Homeಕರ್ನಾಟಕ'ಕೈ' ಟಿಕೆಟ್ ತಪ್ಪಿದ ಬೆನ್ನಲ್ಲೇ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ವೈ.ಎಸ್.ವಿ. ದತ್ತ ತೀರ್ಮಾನ

‘ಕೈ’ ಟಿಕೆಟ್ ತಪ್ಪಿದ ಬೆನ್ನಲ್ಲೇ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ವೈ.ಎಸ್.ವಿ. ದತ್ತ ತೀರ್ಮಾನ

- Advertisement -
- Advertisement -

ಜೆಡಿಎಸ್ ತೊರೆದು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದ ಮಾಜಿ ಶಾಸಕ ವೈ.ಎಸ್.ವಿ. ದತ್ತ ಅವರು ಇದೀಗ ಕಾಂಗ್ರೆಸ್‌ನೊಂದಿಗೂ ಮುನಿಸಿಕೊಂಡಿದ್ದಾರೆ. ಇತ್ತೀಚೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದಾಗ ಕಡೂರು ಕ್ಷೇತ್ರದಿಂದ ದತ್ತ ಅವರಿಗೆ ಟಿಕೆಟ್ ನೀಡಲಾಗಿಲ್ಲ. ಈ ಹಿನ್ನೆಲೆಯಲ್ಲಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ತೀರ್ಮಾನಿಸಿದ್ದಾರೆ.

2018ರ ವಿಧಾನಸಭಾ ಚುನಾವಣೆಯಲ್ಲಿ ವೈಎಸ್‌ವಿ ದತ್ತ ಅವರು ಜೆಡಿಎಸ್‌ನಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಈ ಬಾರಿ ಕಾಂಗ್ರೆಸ್‌ ಸೇರಿ, ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಬೇಕು ಎನ್ನುವ ಆಸೆಯಲ್ಲಿದ್ದರು. ಹಾಗಾಗಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿ ಕಡೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಬಿ ಫಾರ್ಮ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ, ಕಾಂಗ್ರೆಸ್‌ನ 2ನೇ ಪಟ್ಟಿಯಲ್ಲಿ ಆನಂದ್‌ ಕೆ.ಎಸ್. ಅವರಿಗೆ ಟಿಕೆಟ್ ನೀಡಲಾಗಿದೆ. ಇದರಿಂದ ತೀವ್ರ ನಿರಾಸೆಗೊಂಡು ಅವರು ರವಿವಾರ ತಮ್ಮ ಅಭಿಮಾನಿಗಳ ಸಭೆಯನ್ನು ಕರೆಯಲಾಗಿದ್ದರು. ಅವರು ಹೇಳಿದಂತೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳುತ್ತೇನೆ. ಅಭಿಮಾನಿಗಳ ಒತ್ತಡ ಬಂದಲ್ಲಿ ಪಕ್ಷೇತರವಾಗಿ ಸ್ಪರ್ಧೆ ಮಾಡುತ್ತೇನೆ ಎಂದು ತಿಳಿಸಿದ್ದರು. ಅದರಂತೆ ರವಿವಾರ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳೊಂದಿಗೆ ಸಭೆ ನಡೆಸಿದ ದತ್ತ ಅವರು ಪಕ್ಷೇತರವಾಗಿ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.

ಪಟ್ಟಣದ ವೆಂಕಟೇಶ್ವರ ಕಲ್ಯಾಣ ಮಂದಿರದಲ್ಲಿ ರವಿವಾರ ಏರ್ಪಡಿಸಿದ್ದ ಸ್ವಾಭಿಮಾನಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ”ಈಬಾರಿ ಕ್ಷೇತ್ರದಲ್ಲಿ ವಿಶೇಷ ಪರಿಸ್ಥಿತಿ ತಲೆದೋರಿದೆ. ಐತಿಹಾಸಿಕ ಬದಲಾವಣೆಗೆ ಕ್ಷೇತ್ರ ಸನ್ನದ್ಧವಾಗಿದೆ. ಅದಕ್ಕೆ ಪೂರಕವಾಗಿ ನಾನು 50 ವರ್ಷಗಳ ಜೆಡಿಎಸ್‌ ನಂಟು ಬಿಟ್ಟು ಕಾಂಗ್ರೆಸ್‌ ಸೇರಿದೆ. ಟಿಕೆಟ್‌ ಸಿಗುತ್ತದೆ ಎಂಬ ವಿಶ್ವಾಸವನ್ನು ಪಕ್ಷ ಹುಸಿ ಮಾಡಿದೆ. ಅಭಿಮಾನಿಗಳು ಅದನ್ನು ಸ್ವಾಭಿಮಾನಕ್ಕೆ ಬಿದ್ದ ಪೆಟ್ಟು ಎಂದೇ ಭಾವಿಸಿದ್ದಾರೆ. ಹೀಗಾಗಿ, ಪಕ್ಷೇತರವಾಗಿ ಕಣಕ್ಕಿಳಿಯಲು ತೀರ್ಮಾನಿಸಿದ್ದೇನೆ” ಎಂದರು.

