Homeಕರ್ನಾಟಕಡಿ ಕೆ ಶಿವಕುಮಾರ್ ಹೆಸರಿನಲ್ಲಿ ಫಾಕ್ಸ್ ಕಾನ್‌‌ ಸಂಸ್ಥೆಗೆ ನಕಲಿ ಪತ್ರ: ಪ್ರಕರಣ ದಾಖಲು

ಡಿ ಕೆ ಶಿವಕುಮಾರ್ ಹೆಸರಿನಲ್ಲಿ ಫಾಕ್ಸ್ ಕಾನ್‌‌ ಸಂಸ್ಥೆಗೆ ನಕಲಿ ಪತ್ರ: ಪ್ರಕರಣ ದಾಖಲು

- Advertisement -
- Advertisement -

ಆಪಲ್ ಏರ್‌ಪಾಡ್ಸ್ ಉತ್ಪಾದನಾ ಪಾಲುದಾರರಲ್ಲಿ ಒಂದಾದ ಫಾಕ್ಸ್‌ಕಾನ್ ಟೆಕ್ನಾಲಜಿ ಗ್ರೂಪ್‌ನ ಅಧ್ಯಕ್ಷರಿಗೆ ಕರ್ನಾಟಕ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಬರೆದಿದ್ದಾರೆ ಎನ್ನಲಾದ ನಕಲಿ ಪತ್ರವೊಂದು ವೈರಲ್‌ ಆಗಿದ್ದು, ಪತ್ರದಲ್ಲಿ ಆಪಲ್ ಏರ್‌ಪಾಡ್ಸ್ ಉತ್ಪಾದನಾ ಘಟಕವನ್ನು ಹೈದ್ರಾಬಾದ್‌ನಿಂದ ಬೆಂಗಳೂರಿಗೆ ಸ್ಥಳಾಂತರಿಸುವಂತೆ ಆಗ್ರಹಿಸಲಾಗಿದೆ.

ಪತ್ರ ವೈರಲ್ ಆದ ಕೂಡಲೇ ತೆಲಂಗಾಣದ ಆಡಳಿತಾರೂಢ ಬಿಆರ್‌ಎಸ್ ಪಕ್ಷವು ಎಕ್ಸ್‌ನಲ್ಲಿ ಕರ್ನಾಟಕ ಸರ್ಕಾರ ಹೈದರಾಬಾದ್ ವಿರುದ್ಧ ದೊಡ್ಡ ಪಿತೂರಿ ಮಾಡಿದೆ ಎಂದು ಆರೋಪಿಸಿದೆ. ಆದರೆ ಈ ಆರೋಪವನ್ನು ಡಿಕೆ ಶಿವಕುಮಾರ್ ಅವರು ನಿರಾಕರಿಸಿದ್ದರು.

ಈ ಬಗ್ಗೆ ಡಿಸಿಎಂ ಶಿವಕುಮಾರ್ ಅವರ ಆಪ್ತ ಕಾರ್ಯದರ್ಶಿ ರಾಜೇಂದ್ರ ಪ್ರಸಾದ್ ಎಂಎನ್ ಅವರು ಶನಿವಾರ ವಿಧಾನಸೌಧ ಪೊಲೀಸರಿಗೆ ದೂರು ನೀಡಿದ್ದಾರೆ. ಪತ್ರದ ಮೇಲಿನ ಸಹಿ ನಕಲಿಯಾಗಿದ್ದು, ಬರೆದಿರುವ ಲೆಟರ್ ಹೆಡ್ ಕೂಡ ನಕಲಿ ಎಂದು ರಾಜೇಂದ್ರ ಪ್ರಸಾದ್ ಹೇಳಿದ್ದಾರೆ.

ಆಪಲ್ ಏರ್‌ಪಾಡ್ಸ್ ಉತ್ಪಾದನಾ ಘಟಕವನ್ನು ಬೆಂಗಳೂರಿಗೆ ಸ್ಥಳಾಂತರಿಸುವಂತೆ ಸೆ.25ರಂದು ನಕಲಿ ಪತ್ರವು ಫಾಕ್ಸ್‌ಕಾನ್ ಅಧ್ಯಕ್ಷರಿಗೆ ಡಿಕೆ ಶಿವಕುಮಾರ್‌ ಹೆಸರಿನಲ್ಲಿ ಬರೆಯಲಾಗಿತ್ತು.

