Homeಮುಖಪುಟಮಹಾರಾಷ್ಟ್ರದ ನಂತರ ಗೋವಾದಲ್ಲಿಯೂ ನಮ್ಮದೆ ಸರ್ಕಾರ: BJPಗೆ ಎಚ್ಚರಿಕೆ ಕೊಟ್ಟ ಶಿವಸೇನೆಯ ಸಂಜಯ್‌ ರಾವತ್‌

ಮಹಾರಾಷ್ಟ್ರದ ನಂತರ ಗೋವಾದಲ್ಲಿಯೂ ನಮ್ಮದೆ ಸರ್ಕಾರ: BJPಗೆ ಎಚ್ಚರಿಕೆ ಕೊಟ್ಟ ಶಿವಸೇನೆಯ ಸಂಜಯ್‌ ರಾವತ್‌

- Advertisement -
- Advertisement -

ಮಹಾರಾಷ್ಟ್ರದ ನಂತರ ಗೋವಾದಲ್ಲಿಯೂ ನಮ್ಮದೇ ಸರ್ಕಾರ ರಚಿಸುತ್ತೇವೆ ಎಂದು ಶಿವಸೇನೆಯ ಸಂಜಯ್ ರೌತ್ ಬಿಜೆಪಿಗೆ ಸಂದೇಶ ನೀಡಿದ್ದಾರೆ.

ಮಹಾರಾಷ್ಟ್ರದ ನಂತರ, ಬಿಜೆಪಿ ಆಡಳಿತದ ಗೋವಾದಲ್ಲಿಯೂ ಸಹ ಪವಾಡ ನಡೆಯಲಿದೆ ಎಂದು ಶಿವಸೇನೆ ಮುಖಂಡ ಸಂಜಯ್ ರಾವತ್ ಶುಕ್ರವಾರ ಘೋಷಿಸಿದ್ದಾರೆ. ಅವರ ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು  ಎನ್‌ಸಿಪಿ ಮತ್ತು ಕಾಂಗ್ರೆಸ್ ಜೊತೆ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾದ ಕೂಡಲೇ ಸಂಜಯ್‌ ರಾವತ್‌ ಹೇಳಿಕೆ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಗೋವಾ ಫಾರ್ವರ್ಡ್ ಪಕ್ಷದ ಮಾಜಿ ಉಪಮುಖ್ಯಮಂತ್ರಿ ವಿಜಯ್ ಸರ್ದೇಸಾಯಿ ಶಿವಸೇನೆ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ರಾವತ್‌ ಹೇಳಿದ್ದಾರೆ. “ಮಹಾರಾಷ್ಟ್ರದಲ್ಲಿ ನಡೆದಂತೆಯೇ ಗೋವಾದಲ್ಲಿ ಹೊಸ ರಾಜಕೀಯ ಒಕ್ಕೂಟ ರೂಪುಗೊಳ್ಳುತ್ತಿದೆ. ಶೀಘ್ರದಲ್ಲೇ ನೀವು ಗೋವಾದಲ್ಲಿ ಒಂದು ಪವಾಡಕ್ಕೆ ಸಾಕ್ಷಿಯಾಗುತ್ತೀರಿ ಎಂದು ಸಂಜಯ್ ರಾವತ್ ಹೇಳಿದ್ದಾರೆ.

“ಇದು ದೇಶಾದ್ಯಂತ ನಡೆಯಲಿದೆ. ಮಹಾರಾಷ್ಟ್ರದ ನಂತರ ಅದು ಗೋವಾ, ನಂತರ ನಾವು ಇತರ ರಾಜ್ಯಗಳಿಗೆ ಹೋಗುತ್ತೇವೆ. ಈ ದೇಶದಲ್ಲಿ ಬಿಜೆಪಿ ಹೊರತಪಡಿಸಿದ ರಾಜಕೀಯ ಒಕ್ಕೂಟವನ್ನು ಮಾಡಲು ನಾವು ಬಯಸುತ್ತೇವೆ” ಎಂದು ಶಿವಸೇನೆ ಮುಖಂಡರು ಸಾರಿದ್ದಾರೆ.

ವಿಜಯ್ ಸರ್ದೇಸಾಯಿ ಅವರು ಸಂಜಯ್ ರಾವತ್ ಅವರನ್ನು ಭೇಟಿ ಮಾಡಿರುವುದನ್ನು ದೃಢಪಡಿಸಿದ್ದಾರೆ. “ಕೇವಲ ಘೋಷಣೆಯ ನಂತರ ಸರ್ಕಾರಗಳು ಬದಲಾಗುವುದಿಲ್ಲ. ಅದು ಇದ್ದಕ್ಕಿದ್ದಂತೆ ಸಂಭವಿಸುತ್ತದೆ. ಮಹಾರಾಷ್ಟ್ರದಲ್ಲಿ ಏನಾಯಿತು, ಗೋವಾದಲ್ಲಿಯೂ ಸಹ ಆಗಬೇಕು. ಪ್ರತಿಪಕ್ಷಗಳು ಒಗ್ಗೂಡಬೇಕು. ನಾವು ಸಂಜಯ್ ರೌತ್ ಅವರನ್ನು ಭೇಟಿ ಮಾಡಿದ್ದೇವೆ. ಮಹಾರಾಷ್ಟ್ರದಲ್ಲಿ ರಚನೆಯಾದ ‘ಮಹಾ ವಿಕಾಸ್ ಅಘಾಡಿ’ ಗೋವಾಕ್ಕೂ ಕೂಡ ವಿಸ್ತರಿಸಬೇಕು” ಎಂದಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದ 19ನೇ ಸಿಎಂ ಆಗಿ ಉದ್ಧವ್‌ ಠಾಕ್ರೆ ಪ್ರಮಾಣ ವಚನ ಸ್ವೀಕಾರ: ಮೊದಲ ಬಾರಿಗೆ ಠಾಕ್ರೆ ಸರ್ಕಾರ್‌ ಶುರು