ಇದನ್ನೂ ಓದಿ: ವೈಎಸ್‌ವಿ ದತ್ತಾ, ನಾಗೇಶ್ ‘ಕೈ’ ಸೇರ್ಪಡೆ; ಇದು ಕಾಂಗ್ರೆಸ್ ಪರ್ವ ಎಂದ ಡಿಕೆಶಿ

”ಜನರ ಬಳಿ ತೆರಳಿ ಧನಸಹಾಯ ಜೊತೆಗೆ ಮತ ಭಿಕ್ಷೆ ಬೇಡುತ್ತೇನೆ‌. ಸ್ವಾಭಿಮಾನ ಎಂದರೆ ಏನು ಎಂಬುದನ್ನು ಅಭಿಮಾನಿಗಳು ತೋರಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ಇತ್ಯಾದಿ ಕುರಿತು ಅಭಿಮಾನಿಗಳೊಂದಿಗೆ ಇದೇ 13ರಂದು ಚರ್ಚಿಸಿ ನಿರ್ಧರಿಸುತ್ತೇನೆ” ಎಂದರು.

”ಈಗ ಅಭ್ಯರ್ಥಿ ಆಯ್ಕೆಗೆ ಮಾನದಂಡ ಶುರುವಾಗುವುದೇ ಮೊದಲು ಜಾತಿ, ನಂತರ ಹಣಬಲದಿಂದ. ಆದರೆ, ನನಗೆ ಜಾತಿ, ಹಣ ಬಲ ಎರಡೂ ಇಲ್ಲ. ಇರುವುದು ಜನರ ಪ್ರೀತಿ ಮಾತ್ರ. ನನಗೆ ಕಾಂಗ್ರೆಸ್ ಟಿಕೆಟ್ ಕೊಡಲಿಲ್ಲ ಎಂದು ತಿಳಿದು ಕೆಲವರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಇದು ಪ್ರಸ್ತುತ ರಾಜಕಾರಣದ ರೀತಿ” ಎಂದು ಬೇಸರ ವ್ಯಕ್ತಪಡಿಸಿದರು.

”ನನ್ನ ಬಳಿ ಹಣ ಇಲ್ಲ, ಜಾತಿ ಇಲ್ಲ ನಾನೊಬ್ಬ ಸಾಲಗಾರ. ಆದರೆ ನನ್ನ ಬಳಿ ಜನ ಬೆಂಬಲ ಇದೆ, ನಾನು ಹೇಳಿದರೆ 10 ಸಾವಿರ ಜನ ಬರುತ್ತಾರೆ. ನನ್ನ ಬಳಿ ಆಸ್ತಿ, ಇಲ್ಲದಿದ್ದರೆ ಪ್ರೀತಿ ಇಲ್ಲವೇ. ಜಾತಿ ರಾಜಕಾರಣಿ ಬೇಡ, ಪ್ರೀತಿ ರಾಜಕಾರಣ ಮಾಡೋಣ” ಎಂದು ಕರೆ ಕೊಟ್ಟರು.

”ಕಳೆದ ಬಾರಿ ಚುನಾವಣೆಯಲ್ಲಿ‌ ನಾನು ಮತ ಚಲಾಯಿಸಿ ಹೊರಬಂದಾಗ, ನನ್ನ ಪತ್ನಿ ನಿಧನರಾಗಿದ್ದಾರೆ ಎಂದು ಕೆಲವರು ಸುಳ್ಳು ಸುದ್ದಿ ಹಬ್ಬಿಸಿದ್ದರು. ನನ್ನನ್ನು ಸಾಕಿ ಬೆಳೆಸಿದ್ದ ಸಹೋದರಿ ನಾನು ಕ್ಷೇತ್ರದಲ್ಲಿ ಪಾದಯಾತ್ರೆ ಮಾಡುವ ಸಮಯದಲ್ಲಿ ನಿಧನರಾದರು. ಕುಟುಂಬದವರ ಯೋಗಕ್ಷೇಮ ವಿಚಾರಿಸಲೂ ಸಮಯವಾಗುತ್ತಿರಲ್ಲಿಲ್ಲ. ಅಷ್ಟರಮಟ್ಟಿಗೆ ಕೇತ್ರದಲ್ಲಿ ತೊಡಗಿಸಿಕೊಂಡಿದ್ದೆ. ಅಭಿಮಾನಿಗಳೇ ನನ್ನ ಕುಟುಂಬ” ಎಂದು ದತ್ತ ಭಾವುಕರಾದರು.

ಈ ವೇಳೆ ಅವರು ಹೆಗಲ ಮೇಲೆ ಟವೆಲ್ ಹಾಕಿಕೊಂಡು ಧನಸಹಾಯ ಜೊತೆಗೆ ಮತ ಭಿಕ್ಷೆ ಬೇಡಿದರು. ಚುನಾವಣಾ ಖರ್ಚಿಗಾಗಿ ಅಭಿಮಾನಿಗಳು ಸಭೆಯಲ್ಲಿ 50 ಸಾವಿರ ರೂಪಾಯಿ, 2 ಲಕ್ಷದ ಚೆಕ್ ಗಳನ್ನು ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...