Homeಮುಖಪುಟದೆಹಲಿ ಹೈಕೋರ್ಟ್ ಛೀಮಾರಿ: ನ್ಯೂಸ್ ಲಾಂಡ್ರಿ ಪತ್ರಕರ್ತೆಯರ ವಿರುದ್ಧದ ಪೋಸ್ಟ್ ತೆಗೆಯಲು ಅಭಿಜಿತ್ ಅಯ್ಯರ್ ಒಪ್ಪಿಗೆ

ದೆಹಲಿ ಹೈಕೋರ್ಟ್ ಛೀಮಾರಿ: ನ್ಯೂಸ್ ಲಾಂಡ್ರಿ ಪತ್ರಕರ್ತೆಯರ ವಿರುದ್ಧದ ಪೋಸ್ಟ್ ತೆಗೆಯಲು ಅಭಿಜಿತ್ ಅಯ್ಯರ್ ಒಪ್ಪಿಗೆ

- Advertisement -
- Advertisement -

ಡಿಜಿಟಲ್ ಸುದ್ದಿ ವೇದಿಕೆ ನ್ಯೂಸ್‌ ಲಾಂಡ್ರಿಯ ಪತ್ರಕರ್ತೆಯರನ್ನು ‘ವೇಶ್ಯೆಯರು’ ಮತ್ತು ಅವರು ಕೆಲಸ ಮಾಡುವ ಸ್ಥಳವನ್ನು ‘ವೇಶ್ಯಾಗೃಹ’ ಎಂದು ನಿಂದಿಸಿ ಪೋಸ್ಟ್ ಹಾಕಿದ್ದ ರಾಜಕೀಯ ವಿಶ್ಲೇಷಕ ಅಭಿಜಿತ್‌ ಅಯ್ಯರ್‌ ಮಿತ್ರಗೆ ದೆಹಲಿ ಹೈಕೋರ್ಟ್‌ ಬುಧವಾರ (ಮೇ.21) ಛೀಮಾರಿ ಹಾಕಿದೆ ಎಂದು ವರದಿಯಾಗಿದೆ.

ನಿಂದನೀಯ ಪೋಸ್ಟ್‌ಗಳನ್ನು ತೆಗೆದು ಹಾಕುವಂತೆ ಅಭಿಜಿತ್‌ಗೆ ಸೂಚಿಸಿರುವ ಕೋರ್ಟ್, ಪೋಸ್ಟ್ ತೆಗೆಯುವರೆಗೆ ಅವರ ವಾದ ಆಲಿಸುವುದಿಲ್ಲ ಎಂದಿರುವುದಾಗಿ livelaw.in ವರದಿ ಮಾಡಿದೆ.

ಅಭಿಜಿತ್‌ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ತಮ್ಮ ವಿರುದ್ದ ಲೈಂಗಿಕ ನಿಂದನಾತ್ಮಕ ಪೋಸ್ಟ್ ಹಾಕಿದ್ದಾರೆ ಎಂದು ಪತ್ರಕರ್ತೆಯರು ಆರೋಪಿಸಿದ್ದಾರೆ.

ಅಭಿಜಿತ್ ಅವರ ಎಕ್ಸ್  ಪೋಸ್ಟ್‌ಗಳನ್ನು ಪರಿಶೀಲಿಸಿದ ನ್ಯಾಯಮೂರ್ತಿ ಪುರುಷೀಂದ್ರ ಕುಮಾರ್ ಕೌರವ್ ಅವರು “ನೀವು ನಿಮ್ಮ ಪೋಸ್ಟ್ ಅನ್ನು ಸಮರ್ಥಿಸಿಕೊಳ್ಳುತ್ತೀರಾ? ಹಿನ್ನೆಲೆ ಏನೇ ಇರಲಿ, ಮಹಿಳೆಯರ ವಿರುದ್ದ ಈ ರೀತಿಯ ಪದಗಳನ್ನು ಬಳಸುವುದು ಈ ಸಮಾಜದಲ್ಲಿ ಅನುವದನೀಯವೇ? ಮೊದಲು ನೀವು ನಿಮ್ಮ ಪೋಸ್ಟ್ ತೆಗೆದು ಹಾಕಿ, ಆ ನಂತರ ನಿಮ್ಮ ಮಾತು ಕೇಳುತ್ತೇವೆ” ಎಂದು ಅಭಿಜಿತ್‌ ಅಯ್ಯರ್‌ಗೆ ಮೌಖಿವಾಗಿ ಹೇಳಿದ್ದಾರೆ.

