Homeಮುಖಪುಟಹಿಂದುತ್ವವಾದಿಗಳಿಂದ ಪ್ರತಿಭಟನೆ : ಖರೀದಿಸಿದ ಬೆನ್ನಲ್ಲೇ ಮನೆ ಮಾರಾಟಕ್ಕಿಟ್ಟ ಮುಸ್ಲಿಂ ಕುಟುಂಬ ; ವರದಿ

ಹಿಂದುತ್ವವಾದಿಗಳಿಂದ ಪ್ರತಿಭಟನೆ : ಖರೀದಿಸಿದ ಬೆನ್ನಲ್ಲೇ ಮನೆ ಮಾರಾಟಕ್ಕಿಟ್ಟ ಮುಸ್ಲಿಂ ಕುಟುಂಬ ; ವರದಿ

- Advertisement -
- Advertisement -

ಉತ್ತರ ಪ್ರದೇಶದ ಬರೇಲಿಯ ಹಿಂದೂ ಪ್ರಾಬಲ್ಯ ಪ್ರದೇಶದಲ್ಲಿ ಮುಸ್ಲಿಂ ಕುಟುಂಬವೊಂದು ಮನೆ ಖರೀದಿಸಿದ್ದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಹಾಗಾಗಿ, ಖರೀದಿಸಿದ ಕೆಲವೇ ದಿನಗಳಲ್ಲಿ ಮುಸ್ಲಿಂ ಕುಟುಂಬ ಮನೆ ಮಾರಲು ನಿರ್ಧರಿಸಿದೆ ಎಂದು ದಿ ವೈರ್ ವರದಿ ಮಾಡಿದೆ.

ಮುಸ್ಲಿಂ ಕುಟುಂಬಕ್ಕೆ ಮನೆ ಮಾರಾಟ ಮಾಡಿರುವ ವಿಶಾಲ್ ಸಕ್ಸೇನಾ ಎಂಬವರು ಪೊಲೀಸರಿಗೆ ಪತ್ರವೊಂದನ್ನು ಬರೆದಿದ್ದು, “ಹಿಂದುತ್ವ ಸಂಘಟನೆಯೊಂದಿಗೆ ಸೇರಿಕೊಂಡು ಸ್ಥಳೀಯರು ಮನೆ ಮಾರಾಟದ ಬಗ್ಗೆ ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಕೋಮು ಸೌಹಾರ್ದತೆಯನ್ನು ಕೆಡಿಸುವ ಸಲುವಾಗಿ ಸಾಮೂಹಿಕ ವಲಸೆಯ ಬೆದರಿಕೆ ಹಾಕಿದ್ದಾರೆ” ಎಂದು ಹೇಳಿದ್ದಾರೆ.

ದಿ ವೈರ್ ಜೊತೆ ಮಾತನಾಡಿರುವ ಸಕ್ಸೇನಾ ಅವರು ” ಈ ಹಿಂದೆ 10-12 ಮಂದಿ ನನ್ನ ಮನೆ ಖರೀದಿಸಲು ಬಂದಿದ್ದರು. ಆದರೆ, ಮನೆ ಸೂಫಿ ಸಂತರ ದರ್ಗಾ ಮತ್ತು ಮುಸ್ಲಿಂ ಬಾಹುಳ್ಯದ ಪ್ರದೇಶಕ್ಕೆ ಹೊಂದಿಕೊಂಡಿರುವುದರಿಂದ ಅವರು ಮನೆ ಖರೀದಿಸಿಲ್ಲ” ಎಂದು ತಿಳಿಸಿದ್ದಾರೆ.

“ನನಗೆ ಮನೆ ವಾಪಸ್ ಬೇಡ, ಆದರೆ ಮುಸ್ಲಿಂ ಕುಟುಂಬಕ್ಕೆ ಮನೆ ಕೊಟ್ಟಿರುವುದನ್ನು ವಿರೋಧಿಸುವುದರ ಹಿಂದೆ ನಗರದ ಹೆಸರನ್ನು ಹಾಳು ಮಾಡುವ ಉದ್ದೇಶವಿದೆ” ಎಂದು ಸಕ್ಸೇನಾ ಆರೋಪಿಸಿದ್ದಾರೆ.

