Homeಮುಖಪುಟ'ಮಜ್ದೂರ್ ಪೈದಲ್ ಜೋಡೋ ಯಾತ್ರೆ': ಭೂರಹಿತ ದಲಿತ ಕಾರ್ಮಿಕರಿಂದ ಹಕ್ಕಿಗಾಗಿ ಹೋರಾಟ

‘ಮಜ್ದೂರ್ ಪೈದಲ್ ಜೋಡೋ ಯಾತ್ರೆ’: ಭೂರಹಿತ ದಲಿತ ಕಾರ್ಮಿಕರಿಂದ ಹಕ್ಕಿಗಾಗಿ ಹೋರಾಟ

- Advertisement -
- Advertisement -

ಎಂಎಸ್‌ಪಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ‘ದೆಹಲಿ ಚಲೋ’ ಪ್ರತಿಭಟನೆ ನಡೆಯುತ್ತಿದೆ. ಪಂಜಾಬ್ ರೈತರು ದಿಲ್ಲಿ ಚಲೋ ಮೆರವಣಿಗೆಯ ಭಾಗವಾಗಿ ದೆಹಲಿಯತ್ತ ಸಾಗಲು ಹರಿಯಾಣ ಗಡಿಯಲ್ಲಿ ಮೊಕ್ಕಾಂ ಹೂಡಿದ್ದಾರೆ. ಈ ಮಧ್ಯೆ ಪಂಜಾಬ್‌ನ ಭೂರಹಿತ ರೈತರು, ಕೂಲಿ ಕಾರ್ಮಿಕರು ‘ಮಜ್ದೂರ್ ಪೈದಲ್ ಜೋಡೋ ಯಾತ್ರೆ’ ಪ್ರತಿಭಟನೆಯನ್ನು ಪ್ರಾರಂಭಿಸಿದ್ದಾರೆ. ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾಲ್ನಡಿಗೆಯಲ್ಲಿ ಮತ್ತು ಸೈಕಲ್‌ನಲ್ಲಿ ಒಂದು ಗ್ರಾಮದಿಂದ ಮತ್ತೊಂದು ಗ್ರಾಮಕ್ಕೆ ತೆರಳುತ್ತಿದ್ದಾರೆ.

ಮಹಿಳೆಯರು, ಭೂರಹಿತ ರೈತರು ಮತ್ತು ದೈನಂದಿನ ಕೂಲಿ ಕಾರ್ಮಿಕರು ಈ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದಾರೆ. ಪ್ರತಿಭಟನಾಕಾರರಲ್ಲಿ ಹೆಚ್ಚಾಗಿ ದಲಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಭೂ ಮಾಲೀಕತ್ವದ ಹಕ್ಕುಗಳು, ಮನೆ, ಸಾಲ-ಮನ್ನಾ, ಯೋಗ್ಯ ವೇತನ ಮತ್ತು ಜಾತಿ ಆಧಾರಿತ ತಾರತಮ್ಯವನ್ನು ಕೊನೆಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಪ್ರತಿಭಟನಾಕಾರರು ಒತ್ತಾಯಿಸುತ್ತಿದ್ದಾರೆ.

ಪೆಂಡು ಮಜ್ದೂರ್ ಯೂನಿಯನ್, ಪಂಜಾಬ್ ಮತ್ತು ಜಮೀನ್ ಪ್ರಾಪ್ತಿ ಸಂಘರ್ಷ ಸಮಿತಿಯಂತಹ ಒಕ್ಕೂಟಗಳು ಪ್ರತಿಭಟನೆಯಲ್ಲಿ ಭಾಗವಹಿಸಿದೆ. ಈ ಯಾತ್ರೆಯು ಪ್ರಸ್ತುತ ಜಲಂಧರ್, ಹೋಶಿಯಾರ್‌ಪುರ ಮತ್ತು ಮೊಗಾ ಜಿಲ್ಲೆಗಳಲ್ಲಿ ನಡೆಯುತ್ತಿದೆ. ಇದಲ್ಲದೆ ಈ ಸಂಘಟನೆಗಳು ಮಾರ್ಚ್ 11ರಂದು ರಾಜ್ಯಾದ್ಯಂತ ‘ರೈಲ್ ರೋಕೋ’ ಪ್ರತಿಭಟನೆಯನ್ನು ಘೋಷಿಸಿವೆ.

