Homeಮುಖಪುಟಹಿಂದುತ್ವವಾದಿಗಳಿಂದ ಪ್ರತಿಭಟನೆ : ಖರೀದಿಸಿದ ಬೆನ್ನಲ್ಲೇ ಮನೆ ಮಾರಾಟಕ್ಕಿಟ್ಟ ಮುಸ್ಲಿಂ ಕುಟುಂಬ ; ವರದಿ

ಹಿಂದುತ್ವವಾದಿಗಳಿಂದ ಪ್ರತಿಭಟನೆ : ಖರೀದಿಸಿದ ಬೆನ್ನಲ್ಲೇ ಮನೆ ಮಾರಾಟಕ್ಕಿಟ್ಟ ಮುಸ್ಲಿಂ ಕುಟುಂಬ ; ವರದಿ

- Advertisement -
- Advertisement -

ಉತ್ತರ ಪ್ರದೇಶದ ಬರೇಲಿಯ ಹಿಂದೂ ಪ್ರಾಬಲ್ಯ ಪ್ರದೇಶದಲ್ಲಿ ಮುಸ್ಲಿಂ ಕುಟುಂಬವೊಂದು ಮನೆ ಖರೀದಿಸಿದ್ದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಹಾಗಾಗಿ, ಖರೀದಿಸಿದ ಕೆಲವೇ ದಿನಗಳಲ್ಲಿ ಮುಸ್ಲಿಂ ಕುಟುಂಬ ಮನೆ ಮಾರಲು ನಿರ್ಧರಿಸಿದೆ ಎಂದು ದಿ ವೈರ್ ವರದಿ ಮಾಡಿದೆ.

ಮುಸ್ಲಿಂ ಕುಟುಂಬಕ್ಕೆ ಮನೆ ಮಾರಾಟ ಮಾಡಿರುವ ವಿಶಾಲ್ ಸಕ್ಸೇನಾ ಎಂಬವರು ಪೊಲೀಸರಿಗೆ ಪತ್ರವೊಂದನ್ನು ಬರೆದಿದ್ದು, “ಹಿಂದುತ್ವ ಸಂಘಟನೆಯೊಂದಿಗೆ ಸೇರಿಕೊಂಡು ಸ್ಥಳೀಯರು ಮನೆ ಮಾರಾಟದ ಬಗ್ಗೆ ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಕೋಮು ಸೌಹಾರ್ದತೆಯನ್ನು ಕೆಡಿಸುವ ಸಲುವಾಗಿ ಸಾಮೂಹಿಕ ವಲಸೆಯ ಬೆದರಿಕೆ ಹಾಕಿದ್ದಾರೆ” ಎಂದು ಹೇಳಿದ್ದಾರೆ.

ದಿ ವೈರ್ ಜೊತೆ ಮಾತನಾಡಿರುವ ಸಕ್ಸೇನಾ ಅವರು ” ಈ ಹಿಂದೆ 10-12 ಮಂದಿ ನನ್ನ ಮನೆ ಖರೀದಿಸಲು ಬಂದಿದ್ದರು. ಆದರೆ, ಮನೆ ಸೂಫಿ ಸಂತರ ದರ್ಗಾ ಮತ್ತು ಮುಸ್ಲಿಂ ಬಾಹುಳ್ಯದ ಪ್ರದೇಶಕ್ಕೆ ಹೊಂದಿಕೊಂಡಿರುವುದರಿಂದ ಅವರು ಮನೆ ಖರೀದಿಸಿಲ್ಲ” ಎಂದು ತಿಳಿಸಿದ್ದಾರೆ.

“ನನಗೆ ಮನೆ ವಾಪಸ್ ಬೇಡ, ಆದರೆ ಮುಸ್ಲಿಂ ಕುಟುಂಬಕ್ಕೆ ಮನೆ ಕೊಟ್ಟಿರುವುದನ್ನು ವಿರೋಧಿಸುವುದರ ಹಿಂದೆ ನಗರದ ಹೆಸರನ್ನು ಹಾಳು ಮಾಡುವ ಉದ್ದೇಶವಿದೆ” ಎಂದು ಸಕ್ಸೇನಾ ಆರೋಪಿಸಿದ್ದಾರೆ.

