Homeಮುಖಪುಟದೆಹಲಿ ಹೈಕೋರ್ಟ್ ಛೀಮಾರಿ: ನ್ಯೂಸ್ ಲಾಂಡ್ರಿ ಪತ್ರಕರ್ತೆಯರ ವಿರುದ್ಧದ ಪೋಸ್ಟ್ ತೆಗೆಯಲು ಅಭಿಜಿತ್ ಅಯ್ಯರ್ ಒಪ್ಪಿಗೆ

ದೆಹಲಿ ಹೈಕೋರ್ಟ್ ಛೀಮಾರಿ: ನ್ಯೂಸ್ ಲಾಂಡ್ರಿ ಪತ್ರಕರ್ತೆಯರ ವಿರುದ್ಧದ ಪೋಸ್ಟ್ ತೆಗೆಯಲು ಅಭಿಜಿತ್ ಅಯ್ಯರ್ ಒಪ್ಪಿಗೆ

- Advertisement -
- Advertisement -

ಡಿಜಿಟಲ್ ಸುದ್ದಿ ವೇದಿಕೆ ನ್ಯೂಸ್‌ ಲಾಂಡ್ರಿಯ ಪತ್ರಕರ್ತೆಯರನ್ನು ‘ವೇಶ್ಯೆಯರು’ ಮತ್ತು ಅವರು ಕೆಲಸ ಮಾಡುವ ಸ್ಥಳವನ್ನು ‘ವೇಶ್ಯಾಗೃಹ’ ಎಂದು ನಿಂದಿಸಿ ಪೋಸ್ಟ್ ಹಾಕಿದ್ದ ರಾಜಕೀಯ ವಿಶ್ಲೇಷಕ ಅಭಿಜಿತ್‌ ಅಯ್ಯರ್‌ ಮಿತ್ರಗೆ ದೆಹಲಿ ಹೈಕೋರ್ಟ್‌ ಬುಧವಾರ (ಮೇ.21) ಛೀಮಾರಿ ಹಾಕಿದೆ ಎಂದು ವರದಿಯಾಗಿದೆ.

ನಿಂದನೀಯ ಪೋಸ್ಟ್‌ಗಳನ್ನು ತೆಗೆದು ಹಾಕುವಂತೆ ಅಭಿಜಿತ್‌ಗೆ ಸೂಚಿಸಿರುವ ಕೋರ್ಟ್, ಪೋಸ್ಟ್ ತೆಗೆಯುವರೆಗೆ ಅವರ ವಾದ ಆಲಿಸುವುದಿಲ್ಲ ಎಂದಿರುವುದಾಗಿ livelaw.in ವರದಿ ಮಾಡಿದೆ.

ಅಭಿಜಿತ್‌ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ತಮ್ಮ ವಿರುದ್ದ ಲೈಂಗಿಕ ನಿಂದನಾತ್ಮಕ ಪೋಸ್ಟ್ ಹಾಕಿದ್ದಾರೆ ಎಂದು ಪತ್ರಕರ್ತೆಯರು ಆರೋಪಿಸಿದ್ದಾರೆ.

ಅಭಿಜಿತ್ ಅವರ ಎಕ್ಸ್  ಪೋಸ್ಟ್‌ಗಳನ್ನು ಪರಿಶೀಲಿಸಿದ ನ್ಯಾಯಮೂರ್ತಿ ಪುರುಷೀಂದ್ರ ಕುಮಾರ್ ಕೌರವ್ ಅವರು “ನೀವು ನಿಮ್ಮ ಪೋಸ್ಟ್ ಅನ್ನು ಸಮರ್ಥಿಸಿಕೊಳ್ಳುತ್ತೀರಾ? ಹಿನ್ನೆಲೆ ಏನೇ ಇರಲಿ, ಮಹಿಳೆಯರ ವಿರುದ್ದ ಈ ರೀತಿಯ ಪದಗಳನ್ನು ಬಳಸುವುದು ಈ ಸಮಾಜದಲ್ಲಿ ಅನುವದನೀಯವೇ? ಮೊದಲು ನೀವು ನಿಮ್ಮ ಪೋಸ್ಟ್ ತೆಗೆದು ಹಾಕಿ, ಆ ನಂತರ ನಿಮ್ಮ ಮಾತು ಕೇಳುತ್ತೇವೆ” ಎಂದು ಅಭಿಜಿತ್‌ ಅಯ್ಯರ್‌ಗೆ ಮೌಖಿವಾಗಿ ಹೇಳಿದ್ದಾರೆ.