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗೋವಾದಲ್ಲಿ ಕಾಂಗ್ರೆಸ್ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಗೋವಾ ಫಾರ್ವರ್ಡ್ ಪಕ್ಷ ಬಿಜೆಪಿ ಸರ್ಕಾರ ರಚಿಸಲು ಸಹಾಯ ಮಾಡಿತು. 2017 ರಲ್ಲಿ ಕಾಂಗ್ರೆಸ್ 17 ಸ್ಥಾನಗಳನ್ನು ಗೆದ್ದಿತ್ತು. ಆದರೆ ಬಿಜೆಪಿ ಕೇವಲ 13 ಸ್ಥಾನಗಳನ್ನು ಪಡೆದಿದ್ದರೂ ಸಹ ಅವರನ್ನು ಮೀರಿಸಿ, ಅದು ಮಿತ್ರಪಕ್ಷಗಳನ್ನು ಒಲೈಸಿ ಸರ್ಕಾರ ರಚಿಸಿತ್ತು.

ವಿಜಯ್ ಸರ್ದೇಸಾಯಿ ಅವರನ್ನು ಬಿಜೆಪಿ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯನ್ನಾಗಿ ಮಾಡಲಾಗಿತ್ತು. ಆದರೆ 10 ಕಾಂಗ್ರೆಸ್ ಶಾಸಕರು ಬಿಜೆಪಿಗೆ ಪಕ್ಷಾಂತರ ಮಾಡಿದ ನಂತರ ಜುಲೈನಲ್ಲಿ ಇತರ ಗೋವಾ ಫಾರ್ವರ್ಡ್ ಪಕ್ಷದ ಮಂತ್ರಿಗಳೊಂದಿಗೆ ವಿಜಯ್ ಸರ್ದೇಸಾಯಿ ಅವರನ್ನು ಸಹ ಸಂಪುಟದಿಂದ ತೆಗೆದುಹಾಕಲಾಯಿತು. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್‌ನಿಂದ ಪಕ್ಷಾಂತರ ಮಾಡಿದವರಿಗೆ ಕ್ಯಾಬಿನೆಟ್ ಹುದ್ದೆಗಳನ್ನು ಕೊಡಲಾಗಿದೆ. ಹಾಗಾಗಿ ವಿಜಯ್ ಸರ್ದೇಸಾಯಿ ಬಿಜೆಪಿ ವಿರುದ್ಧ ಕಿಡಿಕಾರುತ್ತಿದ್ದಾರೆ.

ಪ್ರಸ್ತುತ ಗೋವಾದ 40 ಸದಸ್ಯರ ವಿಧಾನಸಭೆಯಲ್ಲಿ ಬಿಜೆಪಿಯು 27 ಸದಸ್ಯರನ್ನು ಹೊಂದಿದ್ದು, ಬಹುಮತಕ್ಕೆ ಕನಿಷ್ಟ 21 ಸೀಟುಗಳು ಬೇಕಾಗಿದ್ದು, ಗೋವಾ ಫಾರ್ವರ್ಡ್ ಪಾರ್ಟಿ ಮತ್ತು ಶಿವಸೇನೆ ನಡುವಿನ ಯಾವುದೇ ಮೈತ್ರಿಗೆ ತುತ್ತಾಗುವ ಸಾಧ್ಯತೆಯಿಲ್ಲ. ಆದರೂ ರಾಜಕೀಯ ಬೆಳವಣಿಗೆಗಳು ಏನೇನಾಗಬಹುದು ಎಂದು ಊಹಿಸಲು ಸಾಧ್ಯವಾಗುತ್ತಿಲ್ಲ.

ತನ್ನ ಚುನಾವಣಾ ಅಫಿಡವಿಟ್‌ನಲ್ಲಿ ಎರಡು ಕ್ರಿಮಿನಲ್ ಪ್ರಕರಣಗಳನ್ನು ಮರೆಮಾಚಿದ್ದಕ್ಕಾಗಿ ದೇವೇಂದ್ರ ಫಡ್ನವೀಸ್‌ಗೆ ನ್ಯಾಯಾಲಯದ ಸಮನ್ಸ್ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಂಜಯ್‌ ರಾವತ್‌ “ನನಗೆ ಗೊತ್ತಿಲ್ಲ, ನಾವು ಈಗ ಗೋವಾ ರಾಜಕೀಯದಲ್ಲಿ ನಿರತರಾಗಿದ್ದೇವೆ. ಮಹಾರಾಷ್ಟ್ರ ರಾಜಕೀಯ ಮುಗಿದಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...