Homeಮುಖಪುಟಹಿಂದುತ್ವವಾದಿಗಳಿಂದ ಪ್ರತಿಭಟನೆ : ಖರೀದಿಸಿದ ಬೆನ್ನಲ್ಲೇ ಮನೆ ಮಾರಾಟಕ್ಕಿಟ್ಟ ಮುಸ್ಲಿಂ ಕುಟುಂಬ ; ವರದಿ

ಹಿಂದುತ್ವವಾದಿಗಳಿಂದ ಪ್ರತಿಭಟನೆ : ಖರೀದಿಸಿದ ಬೆನ್ನಲ್ಲೇ ಮನೆ ಮಾರಾಟಕ್ಕಿಟ್ಟ ಮುಸ್ಲಿಂ ಕುಟುಂಬ ; ವರದಿ

- Advertisement -
- Advertisement -

ಉತ್ತರ ಪ್ರದೇಶದ ಬರೇಲಿಯ ಹಿಂದೂ ಪ್ರಾಬಲ್ಯ ಪ್ರದೇಶದಲ್ಲಿ ಮುಸ್ಲಿಂ ಕುಟುಂಬವೊಂದು ಮನೆ ಖರೀದಿಸಿದ್ದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಹಾಗಾಗಿ, ಖರೀದಿಸಿದ ಕೆಲವೇ ದಿನಗಳಲ್ಲಿ ಮುಸ್ಲಿಂ ಕುಟುಂಬ ಮನೆ ಮಾರಲು ನಿರ್ಧರಿಸಿದೆ ಎಂದು ದಿ ವೈರ್ ವರದಿ ಮಾಡಿದೆ.

ಮುಸ್ಲಿಂ ಕುಟುಂಬಕ್ಕೆ ಮನೆ ಮಾರಾಟ ಮಾಡಿರುವ ವಿಶಾಲ್ ಸಕ್ಸೇನಾ ಎಂಬವರು ಪೊಲೀಸರಿಗೆ ಪತ್ರವೊಂದನ್ನು ಬರೆದಿದ್ದು, “ಹಿಂದುತ್ವ ಸಂಘಟನೆಯೊಂದಿಗೆ ಸೇರಿಕೊಂಡು ಸ್ಥಳೀಯರು ಮನೆ ಮಾರಾಟದ ಬಗ್ಗೆ ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಕೋಮು ಸೌಹಾರ್ದತೆಯನ್ನು ಕೆಡಿಸುವ ಸಲುವಾಗಿ ಸಾಮೂಹಿಕ ವಲಸೆಯ ಬೆದರಿಕೆ ಹಾಕಿದ್ದಾರೆ” ಎಂದು ಹೇಳಿದ್ದಾರೆ.

ದಿ ವೈರ್ ಜೊತೆ ಮಾತನಾಡಿರುವ ಸಕ್ಸೇನಾ ಅವರು ” ಈ ಹಿಂದೆ 10-12 ಮಂದಿ ನನ್ನ ಮನೆ ಖರೀದಿಸಲು ಬಂದಿದ್ದರು. ಆದರೆ, ಮನೆ ಸೂಫಿ ಸಂತರ ದರ್ಗಾ ಮತ್ತು ಮುಸ್ಲಿಂ ಬಾಹುಳ್ಯದ ಪ್ರದೇಶಕ್ಕೆ ಹೊಂದಿಕೊಂಡಿರುವುದರಿಂದ ಅವರು ಮನೆ ಖರೀದಿಸಿಲ್ಲ” ಎಂದು ತಿಳಿಸಿದ್ದಾರೆ.

“ನನಗೆ ಮನೆ ವಾಪಸ್ ಬೇಡ, ಆದರೆ ಮುಸ್ಲಿಂ ಕುಟುಂಬಕ್ಕೆ ಮನೆ ಕೊಟ್ಟಿರುವುದನ್ನು ವಿರೋಧಿಸುವುದರ ಹಿಂದೆ ನಗರದ ಹೆಸರನ್ನು ಹಾಳು ಮಾಡುವ ಉದ್ದೇಶವಿದೆ” ಎಂದು ಸಕ್ಸೇನಾ ಆರೋಪಿಸಿದ್ದಾರೆ.

