Homeಮುಖಪುಟ'ಮಜ್ದೂರ್ ಪೈದಲ್ ಜೋಡೋ ಯಾತ್ರೆ': ಭೂರಹಿತ ದಲಿತ ಕಾರ್ಮಿಕರಿಂದ ಹಕ್ಕಿಗಾಗಿ ಹೋರಾಟ

‘ಮಜ್ದೂರ್ ಪೈದಲ್ ಜೋಡೋ ಯಾತ್ರೆ’: ಭೂರಹಿತ ದಲಿತ ಕಾರ್ಮಿಕರಿಂದ ಹಕ್ಕಿಗಾಗಿ ಹೋರಾಟ

- Advertisement -
- Advertisement -

ಎಂಎಸ್‌ಪಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ‘ದೆಹಲಿ ಚಲೋ’ ಪ್ರತಿಭಟನೆ ನಡೆಯುತ್ತಿದೆ. ಪಂಜಾಬ್ ರೈತರು ದಿಲ್ಲಿ ಚಲೋ ಮೆರವಣಿಗೆಯ ಭಾಗವಾಗಿ ದೆಹಲಿಯತ್ತ ಸಾಗಲು ಹರಿಯಾಣ ಗಡಿಯಲ್ಲಿ ಮೊಕ್ಕಾಂ ಹೂಡಿದ್ದಾರೆ. ಈ ಮಧ್ಯೆ ಪಂಜಾಬ್‌ನ ಭೂರಹಿತ ರೈತರು, ಕೂಲಿ ಕಾರ್ಮಿಕರು ‘ಮಜ್ದೂರ್ ಪೈದಲ್ ಜೋಡೋ ಯಾತ್ರೆ’ ಪ್ರತಿಭಟನೆಯನ್ನು ಪ್ರಾರಂಭಿಸಿದ್ದಾರೆ. ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾಲ್ನಡಿಗೆಯಲ್ಲಿ ಮತ್ತು ಸೈಕಲ್‌ನಲ್ಲಿ ಒಂದು ಗ್ರಾಮದಿಂದ ಮತ್ತೊಂದು ಗ್ರಾಮಕ್ಕೆ ತೆರಳುತ್ತಿದ್ದಾರೆ.

ಮಹಿಳೆಯರು, ಭೂರಹಿತ ರೈತರು ಮತ್ತು ದೈನಂದಿನ ಕೂಲಿ ಕಾರ್ಮಿಕರು ಈ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದಾರೆ. ಪ್ರತಿಭಟನಾಕಾರರಲ್ಲಿ ಹೆಚ್ಚಾಗಿ ದಲಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಭೂ ಮಾಲೀಕತ್ವದ ಹಕ್ಕುಗಳು, ಮನೆ, ಸಾಲ-ಮನ್ನಾ, ಯೋಗ್ಯ ವೇತನ ಮತ್ತು ಜಾತಿ ಆಧಾರಿತ ತಾರತಮ್ಯವನ್ನು ಕೊನೆಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಪ್ರತಿಭಟನಾಕಾರರು ಒತ್ತಾಯಿಸುತ್ತಿದ್ದಾರೆ.

ಪೆಂಡು ಮಜ್ದೂರ್ ಯೂನಿಯನ್, ಪಂಜಾಬ್ ಮತ್ತು ಜಮೀನ್ ಪ್ರಾಪ್ತಿ ಸಂಘರ್ಷ ಸಮಿತಿಯಂತಹ ಒಕ್ಕೂಟಗಳು ಪ್ರತಿಭಟನೆಯಲ್ಲಿ ಭಾಗವಹಿಸಿದೆ. ಈ ಯಾತ್ರೆಯು ಪ್ರಸ್ತುತ ಜಲಂಧರ್, ಹೋಶಿಯಾರ್‌ಪುರ ಮತ್ತು ಮೊಗಾ ಜಿಲ್ಲೆಗಳಲ್ಲಿ ನಡೆಯುತ್ತಿದೆ. ಇದಲ್ಲದೆ ಈ ಸಂಘಟನೆಗಳು ಮಾರ್ಚ್ 11ರಂದು ರಾಜ್ಯಾದ್ಯಂತ ‘ರೈಲ್ ರೋಕೋ’ ಪ್ರತಿಭಟನೆಯನ್ನು ಘೋಷಿಸಿವೆ.