ಪತ್ರದಲ್ಲಿ ನೀವು ಹೈದರಾಬಾದ್‌ನಲ್ಲಿ ಸ್ಥಾಪಿಸಲು ಯೋಜಿಸಿರುವ ಆಪಲ್ ಏರ್‌ಪಾಡ್ಸ್ ಉದ್ಯಮವನ್ನು ಬೆಂಗಳೂರಿಗೆ ಸ್ಥಳಾಂತರಿಸಲು ನಮ್ಮ ಸರ್ಕಾರದ ಪರವಾಗಿ ಆಗ್ರಹಿಸುತ್ತೇನೆ. ಈ ಕ್ರಮದಿಂದ ಹಲವಾರು ಪರಸ್ಪರ ಪ್ರಯೋಜನಗಳು ಇರಲಿದೆ. ಬೆಂಗಳೂರಿನಲ್ಲಿ ಇರುವುದರಿಂದ ನಿಮ್ಮ ಅಂತರಾಷ್ಟ್ರೀಯ ಮನ್ನಣೆಯೂ ಹೆಚ್ಚಳವಾಗಲಿದೆ ಎಂದು ಉಲ್ಲೇಖಿಸಲಾಗಿತ್ತು.

ಇದಲ್ಲದೆ ಹೈದರಾಬಾದ್‌ಗೆ ಹೋಲಿಸಿದರೆ ಬೆಂಗಳೂರು ತನ್ನ ಸುರಕ್ಷತೆಗೆ ಹೆಸರುವಾಸಿಯಾಗಿದೆ ಮತ್ತು 50 ವರ್ಷಗಳ ಇತಿಹಾಸವನ್ನು ಹೊಂದಿರುವ  ಐಟಿ ಉದ್ಯಮವನ್ನು ಹೊಂದಿದೆ. ನಗರವು ಉನ್ನತ ಲಾಜಿಸ್ಟಿಕ್ಸ್ ಸಾಮರ್ಥ್ಯಗಳನ್ನು ಹೊಂದಿದೆ. ವಿಶೇಷವಾಗಿ ಹೈದರಾಬಾದ್‌ನಲ್ಲಿನ ಹಿಂದಿನ ಕೋಮು ಗಲಭೆಗಳ ಘಟನೆಗಳನ್ನು ನೋಡಿದಾಗ ಇದು ನಿಮ್ಮ ವ್ಯವಹಾರಕ್ಕೆ ಅಪಾಯವನ್ನುಂಟುಮಾಡುತ್ತದೆ. ಇದಲ್ಲದೆ ಹೈದರಾಬಾದ್‌ನಲ್ಲಿರುವ ಹಲವಾರು ಅಂತರಾಷ್ಟ್ರೀಯ ಕೈಗಾರಿಕೆಗಳು ಬೆಂಗಳೂರಿಗೆ ಸ್ಥಳಾಂತರಗೊಳ್ಳಲು ಆಸಕ್ತಿಯನ್ನು ವ್ಯಕ್ತಪಡಿಸಿವೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಈ ಕುರಿತು ಬಿಆರ್‌ಎಸ್ ಪಕ್ಷವು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ಕರ್ನಾಟಕ ಕಾಂಗ್ರೆಸ್ ಸರ್ಕಾರವು ಹೈದರಾಬಾದ್ ವಿರುದ್ಧ ದೊಡ್ಡ ಸಂಚು ರೂಪಿಸಿದೆ. ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕಂಪನಿಗಳನ್ನು ಹೈದರಾಬಾದ್‌ನಿಂದ ಕರ್ನಾಟಕಕ್ಕೆ ಸ್ಥಳಾಂತರಿಸಲು ಕರ್ನಾಟಕದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೊಡ್ಡ ಷಡ್ಯಂತ್ರ ಮಾಡಿದ್ದಾರೆ ಎಂದು ಆರೋಪಿಸಿದೆ.

ಈ ಕುರಿತು ಕುಮಾರಕೃಪದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಈ ಪತ್ರ ನಕಲಿಯಾಗಿದೆ ಎಂದು ಹೇಳಿದ್ದಾರೆ. ನನ್ನ ಲೆಟರ್ ಹೆಡ್ ವಿನ್ಯಾಸ, ಬಣ್ಣ ಬೇರೆ ಇದೆ. ನನ್ನ ಲೆಟರ್ ಹೆಡ್ ಪ್ರತಿ ಪುಟಕ್ಕೆ ಸಂಖ್ಯೆಗಳಿರುತ್ತವೆ. ನನ್ನ ಲೆಟರ್ ಹೆಡ್ ಹಸಿರು ಬಣ್ಣದಲ್ಲಿ ಇಲ್ಲ. 15 ವರ್ಷಗಳ ಹಿಂದೆ ಶಾಸಕರುಗಳು ಹಸಿರು ಬಣ್ಣದ ಲೆಟರ್ ಹೆಡ್ ಬಳಸುತ್ತಿದ್ದರು. ಈಗ ಆ ಬಣ್ಣದ ಲೆಟರ್ ಹೆಡ್‌ನ್ನು ಯಾರೂ ಬಳಸುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ದಲಿತ ಯುವಕನ ಮೇಲೆ ಹಲ್ಲೆ ನಡೆಸಿ ಮೈಮೇಲೆ ಮೂತ್ರ ವಿಸರ್ಜನೆ: 6 ಮಂದಿ ದುಷ್ಕರ್ಮಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...