ಅಯ್ಯರ್ ಪರ ಹಾಜರಿದ್ದ ವಕೀಲ ಜೈ ಅನಂತ್ ದೇಹಾದ್ರಾಯಿ ವಾದ ಮಂಡಿಸಿ “ನಮ್ಮ ಕಕ್ಷಿದಾರರ ಒಂದೇ ಒಂದು ಪೋಸ್ಟ್ ಕೂಡ ಪತ್ರಕರ್ತರಿಗೆ ವೈಯಕ್ತಿಕವಾಗಿ ಸಂಬಂಧಿಸಿಲ್ಲ” ಎಂದಿದ್ದಾರೆ.

ಈ ವಾದವನ್ನು ಒಪ್ಪಿಕೊಳ್ಳದ ನ್ಯಾಯಾಧೀಶರು, “ನೀವು ಆ ರೀತಿ ಅಂದುಕೊಂಡಿದ್ದರೆ, ಅದು ಪ್ರತಿವಾದಿಗಳಿಗೆ (ಪತ್ರಕರ್ತರಿಗೆ) ನೇರವಾಗಿ ಸಂಬಂಧಿಸಿವೆ ಎಂದು ನಾನು ಹೇಳುತ್ತೇನೆ” ಎಂದಿದ್ದಾರೆ.

ಈ ವೇಳೆ ಪ್ರತಿಕ್ರಿಯೆ ನೀಡಿದ ವಕೀಲ ದೇಹಾದ್ರಾಯಿ, “ನ್ಯೂಸ್ ಲಾಂಡ್ರಿ ಹೇಳಿಕೊಳ್ಳುವಂತಹ ಸಂಸ್ಥೆಯೇನು ಅಲ್ಲ. ಅದರ ಆದಾಯದ ಪ್ರಶ್ನಾರ್ಹ ಮೂಲಗಳ ಬಗ್ಗೆಯೂ ಅಯ್ಯರ್ ಹಲವಾರು ಟ್ವೀಟ್‌ಗಳನ್ನು ಮಾಡಿದ್ದಾರೆ” ಎಂದಿದ್ದಾರೆ.

ಮುಂದುವರಿದು, “ಆ ಸಂಸ್ಥೆಯ ಆದಾಯ ಮೂಲಗಳ ವಿಶ್ವಾಸಾರ್ಹತೆಯ ಬಗ್ಗೆ ಪ್ರಶ್ನೆಯಿದೆ. ಹಾಗಾಗಿ, ಅದನ್ನು ವೇಶ್ಯಾಗೃಹ ಎಂದು ಉಲ್ಲೇಖಿಸಲಾಗಿದೆ” ಎಂಬ ದಾಟಿಯಲ್ಲಿ ಅಯ್ಯರ್ ಪೋಸ್ಟ್ ಅನ್ನು ಸಮರ್ಥಿಸಿಕೊಂಡಿದ್ದಾರೆ.