ಸಕ್ಸೇನಾ ಅವರು ಪೊಲೀಸರಿಗೆ ಬರೆದಿರುವ ಪತ್ರದಲ್ಲಿ ಅವರ ಮನೆ ಮಾರಾಟದ ಬಗೆಗಿನ ಸುಳ್ಳು ಆರೋಪಗಳನ್ನು ವಿವರಿಸಿಲ್ಲ. ಆದರೆ, ಖರೀದಿ ಒಪ್ಪಂದದಲ್ಲಿ ಸ್ಥಳೀಯ ಮಸೀದಿಯನ್ನು ಅಕ್ರಮ ಸ್ವಾಧೀನದಲ್ಲಿಟ್ಟುಕೊಂಡಿರುವ ಅಸ್ಸಾಮಿ ಮೌಲಾನಾ ಒಬ್ಬರು ಭಾಗಿಯಾಗಿದ್ದಾರೆ ಎಂದು ಕೆಲ ಸ್ಥಳೀಯ ನಿವಾಸಿಗಳು ಹೇಳಿರುವುದಾಗಿ ದಿ ವೈರ್ ತಿಳಿಸಿದೆ.

ಈ ಎಲ್ಲಾ ಗೊಂದಲಗಳ ನಡುವೆ ಸಕ್ಸೇನಾ ಅವರಿಂದ ಮನೆ ಖರೀದಿಸಿರುವ ಶಬ್ನಂ ಎಂಬ ಮುಸ್ಲಿಂ ಮಹಿಳೆಯ ಕುಟುಂಬ, ಸೂಕ್ತ ಬೆಲೆ ನೀಡಲು ಸಿದ್ದರಿರುವ ಯಾವುದೇ ಸನಾತನಿ ಹಿಂದೂಗಳಿಗೆ ಮನೆ ಮಾರಾಟ ಮಾಡಲು ಸಿದ್ದ ಎಂದಿದೆ. ಶಬ್ನಂ ಕುಟುಂಬ ಕೆಲ ದಿನಗಳ ಹಿಂದೆಯಷ್ಟೇ ಸಕ್ಸೇನಾ ಅವರಿಂದ ಮನೆ ಖರೀದಿಸಿತ್ತು. ಅದು ಬರೇಲಿಯಾ ಹಿಂದೂ ಪ್ರಾಬಲ್ಯ ಪ್ರದೇಶ ಪಂಜಾಬ್ ಪುರದಲ್ಲಿದೆ.

ಹಿಂದೂ ಪ್ರಾಬಲ್ಯ ಪ್ರದೇಶದಲ್ಲಿ ಮನೆ ಖರೀದಿಸುವಾಗ ಶಬ್ನಂ ಕುಟುಂಬ ತಲೆ ಮಾರುಗಳಿಂದ ಕಾಪಾಡಿಕೊಂಡು ಬಂದಿರುವ ನಗರದ ಕೋಮು ಸಾಮರಸ್ಯವನ್ನು ನಂಬಿತ್ತು. ಆದರೆ, ಅವರ ನಂಬಿಕೆ ಹುಸಿಯಾಗಿದೆ. ಮನೆ ಖರೀದಿಸಿದ ಬೆನ್ನಲ್ಲೇ ಪಂಜಾಬ್‌ ಪುರದ ಹಿಂದೂಗಳು ಅದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಮನೆಯ ನೋಂದಣಿ ಮಾಡಬಾರದು ಎಂದಿದ್ದಾರೆ. ಮುಸ್ಲಿಂ ಕುಟುಂಬಕ್ಕೆ ಮನೆ ಕೊಟ್ಟರೆ ‘ಸಾಮೂಹಿಕ ವಲಸೆ’ ಹೋಗುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ವರದಿ ವಿವರಿಸಿದೆ.

