Homeಮುಖಪುಟಹಿಂದುತ್ವವಾದಿಗಳಿಂದ ಪ್ರತಿಭಟನೆ : ಖರೀದಿಸಿದ ಬೆನ್ನಲ್ಲೇ ಮನೆ ಮಾರಾಟಕ್ಕಿಟ್ಟ ಮುಸ್ಲಿಂ ಕುಟುಂಬ ; ವರದಿ

ಹಿಂದುತ್ವವಾದಿಗಳಿಂದ ಪ್ರತಿಭಟನೆ : ಖರೀದಿಸಿದ ಬೆನ್ನಲ್ಲೇ ಮನೆ ಮಾರಾಟಕ್ಕಿಟ್ಟ ಮುಸ್ಲಿಂ ಕುಟುಂಬ ; ವರದಿ

- Advertisement -
- Advertisement -

ಉತ್ತರ ಪ್ರದೇಶದ ಬರೇಲಿಯ ಹಿಂದೂ ಪ್ರಾಬಲ್ಯ ಪ್ರದೇಶದಲ್ಲಿ ಮುಸ್ಲಿಂ ಕುಟುಂಬವೊಂದು ಮನೆ ಖರೀದಿಸಿದ್ದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಹಾಗಾಗಿ, ಖರೀದಿಸಿದ ಕೆಲವೇ ದಿನಗಳಲ್ಲಿ ಮುಸ್ಲಿಂ ಕುಟುಂಬ ಮನೆ ಮಾರಲು ನಿರ್ಧರಿಸಿದೆ ಎಂದು ದಿ ವೈರ್ ವರದಿ ಮಾಡಿದೆ.

ಮುಸ್ಲಿಂ ಕುಟುಂಬಕ್ಕೆ ಮನೆ ಮಾರಾಟ ಮಾಡಿರುವ ವಿಶಾಲ್ ಸಕ್ಸೇನಾ ಎಂಬವರು ಪೊಲೀಸರಿಗೆ ಪತ್ರವೊಂದನ್ನು ಬರೆದಿದ್ದು, “ಹಿಂದುತ್ವ ಸಂಘಟನೆಯೊಂದಿಗೆ ಸೇರಿಕೊಂಡು ಸ್ಥಳೀಯರು ಮನೆ ಮಾರಾಟದ ಬಗ್ಗೆ ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಕೋಮು ಸೌಹಾರ್ದತೆಯನ್ನು ಕೆಡಿಸುವ ಸಲುವಾಗಿ ಸಾಮೂಹಿಕ ವಲಸೆಯ ಬೆದರಿಕೆ ಹಾಕಿದ್ದಾರೆ” ಎಂದು ಹೇಳಿದ್ದಾರೆ.

ದಿ ವೈರ್ ಜೊತೆ ಮಾತನಾಡಿರುವ ಸಕ್ಸೇನಾ ಅವರು ” ಈ ಹಿಂದೆ 10-12 ಮಂದಿ ನನ್ನ ಮನೆ ಖರೀದಿಸಲು ಬಂದಿದ್ದರು. ಆದರೆ, ಮನೆ ಸೂಫಿ ಸಂತರ ದರ್ಗಾ ಮತ್ತು ಮುಸ್ಲಿಂ ಬಾಹುಳ್ಯದ ಪ್ರದೇಶಕ್ಕೆ ಹೊಂದಿಕೊಂಡಿರುವುದರಿಂದ ಅವರು ಮನೆ ಖರೀದಿಸಿಲ್ಲ” ಎಂದು ತಿಳಿಸಿದ್ದಾರೆ.

“ನನಗೆ ಮನೆ ವಾಪಸ್ ಬೇಡ, ಆದರೆ ಮುಸ್ಲಿಂ ಕುಟುಂಬಕ್ಕೆ ಮನೆ ಕೊಟ್ಟಿರುವುದನ್ನು ವಿರೋಧಿಸುವುದರ ಹಿಂದೆ ನಗರದ ಹೆಸರನ್ನು ಹಾಳು ಮಾಡುವ ಉದ್ದೇಶವಿದೆ” ಎಂದು ಸಕ್ಸೇನಾ ಆರೋಪಿಸಿದ್ದಾರೆ.

