Homeಕರ್ನಾಟಕ'ಕೈ' ಟಿಕೆಟ್ ತಪ್ಪಿದ ಬೆನ್ನಲ್ಲೇ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ವೈ.ಎಸ್.ವಿ. ದತ್ತ ತೀರ್ಮಾನ

‘ಕೈ’ ಟಿಕೆಟ್ ತಪ್ಪಿದ ಬೆನ್ನಲ್ಲೇ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ವೈ.ಎಸ್.ವಿ. ದತ್ತ ತೀರ್ಮಾನ

- Advertisement -
- Advertisement -

ಜೆಡಿಎಸ್ ತೊರೆದು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದ ಮಾಜಿ ಶಾಸಕ ವೈ.ಎಸ್.ವಿ. ದತ್ತ ಅವರು ಇದೀಗ ಕಾಂಗ್ರೆಸ್‌ನೊಂದಿಗೂ ಮುನಿಸಿಕೊಂಡಿದ್ದಾರೆ. ಇತ್ತೀಚೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದಾಗ ಕಡೂರು ಕ್ಷೇತ್ರದಿಂದ ದತ್ತ ಅವರಿಗೆ ಟಿಕೆಟ್ ನೀಡಲಾಗಿಲ್ಲ. ಈ ಹಿನ್ನೆಲೆಯಲ್ಲಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ತೀರ್ಮಾನಿಸಿದ್ದಾರೆ.

2018ರ ವಿಧಾನಸಭಾ ಚುನಾವಣೆಯಲ್ಲಿ ವೈಎಸ್‌ವಿ ದತ್ತ ಅವರು ಜೆಡಿಎಸ್‌ನಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಈ ಬಾರಿ ಕಾಂಗ್ರೆಸ್‌ ಸೇರಿ, ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಬೇಕು ಎನ್ನುವ ಆಸೆಯಲ್ಲಿದ್ದರು. ಹಾಗಾಗಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿ ಕಡೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಬಿ ಫಾರ್ಮ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ, ಕಾಂಗ್ರೆಸ್‌ನ 2ನೇ ಪಟ್ಟಿಯಲ್ಲಿ ಆನಂದ್‌ ಕೆ.ಎಸ್. ಅವರಿಗೆ ಟಿಕೆಟ್ ನೀಡಲಾಗಿದೆ. ಇದರಿಂದ ತೀವ್ರ ನಿರಾಸೆಗೊಂಡು ಅವರು ರವಿವಾರ ತಮ್ಮ ಅಭಿಮಾನಿಗಳ ಸಭೆಯನ್ನು ಕರೆಯಲಾಗಿದ್ದರು. ಅವರು ಹೇಳಿದಂತೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳುತ್ತೇನೆ. ಅಭಿಮಾನಿಗಳ ಒತ್ತಡ ಬಂದಲ್ಲಿ ಪಕ್ಷೇತರವಾಗಿ ಸ್ಪರ್ಧೆ ಮಾಡುತ್ತೇನೆ ಎಂದು ತಿಳಿಸಿದ್ದರು. ಅದರಂತೆ ರವಿವಾರ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳೊಂದಿಗೆ ಸಭೆ ನಡೆಸಿದ ದತ್ತ ಅವರು ಪಕ್ಷೇತರವಾಗಿ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.

ಪಟ್ಟಣದ ವೆಂಕಟೇಶ್ವರ ಕಲ್ಯಾಣ ಮಂದಿರದಲ್ಲಿ ರವಿವಾರ ಏರ್ಪಡಿಸಿದ್ದ ಸ್ವಾಭಿಮಾನಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ”ಈಬಾರಿ ಕ್ಷೇತ್ರದಲ್ಲಿ ವಿಶೇಷ ಪರಿಸ್ಥಿತಿ ತಲೆದೋರಿದೆ. ಐತಿಹಾಸಿಕ ಬದಲಾವಣೆಗೆ ಕ್ಷೇತ್ರ ಸನ್ನದ್ಧವಾಗಿದೆ. ಅದಕ್ಕೆ ಪೂರಕವಾಗಿ ನಾನು 50 ವರ್ಷಗಳ ಜೆಡಿಎಸ್‌ ನಂಟು ಬಿಟ್ಟು ಕಾಂಗ್ರೆಸ್‌ ಸೇರಿದೆ. ಟಿಕೆಟ್‌ ಸಿಗುತ್ತದೆ ಎಂಬ ವಿಶ್ವಾಸವನ್ನು ಪಕ್ಷ ಹುಸಿ ಮಾಡಿದೆ. ಅಭಿಮಾನಿಗಳು ಅದನ್ನು ಸ್ವಾಭಿಮಾನಕ್ಕೆ ಬಿದ್ದ ಪೆಟ್ಟು ಎಂದೇ ಭಾವಿಸಿದ್ದಾರೆ. ಹೀಗಾಗಿ, ಪಕ್ಷೇತರವಾಗಿ ಕಣಕ್ಕಿಳಿಯಲು ತೀರ್ಮಾನಿಸಿದ್ದೇನೆ” ಎಂದರು.

