Homeಮುಖಪುಟಹಿಂದುತ್ವವಾದಿಗಳಿಂದ ಪ್ರತಿಭಟನೆ : ಖರೀದಿಸಿದ ಬೆನ್ನಲ್ಲೇ ಮನೆ ಮಾರಾಟಕ್ಕಿಟ್ಟ ಮುಸ್ಲಿಂ ಕುಟುಂಬ ; ವರದಿ

ಹಿಂದುತ್ವವಾದಿಗಳಿಂದ ಪ್ರತಿಭಟನೆ : ಖರೀದಿಸಿದ ಬೆನ್ನಲ್ಲೇ ಮನೆ ಮಾರಾಟಕ್ಕಿಟ್ಟ ಮುಸ್ಲಿಂ ಕುಟುಂಬ ; ವರದಿ

- Advertisement -
- Advertisement -

ಉತ್ತರ ಪ್ರದೇಶದ ಬರೇಲಿಯ ಹಿಂದೂ ಪ್ರಾಬಲ್ಯ ಪ್ರದೇಶದಲ್ಲಿ ಮುಸ್ಲಿಂ ಕುಟುಂಬವೊಂದು ಮನೆ ಖರೀದಿಸಿದ್ದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಹಾಗಾಗಿ, ಖರೀದಿಸಿದ ಕೆಲವೇ ದಿನಗಳಲ್ಲಿ ಮುಸ್ಲಿಂ ಕುಟುಂಬ ಮನೆ ಮಾರಲು ನಿರ್ಧರಿಸಿದೆ ಎಂದು ದಿ ವೈರ್ ವರದಿ ಮಾಡಿದೆ.

ಮುಸ್ಲಿಂ ಕುಟುಂಬಕ್ಕೆ ಮನೆ ಮಾರಾಟ ಮಾಡಿರುವ ವಿಶಾಲ್ ಸಕ್ಸೇನಾ ಎಂಬವರು ಪೊಲೀಸರಿಗೆ ಪತ್ರವೊಂದನ್ನು ಬರೆದಿದ್ದು, “ಹಿಂದುತ್ವ ಸಂಘಟನೆಯೊಂದಿಗೆ ಸೇರಿಕೊಂಡು ಸ್ಥಳೀಯರು ಮನೆ ಮಾರಾಟದ ಬಗ್ಗೆ ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಕೋಮು ಸೌಹಾರ್ದತೆಯನ್ನು ಕೆಡಿಸುವ ಸಲುವಾಗಿ ಸಾಮೂಹಿಕ ವಲಸೆಯ ಬೆದರಿಕೆ ಹಾಕಿದ್ದಾರೆ” ಎಂದು ಹೇಳಿದ್ದಾರೆ.

ದಿ ವೈರ್ ಜೊತೆ ಮಾತನಾಡಿರುವ ಸಕ್ಸೇನಾ ಅವರು ” ಈ ಹಿಂದೆ 10-12 ಮಂದಿ ನನ್ನ ಮನೆ ಖರೀದಿಸಲು ಬಂದಿದ್ದರು. ಆದರೆ, ಮನೆ ಸೂಫಿ ಸಂತರ ದರ್ಗಾ ಮತ್ತು ಮುಸ್ಲಿಂ ಬಾಹುಳ್ಯದ ಪ್ರದೇಶಕ್ಕೆ ಹೊಂದಿಕೊಂಡಿರುವುದರಿಂದ ಅವರು ಮನೆ ಖರೀದಿಸಿಲ್ಲ” ಎಂದು ತಿಳಿಸಿದ್ದಾರೆ.

“ನನಗೆ ಮನೆ ವಾಪಸ್ ಬೇಡ, ಆದರೆ ಮುಸ್ಲಿಂ ಕುಟುಂಬಕ್ಕೆ ಮನೆ ಕೊಟ್ಟಿರುವುದನ್ನು ವಿರೋಧಿಸುವುದರ ಹಿಂದೆ ನಗರದ ಹೆಸರನ್ನು ಹಾಳು ಮಾಡುವ ಉದ್ದೇಶವಿದೆ” ಎಂದು ಸಕ್ಸೇನಾ ಆರೋಪಿಸಿದ್ದಾರೆ.