ಸಕ್ಸೇನಾ ಅವರು ಪೊಲೀಸರಿಗೆ ಬರೆದಿರುವ ಪತ್ರದಲ್ಲಿ ಅವರ ಮನೆ ಮಾರಾಟದ ಬಗೆಗಿನ ಸುಳ್ಳು ಆರೋಪಗಳನ್ನು ವಿವರಿಸಿಲ್ಲ. ಆದರೆ, ಖರೀದಿ ಒಪ್ಪಂದದಲ್ಲಿ ಸ್ಥಳೀಯ ಮಸೀದಿಯನ್ನು ಅಕ್ರಮ ಸ್ವಾಧೀನದಲ್ಲಿಟ್ಟುಕೊಂಡಿರುವ ಅಸ್ಸಾಮಿ ಮೌಲಾನಾ ಒಬ್ಬರು ಭಾಗಿಯಾಗಿದ್ದಾರೆ ಎಂದು ಕೆಲ ಸ್ಥಳೀಯ ನಿವಾಸಿಗಳು ಹೇಳಿರುವುದಾಗಿ ದಿ ವೈರ್ ತಿಳಿಸಿದೆ.

ಈ ಎಲ್ಲಾ ಗೊಂದಲಗಳ ನಡುವೆ ಸಕ್ಸೇನಾ ಅವರಿಂದ ಮನೆ ಖರೀದಿಸಿರುವ ಶಬ್ನಂ ಎಂಬ ಮುಸ್ಲಿಂ ಮಹಿಳೆಯ ಕುಟುಂಬ, ಸೂಕ್ತ ಬೆಲೆ ನೀಡಲು ಸಿದ್ದರಿರುವ ಯಾವುದೇ ಸನಾತನಿ ಹಿಂದೂಗಳಿಗೆ ಮನೆ ಮಾರಾಟ ಮಾಡಲು ಸಿದ್ದ ಎಂದಿದೆ. ಶಬ್ನಂ ಕುಟುಂಬ ಕೆಲ ದಿನಗಳ ಹಿಂದೆಯಷ್ಟೇ ಸಕ್ಸೇನಾ ಅವರಿಂದ ಮನೆ ಖರೀದಿಸಿತ್ತು. ಅದು ಬರೇಲಿಯಾ ಹಿಂದೂ ಪ್ರಾಬಲ್ಯ ಪ್ರದೇಶ ಪಂಜಾಬ್ ಪುರದಲ್ಲಿದೆ.

ಹಿಂದೂ ಪ್ರಾಬಲ್ಯ ಪ್ರದೇಶದಲ್ಲಿ ಮನೆ ಖರೀದಿಸುವಾಗ ಶಬ್ನಂ ಕುಟುಂಬ ತಲೆ ಮಾರುಗಳಿಂದ ಕಾಪಾಡಿಕೊಂಡು ಬಂದಿರುವ ನಗರದ ಕೋಮು ಸಾಮರಸ್ಯವನ್ನು ನಂಬಿತ್ತು. ಆದರೆ, ಅವರ ನಂಬಿಕೆ ಹುಸಿಯಾಗಿದೆ. ಮನೆ ಖರೀದಿಸಿದ ಬೆನ್ನಲ್ಲೇ ಪಂಜಾಬ್‌ ಪುರದ ಹಿಂದೂಗಳು ಅದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಮನೆಯ ನೋಂದಣಿ ಮಾಡಬಾರದು ಎಂದಿದ್ದಾರೆ. ಮುಸ್ಲಿಂ ಕುಟುಂಬಕ್ಕೆ ಮನೆ ಕೊಟ್ಟರೆ ‘ಸಾಮೂಹಿಕ ವಲಸೆ’ ಹೋಗುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ವರದಿ ವಿವರಿಸಿದೆ.