ಇದಕ್ಕೆ ಖಾರವಾಗಿ ಪ್ರತಿಕ್ರಿಯೆ ನ್ಯಾಯಾಧೀಶರು,”ಪ್ರಶ್ನಾರ್ಹ ಆದಾಯ ಏನೇ ಇರಲಿ, ಇಂದು ಇಲ್ಲಿ ಪ್ರಶ್ನಿಸದ ಯಾವುದನ್ನೂ ಪರಿಶೀಲಿಸಲು ಸಾಧ್ಯವಿಲ್ಲ. ವೇಶ್ಯಾಗೃಹದ ವ್ಯಾಖ್ಯಾನವನ್ನು ಅವರು (ಅಭಿಜಿತ್ ಅಯ್ಯರ್) ಅರ್ಥಮಾಡಿಕೊಂಡಿದ್ದಾರಾ? ಪ್ರಶ್ನಾರ್ಹ ಮೂಲಗಳಿಂದ ಹಣಕಾಸಿನ ನೆರವು ಪಡೆಯುವ ಏನೇ ಆದರೂ ಅದನ್ನು ವೇಶ್ಯಾಗೃಹ ಎಂದು ಕರೆಯಬಹುದೇ?. ಪ್ರತಿವಾದಿಯ ವಿರುದ್ದ ಹಲವು ದೂರುಗಳು ಮತ್ತು ನಿಮ್ಮ ಕಕ್ಷಿದಾರರ ಪರ ಹಲವು ಸಮರ್ಥನೀಯ ವಾದಗಳು ನಿಮ್ಮಲ್ಲಿ ಇರಬಹುದು. ಹಾಗಾಂತ, ನಿಮ್ಮ ಕಕ್ಷಿದಾರರು ಬಳಕೆ ಮಾಡಿರುವ ಪದಗಳು ಸಮಾಜದಲ್ಲಿ ಸಮರ್ಥನೀಯವಲ್ಲ. ಯಾರಿಗೆ ಸಂಬಂಧಿಸದಿದ್ದರೂ, ಯಾವುದೇ ಕಲ್ಪನೆಯ ಮೇಲೆಯೂ ಸಾರ್ವಜನಿಕ ವೇದಿಕೆಯಲ್ಲಿ ಅಂತಹ ಪದ ಬಳಕೆ ಮಾಡಬಾರದು” ಎಂದು ಹೇಳಿದ್ದಾರೆ.

ಸಾರ್ವಜನಿಕ ವೇದಿಕೆಯಲ್ಲಿ ಮಹಿಳೆಯರ ವಿರುದ್ಧ ನಿಂದನೀಯ ಪದಗಳನ್ನು ಬಳಸಿದ್ದಕ್ಕಾಗಿ ಅಯ್ಯರ್ ವಿರುದ್ಧ ಸ್ವಯಂಪ್ರೇರಿತವಾಗಿ ಎಫ್‌ಐಆರ್ ದಾಖಲಿಸುವಂತೆ ಆದೇಶಿಸಲು ಪೀಠ ಮುಂದಾದಾಗ, ಪೋಸ್ಟ್‌ಗಳನ್ನು ತಕ್ಷಣವೇ ತೆಗೆದುಹಾಕಲು ಅಯ್ಯರ್ ಪರ ವಕೀಲರು ಒಪ್ಪಿಕೊಂಡರು. ನ್ಯಾಯಾಲಯ ವಿಚಾರಣೆಯನ್ನು ಮುಂದಿನ ವಾರಕ್ಕೆ ನಿಗದಿ ಮಾಡಿದ್ದಾರೆ.

ನ್ಯೂಸ್ ಲಾಂಡ್ರಿಯ ಪತ್ರಕರ್ತೆಯರು ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ಅಯ್ಯರ್‌ ಮಿತ್ರಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು, ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ತೆಗೆಯಬೇಕು ಮತ್ತು ಪರಿಹಾರವಾಗಿ 2 ಕೋಟಿ ರೂಪಾಯಿ ನೀಡಬೇಕು ಎಂದು ಕೋರಲಾಗಿದೆ.

ಮಹಿಳಾ ಪತ್ರಕರ್ತರಾದ ಮನೀಶಾ ಪಾಂಡೆ, ಇಶಿತಾ ಪ್ರದೀಪ್, ಸುಹಾಸಿನಿ ಬಿಸ್ವಾಸ್, ಸುಮೇಧಾ ಮಿತ್ತಲ್, ಟಿಸ್ತಾ ರಾಯ್ ಚೌಧರಿ, ತಸ್ನೀಮ್ ಫಾತಿಮಾ, ಪ್ರಿಯಾ ಜೈನ್, ಜಯಶ್ರೀ ಅರುಣಾಚಲಂ ಮತ್ತು ಪ್ರಿಯಾಲಿ ಧಿಂಗ್ರಾ ಮೊಕದ್ದಮೆ ಹೂಡಿದ್ದಾರೆ. ಪ್ರಕರಣದ ಪಕ್ಷಕಾರರಲ್ಲಿ ನ್ಯೂಸ್ ಲಾಂಡ್ರಿಯೂ ಸೇರಿದೆ.