ಅಯ್ಯರ್ ಪರ ಹಾಜರಿದ್ದ ವಕೀಲ ಜೈ ಅನಂತ್ ದೇಹಾದ್ರಾಯಿ ವಾದ ಮಂಡಿಸಿ “ನಮ್ಮ ಕಕ್ಷಿದಾರರ ಒಂದೇ ಒಂದು ಪೋಸ್ಟ್ ಕೂಡ ಪತ್ರಕರ್ತರಿಗೆ ವೈಯಕ್ತಿಕವಾಗಿ ಸಂಬಂಧಿಸಿಲ್ಲ” ಎಂದಿದ್ದಾರೆ.

ಈ ವಾದವನ್ನು ಒಪ್ಪಿಕೊಳ್ಳದ ನ್ಯಾಯಾಧೀಶರು, “ನೀವು ಆ ರೀತಿ ಅಂದುಕೊಂಡಿದ್ದರೆ, ಅದು ಪ್ರತಿವಾದಿಗಳಿಗೆ (ಪತ್ರಕರ್ತರಿಗೆ) ನೇರವಾಗಿ ಸಂಬಂಧಿಸಿವೆ ಎಂದು ನಾನು ಹೇಳುತ್ತೇನೆ” ಎಂದಿದ್ದಾರೆ.

ಈ ವೇಳೆ ಪ್ರತಿಕ್ರಿಯೆ ನೀಡಿದ ವಕೀಲ ದೇಹಾದ್ರಾಯಿ, “ನ್ಯೂಸ್ ಲಾಂಡ್ರಿ ಹೇಳಿಕೊಳ್ಳುವಂತಹ ಸಂಸ್ಥೆಯೇನು ಅಲ್ಲ. ಅದರ ಆದಾಯದ ಪ್ರಶ್ನಾರ್ಹ ಮೂಲಗಳ ಬಗ್ಗೆಯೂ ಅಯ್ಯರ್ ಹಲವಾರು ಟ್ವೀಟ್‌ಗಳನ್ನು ಮಾಡಿದ್ದಾರೆ” ಎಂದಿದ್ದಾರೆ.

ಮುಂದುವರಿದು, “ಆ ಸಂಸ್ಥೆಯ ಆದಾಯ ಮೂಲಗಳ ವಿಶ್ವಾಸಾರ್ಹತೆಯ ಬಗ್ಗೆ ಪ್ರಶ್ನೆಯಿದೆ. ಹಾಗಾಗಿ, ಅದನ್ನು ವೇಶ್ಯಾಗೃಹ ಎಂದು ಉಲ್ಲೇಖಿಸಲಾಗಿದೆ” ಎಂಬ ದಾಟಿಯಲ್ಲಿ ಅಯ್ಯರ್ ಪೋಸ್ಟ್ ಅನ್ನು ಸಮರ್ಥಿಸಿಕೊಂಡಿದ್ದಾರೆ.