ಕೆಲ ಹಿಂದೂ ನಿವಾಸಿಗಳು ತಮ್ಮ ಮನೆಯ ಕಾಂಪೌಡ್ ಮೇಲೆ ‘ಸಾಮೂಹಿಕ್ ಪಲಾಯನ್’ (ಸಾಮೂಹಿಕ ಪಲಾಯನ) ಎಂಬ ಪೋಸ್ಟರ್ ಅಂಟಿಸಿ ಶಬ್ನಂ ಕುಟುಂಬಕ್ಕೆ ಮನೆ ಕೊಡುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಮುಸ್ಲಿಮರಿಗೆ ಮನೆ ಕೊಟ್ಟರೆ ಅದು ‘ಲವ್‌ ಜಿಹಾದ್‌’ಗೆ ಅವಕಾಶ ಕೊಟ್ಟಂತಾಗುತ್ತದೆ ಎಂದು ಕೆಲವರು ಹೇಳಿದ್ದಾರೆ, ಇನ್ನೂ ಕೆಲವರು ಮುಸ್ಲಿಮರ ಆಹಾರ ಪದ್ದತಿಗೆ ಆಕ್ಷೇಪ ಎತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಶಬ್ನಂ ಕುಟುಂಬಕ್ಕೆ ಮನೆ ಕೊಟ್ಟಿರುವುದನ್ನು ವಿರೋಧಿಸುತ್ತಿರುವ ಜನರನ್ನು ದಿ ವೈರ್ ಮಾತನಾಡಿಸಿದ್ದು,” ಒಬ್ಬ ವ್ಯಕ್ತಿ ಶಬ್ನಂ ಅವರ ಸಹೋದರ ನಸೀಮ್ 2010 ರ ಬರೇಲಿ ಗಲಭೆಯ ಮಾಸ್ಟರ್ ಮೈಂಡ್ ಎಂದು ಘೋಷಿಸುವ ಮಟ್ಟಕ್ಕೆ ಹೋಗಿದ್ದಾರೆ. ಇನ್ನೊಬ್ಬರು ಅಸ್ಸಾಮಿಗಳು ಮತ್ತು ಬಾಂಗ್ಲಾದೇಶಿಯರ ಬಗ್ಗೆ ಜಾಗರೂಕರಾಗಿರುವಂತೆ ಮುಖ್ಯಮಂತ್ರಿ ಮತ್ತು ಪ್ರಧಾನಿ ಹೇಳಿದ್ದಾರೆ ಎಂದಿದ್ದಾರೆ. ಆದರೆ, ಸಿಎಂ ಮತ್ತು ಪ್ರಧಾನಿ ಆ ರೀತಿ ಹೇಳಿರುವುದು ನಮಗೆ ಕಂಡು ಬಂದಿಲ್ಲ ಎಂದು ದಿ ವೈರ್ ವಿವರಿಸಿದೆ.

ಒಟ್ಟಿನಲ್ಲಿ ಹಿಂದೂ ಪ್ರಾಬಲ್ಯದ ಪ್ರದೇಶದಲ್ಲಿ ಹಿಂದೂ ವ್ಯಕ್ತಿಯೇ ಮುಸ್ಲಿಂ ಕುಟುಂಬಕ್ಕೆ ಮನೆ ಮಾರಾಟ ಮಾಡಿರುವುದಕ್ಕೆ ಸ್ಥಳೀಯ ಹಿಂದೂಗಳಿಂದ ವಿರೋಧ ವ್ಯಕ್ತವಾಗಿದೆ. ಇದರ ಹಿಂದೆ ಹಿಂದುತ್ವ ಸಂಘಟನೆಯ ಕುಮ್ಮಕ್ಕು ಇದೆ ಎಂದು ಮನೆ ಮಾರಿರುವ ಸಕ್ಸೇನಾ ಹೇಳಿದ್ದಾರೆ. ವಿರೋಧ ವ್ಯಕ್ತವಾದ ಹಿನ್ನೆಲೆ, ನಗರದ ಸಾಮರಸ್ಯ ಕಾಪಾಡಲು ಮುಸ್ಲಿಂ ಕುಟುಂಬ ಮನೆ ಮಾರಾಟಕ್ಕೆ ಮುಂದಾಗಿದೆ ಎಂದು ದಿ ವೈರ್ ವಿವರಿಸಿದೆ.

ಇದನ್ನೂ ಓದಿ : ಅಸ್ಸಾಂ | ‘ಮುಸ್ಲಿಂ ವಿವಾಹ, ವಿಚ್ಛೇದನ ನೋಂದಣಿ ಕಡ್ಡಾಯ’ ಮಸೂದೆ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...