Homeಮುಖಪುಟ'ಮಜ್ದೂರ್ ಪೈದಲ್ ಜೋಡೋ ಯಾತ್ರೆ': ಭೂರಹಿತ ದಲಿತ ಕಾರ್ಮಿಕರಿಂದ ಹಕ್ಕಿಗಾಗಿ ಹೋರಾಟ

‘ಮಜ್ದೂರ್ ಪೈದಲ್ ಜೋಡೋ ಯಾತ್ರೆ’: ಭೂರಹಿತ ದಲಿತ ಕಾರ್ಮಿಕರಿಂದ ಹಕ್ಕಿಗಾಗಿ ಹೋರಾಟ

- Advertisement -
- Advertisement -

ಎಂಎಸ್‌ಪಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ‘ದೆಹಲಿ ಚಲೋ’ ಪ್ರತಿಭಟನೆ ನಡೆಯುತ್ತಿದೆ. ಪಂಜಾಬ್ ರೈತರು ದಿಲ್ಲಿ ಚಲೋ ಮೆರವಣಿಗೆಯ ಭಾಗವಾಗಿ ದೆಹಲಿಯತ್ತ ಸಾಗಲು ಹರಿಯಾಣ ಗಡಿಯಲ್ಲಿ ಮೊಕ್ಕಾಂ ಹೂಡಿದ್ದಾರೆ. ಈ ಮಧ್ಯೆ ಪಂಜಾಬ್‌ನ ಭೂರಹಿತ ರೈತರು, ಕೂಲಿ ಕಾರ್ಮಿಕರು ‘ಮಜ್ದೂರ್ ಪೈದಲ್ ಜೋಡೋ ಯಾತ್ರೆ’ ಪ್ರತಿಭಟನೆಯನ್ನು ಪ್ರಾರಂಭಿಸಿದ್ದಾರೆ. ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾಲ್ನಡಿಗೆಯಲ್ಲಿ ಮತ್ತು ಸೈಕಲ್‌ನಲ್ಲಿ ಒಂದು ಗ್ರಾಮದಿಂದ ಮತ್ತೊಂದು ಗ್ರಾಮಕ್ಕೆ ತೆರಳುತ್ತಿದ್ದಾರೆ.

ಮಹಿಳೆಯರು, ಭೂರಹಿತ ರೈತರು ಮತ್ತು ದೈನಂದಿನ ಕೂಲಿ ಕಾರ್ಮಿಕರು ಈ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದಾರೆ. ಪ್ರತಿಭಟನಾಕಾರರಲ್ಲಿ ಹೆಚ್ಚಾಗಿ ದಲಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಭೂ ಮಾಲೀಕತ್ವದ ಹಕ್ಕುಗಳು, ಮನೆ, ಸಾಲ-ಮನ್ನಾ, ಯೋಗ್ಯ ವೇತನ ಮತ್ತು ಜಾತಿ ಆಧಾರಿತ ತಾರತಮ್ಯವನ್ನು ಕೊನೆಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಪ್ರತಿಭಟನಾಕಾರರು ಒತ್ತಾಯಿಸುತ್ತಿದ್ದಾರೆ.

ಪೆಂಡು ಮಜ್ದೂರ್ ಯೂನಿಯನ್, ಪಂಜಾಬ್ ಮತ್ತು ಜಮೀನ್ ಪ್ರಾಪ್ತಿ ಸಂಘರ್ಷ ಸಮಿತಿಯಂತಹ ಒಕ್ಕೂಟಗಳು ಪ್ರತಿಭಟನೆಯಲ್ಲಿ ಭಾಗವಹಿಸಿದೆ. ಈ ಯಾತ್ರೆಯು ಪ್ರಸ್ತುತ ಜಲಂಧರ್, ಹೋಶಿಯಾರ್‌ಪುರ ಮತ್ತು ಮೊಗಾ ಜಿಲ್ಲೆಗಳಲ್ಲಿ ನಡೆಯುತ್ತಿದೆ. ಇದಲ್ಲದೆ ಈ ಸಂಘಟನೆಗಳು ಮಾರ್ಚ್ 11ರಂದು ರಾಜ್ಯಾದ್ಯಂತ ‘ರೈಲ್ ರೋಕೋ’ ಪ್ರತಿಭಟನೆಯನ್ನು ಘೋಷಿಸಿವೆ.

