Homeಮುಖಪುಟಮದ್ರಾಸಿ ಕ್ಯಾಂಪ್ ತೆರವುಗೊಳಿಸಿದ ದೆಹಲಿ ಆಡಳಿತ: ನಿರಾಶ್ರಿತರ ಬೆನ್ನಿಗೆ ನಿಂತ ತಮಿಳುನಾಡು ಸರ್ಕಾರ

ಮದ್ರಾಸಿ ಕ್ಯಾಂಪ್ ತೆರವುಗೊಳಿಸಿದ ದೆಹಲಿ ಆಡಳಿತ: ನಿರಾಶ್ರಿತರ ಬೆನ್ನಿಗೆ ನಿಂತ ತಮಿಳುನಾಡು ಸರ್ಕಾರ

- Advertisement -
- Advertisement -

ನವದೆಹಲಿಯ ಜಂಗ್‌ಪುರ ಪ್ರದೇಶದ ಮದ್ರಾಸಿ ಕ್ಯಾಂಪ್‌ನ ಮನೆಗಳನ್ನು ಸರ್ಕಾರ ತೆರವುಗೊಳಿಸಿದ್ದು, ನಿರಾಶ್ರಿತರಾಗಿರುವ ಜನರು ತಮ್ಮ ಮೂಲ ಸ್ಥಳಕ್ಕೆ ಮರಳಲು ಬಯಸುವುದಾದರೆ, ಅವರಿಗೆ ಬೇಕಾದ ವ್ಯವಸ್ಥೆ ಮಾಡಿಕೊಡುವುದಾಗಿ ತಮಿಳುನಾಡು ಸರ್ಕಾರ ಭಾನುವಾರ ತಿಳಿಸಿದೆ.

ನವದೆಹಲಿಯ ಹಝ್ರತ್ ನಿಝಾಮುದ್ದೀನ್ ರೈಲು ನಿಲ್ದಾಣದ ಬಳಿಯ ಜಂಗ್‌ಪುರ ಪ್ರದೇಶದ ಬರಾಪುಲ್ಲಾ ಚರಂಡಿಯ ಬಳಿ ದಶಕಗಳಿಂದ ಮದ್ರಾಸಿ ಕ್ಯಾಂಪ್ ಇತ್ತು. ಇಲ್ಲಿ ಸುಮಾರು 370 ಮನೆಗಳಲ್ಲಿ ತಮಿಳುನಾಡು ಮೂಲದ ಜನರು ವಾಸಿಸುತ್ತಿದ್ದರು.

ದೆಹಲಿ ಹೈಕೋರ್ಟ್ ಆದೇಶದಂತೆ ದೆಹಲಿ ಅಭಿವೃದ್ದಿ ಪ್ರಾಧಿಕಾರ ಭಾನುವಾರ ಇಲ್ಲಿನ ಮನೆಗಳನ್ನು ತೆರವುಗೊಳಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಮದ್ರಾಸಿ ಕ್ಯಾಂಪ್‌ನಿಂದಾಗಿ ಬರಾಪುಲ್ಲಾ ಚರಂಡಿ ಮುಚ್ಚಿಹೋಗಿ ನೀರು ಹರಿಯಲು ಜಾಗ ಇಲ್ಲ ಕಾರಣ ಮಳೆಗಾಲದಲ್ಲಿ ಆ ಪ್ರದೇಶ ಜಲಾವೃತ್ತ ಆಗುತ್ತಿತ್ತು. ಹಾಗಾಗಿ, ಕ್ಯಾಂಪ್ ಸ್ಥಳಾಂತರ ಮಾಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿತ್ತು ಎಂದು ವರದಿ ತಿಳಿಸಿದೆ.

ದೆಹಲಿ ಸರ್ಕಾರ ಮನೆಗಳನ್ನು ಧ್ವಂಸಗೊಳಿಸಿದ ಬೆನಲ್ಲೇ, ಸಂತ್ರಸ್ತರ ಜೊತೆ ಇರುವುದಾಗಿ ತಮಿಳುನಾಡು ಸರ್ಕಾರ ಘೋಷಿಸಿದೆ.

ಸಂತ್ರಸ್ತರಿಗೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಡಲು ನವದೆಹಲಿಯ ತಮಿಳುನಾಡು ಹೌಸ್‌ಗೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ನಿರ್ದೇಶನ ನೀಡಿದ್ದಾರೆ.