ಸಕ್ಸೇನಾ ಅವರು ಪೊಲೀಸರಿಗೆ ಬರೆದಿರುವ ಪತ್ರದಲ್ಲಿ ಅವರ ಮನೆ ಮಾರಾಟದ ಬಗೆಗಿನ ಸುಳ್ಳು ಆರೋಪಗಳನ್ನು ವಿವರಿಸಿಲ್ಲ. ಆದರೆ, ಖರೀದಿ ಒಪ್ಪಂದದಲ್ಲಿ ಸ್ಥಳೀಯ ಮಸೀದಿಯನ್ನು ಅಕ್ರಮ ಸ್ವಾಧೀನದಲ್ಲಿಟ್ಟುಕೊಂಡಿರುವ ಅಸ್ಸಾಮಿ ಮೌಲಾನಾ ಒಬ್ಬರು ಭಾಗಿಯಾಗಿದ್ದಾರೆ ಎಂದು ಕೆಲ ಸ್ಥಳೀಯ ನಿವಾಸಿಗಳು ಹೇಳಿರುವುದಾಗಿ ದಿ ವೈರ್ ತಿಳಿಸಿದೆ.

ಈ ಎಲ್ಲಾ ಗೊಂದಲಗಳ ನಡುವೆ ಸಕ್ಸೇನಾ ಅವರಿಂದ ಮನೆ ಖರೀದಿಸಿರುವ ಶಬ್ನಂ ಎಂಬ ಮುಸ್ಲಿಂ ಮಹಿಳೆಯ ಕುಟುಂಬ, ಸೂಕ್ತ ಬೆಲೆ ನೀಡಲು ಸಿದ್ದರಿರುವ ಯಾವುದೇ ಸನಾತನಿ ಹಿಂದೂಗಳಿಗೆ ಮನೆ ಮಾರಾಟ ಮಾಡಲು ಸಿದ್ದ ಎಂದಿದೆ. ಶಬ್ನಂ ಕುಟುಂಬ ಕೆಲ ದಿನಗಳ ಹಿಂದೆಯಷ್ಟೇ ಸಕ್ಸೇನಾ ಅವರಿಂದ ಮನೆ ಖರೀದಿಸಿತ್ತು. ಅದು ಬರೇಲಿಯಾ ಹಿಂದೂ ಪ್ರಾಬಲ್ಯ ಪ್ರದೇಶ ಪಂಜಾಬ್ ಪುರದಲ್ಲಿದೆ.

ಹಿಂದೂ ಪ್ರಾಬಲ್ಯ ಪ್ರದೇಶದಲ್ಲಿ ಮನೆ ಖರೀದಿಸುವಾಗ ಶಬ್ನಂ ಕುಟುಂಬ ತಲೆ ಮಾರುಗಳಿಂದ ಕಾಪಾಡಿಕೊಂಡು ಬಂದಿರುವ ನಗರದ ಕೋಮು ಸಾಮರಸ್ಯವನ್ನು ನಂಬಿತ್ತು. ಆದರೆ, ಅವರ ನಂಬಿಕೆ ಹುಸಿಯಾಗಿದೆ. ಮನೆ ಖರೀದಿಸಿದ ಬೆನ್ನಲ್ಲೇ ಪಂಜಾಬ್‌ ಪುರದ ಹಿಂದೂಗಳು ಅದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಮನೆಯ ನೋಂದಣಿ ಮಾಡಬಾರದು ಎಂದಿದ್ದಾರೆ. ಮುಸ್ಲಿಂ ಕುಟುಂಬಕ್ಕೆ ಮನೆ ಕೊಟ್ಟರೆ ‘ಸಾಮೂಹಿಕ ವಲಸೆ’ ಹೋಗುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ವರದಿ ವಿವರಿಸಿದೆ.

