲ್ಲಿ ಮಹಿಳಾ ಉದ್ಯೋಗಿಗಳ ವಿರುದ್ದ ದುರುದ್ದೇಶಪೂರಿತ ಮತ್ತು ನಿಂದನೀಯ ಪದಗಳನ್ನು ಬಳಸಿದ್ದಾರೆ. ನಮ್ಮನ್ನು ವೇಶ್ಯೆಯರು ಮತ್ತು ನಾನು ಕೆಲಸ ಮಾಡುವ ಸ್ಥಳವನ್ನು ವೇಶ್ಯಾಗೃಹ ಎಂದು ಕರೆದಿರುವುದಾಗಿ ತಿಳಿಸಿದ್ದಾರೆ.

ವೈದ್ಯರಿಂದ ಹಿಡಿದು ವಕೀಲರು, ನ್ಯಾಯಾಧೀಶರು, ಶಿಕ್ಷಕರು, ವಿಜ್ಞಾನಿಗಳು, ವಾಸ್ತುಶಿಲ್ಪಿಗಳು, ಇಂಜಿನಿಯರ್‌ಗಳು ಮತ್ತು ಇತರರ ವರ್ಗದವರು ಎಂಬ ಗೌರವ ಇಲ್ಲದೆ, ನ್ಯೂಸ್ ಲಾಂಡ್ರಿಯ ಎಲ್ಲಾ ಚಂದಾದಾರರನ್ನು ‘ವೇಶ್ಯೆಯರು’ ಎಂದು ಉಲ್ಲೇಖಿಸಿರುವುದಾಗಿ ವಿವರಿಸಿದ್ದಾರೆ.

ಲೈಂಗಿಕ ಕಾರ್ಯಕರ್ತೆಯರಿಗೂ ಸಹ ಘನತೆ ಇದೆ. ‘ವೇಶ್ಯೆ’ ಎಂಬ ಪದವು ಮಹಿಳಾ ಪತ್ರಕರ್ತರ ಮೇಲಿನ ದಾಳಿ ಮಾತ್ರವಲ್ಲ, ಲೈಂಗಿಕ ಕಾರ್ಯಕರ್ತೆಯರ ವಿರುದ್ಧದ ಅಸಹನೆ ಮತ್ತು ಹಿಂಸಾತ್ಮಕ ಮನೋಭಾವವನ್ನು ಬಿಂಬಿಸುತ್ತದೆ. ಈಗಾಗಲೇ ಅನೇಕ ಲೈಂಗಿಕ ಕಾರ್ಯಕರ್ತೆಯರ ಈ ರೀತಿಯ ಹಿಂಸೆಗಳನ್ನು ಅನುಭವಿಸುತ್ತಿದ್ದಾರೆ ಎಂದು ತಮ್ಮ ಅರ್ಜಿಯಲ್ಲಿ ಪತ್ರಕರ್ತೆಯರ ಹೇಳಿದ್ದಾರೆ.

ಯಾವುದೇ ವ್ಯಕ್ತಿ/ ಮಹಿಳೆ ಅವಮಾನವೀಯ ಕೃತ್ಯಗಳಿಗೆ ಒಳಪಡಬೇಕಾದವರಲ್ಲ. ಯಾವುದೇ ವೃತ್ತಿಯನ್ನು ಅವಮಾನವೆಂದು ಶಸ್ತ್ರಸಜ್ಜಿತಗೊಳಿಸಲು ಸಾಧ್ಯವಿಲ್ಲ. ಅಭಿಜಿತ್ ಅಯ್ಯರ್ ಪೋಸ್ಟ್ ಪತ್ರಕರ್ತರಾಗಿರಲಿ ಅಥವಾ ಲೈಂಗಿಕ ಕಾರ್ಯಕರ್ತರಾಗಿರಲಿ ಮಹಿಳೆಯರ ಸಂಸ್ಥೆ, ಗೌರವವನ್ನು ಕಸಿದುಕೊಳ್ಳುತ್ತದೆ. ಅಭಿವ್ಯಕ್ತಿ ಸ್ವಾತಂತ್ರ್ಯ, ಪತ್ರಿಕೋದ್ಯಮ ಟೀಕೆ ಅಥವಾ ವಿಡಂಬನೆ ಅಥವಾ ನ್ಯಾಯಯುತ ಹೇಳಿಕೆ ಎಂದು ಇದನ್ನು ಸಮರ್ಥಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ಅಭಿಜಿತ್ ಅವರ ಪೋಸ್ಟ್ ನ್ಯೂಸ್ ಲಾಂಡ್ರಿಯ ಮಹಿಳಾ ವೃತ್ತಿಪರರನ್ನು ಅವಮಾನಿಸುವ ಗುರಿಯನ್ನು ಹೊಂದಿರುವ ಲೈಂಗಿಕ ನಿಂದನೆಗಳಾಗಿವೆ. ನ್ಯೂಸ್ ಲಾಂಡ್ರಿಯ ಮೇಲಿನ ದಾಳಿಯ ಹೊರತಾಗಿ, ಭಯ ಅಥವಾ ಲೈಂಗಿಕ ಕಿರುಕುಳವಿಲ್ಲದೆ ಕೆಲಸ ಮಾಡುವ ಮಹಿಳೆಯರ ಘನತೆ ಮತ್ತು ಹಕ್ಕಿನ ಮೇಲಿನ ನೇರ ದಾಳಿಯಾಗಿದೆ ಎಂದು ಹೇಳಿದ್ದಾರೆ.

ಪತ್ರಕರ್ತೆಯರು ವಕೀಲ ಉದ್ಧವ್ ಖನ್ನಾ ಮತ್ತು ಧ್ರುವ ವಿಗ್ ಮೂಲಕ ಈ ಮೊಕದ್ದಮೆ ಹೂಡಿದ್ದಾರೆ. ವರದಿಗಳ ಪ್ರಕಾರ, ನ್ಯಾಯಾಲಯದ ಕ್ಷಮೆ ಕೇಳಿರುವ ಅಭಿಜಿತ್ ಅಯ್ಯರ್ ಪರ ವಕೀಲ ದೇಹದ್ರಾಯ್‌ ಅವರು, 5 ಗಂಟೆಗಳ ಒಳಗೆ ಪೋಸ್ಟ್ ಅಳಿಸಿಹಾಕುವುದಾಗಿ ತಿಳಿಸಿದ್ದಾರೆ.

ನಗದು ಪತ್ತೆ ಪ್ರಕರಣ | ನ್ಯಾಯಮೂರ್ತಿ ವಿರುದ್ಧ ಎಫ್‌ಐಆರ್ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...