Homeಮುಖಪುಟಹಿಂದುತ್ವವಾದಿಗಳಿಂದ ಪ್ರತಿಭಟನೆ : ಖರೀದಿಸಿದ ಬೆನ್ನಲ್ಲೇ ಮನೆ ಮಾರಾಟಕ್ಕಿಟ್ಟ ಮುಸ್ಲಿಂ ಕುಟುಂಬ ; ವರದಿ

ಹಿಂದುತ್ವವಾದಿಗಳಿಂದ ಪ್ರತಿಭಟನೆ : ಖರೀದಿಸಿದ ಬೆನ್ನಲ್ಲೇ ಮನೆ ಮಾರಾಟಕ್ಕಿಟ್ಟ ಮುಸ್ಲಿಂ ಕುಟುಂಬ ; ವರದಿ

- Advertisement -
- Advertisement -

ಉತ್ತರ ಪ್ರದೇಶದ ಬರೇಲಿಯ ಹಿಂದೂ ಪ್ರಾಬಲ್ಯ ಪ್ರದೇಶದಲ್ಲಿ ಮುಸ್ಲಿಂ ಕುಟುಂಬವೊಂದು ಮನೆ ಖರೀದಿಸಿದ್ದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಹಾಗಾಗಿ, ಖರೀದಿಸಿದ ಕೆಲವೇ ದಿನಗಳಲ್ಲಿ ಮುಸ್ಲಿಂ ಕುಟುಂಬ ಮನೆ ಮಾರಲು ನಿರ್ಧರಿಸಿದೆ ಎಂದು ದಿ ವೈರ್ ವರದಿ ಮಾಡಿದೆ.

ಮುಸ್ಲಿಂ ಕುಟುಂಬಕ್ಕೆ ಮನೆ ಮಾರಾಟ ಮಾಡಿರುವ ವಿಶಾಲ್ ಸಕ್ಸೇನಾ ಎಂಬವರು ಪೊಲೀಸರಿಗೆ ಪತ್ರವೊಂದನ್ನು ಬರೆದಿದ್ದು, “ಹಿಂದುತ್ವ ಸಂಘಟನೆಯೊಂದಿಗೆ ಸೇರಿಕೊಂಡು ಸ್ಥಳೀಯರು ಮನೆ ಮಾರಾಟದ ಬಗ್ಗೆ ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಕೋಮು ಸೌಹಾರ್ದತೆಯನ್ನು ಕೆಡಿಸುವ ಸಲುವಾಗಿ ಸಾಮೂಹಿಕ ವಲಸೆಯ ಬೆದರಿಕೆ ಹಾಕಿದ್ದಾರೆ” ಎಂದು ಹೇಳಿದ್ದಾರೆ.

ದಿ ವೈರ್ ಜೊತೆ ಮಾತನಾಡಿರುವ ಸಕ್ಸೇನಾ ಅವರು ” ಈ ಹಿಂದೆ 10-12 ಮಂದಿ ನನ್ನ ಮನೆ ಖರೀದಿಸಲು ಬಂದಿದ್ದರು. ಆದರೆ, ಮನೆ ಸೂಫಿ ಸಂತರ ದರ್ಗಾ ಮತ್ತು ಮುಸ್ಲಿಂ ಬಾಹುಳ್ಯದ ಪ್ರದೇಶಕ್ಕೆ ಹೊಂದಿಕೊಂಡಿರುವುದರಿಂದ ಅವರು ಮನೆ ಖರೀದಿಸಿಲ್ಲ” ಎಂದು ತಿಳಿಸಿದ್ದಾರೆ.

“ನನಗೆ ಮನೆ ವಾಪಸ್ ಬೇಡ, ಆದರೆ ಮುಸ್ಲಿಂ ಕುಟುಂಬಕ್ಕೆ ಮನೆ ಕೊಟ್ಟಿರುವುದನ್ನು ವಿರೋಧಿಸುವುದರ ಹಿಂದೆ ನಗರದ ಹೆಸರನ್ನು ಹಾಳು ಮಾಡುವ ಉದ್ದೇಶವಿದೆ” ಎಂದು ಸಕ್ಸೇನಾ ಆರೋಪಿಸಿದ್ದಾರೆ.

