Homeಕರ್ನಾಟಕಡಿ ಕೆ ಶಿವಕುಮಾರ್ ಹೆಸರಿನಲ್ಲಿ ಫಾಕ್ಸ್ ಕಾನ್‌‌ ಸಂಸ್ಥೆಗೆ ನಕಲಿ ಪತ್ರ: ಪ್ರಕರಣ ದಾಖಲು

ಡಿ ಕೆ ಶಿವಕುಮಾರ್ ಹೆಸರಿನಲ್ಲಿ ಫಾಕ್ಸ್ ಕಾನ್‌‌ ಸಂಸ್ಥೆಗೆ ನಕಲಿ ಪತ್ರ: ಪ್ರಕರಣ ದಾಖಲು

- Advertisement -
- Advertisement -

ಆಪಲ್ ಏರ್‌ಪಾಡ್ಸ್ ಉತ್ಪಾದನಾ ಪಾಲುದಾರರಲ್ಲಿ ಒಂದಾದ ಫಾಕ್ಸ್‌ಕಾನ್ ಟೆಕ್ನಾಲಜಿ ಗ್ರೂಪ್‌ನ ಅಧ್ಯಕ್ಷರಿಗೆ ಕರ್ನಾಟಕ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಬರೆದಿದ್ದಾರೆ ಎನ್ನಲಾದ ನಕಲಿ ಪತ್ರವೊಂದು ವೈರಲ್‌ ಆಗಿದ್ದು, ಪತ್ರದಲ್ಲಿ ಆಪಲ್ ಏರ್‌ಪಾಡ್ಸ್ ಉತ್ಪಾದನಾ ಘಟಕವನ್ನು ಹೈದ್ರಾಬಾದ್‌ನಿಂದ ಬೆಂಗಳೂರಿಗೆ ಸ್ಥಳಾಂತರಿಸುವಂತೆ ಆಗ್ರಹಿಸಲಾಗಿದೆ.

ಪತ್ರ ವೈರಲ್ ಆದ ಕೂಡಲೇ ತೆಲಂಗಾಣದ ಆಡಳಿತಾರೂಢ ಬಿಆರ್‌ಎಸ್ ಪಕ್ಷವು ಎಕ್ಸ್‌ನಲ್ಲಿ ಕರ್ನಾಟಕ ಸರ್ಕಾರ ಹೈದರಾಬಾದ್ ವಿರುದ್ಧ ದೊಡ್ಡ ಪಿತೂರಿ ಮಾಡಿದೆ ಎಂದು ಆರೋಪಿಸಿದೆ. ಆದರೆ ಈ ಆರೋಪವನ್ನು ಡಿಕೆ ಶಿವಕುಮಾರ್ ಅವರು ನಿರಾಕರಿಸಿದ್ದರು.

ಈ ಬಗ್ಗೆ ಡಿಸಿಎಂ ಶಿವಕುಮಾರ್ ಅವರ ಆಪ್ತ ಕಾರ್ಯದರ್ಶಿ ರಾಜೇಂದ್ರ ಪ್ರಸಾದ್ ಎಂಎನ್ ಅವರು ಶನಿವಾರ ವಿಧಾನಸೌಧ ಪೊಲೀಸರಿಗೆ ದೂರು ನೀಡಿದ್ದಾರೆ. ಪತ್ರದ ಮೇಲಿನ ಸಹಿ ನಕಲಿಯಾಗಿದ್ದು, ಬರೆದಿರುವ ಲೆಟರ್ ಹೆಡ್ ಕೂಡ ನಕಲಿ ಎಂದು ರಾಜೇಂದ್ರ ಪ್ರಸಾದ್ ಹೇಳಿದ್ದಾರೆ.

ಆಪಲ್ ಏರ್‌ಪಾಡ್ಸ್ ಉತ್ಪಾದನಾ ಘಟಕವನ್ನು ಬೆಂಗಳೂರಿಗೆ ಸ್ಥಳಾಂತರಿಸುವಂತೆ ಸೆ.25ರಂದು ನಕಲಿ ಪತ್ರವು ಫಾಕ್ಸ್‌ಕಾನ್ ಅಧ್ಯಕ್ಷರಿಗೆ ಡಿಕೆ ಶಿವಕುಮಾರ್‌ ಹೆಸರಿನಲ್ಲಿ ಬರೆಯಲಾಗಿತ್ತು.