ಕೆಲ ಹಿಂದೂ ನಿವಾಸಿಗಳು ತಮ್ಮ ಮನೆಯ ಕಾಂಪೌಡ್ ಮೇಲೆ ‘ಸಾಮೂಹಿಕ್ ಪಲಾಯನ್’ (ಸಾಮೂಹಿಕ ಪಲಾಯನ) ಎಂಬ ಪೋಸ್ಟರ್ ಅಂಟಿಸಿ ಶಬ್ನಂ ಕುಟುಂಬಕ್ಕೆ ಮನೆ ಕೊಡುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಮುಸ್ಲಿಮರಿಗೆ ಮನೆ ಕೊಟ್ಟರೆ ಅದು ‘ಲವ್‌ ಜಿಹಾದ್‌’ಗೆ ಅವಕಾಶ ಕೊಟ್ಟಂತಾಗುತ್ತದೆ ಎಂದು ಕೆಲವರು ಹೇಳಿದ್ದಾರೆ, ಇನ್ನೂ ಕೆಲವರು ಮುಸ್ಲಿಮರ ಆಹಾರ ಪದ್ದತಿಗೆ ಆಕ್ಷೇಪ ಎತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಶಬ್ನಂ ಕುಟುಂಬಕ್ಕೆ ಮನೆ ಕೊಟ್ಟಿರುವುದನ್ನು ವಿರೋಧಿಸುತ್ತಿರುವ ಜನರನ್ನು ದಿ ವೈರ್ ಮಾತನಾಡಿಸಿದ್ದು,” ಒಬ್ಬ ವ್ಯಕ್ತಿ ಶಬ್ನಂ ಅವರ ಸಹೋದರ ನಸೀಮ್ 2010 ರ ಬರೇಲಿ ಗಲಭೆಯ ಮಾಸ್ಟರ್ ಮೈಂಡ್ ಎಂದು ಘೋಷಿಸುವ ಮಟ್ಟಕ್ಕೆ ಹೋಗಿದ್ದಾರೆ. ಇನ್ನೊಬ್ಬರು ಅಸ್ಸಾಮಿಗಳು ಮತ್ತು ಬಾಂಗ್ಲಾದೇಶಿಯರ ಬಗ್ಗೆ ಜಾಗರೂಕರಾಗಿರುವಂತೆ ಮುಖ್ಯಮಂತ್ರಿ ಮತ್ತು ಪ್ರಧಾನಿ ಹೇಳಿದ್ದಾರೆ ಎಂದಿದ್ದಾರೆ. ಆದರೆ, ಸಿಎಂ ಮತ್ತು ಪ್ರಧಾನಿ ಆ ರೀತಿ ಹೇಳಿರುವುದು ನಮಗೆ ಕಂಡು ಬಂದಿಲ್ಲ ಎಂದು ದಿ ವೈರ್ ವಿವರಿಸಿದೆ.

ಒಟ್ಟಿನಲ್ಲಿ ಹಿಂದೂ ಪ್ರಾಬಲ್ಯದ ಪ್ರದೇಶದಲ್ಲಿ ಹಿಂದೂ ವ್ಯಕ್ತಿಯೇ ಮುಸ್ಲಿಂ ಕುಟುಂಬಕ್ಕೆ ಮನೆ ಮಾರಾಟ ಮಾಡಿರುವುದಕ್ಕೆ ಸ್ಥಳೀಯ ಹಿಂದೂಗಳಿಂದ ವಿರೋಧ ವ್ಯಕ್ತವಾಗಿದೆ. ಇದರ ಹಿಂದೆ ಹಿಂದುತ್ವ ಸಂಘಟನೆಯ ಕುಮ್ಮಕ್ಕು ಇದೆ ಎಂದು ಮನೆ ಮಾರಿರುವ ಸಕ್ಸೇನಾ ಹೇಳಿದ್ದಾರೆ. ವಿರೋಧ ವ್ಯಕ್ತವಾದ ಹಿನ್ನೆಲೆ, ನಗರದ ಸಾಮರಸ್ಯ ಕಾಪಾಡಲು ಮುಸ್ಲಿಂ ಕುಟುಂಬ ಮನೆ ಮಾರಾಟಕ್ಕೆ ಮುಂದಾಗಿದೆ ಎಂದು ದಿ ವೈರ್ ವಿವರಿಸಿದೆ.

ಇದನ್ನೂ ಓದಿ : ಅಸ್ಸಾಂ | ‘ಮುಸ್ಲಿಂ ವಿವಾಹ, ವಿಚ್ಛೇದನ ನೋಂದಣಿ ಕಡ್ಡಾಯ’ ಮಸೂದೆ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...