Homeಮುಖಪುಟಮದ್ರಾಸಿ ಕ್ಯಾಂಪ್ ತೆರವುಗೊಳಿಸಿದ ದೆಹಲಿ ಆಡಳಿತ: ನಿರಾಶ್ರಿತರ ಬೆನ್ನಿಗೆ ನಿಂತ ತಮಿಳುನಾಡು ಸರ್ಕಾರ

ಮದ್ರಾಸಿ ಕ್ಯಾಂಪ್ ತೆರವುಗೊಳಿಸಿದ ದೆಹಲಿ ಆಡಳಿತ: ನಿರಾಶ್ರಿತರ ಬೆನ್ನಿಗೆ ನಿಂತ ತಮಿಳುನಾಡು ಸರ್ಕಾರ

- Advertisement -
- Advertisement -

ನವದೆಹಲಿಯ ಜಂಗ್‌ಪುರ ಪ್ರದೇಶದ ಮದ್ರಾಸಿ ಕ್ಯಾಂಪ್‌ನ ಮನೆಗಳನ್ನು ಸರ್ಕಾರ ತೆರವುಗೊಳಿಸಿದ್ದು, ನಿರಾಶ್ರಿತರಾಗಿರುವ ಜನರು ತಮ್ಮ ಮೂಲ ಸ್ಥಳಕ್ಕೆ ಮರಳಲು ಬಯಸುವುದಾದರೆ, ಅವರಿಗೆ ಬೇಕಾದ ವ್ಯವಸ್ಥೆ ಮಾಡಿಕೊಡುವುದಾಗಿ ತಮಿಳುನಾಡು ಸರ್ಕಾರ ಭಾನುವಾರ ತಿಳಿಸಿದೆ.

ನವದೆಹಲಿಯ ಹಝ್ರತ್ ನಿಝಾಮುದ್ದೀನ್ ರೈಲು ನಿಲ್ದಾಣದ ಬಳಿಯ ಜಂಗ್‌ಪುರ ಪ್ರದೇಶದ ಬರಾಪುಲ್ಲಾ ಚರಂಡಿಯ ಬಳಿ ದಶಕಗಳಿಂದ ಮದ್ರಾಸಿ ಕ್ಯಾಂಪ್ ಇತ್ತು. ಇಲ್ಲಿ ಸುಮಾರು 370 ಮನೆಗಳಲ್ಲಿ ತಮಿಳುನಾಡು ಮೂಲದ ಜನರು ವಾಸಿಸುತ್ತಿದ್ದರು.

ದೆಹಲಿ ಹೈಕೋರ್ಟ್ ಆದೇಶದಂತೆ ದೆಹಲಿ ಅಭಿವೃದ್ದಿ ಪ್ರಾಧಿಕಾರ ಭಾನುವಾರ ಇಲ್ಲಿನ ಮನೆಗಳನ್ನು ತೆರವುಗೊಳಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಮದ್ರಾಸಿ ಕ್ಯಾಂಪ್‌ನಿಂದಾಗಿ ಬರಾಪುಲ್ಲಾ ಚರಂಡಿ ಮುಚ್ಚಿಹೋಗಿ ನೀರು ಹರಿಯಲು ಜಾಗ ಇಲ್ಲ ಕಾರಣ ಮಳೆಗಾಲದಲ್ಲಿ ಆ ಪ್ರದೇಶ ಜಲಾವೃತ್ತ ಆಗುತ್ತಿತ್ತು. ಹಾಗಾಗಿ, ಕ್ಯಾಂಪ್ ಸ್ಥಳಾಂತರ ಮಾಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿತ್ತು ಎಂದು ವರದಿ ತಿಳಿಸಿದೆ.

ದೆಹಲಿ ಸರ್ಕಾರ ಮನೆಗಳನ್ನು ಧ್ವಂಸಗೊಳಿಸಿದ ಬೆನಲ್ಲೇ, ಸಂತ್ರಸ್ತರ ಜೊತೆ ಇರುವುದಾಗಿ ತಮಿಳುನಾಡು ಸರ್ಕಾರ ಘೋಷಿಸಿದೆ.

ಸಂತ್ರಸ್ತರಿಗೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಡಲು ನವದೆಹಲಿಯ ತಮಿಳುನಾಡು ಹೌಸ್‌ಗೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ನಿರ್ದೇಶನ ನೀಡಿದ್ದಾರೆ.