ಪತ್ರದಲ್ಲಿ ನೀವು ಹೈದರಾಬಾದ್‌ನಲ್ಲಿ ಸ್ಥಾಪಿಸಲು ಯೋಜಿಸಿರುವ ಆಪಲ್ ಏರ್‌ಪಾಡ್ಸ್ ಉದ್ಯಮವನ್ನು ಬೆಂಗಳೂರಿಗೆ ಸ್ಥಳಾಂತರಿಸಲು ನಮ್ಮ ಸರ್ಕಾರದ ಪರವಾಗಿ ಆಗ್ರಹಿಸುತ್ತೇನೆ. ಈ ಕ್ರಮದಿಂದ ಹಲವಾರು ಪರಸ್ಪರ ಪ್ರಯೋಜನಗಳು ಇರಲಿದೆ. ಬೆಂಗಳೂರಿನಲ್ಲಿ ಇರುವುದರಿಂದ ನಿಮ್ಮ ಅಂತರಾಷ್ಟ್ರೀಯ ಮನ್ನಣೆಯೂ ಹೆಚ್ಚಳವಾಗಲಿದೆ ಎಂದು ಉಲ್ಲೇಖಿಸಲಾಗಿತ್ತು.

ಇದಲ್ಲದೆ ಹೈದರಾಬಾದ್‌ಗೆ ಹೋಲಿಸಿದರೆ ಬೆಂಗಳೂರು ತನ್ನ ಸುರಕ್ಷತೆಗೆ ಹೆಸರುವಾಸಿಯಾಗಿದೆ ಮತ್ತು 50 ವರ್ಷಗಳ ಇತಿಹಾಸವನ್ನು ಹೊಂದಿರುವ  ಐಟಿ ಉದ್ಯಮವನ್ನು ಹೊಂದಿದೆ. ನಗರವು ಉನ್ನತ ಲಾಜಿಸ್ಟಿಕ್ಸ್ ಸಾಮರ್ಥ್ಯಗಳನ್ನು ಹೊಂದಿದೆ. ವಿಶೇಷವಾಗಿ ಹೈದರಾಬಾದ್‌ನಲ್ಲಿನ ಹಿಂದಿನ ಕೋಮು ಗಲಭೆಗಳ ಘಟನೆಗಳನ್ನು ನೋಡಿದಾಗ ಇದು ನಿಮ್ಮ ವ್ಯವಹಾರಕ್ಕೆ ಅಪಾಯವನ್ನುಂಟುಮಾಡುತ್ತದೆ. ಇದಲ್ಲದೆ ಹೈದರಾಬಾದ್‌ನಲ್ಲಿರುವ ಹಲವಾರು ಅಂತರಾಷ್ಟ್ರೀಯ ಕೈಗಾರಿಕೆಗಳು ಬೆಂಗಳೂರಿಗೆ ಸ್ಥಳಾಂತರಗೊಳ್ಳಲು ಆಸಕ್ತಿಯನ್ನು ವ್ಯಕ್ತಪಡಿಸಿವೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಈ ಕುರಿತು ಬಿಆರ್‌ಎಸ್ ಪಕ್ಷವು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ಕರ್ನಾಟಕ ಕಾಂಗ್ರೆಸ್ ಸರ್ಕಾರವು ಹೈದರಾಬಾದ್ ವಿರುದ್ಧ ದೊಡ್ಡ ಸಂಚು ರೂಪಿಸಿದೆ. ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕಂಪನಿಗಳನ್ನು ಹೈದರಾಬಾದ್‌ನಿಂದ ಕರ್ನಾಟಕಕ್ಕೆ ಸ್ಥಳಾಂತರಿಸಲು ಕರ್ನಾಟಕದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೊಡ್ಡ ಷಡ್ಯಂತ್ರ ಮಾಡಿದ್ದಾರೆ ಎಂದು ಆರೋಪಿಸಿದೆ.

ಈ ಕುರಿತು ಕುಮಾರಕೃಪದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಈ ಪತ್ರ ನಕಲಿಯಾಗಿದೆ ಎಂದು ಹೇಳಿದ್ದಾರೆ. ನನ್ನ ಲೆಟರ್ ಹೆಡ್ ವಿನ್ಯಾಸ, ಬಣ್ಣ ಬೇರೆ ಇದೆ. ನನ್ನ ಲೆಟರ್ ಹೆಡ್ ಪ್ರತಿ ಪುಟಕ್ಕೆ ಸಂಖ್ಯೆಗಳಿರುತ್ತವೆ. ನನ್ನ ಲೆಟರ್ ಹೆಡ್ ಹಸಿರು ಬಣ್ಣದಲ್ಲಿ ಇಲ್ಲ. 15 ವರ್ಷಗಳ ಹಿಂದೆ ಶಾಸಕರುಗಳು ಹಸಿರು ಬಣ್ಣದ ಲೆಟರ್ ಹೆಡ್ ಬಳಸುತ್ತಿದ್ದರು. ಈಗ ಆ ಬಣ್ಣದ ಲೆಟರ್ ಹೆಡ್‌ನ್ನು ಯಾರೂ ಬಳಸುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ದಲಿತ ಯುವಕನ ಮೇಲೆ ಹಲ್ಲೆ ನಡೆಸಿ ಮೈಮೇಲೆ ಮೂತ್ರ ವಿಸರ್ಜನೆ: 6 ಮಂದಿ ದುಷ್ಕರ್ಮಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...