ಇದಕ್ಕೆ ಖಾರವಾಗಿ ಪ್ರತಿಕ್ರಿಯೆ ನ್ಯಾಯಾಧೀಶರು,”ಪ್ರಶ್ನಾರ್ಹ ಆದಾಯ ಏನೇ ಇರಲಿ, ಇಂದು ಇಲ್ಲಿ ಪ್ರಶ್ನಿಸದ ಯಾವುದನ್ನೂ ಪರಿಶೀಲಿಸಲು ಸಾಧ್ಯವಿಲ್ಲ. ವೇಶ್ಯಾಗೃಹದ ವ್ಯಾಖ್ಯಾನವನ್ನು ಅವರು (ಅಭಿಜಿತ್ ಅಯ್ಯರ್) ಅರ್ಥಮಾಡಿಕೊಂಡಿದ್ದಾರಾ? ಪ್ರಶ್ನಾರ್ಹ ಮೂಲಗಳಿಂದ ಹಣಕಾಸಿನ ನೆರವು ಪಡೆಯುವ ಏನೇ ಆದರೂ ಅದನ್ನು ವೇಶ್ಯಾಗೃಹ ಎಂದು ಕರೆಯಬಹುದೇ?. ಪ್ರತಿವಾದಿಯ ವಿರುದ್ದ ಹಲವು ದೂರುಗಳು ಮತ್ತು ನಿಮ್ಮ ಕಕ್ಷಿದಾರರ ಪರ ಹಲವು ಸಮರ್ಥನೀಯ ವಾದಗಳು ನಿಮ್ಮಲ್ಲಿ ಇರಬಹುದು. ಹಾಗಾಂತ, ನಿಮ್ಮ ಕಕ್ಷಿದಾರರು ಬಳಕೆ ಮಾಡಿರುವ ಪದಗಳು ಸಮಾಜದಲ್ಲಿ ಸಮರ್ಥನೀಯವಲ್ಲ. ಯಾರಿಗೆ ಸಂಬಂಧಿಸದಿದ್ದರೂ, ಯಾವುದೇ ಕಲ್ಪನೆಯ ಮೇಲೆಯೂ ಸಾರ್ವಜನಿಕ ವೇದಿಕೆಯಲ್ಲಿ ಅಂತಹ ಪದ ಬಳಕೆ ಮಾಡಬಾರದು” ಎಂದು ಹೇಳಿದ್ದಾರೆ.

ಸಾರ್ವಜನಿಕ ವೇದಿಕೆಯಲ್ಲಿ ಮಹಿಳೆಯರ ವಿರುದ್ಧ ನಿಂದನೀಯ ಪದಗಳನ್ನು ಬಳಸಿದ್ದಕ್ಕಾಗಿ ಅಯ್ಯರ್ ವಿರುದ್ಧ ಸ್ವಯಂಪ್ರೇರಿತವಾಗಿ ಎಫ್‌ಐಆರ್ ದಾಖಲಿಸುವಂತೆ ಆದೇಶಿಸಲು ಪೀಠ ಮುಂದಾದಾಗ, ಪೋಸ್ಟ್‌ಗಳನ್ನು ತಕ್ಷಣವೇ ತೆಗೆದುಹಾಕಲು ಅಯ್ಯರ್ ಪರ ವಕೀಲರು ಒಪ್ಪಿಕೊಂಡರು. ನ್ಯಾಯಾಲಯ ವಿಚಾರಣೆಯನ್ನು ಮುಂದಿನ ವಾರಕ್ಕೆ ನಿಗದಿ ಮಾಡಿದ್ದಾರೆ.

ನ್ಯೂಸ್ ಲಾಂಡ್ರಿಯ ಪತ್ರಕರ್ತೆಯರು ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ಅಯ್ಯರ್‌ ಮಿತ್ರಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು, ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ತೆಗೆಯಬೇಕು ಮತ್ತು ಪರಿಹಾರವಾಗಿ 2 ಕೋಟಿ ರೂಪಾಯಿ ನೀಡಬೇಕು ಎಂದು ಕೋರಲಾಗಿದೆ.

ಮಹಿಳಾ ಪತ್ರಕರ್ತರಾದ ಮನೀಶಾ ಪಾಂಡೆ, ಇಶಿತಾ ಪ್ರದೀಪ್, ಸುಹಾಸಿನಿ ಬಿಸ್ವಾಸ್, ಸುಮೇಧಾ ಮಿತ್ತಲ್, ಟಿಸ್ತಾ ರಾಯ್ ಚೌಧರಿ, ತಸ್ನೀಮ್ ಫಾತಿಮಾ, ಪ್ರಿಯಾ ಜೈನ್, ಜಯಶ್ರೀ ಅರುಣಾಚಲಂ ಮತ್ತು ಪ್ರಿಯಾಲಿ ಧಿಂಗ್ರಾ ಮೊಕದ್ದಮೆ ಹೂಡಿದ್ದಾರೆ. ಪ್ರಕರಣದ ಪಕ್ಷಕಾರರಲ್ಲಿ ನ್ಯೂಸ್ ಲಾಂಡ್ರಿಯೂ ಸೇರಿದೆ.