ಸಕ್ಸೇನಾ ಅವರು ಪೊಲೀಸರಿಗೆ ಬರೆದಿರುವ ಪತ್ರದಲ್ಲಿ ಅವರ ಮನೆ ಮಾರಾಟದ ಬಗೆಗಿನ ಸುಳ್ಳು ಆರೋಪಗಳನ್ನು ವಿವರಿಸಿಲ್ಲ. ಆದರೆ, ಖರೀದಿ ಒಪ್ಪಂದದಲ್ಲಿ ಸ್ಥಳೀಯ ಮಸೀದಿಯನ್ನು ಅಕ್ರಮ ಸ್ವಾಧೀನದಲ್ಲಿಟ್ಟುಕೊಂಡಿರುವ ಅಸ್ಸಾಮಿ ಮೌಲಾನಾ ಒಬ್ಬರು ಭಾಗಿಯಾಗಿದ್ದಾರೆ ಎಂದು ಕೆಲ ಸ್ಥಳೀಯ ನಿವಾಸಿಗಳು ಹೇಳಿರುವುದಾಗಿ ದಿ ವೈರ್ ತಿಳಿಸಿದೆ.

ಈ ಎಲ್ಲಾ ಗೊಂದಲಗಳ ನಡುವೆ ಸಕ್ಸೇನಾ ಅವರಿಂದ ಮನೆ ಖರೀದಿಸಿರುವ ಶಬ್ನಂ ಎಂಬ ಮುಸ್ಲಿಂ ಮಹಿಳೆಯ ಕುಟುಂಬ, ಸೂಕ್ತ ಬೆಲೆ ನೀಡಲು ಸಿದ್ದರಿರುವ ಯಾವುದೇ ಸನಾತನಿ ಹಿಂದೂಗಳಿಗೆ ಮನೆ ಮಾರಾಟ ಮಾಡಲು ಸಿದ್ದ ಎಂದಿದೆ. ಶಬ್ನಂ ಕುಟುಂಬ ಕೆಲ ದಿನಗಳ ಹಿಂದೆಯಷ್ಟೇ ಸಕ್ಸೇನಾ ಅವರಿಂದ ಮನೆ ಖರೀದಿಸಿತ್ತು. ಅದು ಬರೇಲಿಯಾ ಹಿಂದೂ ಪ್ರಾಬಲ್ಯ ಪ್ರದೇಶ ಪಂಜಾಬ್ ಪುರದಲ್ಲಿದೆ.

ಹಿಂದೂ ಪ್ರಾಬಲ್ಯ ಪ್ರದೇಶದಲ್ಲಿ ಮನೆ ಖರೀದಿಸುವಾಗ ಶಬ್ನಂ ಕುಟುಂಬ ತಲೆ ಮಾರುಗಳಿಂದ ಕಾಪಾಡಿಕೊಂಡು ಬಂದಿರುವ ನಗರದ ಕೋಮು ಸಾಮರಸ್ಯವನ್ನು ನಂಬಿತ್ತು. ಆದರೆ, ಅವರ ನಂಬಿಕೆ ಹುಸಿಯಾಗಿದೆ. ಮನೆ ಖರೀದಿಸಿದ ಬೆನ್ನಲ್ಲೇ ಪಂಜಾಬ್‌ ಪುರದ ಹಿಂದೂಗಳು ಅದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಮನೆಯ ನೋಂದಣಿ ಮಾಡಬಾರದು ಎಂದಿದ್ದಾರೆ. ಮುಸ್ಲಿಂ ಕುಟುಂಬಕ್ಕೆ ಮನೆ ಕೊಟ್ಟರೆ ‘ಸಾಮೂಹಿಕ ವಲಸೆ’ ಹೋಗುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ವರದಿ ವಿವರಿಸಿದೆ.