ಸಕ್ಸೇನಾ ಅವರು ಪೊಲೀಸರಿಗೆ ಬರೆದಿರುವ ಪತ್ರದಲ್ಲಿ ಅವರ ಮನೆ ಮಾರಾಟದ ಬಗೆಗಿನ ಸುಳ್ಳು ಆರೋಪಗಳನ್ನು ವಿವರಿಸಿಲ್ಲ. ಆದರೆ, ಖರೀದಿ ಒಪ್ಪಂದದಲ್ಲಿ ಸ್ಥಳೀಯ ಮಸೀದಿಯನ್ನು ಅಕ್ರಮ ಸ್ವಾಧೀನದಲ್ಲಿಟ್ಟುಕೊಂಡಿರುವ ಅಸ್ಸಾಮಿ ಮೌಲಾನಾ ಒಬ್ಬರು ಭಾಗಿಯಾಗಿದ್ದಾರೆ ಎಂದು ಕೆಲ ಸ್ಥಳೀಯ ನಿವಾಸಿಗಳು ಹೇಳಿರುವುದಾಗಿ ದಿ ವೈರ್ ತಿಳಿಸಿದೆ.

ಈ ಎಲ್ಲಾ ಗೊಂದಲಗಳ ನಡುವೆ ಸಕ್ಸೇನಾ ಅವರಿಂದ ಮನೆ ಖರೀದಿಸಿರುವ ಶಬ್ನಂ ಎಂಬ ಮುಸ್ಲಿಂ ಮಹಿಳೆಯ ಕುಟುಂಬ, ಸೂಕ್ತ ಬೆಲೆ ನೀಡಲು ಸಿದ್ದರಿರುವ ಯಾವುದೇ ಸನಾತನಿ ಹಿಂದೂಗಳಿಗೆ ಮನೆ ಮಾರಾಟ ಮಾಡಲು ಸಿದ್ದ ಎಂದಿದೆ. ಶಬ್ನಂ ಕುಟುಂಬ ಕೆಲ ದಿನಗಳ ಹಿಂದೆಯಷ್ಟೇ ಸಕ್ಸೇನಾ ಅವರಿಂದ ಮನೆ ಖರೀದಿಸಿತ್ತು. ಅದು ಬರೇಲಿಯಾ ಹಿಂದೂ ಪ್ರಾಬಲ್ಯ ಪ್ರದೇಶ ಪಂಜಾಬ್ ಪುರದಲ್ಲಿದೆ.

ಹಿಂದೂ ಪ್ರಾಬಲ್ಯ ಪ್ರದೇಶದಲ್ಲಿ ಮನೆ ಖರೀದಿಸುವಾಗ ಶಬ್ನಂ ಕುಟುಂಬ ತಲೆ ಮಾರುಗಳಿಂದ ಕಾಪಾಡಿಕೊಂಡು ಬಂದಿರುವ ನಗರದ ಕೋಮು ಸಾಮರಸ್ಯವನ್ನು ನಂಬಿತ್ತು. ಆದರೆ, ಅವರ ನಂಬಿಕೆ ಹುಸಿಯಾಗಿದೆ. ಮನೆ ಖರೀದಿಸಿದ ಬೆನ್ನಲ್ಲೇ ಪಂಜಾಬ್‌ ಪುರದ ಹಿಂದೂಗಳು ಅದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಮನೆಯ ನೋಂದಣಿ ಮಾಡಬಾರದು ಎಂದಿದ್ದಾರೆ. ಮುಸ್ಲಿಂ ಕುಟುಂಬಕ್ಕೆ ಮನೆ ಕೊಟ್ಟರೆ ‘ಸಾಮೂಹಿಕ ವಲಸೆ’ ಹೋಗುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ವರದಿ ವಿವರಿಸಿದೆ.