ಸಕ್ಸೇನಾ ಅವರು ಪೊಲೀಸರಿಗೆ ಬರೆದಿರುವ ಪತ್ರದಲ್ಲಿ ಅವರ ಮನೆ ಮಾರಾಟದ ಬಗೆಗಿನ ಸುಳ್ಳು ಆರೋಪಗಳನ್ನು ವಿವರಿಸಿಲ್ಲ. ಆದರೆ, ಖರೀದಿ ಒಪ್ಪಂದದಲ್ಲಿ ಸ್ಥಳೀಯ ಮಸೀದಿಯನ್ನು ಅಕ್ರಮ ಸ್ವಾಧೀನದಲ್ಲಿಟ್ಟುಕೊಂಡಿರುವ ಅಸ್ಸಾಮಿ ಮೌಲಾನಾ ಒಬ್ಬರು ಭಾಗಿಯಾಗಿದ್ದಾರೆ ಎಂದು ಕೆಲ ಸ್ಥಳೀಯ ನಿವಾಸಿಗಳು ಹೇಳಿರುವುದಾಗಿ ದಿ ವೈರ್ ತಿಳಿಸಿದೆ.

ಈ ಎಲ್ಲಾ ಗೊಂದಲಗಳ ನಡುವೆ ಸಕ್ಸೇನಾ ಅವರಿಂದ ಮನೆ ಖರೀದಿಸಿರುವ ಶಬ್ನಂ ಎಂಬ ಮುಸ್ಲಿಂ ಮಹಿಳೆಯ ಕುಟುಂಬ, ಸೂಕ್ತ ಬೆಲೆ ನೀಡಲು ಸಿದ್ದರಿರುವ ಯಾವುದೇ ಸನಾತನಿ ಹಿಂದೂಗಳಿಗೆ ಮನೆ ಮಾರಾಟ ಮಾಡಲು ಸಿದ್ದ ಎಂದಿದೆ. ಶಬ್ನಂ ಕುಟುಂಬ ಕೆಲ ದಿನಗಳ ಹಿಂದೆಯಷ್ಟೇ ಸಕ್ಸೇನಾ ಅವರಿಂದ ಮನೆ ಖರೀದಿಸಿತ್ತು. ಅದು ಬರೇಲಿಯಾ ಹಿಂದೂ ಪ್ರಾಬಲ್ಯ ಪ್ರದೇಶ ಪಂಜಾಬ್ ಪುರದಲ್ಲಿದೆ.

ಹಿಂದೂ ಪ್ರಾಬಲ್ಯ ಪ್ರದೇಶದಲ್ಲಿ ಮನೆ ಖರೀದಿಸುವಾಗ ಶಬ್ನಂ ಕುಟುಂಬ ತಲೆ ಮಾರುಗಳಿಂದ ಕಾಪಾಡಿಕೊಂಡು ಬಂದಿರುವ ನಗರದ ಕೋಮು ಸಾಮರಸ್ಯವನ್ನು ನಂಬಿತ್ತು. ಆದರೆ, ಅವರ ನಂಬಿಕೆ ಹುಸಿಯಾಗಿದೆ. ಮನೆ ಖರೀದಿಸಿದ ಬೆನ್ನಲ್ಲೇ ಪಂಜಾಬ್‌ ಪುರದ ಹಿಂದೂಗಳು ಅದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಮನೆಯ ನೋಂದಣಿ ಮಾಡಬಾರದು ಎಂದಿದ್ದಾರೆ. ಮುಸ್ಲಿಂ ಕುಟುಂಬಕ್ಕೆ ಮನೆ ಕೊಟ್ಟರೆ ‘ಸಾಮೂಹಿಕ ವಲಸೆ’ ಹೋಗುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ವರದಿ ವಿವರಿಸಿದೆ.

