Homeಮುಖಪುಟಮದ್ರಾಸಿ ಕ್ಯಾಂಪ್ ತೆರವುಗೊಳಿಸಿದ ದೆಹಲಿ ಆಡಳಿತ: ನಿರಾಶ್ರಿತರ ಬೆನ್ನಿಗೆ ನಿಂತ ತಮಿಳುನಾಡು ಸರ್ಕಾರ

ಮದ್ರಾಸಿ ಕ್ಯಾಂಪ್ ತೆರವುಗೊಳಿಸಿದ ದೆಹಲಿ ಆಡಳಿತ: ನಿರಾಶ್ರಿತರ ಬೆನ್ನಿಗೆ ನಿಂತ ತಮಿಳುನಾಡು ಸರ್ಕಾರ

- Advertisement -
- Advertisement -

ನವದೆಹಲಿಯ ಜಂಗ್‌ಪುರ ಪ್ರದೇಶದ ಮದ್ರಾಸಿ ಕ್ಯಾಂಪ್‌ನ ಮನೆಗಳನ್ನು ಸರ್ಕಾರ ತೆರವುಗೊಳಿಸಿದ್ದು, ನಿರಾಶ್ರಿತರಾಗಿರುವ ಜನರು ತಮ್ಮ ಮೂಲ ಸ್ಥಳಕ್ಕೆ ಮರಳಲು ಬಯಸುವುದಾದರೆ, ಅವರಿಗೆ ಬೇಕಾದ ವ್ಯವಸ್ಥೆ ಮಾಡಿಕೊಡುವುದಾಗಿ ತಮಿಳುನಾಡು ಸರ್ಕಾರ ಭಾನುವಾರ ತಿಳಿಸಿದೆ.

ನವದೆಹಲಿಯ ಹಝ್ರತ್ ನಿಝಾಮುದ್ದೀನ್ ರೈಲು ನಿಲ್ದಾಣದ ಬಳಿಯ ಜಂಗ್‌ಪುರ ಪ್ರದೇಶದ ಬರಾಪುಲ್ಲಾ ಚರಂಡಿಯ ಬಳಿ ದಶಕಗಳಿಂದ ಮದ್ರಾಸಿ ಕ್ಯಾಂಪ್ ಇತ್ತು. ಇಲ್ಲಿ ಸುಮಾರು 370 ಮನೆಗಳಲ್ಲಿ ತಮಿಳುನಾಡು ಮೂಲದ ಜನರು ವಾಸಿಸುತ್ತಿದ್ದರು.

ದೆಹಲಿ ಹೈಕೋರ್ಟ್ ಆದೇಶದಂತೆ ದೆಹಲಿ ಅಭಿವೃದ್ದಿ ಪ್ರಾಧಿಕಾರ ಭಾನುವಾರ ಇಲ್ಲಿನ ಮನೆಗಳನ್ನು ತೆರವುಗೊಳಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಮದ್ರಾಸಿ ಕ್ಯಾಂಪ್‌ನಿಂದಾಗಿ ಬರಾಪುಲ್ಲಾ ಚರಂಡಿ ಮುಚ್ಚಿಹೋಗಿ ನೀರು ಹರಿಯಲು ಜಾಗ ಇಲ್ಲ ಕಾರಣ ಮಳೆಗಾಲದಲ್ಲಿ ಆ ಪ್ರದೇಶ ಜಲಾವೃತ್ತ ಆಗುತ್ತಿತ್ತು. ಹಾಗಾಗಿ, ಕ್ಯಾಂಪ್ ಸ್ಥಳಾಂತರ ಮಾಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿತ್ತು ಎಂದು ವರದಿ ತಿಳಿಸಿದೆ.

ದೆಹಲಿ ಸರ್ಕಾರ ಮನೆಗಳನ್ನು ಧ್ವಂಸಗೊಳಿಸಿದ ಬೆನಲ್ಲೇ, ಸಂತ್ರಸ್ತರ ಜೊತೆ ಇರುವುದಾಗಿ ತಮಿಳುನಾಡು ಸರ್ಕಾರ ಘೋಷಿಸಿದೆ.

ಸಂತ್ರಸ್ತರಿಗೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಡಲು ನವದೆಹಲಿಯ ತಮಿಳುನಾಡು ಹೌಸ್‌ಗೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ನಿರ್ದೇಶನ ನೀಡಿದ್ದಾರೆ.