ಪೆಂಡು ಮಜ್ದೂರ್ ಯೂನಿಯನ್ ಮಾದ್ಯಮ ಕಾರ್ಯದರ್ಶಿ ಕಾಶ್ಮೀರ್ ಸಿಂಗ್ ಘುಶೋರ್ ಈ ಬಗ್ಗೆ ಮಾತನಾಡಿದ್ದು, ಭೂರಹಿತ ಮತ್ತು ದಲಿತ ಕಾರ್ಮಿಕರು ಮತ್ತು ಇತರ ಸೌಲಭ್ಯ ವಂಚಿತ ವರ್ಗಗಳು ಕಾಲ್ನಡಿಗೆಯಲ್ಲಿ ಮತ್ತು ಸೈಕಲ್‌ಗಳಲ್ಲಿ ಜಾಥಾ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಸತತ ಬೇಡಿಕೆಗಳ ಮಧ್ಯೆಯು ಸರಕಾರವು ಹಲವಾರು ವರ್ಷಗಳಿಂದ ಈಡೇರಿಸದಿರುವ ಬೇಡಿಕೆ ಬಗ್ಗೆ ಧ್ವನಿ ಎತ್ತುವುದಾಗಿ ಹೇಳಿದ್ದಾರೆ.

ನಮ್ಮ ಪ್ರಮುಖ ಬೇಡಿಕೆಗಳಲ್ಲಿ ಭೂಮಿಯ ಹಕ್ಕು ಮತ್ತು ಮನೆ ಮಾಲೀಕತ್ವ ಪ್ರಮುಖವಾದಂತಹ ಬೇಡಿಕೆಯಾಗಿದೆ. ಪಂಜಾಬ್ ಲ್ಯಾಂಡ್ ಸೀಲಿಂಗ್ ಆಕ್ಟ್ ಪ್ರಕಾರ, ಒಂದು ಕುಟುಂಬವು 17.5 ಎಕರೆಗಿಂತ ಹೆಚ್ಚಿನ ಕೃಷಿ ಭೂಮಿಯನ್ನು ಹೊಂದುವಂತಿಲ್ಲ. ಹೀಗಾಗಿ ಹೆಚ್ಚುವರಿ ಭೂಮಿಯನ್ನು ಭೂ ರಹಿತರಿಗೆ ಹಂಚಿಕೆ ಮಾಡಲು ಸರ್ಕಾರಕ್ಕೆ ನೀಡಬೇಕು. ಪಂಜಾಬ್ ಸರ್ಕಾರದ ‘ಮೇರಾ ಘರ್, ಮೇರೆ ನಾಮ್’ ಯೋಜನೆಯಡಿ, ಗ್ರಾಮಗಳ ‘ಲಾಲ್ ದೋರಾ’ ವ್ಯಾಪ್ತಿಯಲ್ಲಿ  ವಾಸಿಸುವ ಎಲ್ಲಾ ಎಸ್‌ಸಿ ಕುಟುಂಬಗಳಿಗೆ ಅವರ ಮನೆಗಳ ಮಾಲೀಕತ್ವವನ್ನು ನೀಡಲಾಗುವುದು ಎಂದು ಭರವಸೆ ನೀಡಿತ್ತು, ಆದರೆ ಇಲ್ಲಿಯವರೆಗೆ ನೋಂದಣಿ ಪ್ರಕ್ರಿಯೆ ಮಾಡಲಾಗಿಲ್ಲ. ಶ್ರೀಮಂತರಿಗೆ ಮಾತ್ರವಲ್ಲ, ನಮ್ಮಂತಹ ಬಡವರಿಗೆ ಭೂಮಿ ಮತ್ತು ಮನೆಯ ಮೇಲೆ ಸಮಾನ ಹಕ್ಕುಗಳಿವೆ ಎಂದು ಘುಶೋರ್ ಹೇಳಿದ್ದಾರೆ.

1957ರಲ್ಲಿ ಅಖಿಲ ಭಾರತ ಕಾರ್ಮಿಕ ಸಮ್ಮೇಳನದಲ್ಲಿ ಕೈಗೊಂಡ ನಿರ್ಣಯದಂತೆ ತಮ್ಮ ದಿನಗೂಲಿಯಲ್ಲಿ ಕನಿಷ್ಠ 1,000 ರೂ.ಗಳ ಹೆಚ್ಚಳ, ಭಾನುವಾರದಂದು ಪಾವತಿ ವಾರದ ರಜೆಯ ಹಕ್ಕು, ಸರ್ಕಾರ, ಸಹಕಾರಿ ಸಂಸ್ಥೆಗಳ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದ್ದಾರೆ.

ಇದನ್ನು ಓದಿ: ಬಿಲ್ಕೀಸ್‌ ಬಾನು ಪ್ರಕರಣ: ಪೆರೋಲ್‌ ಮೇಲೆ ಹೊರ ಬರುತ್ತಿರುವ ಅಪರಾಧಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...