ಕೆಲ ಹಿಂದೂ ನಿವಾಸಿಗಳು ತಮ್ಮ ಮನೆಯ ಕಾಂಪೌಡ್ ಮೇಲೆ ‘ಸಾಮೂಹಿಕ್ ಪಲಾಯನ್’ (ಸಾಮೂಹಿಕ ಪಲಾಯನ) ಎಂಬ ಪೋಸ್ಟರ್ ಅಂಟಿಸಿ ಶಬ್ನಂ ಕುಟುಂಬಕ್ಕೆ ಮನೆ ಕೊಡುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಮುಸ್ಲಿಮರಿಗೆ ಮನೆ ಕೊಟ್ಟರೆ ಅದು ‘ಲವ್‌ ಜಿಹಾದ್‌’ಗೆ ಅವಕಾಶ ಕೊಟ್ಟಂತಾಗುತ್ತದೆ ಎಂದು ಕೆಲವರು ಹೇಳಿದ್ದಾರೆ, ಇನ್ನೂ ಕೆಲವರು ಮುಸ್ಲಿಮರ ಆಹಾರ ಪದ್ದತಿಗೆ ಆಕ್ಷೇಪ ಎತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಶಬ್ನಂ ಕುಟುಂಬಕ್ಕೆ ಮನೆ ಕೊಟ್ಟಿರುವುದನ್ನು ವಿರೋಧಿಸುತ್ತಿರುವ ಜನರನ್ನು ದಿ ವೈರ್ ಮಾತನಾಡಿಸಿದ್ದು,” ಒಬ್ಬ ವ್ಯಕ್ತಿ ಶಬ್ನಂ ಅವರ ಸಹೋದರ ನಸೀಮ್ 2010 ರ ಬರೇಲಿ ಗಲಭೆಯ ಮಾಸ್ಟರ್ ಮೈಂಡ್ ಎಂದು ಘೋಷಿಸುವ ಮಟ್ಟಕ್ಕೆ ಹೋಗಿದ್ದಾರೆ. ಇನ್ನೊಬ್ಬರು ಅಸ್ಸಾಮಿಗಳು ಮತ್ತು ಬಾಂಗ್ಲಾದೇಶಿಯರ ಬಗ್ಗೆ ಜಾಗರೂಕರಾಗಿರುವಂತೆ ಮುಖ್ಯಮಂತ್ರಿ ಮತ್ತು ಪ್ರಧಾನಿ ಹೇಳಿದ್ದಾರೆ ಎಂದಿದ್ದಾರೆ. ಆದರೆ, ಸಿಎಂ ಮತ್ತು ಪ್ರಧಾನಿ ಆ ರೀತಿ ಹೇಳಿರುವುದು ನಮಗೆ ಕಂಡು ಬಂದಿಲ್ಲ ಎಂದು ದಿ ವೈರ್ ವಿವರಿಸಿದೆ.

ಒಟ್ಟಿನಲ್ಲಿ ಹಿಂದೂ ಪ್ರಾಬಲ್ಯದ ಪ್ರದೇಶದಲ್ಲಿ ಹಿಂದೂ ವ್ಯಕ್ತಿಯೇ ಮುಸ್ಲಿಂ ಕುಟುಂಬಕ್ಕೆ ಮನೆ ಮಾರಾಟ ಮಾಡಿರುವುದಕ್ಕೆ ಸ್ಥಳೀಯ ಹಿಂದೂಗಳಿಂದ ವಿರೋಧ ವ್ಯಕ್ತವಾಗಿದೆ. ಇದರ ಹಿಂದೆ ಹಿಂದುತ್ವ ಸಂಘಟನೆಯ ಕುಮ್ಮಕ್ಕು ಇದೆ ಎಂದು ಮನೆ ಮಾರಿರುವ ಸಕ್ಸೇನಾ ಹೇಳಿದ್ದಾರೆ. ವಿರೋಧ ವ್ಯಕ್ತವಾದ ಹಿನ್ನೆಲೆ, ನಗರದ ಸಾಮರಸ್ಯ ಕಾಪಾಡಲು ಮುಸ್ಲಿಂ ಕುಟುಂಬ ಮನೆ ಮಾರಾಟಕ್ಕೆ ಮುಂದಾಗಿದೆ ಎಂದು ದಿ ವೈರ್ ವಿವರಿಸಿದೆ.

ಇದನ್ನೂ ಓದಿ : ಅಸ್ಸಾಂ | ‘ಮುಸ್ಲಿಂ ವಿವಾಹ, ವಿಚ್ಛೇದನ ನೋಂದಣಿ ಕಡ್ಡಾಯ’ ಮಸೂದೆ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...