ವರದಿಗಳ ಪ್ರಕಾರ, ಮದ್ರಾಸಿ ಕ್ಯಾಂಪ್‌ ಅನ್ನು ‘ಅನಧಿಕೃತ ಅತಿಕ್ರಮಣ’ ಎಂದು ಹೇಳಿದ್ದ ದೆಹಲಿ ಹೈಕೋರ್ಟ್, ಮೇ 9 ರಂದು ಬರಾಪುಲ್ಲಾ ಚರಂಡಿಯ ಉದ್ದಕ್ಕೂ ಇರುವ ಪ್ರದೇಶವನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು. ಮದ್ರಾಸಿ ಕ್ಯಾಂಪ್ ಮಳೆಗಾಲದಲ್ಲಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಒಳಚರಂಡಿಯ ನೀರು ಹರಿಯಲು ಅಡ್ಡಿಯಾಗುತ್ತಿದೆ ಎಂದು ಹೇಳಿತ್ತು.

ದೆಹಲಿ ನಗರ ಆಶ್ರಯ ಸುಧಾರಣಾ ಮಂಡಳಿ ಕಾಯ್ದೆ ಮತ್ತು ದೆಹಲಿ ಕೊಳೆಗೇರಿ ಮತ್ತು ಜುಗ್ಗಿ ಝೋಪ್ರಿ ಪುನರ್ವಸತಿ ಮತ್ತು ಸ್ಥಳಾಂತರ ನೀತಿಯ ನಿಬಂಧನೆಗಳ ಅಡಿಯಲ್ಲಿ ಅರ್ಹ ನಿವಾಸಿಗಳಿಗೆ ಪುನರ್ವಸತಿ ಕಲ್ಪಿಸಿ ಸ್ಥಳಾಂತರಿಸಬೇಕೆಂದು ನ್ಯಾಯಾಲಯ ನಿರ್ದೇಶಿಸಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದೆಹಲಿ ನಗರ ಆಶ್ರಯ ಸುಧಾರಣಾ ಮಂಡಳಿಯು ಕ್ಯಾಂಪ್‌ನಲ್ಲಿದ್ದ 370 ಕುಟುಂಬಗಳಲ್ಲಿ ಕೇವಲ 215 ಕುಟುಂಬಗಳಿಗೆ ಮಾತ್ರ ವಸತಿಗೆ ಅರ್ಹರು ಎಂದು ನಿರ್ಧರಿಸಿತ್ತು. ಈ ಕುಟುಂಬಗಳಿಗೆ ಕ್ಯಾಂಪ್‌ನಿಂದ 35 ಕಿ.ಮೀ ದೂರದಲ್ಲಿರುವ ಉತ್ತರದ ಉಪನಗರವಾದ ನರೇಲಾದಲ್ಲಿ ವಸತಿ ವ್ಯವಸ್ಥೆಯನ್ನು ಮಾಡಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಉಳಿದ 155 ಕುಟುಂಬಗಳು ದಾಖಲೆಗಳು ಅಥವಾ ಅರ್ಹತಾ ಮಾನದಂಡಗಳನ್ನು ಪೂರೈಸುವಲ್ಲಿ ವಿಫಲವಾಗಿವೆ ಎಂದು ವರದಿಯಾಗಿದೆ. ಇದರಿಂದ ಈ ಕುಟುಂಬಗಳ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಮದ್ರಾಸಿ ಕ್ಯಾಂಪ್‌ ಅಡುಗೆಯವರು ಮತ್ತು ದಿನಗೂಲಿ ಕಾರ್ಮಿಕರಾಗಿ ಉದ್ಯೋಗ ಅರಸಿ ರಾಷ್ಟ್ರ ರಾಜಧಾನಿಗೆ ಆಗಮಿಸಿದ್ದ ತಮಿಳು ಮಾತನಾಡುವ ವಲಸಿಗರಿಗೆ ಆಶ್ರಯ ನೀಡಿತ್ತು.

ಕಮಲ್ ಹಾಸನ್ ಭಾಷಾ ವಿವಾದ | ‘ಥಗ್ ಲೈಫ್’ ಬಹಿಷ್ಕಾರದ ವಿರುದ್ಧ ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...