ಪೆಂಡು ಮಜ್ದೂರ್ ಯೂನಿಯನ್ ಮಾದ್ಯಮ ಕಾರ್ಯದರ್ಶಿ ಕಾಶ್ಮೀರ್ ಸಿಂಗ್ ಘುಶೋರ್ ಈ ಬಗ್ಗೆ ಮಾತನಾಡಿದ್ದು, ಭೂರಹಿತ ಮತ್ತು ದಲಿತ ಕಾರ್ಮಿಕರು ಮತ್ತು ಇತರ ಸೌಲಭ್ಯ ವಂಚಿತ ವರ್ಗಗಳು ಕಾಲ್ನಡಿಗೆಯಲ್ಲಿ ಮತ್ತು ಸೈಕಲ್‌ಗಳಲ್ಲಿ ಜಾಥಾ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಸತತ ಬೇಡಿಕೆಗಳ ಮಧ್ಯೆಯು ಸರಕಾರವು ಹಲವಾರು ವರ್ಷಗಳಿಂದ ಈಡೇರಿಸದಿರುವ ಬೇಡಿಕೆ ಬಗ್ಗೆ ಧ್ವನಿ ಎತ್ತುವುದಾಗಿ ಹೇಳಿದ್ದಾರೆ.

ನಮ್ಮ ಪ್ರಮುಖ ಬೇಡಿಕೆಗಳಲ್ಲಿ ಭೂಮಿಯ ಹಕ್ಕು ಮತ್ತು ಮನೆ ಮಾಲೀಕತ್ವ ಪ್ರಮುಖವಾದಂತಹ ಬೇಡಿಕೆಯಾಗಿದೆ. ಪಂಜಾಬ್ ಲ್ಯಾಂಡ್ ಸೀಲಿಂಗ್ ಆಕ್ಟ್ ಪ್ರಕಾರ, ಒಂದು ಕುಟುಂಬವು 17.5 ಎಕರೆಗಿಂತ ಹೆಚ್ಚಿನ ಕೃಷಿ ಭೂಮಿಯನ್ನು ಹೊಂದುವಂತಿಲ್ಲ. ಹೀಗಾಗಿ ಹೆಚ್ಚುವರಿ ಭೂಮಿಯನ್ನು ಭೂ ರಹಿತರಿಗೆ ಹಂಚಿಕೆ ಮಾಡಲು ಸರ್ಕಾರಕ್ಕೆ ನೀಡಬೇಕು. ಪಂಜಾಬ್ ಸರ್ಕಾರದ ‘ಮೇರಾ ಘರ್, ಮೇರೆ ನಾಮ್’ ಯೋಜನೆಯಡಿ, ಗ್ರಾಮಗಳ ‘ಲಾಲ್ ದೋರಾ’ ವ್ಯಾಪ್ತಿಯಲ್ಲಿ  ವಾಸಿಸುವ ಎಲ್ಲಾ ಎಸ್‌ಸಿ ಕುಟುಂಬಗಳಿಗೆ ಅವರ ಮನೆಗಳ ಮಾಲೀಕತ್ವವನ್ನು ನೀಡಲಾಗುವುದು ಎಂದು ಭರವಸೆ ನೀಡಿತ್ತು, ಆದರೆ ಇಲ್ಲಿಯವರೆಗೆ ನೋಂದಣಿ ಪ್ರಕ್ರಿಯೆ ಮಾಡಲಾಗಿಲ್ಲ. ಶ್ರೀಮಂತರಿಗೆ ಮಾತ್ರವಲ್ಲ, ನಮ್ಮಂತಹ ಬಡವರಿಗೆ ಭೂಮಿ ಮತ್ತು ಮನೆಯ ಮೇಲೆ ಸಮಾನ ಹಕ್ಕುಗಳಿವೆ ಎಂದು ಘುಶೋರ್ ಹೇಳಿದ್ದಾರೆ.

1957ರಲ್ಲಿ ಅಖಿಲ ಭಾರತ ಕಾರ್ಮಿಕ ಸಮ್ಮೇಳನದಲ್ಲಿ ಕೈಗೊಂಡ ನಿರ್ಣಯದಂತೆ ತಮ್ಮ ದಿನಗೂಲಿಯಲ್ಲಿ ಕನಿಷ್ಠ 1,000 ರೂ.ಗಳ ಹೆಚ್ಚಳ, ಭಾನುವಾರದಂದು ಪಾವತಿ ವಾರದ ರಜೆಯ ಹಕ್ಕು, ಸರ್ಕಾರ, ಸಹಕಾರಿ ಸಂಸ್ಥೆಗಳ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದ್ದಾರೆ.

ಇದನ್ನು ಓದಿ: ಬಿಲ್ಕೀಸ್‌ ಬಾನು ಪ್ರಕರಣ: ಪೆರೋಲ್‌ ಮೇಲೆ ಹೊರ ಬರುತ್ತಿರುವ ಅಪರಾಧಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...