ವರದಿಗಳ ಪ್ರಕಾರ, ಮದ್ರಾಸಿ ಕ್ಯಾಂಪ್‌ ಅನ್ನು ‘ಅನಧಿಕೃತ ಅತಿಕ್ರಮಣ’ ಎಂದು ಹೇಳಿದ್ದ ದೆಹಲಿ ಹೈಕೋರ್ಟ್, ಮೇ 9 ರಂದು ಬರಾಪುಲ್ಲಾ ಚರಂಡಿಯ ಉದ್ದಕ್ಕೂ ಇರುವ ಪ್ರದೇಶವನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು. ಮದ್ರಾಸಿ ಕ್ಯಾಂಪ್ ಮಳೆಗಾಲದಲ್ಲಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಒಳಚರಂಡಿಯ ನೀರು ಹರಿಯಲು ಅಡ್ಡಿಯಾಗುತ್ತಿದೆ ಎಂದು ಹೇಳಿತ್ತು.

ದೆಹಲಿ ನಗರ ಆಶ್ರಯ ಸುಧಾರಣಾ ಮಂಡಳಿ ಕಾಯ್ದೆ ಮತ್ತು ದೆಹಲಿ ಕೊಳೆಗೇರಿ ಮತ್ತು ಜುಗ್ಗಿ ಝೋಪ್ರಿ ಪುನರ್ವಸತಿ ಮತ್ತು ಸ್ಥಳಾಂತರ ನೀತಿಯ ನಿಬಂಧನೆಗಳ ಅಡಿಯಲ್ಲಿ ಅರ್ಹ ನಿವಾಸಿಗಳಿಗೆ ಪುನರ್ವಸತಿ ಕಲ್ಪಿಸಿ ಸ್ಥಳಾಂತರಿಸಬೇಕೆಂದು ನ್ಯಾಯಾಲಯ ನಿರ್ದೇಶಿಸಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದೆಹಲಿ ನಗರ ಆಶ್ರಯ ಸುಧಾರಣಾ ಮಂಡಳಿಯು ಕ್ಯಾಂಪ್‌ನಲ್ಲಿದ್ದ 370 ಕುಟುಂಬಗಳಲ್ಲಿ ಕೇವಲ 215 ಕುಟುಂಬಗಳಿಗೆ ಮಾತ್ರ ವಸತಿಗೆ ಅರ್ಹರು ಎಂದು ನಿರ್ಧರಿಸಿತ್ತು. ಈ ಕುಟುಂಬಗಳಿಗೆ ಕ್ಯಾಂಪ್‌ನಿಂದ 35 ಕಿ.ಮೀ ದೂರದಲ್ಲಿರುವ ಉತ್ತರದ ಉಪನಗರವಾದ ನರೇಲಾದಲ್ಲಿ ವಸತಿ ವ್ಯವಸ್ಥೆಯನ್ನು ಮಾಡಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಉಳಿದ 155 ಕುಟುಂಬಗಳು ದಾಖಲೆಗಳು ಅಥವಾ ಅರ್ಹತಾ ಮಾನದಂಡಗಳನ್ನು ಪೂರೈಸುವಲ್ಲಿ ವಿಫಲವಾಗಿವೆ ಎಂದು ವರದಿಯಾಗಿದೆ. ಇದರಿಂದ ಈ ಕುಟುಂಬಗಳ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಮದ್ರಾಸಿ ಕ್ಯಾಂಪ್‌ ಅಡುಗೆಯವರು ಮತ್ತು ದಿನಗೂಲಿ ಕಾರ್ಮಿಕರಾಗಿ ಉದ್ಯೋಗ ಅರಸಿ ರಾಷ್ಟ್ರ ರಾಜಧಾನಿಗೆ ಆಗಮಿಸಿದ್ದ ತಮಿಳು ಮಾತನಾಡುವ ವಲಸಿಗರಿಗೆ ಆಶ್ರಯ ನೀಡಿತ್ತು.

ಕಮಲ್ ಹಾಸನ್ ಭಾಷಾ ವಿವಾದ | ‘ಥಗ್ ಲೈಫ್’ ಬಹಿಷ್ಕಾರದ ವಿರುದ್ಧ ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...