ಪೆಂಡು ಮಜ್ದೂರ್ ಯೂನಿಯನ್ ಮಾದ್ಯಮ ಕಾರ್ಯದರ್ಶಿ ಕಾಶ್ಮೀರ್ ಸಿಂಗ್ ಘುಶೋರ್ ಈ ಬಗ್ಗೆ ಮಾತನಾಡಿದ್ದು, ಭೂರಹಿತ ಮತ್ತು ದಲಿತ ಕಾರ್ಮಿಕರು ಮತ್ತು ಇತರ ಸೌಲಭ್ಯ ವಂಚಿತ ವರ್ಗಗಳು ಕಾಲ್ನಡಿಗೆಯಲ್ಲಿ ಮತ್ತು ಸೈಕಲ್‌ಗಳಲ್ಲಿ ಜಾಥಾ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಸತತ ಬೇಡಿಕೆಗಳ ಮಧ್ಯೆಯು ಸರಕಾರವು ಹಲವಾರು ವರ್ಷಗಳಿಂದ ಈಡೇರಿಸದಿರುವ ಬೇಡಿಕೆ ಬಗ್ಗೆ ಧ್ವನಿ ಎತ್ತುವುದಾಗಿ ಹೇಳಿದ್ದಾರೆ.

ನಮ್ಮ ಪ್ರಮುಖ ಬೇಡಿಕೆಗಳಲ್ಲಿ ಭೂಮಿಯ ಹಕ್ಕು ಮತ್ತು ಮನೆ ಮಾಲೀಕತ್ವ ಪ್ರಮುಖವಾದಂತಹ ಬೇಡಿಕೆಯಾಗಿದೆ. ಪಂಜಾಬ್ ಲ್ಯಾಂಡ್ ಸೀಲಿಂಗ್ ಆಕ್ಟ್ ಪ್ರಕಾರ, ಒಂದು ಕುಟುಂಬವು 17.5 ಎಕರೆಗಿಂತ ಹೆಚ್ಚಿನ ಕೃಷಿ ಭೂಮಿಯನ್ನು ಹೊಂದುವಂತಿಲ್ಲ. ಹೀಗಾಗಿ ಹೆಚ್ಚುವರಿ ಭೂಮಿಯನ್ನು ಭೂ ರಹಿತರಿಗೆ ಹಂಚಿಕೆ ಮಾಡಲು ಸರ್ಕಾರಕ್ಕೆ ನೀಡಬೇಕು. ಪಂಜಾಬ್ ಸರ್ಕಾರದ ‘ಮೇರಾ ಘರ್, ಮೇರೆ ನಾಮ್’ ಯೋಜನೆಯಡಿ, ಗ್ರಾಮಗಳ ‘ಲಾಲ್ ದೋರಾ’ ವ್ಯಾಪ್ತಿಯಲ್ಲಿ  ವಾಸಿಸುವ ಎಲ್ಲಾ ಎಸ್‌ಸಿ ಕುಟುಂಬಗಳಿಗೆ ಅವರ ಮನೆಗಳ ಮಾಲೀಕತ್ವವನ್ನು ನೀಡಲಾಗುವುದು ಎಂದು ಭರವಸೆ ನೀಡಿತ್ತು, ಆದರೆ ಇಲ್ಲಿಯವರೆಗೆ ನೋಂದಣಿ ಪ್ರಕ್ರಿಯೆ ಮಾಡಲಾಗಿಲ್ಲ. ಶ್ರೀಮಂತರಿಗೆ ಮಾತ್ರವಲ್ಲ, ನಮ್ಮಂತಹ ಬಡವರಿಗೆ ಭೂಮಿ ಮತ್ತು ಮನೆಯ ಮೇಲೆ ಸಮಾನ ಹಕ್ಕುಗಳಿವೆ ಎಂದು ಘುಶೋರ್ ಹೇಳಿದ್ದಾರೆ.

1957ರಲ್ಲಿ ಅಖಿಲ ಭಾರತ ಕಾರ್ಮಿಕ ಸಮ್ಮೇಳನದಲ್ಲಿ ಕೈಗೊಂಡ ನಿರ್ಣಯದಂತೆ ತಮ್ಮ ದಿನಗೂಲಿಯಲ್ಲಿ ಕನಿಷ್ಠ 1,000 ರೂ.ಗಳ ಹೆಚ್ಚಳ, ಭಾನುವಾರದಂದು ಪಾವತಿ ವಾರದ ರಜೆಯ ಹಕ್ಕು, ಸರ್ಕಾರ, ಸಹಕಾರಿ ಸಂಸ್ಥೆಗಳ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದ್ದಾರೆ.

ಇದನ್ನು ಓದಿ: ಬಿಲ್ಕೀಸ್‌ ಬಾನು ಪ್ರಕರಣ: ಪೆರೋಲ್‌ ಮೇಲೆ ಹೊರ ಬರುತ್ತಿರುವ ಅಪರಾಧಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...