ಕೆಲ ಹಿಂದೂ ನಿವಾಸಿಗಳು ತಮ್ಮ ಮನೆಯ ಕಾಂಪೌಡ್ ಮೇಲೆ ‘ಸಾಮೂಹಿಕ್ ಪಲಾಯನ್’ (ಸಾಮೂಹಿಕ ಪಲಾಯನ) ಎಂಬ ಪೋಸ್ಟರ್ ಅಂಟಿಸಿ ಶಬ್ನಂ ಕುಟುಂಬಕ್ಕೆ ಮನೆ ಕೊಡುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಮುಸ್ಲಿಮರಿಗೆ ಮನೆ ಕೊಟ್ಟರೆ ಅದು ‘ಲವ್‌ ಜಿಹಾದ್‌’ಗೆ ಅವಕಾಶ ಕೊಟ್ಟಂತಾಗುತ್ತದೆ ಎಂದು ಕೆಲವರು ಹೇಳಿದ್ದಾರೆ, ಇನ್ನೂ ಕೆಲವರು ಮುಸ್ಲಿಮರ ಆಹಾರ ಪದ್ದತಿಗೆ ಆಕ್ಷೇಪ ಎತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಶಬ್ನಂ ಕುಟುಂಬಕ್ಕೆ ಮನೆ ಕೊಟ್ಟಿರುವುದನ್ನು ವಿರೋಧಿಸುತ್ತಿರುವ ಜನರನ್ನು ದಿ ವೈರ್ ಮಾತನಾಡಿಸಿದ್ದು,” ಒಬ್ಬ ವ್ಯಕ್ತಿ ಶಬ್ನಂ ಅವರ ಸಹೋದರ ನಸೀಮ್ 2010 ರ ಬರೇಲಿ ಗಲಭೆಯ ಮಾಸ್ಟರ್ ಮೈಂಡ್ ಎಂದು ಘೋಷಿಸುವ ಮಟ್ಟಕ್ಕೆ ಹೋಗಿದ್ದಾರೆ. ಇನ್ನೊಬ್ಬರು ಅಸ್ಸಾಮಿಗಳು ಮತ್ತು ಬಾಂಗ್ಲಾದೇಶಿಯರ ಬಗ್ಗೆ ಜಾಗರೂಕರಾಗಿರುವಂತೆ ಮುಖ್ಯಮಂತ್ರಿ ಮತ್ತು ಪ್ರಧಾನಿ ಹೇಳಿದ್ದಾರೆ ಎಂದಿದ್ದಾರೆ. ಆದರೆ, ಸಿಎಂ ಮತ್ತು ಪ್ರಧಾನಿ ಆ ರೀತಿ ಹೇಳಿರುವುದು ನಮಗೆ ಕಂಡು ಬಂದಿಲ್ಲ ಎಂದು ದಿ ವೈರ್ ವಿವರಿಸಿದೆ.

ಒಟ್ಟಿನಲ್ಲಿ ಹಿಂದೂ ಪ್ರಾಬಲ್ಯದ ಪ್ರದೇಶದಲ್ಲಿ ಹಿಂದೂ ವ್ಯಕ್ತಿಯೇ ಮುಸ್ಲಿಂ ಕುಟುಂಬಕ್ಕೆ ಮನೆ ಮಾರಾಟ ಮಾಡಿರುವುದಕ್ಕೆ ಸ್ಥಳೀಯ ಹಿಂದೂಗಳಿಂದ ವಿರೋಧ ವ್ಯಕ್ತವಾಗಿದೆ. ಇದರ ಹಿಂದೆ ಹಿಂದುತ್ವ ಸಂಘಟನೆಯ ಕುಮ್ಮಕ್ಕು ಇದೆ ಎಂದು ಮನೆ ಮಾರಿರುವ ಸಕ್ಸೇನಾ ಹೇಳಿದ್ದಾರೆ. ವಿರೋಧ ವ್ಯಕ್ತವಾದ ಹಿನ್ನೆಲೆ, ನಗರದ ಸಾಮರಸ್ಯ ಕಾಪಾಡಲು ಮುಸ್ಲಿಂ ಕುಟುಂಬ ಮನೆ ಮಾರಾಟಕ್ಕೆ ಮುಂದಾಗಿದೆ ಎಂದು ದಿ ವೈರ್ ವಿವರಿಸಿದೆ.

ಇದನ್ನೂ ಓದಿ : ಅಸ್ಸಾಂ | ‘ಮುಸ್ಲಿಂ ವಿವಾಹ, ವಿಚ್ಛೇದನ ನೋಂದಣಿ ಕಡ್ಡಾಯ’ ಮಸೂದೆ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...