ಇದನ್ನೂ ಓದಿ: ವೈಎಸ್‌ವಿ ದತ್ತಾ, ನಾಗೇಶ್ ‘ಕೈ’ ಸೇರ್ಪಡೆ; ಇದು ಕಾಂಗ್ರೆಸ್ ಪರ್ವ ಎಂದ ಡಿಕೆಶಿ

”ಜನರ ಬಳಿ ತೆರಳಿ ಧನಸಹಾಯ ಜೊತೆಗೆ ಮತ ಭಿಕ್ಷೆ ಬೇಡುತ್ತೇನೆ‌. ಸ್ವಾಭಿಮಾನ ಎಂದರೆ ಏನು ಎಂಬುದನ್ನು ಅಭಿಮಾನಿಗಳು ತೋರಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ಇತ್ಯಾದಿ ಕುರಿತು ಅಭಿಮಾನಿಗಳೊಂದಿಗೆ ಇದೇ 13ರಂದು ಚರ್ಚಿಸಿ ನಿರ್ಧರಿಸುತ್ತೇನೆ” ಎಂದರು.

”ಈಗ ಅಭ್ಯರ್ಥಿ ಆಯ್ಕೆಗೆ ಮಾನದಂಡ ಶುರುವಾಗುವುದೇ ಮೊದಲು ಜಾತಿ, ನಂತರ ಹಣಬಲದಿಂದ. ಆದರೆ, ನನಗೆ ಜಾತಿ, ಹಣ ಬಲ ಎರಡೂ ಇಲ್ಲ. ಇರುವುದು ಜನರ ಪ್ರೀತಿ ಮಾತ್ರ. ನನಗೆ ಕಾಂಗ್ರೆಸ್ ಟಿಕೆಟ್ ಕೊಡಲಿಲ್ಲ ಎಂದು ತಿಳಿದು ಕೆಲವರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಇದು ಪ್ರಸ್ತುತ ರಾಜಕಾರಣದ ರೀತಿ” ಎಂದು ಬೇಸರ ವ್ಯಕ್ತಪಡಿಸಿದರು.

”ನನ್ನ ಬಳಿ ಹಣ ಇಲ್ಲ, ಜಾತಿ ಇಲ್ಲ ನಾನೊಬ್ಬ ಸಾಲಗಾರ. ಆದರೆ ನನ್ನ ಬಳಿ ಜನ ಬೆಂಬಲ ಇದೆ, ನಾನು ಹೇಳಿದರೆ 10 ಸಾವಿರ ಜನ ಬರುತ್ತಾರೆ. ನನ್ನ ಬಳಿ ಆಸ್ತಿ, ಇಲ್ಲದಿದ್ದರೆ ಪ್ರೀತಿ ಇಲ್ಲವೇ. ಜಾತಿ ರಾಜಕಾರಣಿ ಬೇಡ, ಪ್ರೀತಿ ರಾಜಕಾರಣ ಮಾಡೋಣ” ಎಂದು ಕರೆ ಕೊಟ್ಟರು.

”ಕಳೆದ ಬಾರಿ ಚುನಾವಣೆಯಲ್ಲಿ‌ ನಾನು ಮತ ಚಲಾಯಿಸಿ ಹೊರಬಂದಾಗ, ನನ್ನ ಪತ್ನಿ ನಿಧನರಾಗಿದ್ದಾರೆ ಎಂದು ಕೆಲವರು ಸುಳ್ಳು ಸುದ್ದಿ ಹಬ್ಬಿಸಿದ್ದರು. ನನ್ನನ್ನು ಸಾಕಿ ಬೆಳೆಸಿದ್ದ ಸಹೋದರಿ ನಾನು ಕ್ಷೇತ್ರದಲ್ಲಿ ಪಾದಯಾತ್ರೆ ಮಾಡುವ ಸಮಯದಲ್ಲಿ ನಿಧನರಾದರು. ಕುಟುಂಬದವರ ಯೋಗಕ್ಷೇಮ ವಿಚಾರಿಸಲೂ ಸಮಯವಾಗುತ್ತಿರಲ್ಲಿಲ್ಲ. ಅಷ್ಟರಮಟ್ಟಿಗೆ ಕೇತ್ರದಲ್ಲಿ ತೊಡಗಿಸಿಕೊಂಡಿದ್ದೆ. ಅಭಿಮಾನಿಗಳೇ ನನ್ನ ಕುಟುಂಬ” ಎಂದು ದತ್ತ ಭಾವುಕರಾದರು.

ಈ ವೇಳೆ ಅವರು ಹೆಗಲ ಮೇಲೆ ಟವೆಲ್ ಹಾಕಿಕೊಂಡು ಧನಸಹಾಯ ಜೊತೆಗೆ ಮತ ಭಿಕ್ಷೆ ಬೇಡಿದರು. ಚುನಾವಣಾ ಖರ್ಚಿಗಾಗಿ ಅಭಿಮಾನಿಗಳು ಸಭೆಯಲ್ಲಿ 50 ಸಾವಿರ ರೂಪಾಯಿ, 2 ಲಕ್ಷದ ಚೆಕ್ ಗಳನ್ನು ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...