ಕೆಲ ಹಿಂದೂ ನಿವಾಸಿಗಳು ತಮ್ಮ ಮನೆಯ ಕಾಂಪೌಡ್ ಮೇಲೆ ‘ಸಾಮೂಹಿಕ್ ಪಲಾಯನ್’ (ಸಾಮೂಹಿಕ ಪಲಾಯನ) ಎಂಬ ಪೋಸ್ಟರ್ ಅಂಟಿಸಿ ಶಬ್ನಂ ಕುಟುಂಬಕ್ಕೆ ಮನೆ ಕೊಡುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಮುಸ್ಲಿಮರಿಗೆ ಮನೆ ಕೊಟ್ಟರೆ ಅದು ‘ಲವ್‌ ಜಿಹಾದ್‌’ಗೆ ಅವಕಾಶ ಕೊಟ್ಟಂತಾಗುತ್ತದೆ ಎಂದು ಕೆಲವರು ಹೇಳಿದ್ದಾರೆ, ಇನ್ನೂ ಕೆಲವರು ಮುಸ್ಲಿಮರ ಆಹಾರ ಪದ್ದತಿಗೆ ಆಕ್ಷೇಪ ಎತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಶಬ್ನಂ ಕುಟುಂಬಕ್ಕೆ ಮನೆ ಕೊಟ್ಟಿರುವುದನ್ನು ವಿರೋಧಿಸುತ್ತಿರುವ ಜನರನ್ನು ದಿ ವೈರ್ ಮಾತನಾಡಿಸಿದ್ದು,” ಒಬ್ಬ ವ್ಯಕ್ತಿ ಶಬ್ನಂ ಅವರ ಸಹೋದರ ನಸೀಮ್ 2010 ರ ಬರೇಲಿ ಗಲಭೆಯ ಮಾಸ್ಟರ್ ಮೈಂಡ್ ಎಂದು ಘೋಷಿಸುವ ಮಟ್ಟಕ್ಕೆ ಹೋಗಿದ್ದಾರೆ. ಇನ್ನೊಬ್ಬರು ಅಸ್ಸಾಮಿಗಳು ಮತ್ತು ಬಾಂಗ್ಲಾದೇಶಿಯರ ಬಗ್ಗೆ ಜಾಗರೂಕರಾಗಿರುವಂತೆ ಮುಖ್ಯಮಂತ್ರಿ ಮತ್ತು ಪ್ರಧಾನಿ ಹೇಳಿದ್ದಾರೆ ಎಂದಿದ್ದಾರೆ. ಆದರೆ, ಸಿಎಂ ಮತ್ತು ಪ್ರಧಾನಿ ಆ ರೀತಿ ಹೇಳಿರುವುದು ನಮಗೆ ಕಂಡು ಬಂದಿಲ್ಲ ಎಂದು ದಿ ವೈರ್ ವಿವರಿಸಿದೆ.

ಒಟ್ಟಿನಲ್ಲಿ ಹಿಂದೂ ಪ್ರಾಬಲ್ಯದ ಪ್ರದೇಶದಲ್ಲಿ ಹಿಂದೂ ವ್ಯಕ್ತಿಯೇ ಮುಸ್ಲಿಂ ಕುಟುಂಬಕ್ಕೆ ಮನೆ ಮಾರಾಟ ಮಾಡಿರುವುದಕ್ಕೆ ಸ್ಥಳೀಯ ಹಿಂದೂಗಳಿಂದ ವಿರೋಧ ವ್ಯಕ್ತವಾಗಿದೆ. ಇದರ ಹಿಂದೆ ಹಿಂದುತ್ವ ಸಂಘಟನೆಯ ಕುಮ್ಮಕ್ಕು ಇದೆ ಎಂದು ಮನೆ ಮಾರಿರುವ ಸಕ್ಸೇನಾ ಹೇಳಿದ್ದಾರೆ. ವಿರೋಧ ವ್ಯಕ್ತವಾದ ಹಿನ್ನೆಲೆ, ನಗರದ ಸಾಮರಸ್ಯ ಕಾಪಾಡಲು ಮುಸ್ಲಿಂ ಕುಟುಂಬ ಮನೆ ಮಾರಾಟಕ್ಕೆ ಮುಂದಾಗಿದೆ ಎಂದು ದಿ ವೈರ್ ವಿವರಿಸಿದೆ.

ಇದನ್ನೂ ಓದಿ : ಅಸ್ಸಾಂ | ‘ಮುಸ್ಲಿಂ ವಿವಾಹ, ವಿಚ್ಛೇದನ ನೋಂದಣಿ ಕಡ್ಡಾಯ’ ಮಸೂದೆ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...