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಅಭಿಜಿತ್ ಅಯ್ಯರ್ ಹಾಕಿರುವ ಪೋಸ್ಟ್‌ಗಳು ಮಾನಹಾನಿಕರ ಆಧಾರರಹಿತ ಮತ್ತು ತಪ್ಪು ಕಲ್ಪನೆಯಿಂದ ಕೂಡಿದ್ದು, ಮಹಿಳಾ ಉದ್ಯೋಗಿಗಳ ಘನತೆ ಮತ್ತು ಖ್ಯಾತಿಗೆ ಹಾನಿ ಮಾಡುವ ಉದ್ದೇಶ ಹೊಂದಿದೆ ಎಂದು ಮೊಕದ್ದಮೆಯಲ್ಲಿ ತಿಳಿಸಲಾಗಿದೆ.

ಪತ್ರಿಕೋದ್ಯಮದ ಕೆಲಸದ ಬಗ್ಗೆ ನ್ಯಾಯಯುತ ಟೀಕೆ ಸ್ವಾಗತಾರ್ಹವಾದರೂ, ಯಾರೂ ವೈಯಕ್ತಿಕವಾಗಿ ಅವಮಾನಕ್ಕೊಳಗಾಗಲು ಅರ್ಹರಲ್ಲ ಎಂದು ಪತ್ರಕರ್ತೆಯರು ಹೇಳಿದ್ದಾರೆ.

ಅಭಿಜಿತ್ ಅಯ್ಯರ್ ತನ್ನ ಸರಣಿ ಎಕ್ಸ್‌ ಪೋಸ್ಟ್‌ನಲ್ಲಿ ಮಹಿಳಾ ಉದ್ಯೋಗಿಗಳ ವಿರುದ್ದ ದುರುದ್ದೇಶಪೂರಿತ ಮತ್ತು ನಿಂದನೀಯ ಪದಗಳನ್ನು ಬಳಸಿದ್ದಾರೆ. ನಮ್ಮನ್ನು ವೇಶ್ಯೆಯರು ಮತ್ತು ನಾನು ಕೆಲಸ ಮಾಡುವ ಸ್ಥಳವನ್ನು ವೇಶ್ಯಾಗೃಹ ಎಂದು ಕರೆದಿರುವುದಾಗಿ ತಿಳಿಸಿದ್ದಾರೆ.

ವೈದ್ಯರಿಂದ ಹಿಡಿದು ವಕೀಲರು, ನ್ಯಾಯಾಧೀಶರು, ಶಿಕ್ಷಕರು, ವಿಜ್ಞಾನಿಗಳು, ವಾಸ್ತುಶಿಲ್ಪಿಗಳು, ಇಂಜಿನಿಯರ್‌ಗಳು ಮತ್ತು ಇತರರ ವರ್ಗದವರು ಎಂಬ ಗೌರವ ಇಲ್ಲದೆ, ನ್ಯೂಸ್ ಲಾಂಡ್ರಿಯ ಎಲ್ಲಾ ಚಂದಾದಾರರನ್ನು ‘ವೇಶ್ಯೆಯರು’ ಎಂದು ಉಲ್ಲೇಖಿಸಿರುವುದಾಗಿ ವಿವರಿಸಿದ್ದಾರೆ.

ಲೈಂಗಿಕ ಕಾರ್ಯಕರ್ತೆಯರಿಗೂ ಸಹ ಘನತೆ ಇದೆ. ‘ವೇಶ್ಯೆ’ ಎಂಬ ಪದವು ಮಹಿಳಾ ಪತ್ರಕರ್ತರ ಮೇಲಿನ ದಾಳಿ ಮಾತ್ರವಲ್ಲ, ಲೈಂಗಿಕ ಕಾರ್ಯಕರ್ತೆಯರ ವಿರುದ್ಧದ ಅಸಹನೆ ಮತ್ತು ಹಿಂಸಾತ್ಮಕ ಮನೋಭಾವವನ್ನು ಬಿಂಬಿಸುತ್ತದೆ. ಈಗಾಗಲೇ ಅನೇಕ ಲೈಂಗಿಕ ಕಾರ್ಯಕರ್ತೆಯರ ಈ ರೀತಿಯ ಹಿಂಸೆಗಳನ್ನು ಅನುಭವಿಸುತ್ತಿದ್ದಾರೆ ಎಂದು ತಮ್ಮ ಅರ್ಜಿಯಲ್ಲಿ ಪತ್ರಕರ್ತೆಯರ ಹೇಳಿದ್ದಾರೆ.