ಕೆಲ ಹಿಂದೂ ನಿವಾಸಿಗಳು ತಮ್ಮ ಮನೆಯ ಕಾಂಪೌಡ್ ಮೇಲೆ ‘ಸಾಮೂಹಿಕ್ ಪಲಾಯನ್’ (ಸಾಮೂಹಿಕ ಪಲಾಯನ) ಎಂಬ ಪೋಸ್ಟರ್ ಅಂಟಿಸಿ ಶಬ್ನಂ ಕುಟುಂಬಕ್ಕೆ ಮನೆ ಕೊಡುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಮುಸ್ಲಿಮರಿಗೆ ಮನೆ ಕೊಟ್ಟರೆ ಅದು ‘ಲವ್‌ ಜಿಹಾದ್‌’ಗೆ ಅವಕಾಶ ಕೊಟ್ಟಂತಾಗುತ್ತದೆ ಎಂದು ಕೆಲವರು ಹೇಳಿದ್ದಾರೆ, ಇನ್ನೂ ಕೆಲವರು ಮುಸ್ಲಿಮರ ಆಹಾರ ಪದ್ದತಿಗೆ ಆಕ್ಷೇಪ ಎತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಶಬ್ನಂ ಕುಟುಂಬಕ್ಕೆ ಮನೆ ಕೊಟ್ಟಿರುವುದನ್ನು ವಿರೋಧಿಸುತ್ತಿರುವ ಜನರನ್ನು ದಿ ವೈರ್ ಮಾತನಾಡಿಸಿದ್ದು,” ಒಬ್ಬ ವ್ಯಕ್ತಿ ಶಬ್ನಂ ಅವರ ಸಹೋದರ ನಸೀಮ್ 2010 ರ ಬರೇಲಿ ಗಲಭೆಯ ಮಾಸ್ಟರ್ ಮೈಂಡ್ ಎಂದು ಘೋಷಿಸುವ ಮಟ್ಟಕ್ಕೆ ಹೋಗಿದ್ದಾರೆ. ಇನ್ನೊಬ್ಬರು ಅಸ್ಸಾಮಿಗಳು ಮತ್ತು ಬಾಂಗ್ಲಾದೇಶಿಯರ ಬಗ್ಗೆ ಜಾಗರೂಕರಾಗಿರುವಂತೆ ಮುಖ್ಯಮಂತ್ರಿ ಮತ್ತು ಪ್ರಧಾನಿ ಹೇಳಿದ್ದಾರೆ ಎಂದಿದ್ದಾರೆ. ಆದರೆ, ಸಿಎಂ ಮತ್ತು ಪ್ರಧಾನಿ ಆ ರೀತಿ ಹೇಳಿರುವುದು ನಮಗೆ ಕಂಡು ಬಂದಿಲ್ಲ ಎಂದು ದಿ ವೈರ್ ವಿವರಿಸಿದೆ.

ಒಟ್ಟಿನಲ್ಲಿ ಹಿಂದೂ ಪ್ರಾಬಲ್ಯದ ಪ್ರದೇಶದಲ್ಲಿ ಹಿಂದೂ ವ್ಯಕ್ತಿಯೇ ಮುಸ್ಲಿಂ ಕುಟುಂಬಕ್ಕೆ ಮನೆ ಮಾರಾಟ ಮಾಡಿರುವುದಕ್ಕೆ ಸ್ಥಳೀಯ ಹಿಂದೂಗಳಿಂದ ವಿರೋಧ ವ್ಯಕ್ತವಾಗಿದೆ. ಇದರ ಹಿಂದೆ ಹಿಂದುತ್ವ ಸಂಘಟನೆಯ ಕುಮ್ಮಕ್ಕು ಇದೆ ಎಂದು ಮನೆ ಮಾರಿರುವ ಸಕ್ಸೇನಾ ಹೇಳಿದ್ದಾರೆ. ವಿರೋಧ ವ್ಯಕ್ತವಾದ ಹಿನ್ನೆಲೆ, ನಗರದ ಸಾಮರಸ್ಯ ಕಾಪಾಡಲು ಮುಸ್ಲಿಂ ಕುಟುಂಬ ಮನೆ ಮಾರಾಟಕ್ಕೆ ಮುಂದಾಗಿದೆ ಎಂದು ದಿ ವೈರ್ ವಿವರಿಸಿದೆ.

ಇದನ್ನೂ ಓದಿ : ಅಸ್ಸಾಂ | ‘ಮುಸ್ಲಿಂ ವಿವಾಹ, ವಿಚ್ಛೇದನ ನೋಂದಣಿ ಕಡ್ಡಾಯ’ ಮಸೂದೆ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...