ವರದಿಗಳ ಪ್ರಕಾರ, ಮದ್ರಾಸಿ ಕ್ಯಾಂಪ್‌ ಅನ್ನು ‘ಅನಧಿಕೃತ ಅತಿಕ್ರಮಣ’ ಎಂದು ಹೇಳಿದ್ದ ದೆಹಲಿ ಹೈಕೋರ್ಟ್, ಮೇ 9 ರಂದು ಬರಾಪುಲ್ಲಾ ಚರಂಡಿಯ ಉದ್ದಕ್ಕೂ ಇರುವ ಪ್ರದೇಶವನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು. ಮದ್ರಾಸಿ ಕ್ಯಾಂಪ್ ಮಳೆಗಾಲದಲ್ಲಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಒಳಚರಂಡಿಯ ನೀರು ಹರಿಯಲು ಅಡ್ಡಿಯಾಗುತ್ತಿದೆ ಎಂದು ಹೇಳಿತ್ತು.

ದೆಹಲಿ ನಗರ ಆಶ್ರಯ ಸುಧಾರಣಾ ಮಂಡಳಿ ಕಾಯ್ದೆ ಮತ್ತು ದೆಹಲಿ ಕೊಳೆಗೇರಿ ಮತ್ತು ಜುಗ್ಗಿ ಝೋಪ್ರಿ ಪುನರ್ವಸತಿ ಮತ್ತು ಸ್ಥಳಾಂತರ ನೀತಿಯ ನಿಬಂಧನೆಗಳ ಅಡಿಯಲ್ಲಿ ಅರ್ಹ ನಿವಾಸಿಗಳಿಗೆ ಪುನರ್ವಸತಿ ಕಲ್ಪಿಸಿ ಸ್ಥಳಾಂತರಿಸಬೇಕೆಂದು ನ್ಯಾಯಾಲಯ ನಿರ್ದೇಶಿಸಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದೆಹಲಿ ನಗರ ಆಶ್ರಯ ಸುಧಾರಣಾ ಮಂಡಳಿಯು ಕ್ಯಾಂಪ್‌ನಲ್ಲಿದ್ದ 370 ಕುಟುಂಬಗಳಲ್ಲಿ ಕೇವಲ 215 ಕುಟುಂಬಗಳಿಗೆ ಮಾತ್ರ ವಸತಿಗೆ ಅರ್ಹರು ಎಂದು ನಿರ್ಧರಿಸಿತ್ತು. ಈ ಕುಟುಂಬಗಳಿಗೆ ಕ್ಯಾಂಪ್‌ನಿಂದ 35 ಕಿ.ಮೀ ದೂರದಲ್ಲಿರುವ ಉತ್ತರದ ಉಪನಗರವಾದ ನರೇಲಾದಲ್ಲಿ ವಸತಿ ವ್ಯವಸ್ಥೆಯನ್ನು ಮಾಡಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಉಳಿದ 155 ಕುಟುಂಬಗಳು ದಾಖಲೆಗಳು ಅಥವಾ ಅರ್ಹತಾ ಮಾನದಂಡಗಳನ್ನು ಪೂರೈಸುವಲ್ಲಿ ವಿಫಲವಾಗಿವೆ ಎಂದು ವರದಿಯಾಗಿದೆ. ಇದರಿಂದ ಈ ಕುಟುಂಬಗಳ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಮದ್ರಾಸಿ ಕ್ಯಾಂಪ್‌ ಅಡುಗೆಯವರು ಮತ್ತು ದಿನಗೂಲಿ ಕಾರ್ಮಿಕರಾಗಿ ಉದ್ಯೋಗ ಅರಸಿ ರಾಷ್ಟ್ರ ರಾಜಧಾನಿಗೆ ಆಗಮಿಸಿದ್ದ ತಮಿಳು ಮಾತನಾಡುವ ವಲಸಿಗರಿಗೆ ಆಶ್ರಯ ನೀಡಿತ್ತು.

ಕಮಲ್ ಹಾಸನ್ ಭಾಷಾ ವಿವಾದ | ‘ಥಗ್ ಲೈಫ್’ ಬಹಿಷ್ಕಾರದ ವಿರುದ್ಧ ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...