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಅಭಿಜಿತ್ ಅಯ್ಯರ್ ಹಾಕಿರುವ ಪೋಸ್ಟ್‌ಗಳು ಮಾನಹಾನಿಕರ ಆಧಾರರಹಿತ ಮತ್ತು ತಪ್ಪು ಕಲ್ಪನೆಯಿಂದ ಕೂಡಿದ್ದು, ಮಹಿಳಾ ಉದ್ಯೋಗಿಗಳ ಘನತೆ ಮತ್ತು ಖ್ಯಾತಿಗೆ ಹಾನಿ ಮಾಡುವ ಉದ್ದೇಶ ಹೊಂದಿದೆ ಎಂದು ಮೊಕದ್ದಮೆಯಲ್ಲಿ ತಿಳಿಸಲಾಗಿದೆ.

ಪತ್ರಿಕೋದ್ಯಮದ ಕೆಲಸದ ಬಗ್ಗೆ ನ್ಯಾಯಯುತ ಟೀಕೆ ಸ್ವಾಗತಾರ್ಹವಾದರೂ, ಯಾರೂ ವೈಯಕ್ತಿಕವಾಗಿ ಅವಮಾನಕ್ಕೊಳಗಾಗಲು ಅರ್ಹರಲ್ಲ ಎಂದು ಪತ್ರಕರ್ತೆಯರು ಹೇಳಿದ್ದಾರೆ.

ಅಭಿಜಿತ್ ಅಯ್ಯರ್ ತನ್ನ ಸರಣಿ ಎಕ್ಸ್‌ ಪೋಸ್ಟ್‌ನಲ್ಲಿ ಮಹಿಳಾ ಉದ್ಯೋಗಿಗಳ ವಿರುದ್ದ ದುರುದ್ದೇಶಪೂರಿತ ಮತ್ತು ನಿಂದನೀಯ ಪದಗಳನ್ನು ಬಳಸಿದ್ದಾರೆ. ನಮ್ಮನ್ನು ವೇಶ್ಯೆಯರು ಮತ್ತು ನಾನು ಕೆಲಸ ಮಾಡುವ ಸ್ಥಳವನ್ನು ವೇಶ್ಯಾಗೃಹ ಎಂದು ಕರೆದಿರುವುದಾಗಿ ತಿಳಿಸಿದ್ದಾರೆ.

ವೈದ್ಯರಿಂದ ಹಿಡಿದು ವಕೀಲರು, ನ್ಯಾಯಾಧೀಶರು, ಶಿಕ್ಷಕರು, ವಿಜ್ಞಾನಿಗಳು, ವಾಸ್ತುಶಿಲ್ಪಿಗಳು, ಇಂಜಿನಿಯರ್‌ಗಳು ಮತ್ತು ಇತರರ ವರ್ಗದವರು ಎಂಬ ಗೌರವ ಇಲ್ಲದೆ, ನ್ಯೂಸ್ ಲಾಂಡ್ರಿಯ ಎಲ್ಲಾ ಚಂದಾದಾರರನ್ನು ‘ವೇಶ್ಯೆಯರು’ ಎಂದು ಉಲ್ಲೇಖಿಸಿರುವುದಾಗಿ ವಿವರಿಸಿದ್ದಾರೆ.

ಲೈಂಗಿಕ ಕಾರ್ಯಕರ್ತೆಯರಿಗೂ ಸಹ ಘನತೆ ಇದೆ. ‘ವೇಶ್ಯೆ’ ಎಂಬ ಪದವು ಮಹಿಳಾ ಪತ್ರಕರ್ತರ ಮೇಲಿನ ದಾಳಿ ಮಾತ್ರವಲ್ಲ, ಲೈಂಗಿಕ ಕಾರ್ಯಕರ್ತೆಯರ ವಿರುದ್ಧದ ಅಸಹನೆ ಮತ್ತು ಹಿಂಸಾತ್ಮಕ ಮನೋಭಾವವನ್ನು ಬಿಂಬಿಸುತ್ತದೆ. ಈಗಾಗಲೇ ಅನೇಕ ಲೈಂಗಿಕ ಕಾರ್ಯಕರ್ತೆಯರ ಈ ರೀತಿಯ ಹಿಂಸೆಗಳನ್ನು ಅನುಭವಿಸುತ್ತಿದ್ದಾರೆ ಎಂದು ತಮ್ಮ ಅರ್ಜಿಯಲ್ಲಿ ಪತ್ರಕರ್ತೆಯರ ಹೇಳಿದ್ದಾರೆ.