ಯಾವುದೇ ವ್ಯಕ್ತಿ/ ಮಹಿಳೆ ಅವಮಾನವೀಯ ಕೃತ್ಯಗಳಿಗೆ ಒಳಪಡಬೇಕಾದವರಲ್ಲ. ಯಾವುದೇ ವೃತ್ತಿಯನ್ನು ಅವಮಾನವೆಂದು ಶಸ್ತ್ರಸಜ್ಜಿತಗೊಳಿಸಲು ಸಾಧ್ಯವಿಲ್ಲ. ಅಭಿಜಿತ್ ಅಯ್ಯರ್ ಪೋಸ್ಟ್ ಪತ್ರಕರ್ತರಾಗಿರಲಿ ಅಥವಾ ಲೈಂಗಿಕ ಕಾರ್ಯಕರ್ತರಾಗಿರಲಿ ಮಹಿಳೆಯರ ಸಂಸ್ಥೆ, ಗೌರವವನ್ನು ಕಸಿದುಕೊಳ್ಳುತ್ತದೆ. ಅಭಿವ್ಯಕ್ತಿ ಸ್ವಾತಂತ್ರ್ಯ, ಪತ್ರಿಕೋದ್ಯಮ ಟೀಕೆ ಅಥವಾ ವಿಡಂಬನೆ ಅಥವಾ ನ್ಯಾಯಯುತ ಹೇಳಿಕೆ ಎಂದು ಇದನ್ನು ಸಮರ್ಥಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ಅಭಿಜಿತ್ ಅವರ ಪೋಸ್ಟ್ ನ್ಯೂಸ್ ಲಾಂಡ್ರಿಯ ಮಹಿಳಾ ವೃತ್ತಿಪರರನ್ನು ಅವಮಾನಿಸುವ ಗುರಿಯನ್ನು ಹೊಂದಿರುವ ಲೈಂಗಿಕ ನಿಂದನೆಗಳಾಗಿವೆ. ನ್ಯೂಸ್ ಲಾಂಡ್ರಿಯ ಮೇಲಿನ ದಾಳಿಯ ಹೊರತಾಗಿ, ಭಯ ಅಥವಾ ಲೈಂಗಿಕ ಕಿರುಕುಳವಿಲ್ಲದೆ ಕೆಲಸ ಮಾಡುವ ಮಹಿಳೆಯರ ಘನತೆ ಮತ್ತು ಹಕ್ಕಿನ ಮೇಲಿನ ನೇರ ದಾಳಿಯಾಗಿದೆ ಎಂದು ಹೇಳಿದ್ದಾರೆ.

ಪತ್ರಕರ್ತೆಯರು ವಕೀಲ ಉದ್ಧವ್ ಖನ್ನಾ ಮತ್ತು ಧ್ರುವ ವಿಗ್ ಮೂಲಕ ಈ ಮೊಕದ್ದಮೆ ಹೂಡಿದ್ದಾರೆ. ವರದಿಗಳ ಪ್ರಕಾರ, ನ್ಯಾಯಾಲಯದ ಕ್ಷಮೆ ಕೇಳಿರುವ ಅಭಿಜಿತ್ ಅಯ್ಯರ್ ಪರ ವಕೀಲ ದೇಹದ್ರಾಯ್‌ ಅವರು, 5 ಗಂಟೆಗಳ ಒಳಗೆ ಪೋಸ್ಟ್ ಅಳಿಸಿಹಾಕುವುದಾಗಿ ತಿಳಿಸಿದ್ದಾರೆ.

ನಗದು ಪತ್ತೆ ಪ್ರಕರಣ | ನ್ಯಾಯಮೂರ್ತಿ ವಿರುದ್ಧ ಎಫ್‌ಐಆರ್ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...