ಯಾವುದೇ ವ್ಯಕ್ತಿ/ ಮಹಿಳೆ ಅವಮಾನವೀಯ ಕೃತ್ಯಗಳಿಗೆ ಒಳಪಡಬೇಕಾದವರಲ್ಲ. ಯಾವುದೇ ವೃತ್ತಿಯನ್ನು ಅವಮಾನವೆಂದು ಶಸ್ತ್ರಸಜ್ಜಿತಗೊಳಿಸಲು ಸಾಧ್ಯವಿಲ್ಲ. ಅಭಿಜಿತ್ ಅಯ್ಯರ್ ಪೋಸ್ಟ್ ಪತ್ರಕರ್ತರಾಗಿರಲಿ ಅಥವಾ ಲೈಂಗಿಕ ಕಾರ್ಯಕರ್ತರಾಗಿರಲಿ ಮಹಿಳೆಯರ ಸಂಸ್ಥೆ, ಗೌರವವನ್ನು ಕಸಿದುಕೊಳ್ಳುತ್ತದೆ. ಅಭಿವ್ಯಕ್ತಿ ಸ್ವಾತಂತ್ರ್ಯ, ಪತ್ರಿಕೋದ್ಯಮ ಟೀಕೆ ಅಥವಾ ವಿಡಂಬನೆ ಅಥವಾ ನ್ಯಾಯಯುತ ಹೇಳಿಕೆ ಎಂದು ಇದನ್ನು ಸಮರ್ಥಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ಅಭಿಜಿತ್ ಅವರ ಪೋಸ್ಟ್ ನ್ಯೂಸ್ ಲಾಂಡ್ರಿಯ ಮಹಿಳಾ ವೃತ್ತಿಪರರನ್ನು ಅವಮಾನಿಸುವ ಗುರಿಯನ್ನು ಹೊಂದಿರುವ ಲೈಂಗಿಕ ನಿಂದನೆಗಳಾಗಿವೆ. ನ್ಯೂಸ್ ಲಾಂಡ್ರಿಯ ಮೇಲಿನ ದಾಳಿಯ ಹೊರತಾಗಿ, ಭಯ ಅಥವಾ ಲೈಂಗಿಕ ಕಿರುಕುಳವಿಲ್ಲದೆ ಕೆಲಸ ಮಾಡುವ ಮಹಿಳೆಯರ ಘನತೆ ಮತ್ತು ಹಕ್ಕಿನ ಮೇಲಿನ ನೇರ ದಾಳಿಯಾಗಿದೆ ಎಂದು ಹೇಳಿದ್ದಾರೆ.

ಪತ್ರಕರ್ತೆಯರು ವಕೀಲ ಉದ್ಧವ್ ಖನ್ನಾ ಮತ್ತು ಧ್ರುವ ವಿಗ್ ಮೂಲಕ ಈ ಮೊಕದ್ದಮೆ ಹೂಡಿದ್ದಾರೆ. ವರದಿಗಳ ಪ್ರಕಾರ, ನ್ಯಾಯಾಲಯದ ಕ್ಷಮೆ ಕೇಳಿರುವ ಅಭಿಜಿತ್ ಅಯ್ಯರ್ ಪರ ವಕೀಲ ದೇಹದ್ರಾಯ್‌ ಅವರು, 5 ಗಂಟೆಗಳ ಒಳಗೆ ಪೋಸ್ಟ್ ಅಳಿಸಿಹಾಕುವುದಾಗಿ ತಿಳಿಸಿದ್ದಾರೆ.

ನಗದು ಪತ್ತೆ ಪ್ರಕರಣ | ನ್ಯಾಯಮೂರ್ತಿ ವಿರುದ್ಧ ಎಫ್‌ಐಆರ್ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...