Homeಮುಖಪುಟಮಹಾರಾಷ್ಟ್ರದ ನಂತರ ಗೋವಾದಲ್ಲಿಯೂ ನಮ್ಮದೆ ಸರ್ಕಾರ: BJPಗೆ ಎಚ್ಚರಿಕೆ ಕೊಟ್ಟ ಶಿವಸೇನೆಯ ಸಂಜಯ್‌ ರಾವತ್‌

ಮಹಾರಾಷ್ಟ್ರದ ನಂತರ ಗೋವಾದಲ್ಲಿಯೂ ನಮ್ಮದೆ ಸರ್ಕಾರ: BJPಗೆ ಎಚ್ಚರಿಕೆ ಕೊಟ್ಟ ಶಿವಸೇನೆಯ ಸಂಜಯ್‌ ರಾವತ್‌

- Advertisement -
- Advertisement -

ಮಹಾರಾಷ್ಟ್ರದ ನಂತರ ಗೋವಾದಲ್ಲಿಯೂ ನಮ್ಮದೇ ಸರ್ಕಾರ ರಚಿಸುತ್ತೇವೆ ಎಂದು ಶಿವಸೇನೆಯ ಸಂಜಯ್ ರೌತ್ ಬಿಜೆಪಿಗೆ ಸಂದೇಶ ನೀಡಿದ್ದಾರೆ.

ಮಹಾರಾಷ್ಟ್ರದ ನಂತರ, ಬಿಜೆಪಿ ಆಡಳಿತದ ಗೋವಾದಲ್ಲಿಯೂ ಸಹ ಪವಾಡ ನಡೆಯಲಿದೆ ಎಂದು ಶಿವಸೇನೆ ಮುಖಂಡ ಸಂಜಯ್ ರಾವತ್ ಶುಕ್ರವಾರ ಘೋಷಿಸಿದ್ದಾರೆ. ಅವರ ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು  ಎನ್‌ಸಿಪಿ ಮತ್ತು ಕಾಂಗ್ರೆಸ್ ಜೊತೆ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾದ ಕೂಡಲೇ ಸಂಜಯ್‌ ರಾವತ್‌ ಹೇಳಿಕೆ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಗೋವಾ ಫಾರ್ವರ್ಡ್ ಪಕ್ಷದ ಮಾಜಿ ಉಪಮುಖ್ಯಮಂತ್ರಿ ವಿಜಯ್ ಸರ್ದೇಸಾಯಿ ಶಿವಸೇನೆ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ರಾವತ್‌ ಹೇಳಿದ್ದಾರೆ. “ಮಹಾರಾಷ್ಟ್ರದಲ್ಲಿ ನಡೆದಂತೆಯೇ ಗೋವಾದಲ್ಲಿ ಹೊಸ ರಾಜಕೀಯ ಒಕ್ಕೂಟ ರೂಪುಗೊಳ್ಳುತ್ತಿದೆ. ಶೀಘ್ರದಲ್ಲೇ ನೀವು ಗೋವಾದಲ್ಲಿ ಒಂದು ಪವಾಡಕ್ಕೆ ಸಾಕ್ಷಿಯಾಗುತ್ತೀರಿ ಎಂದು ಸಂಜಯ್ ರಾವತ್ ಹೇಳಿದ್ದಾರೆ.

“ಇದು ದೇಶಾದ್ಯಂತ ನಡೆಯಲಿದೆ. ಮಹಾರಾಷ್ಟ್ರದ ನಂತರ ಅದು ಗೋವಾ, ನಂತರ ನಾವು ಇತರ ರಾಜ್ಯಗಳಿಗೆ ಹೋಗುತ್ತೇವೆ. ಈ ದೇಶದಲ್ಲಿ ಬಿಜೆಪಿ ಹೊರತಪಡಿಸಿದ ರಾಜಕೀಯ ಒಕ್ಕೂಟವನ್ನು ಮಾಡಲು ನಾವು ಬಯಸುತ್ತೇವೆ” ಎಂದು ಶಿವಸೇನೆ ಮುಖಂಡರು ಸಾರಿದ್ದಾರೆ.

ವಿಜಯ್ ಸರ್ದೇಸಾಯಿ ಅವರು ಸಂಜಯ್ ರಾವತ್ ಅವರನ್ನು ಭೇಟಿ ಮಾಡಿರುವುದನ್ನು ದೃಢಪಡಿಸಿದ್ದಾರೆ. “ಕೇವಲ ಘೋಷಣೆಯ ನಂತರ ಸರ್ಕಾರಗಳು ಬದಲಾಗುವುದಿಲ್ಲ. ಅದು ಇದ್ದಕ್ಕಿದ್ದಂತೆ ಸಂಭವಿಸುತ್ತದೆ. ಮಹಾರಾಷ್ಟ್ರದಲ್ಲಿ ಏನಾಯಿತು, ಗೋವಾದಲ್ಲಿಯೂ ಸಹ ಆಗಬೇಕು. ಪ್ರತಿಪಕ್ಷಗಳು ಒಗ್ಗೂಡಬೇಕು. ನಾವು ಸಂಜಯ್ ರೌತ್ ಅವರನ್ನು ಭೇಟಿ ಮಾಡಿದ್ದೇವೆ. ಮಹಾರಾಷ್ಟ್ರದಲ್ಲಿ ರಚನೆಯಾದ ‘ಮಹಾ ವಿಕಾಸ್ ಅಘಾಡಿ’ ಗೋವಾಕ್ಕೂ ಕೂಡ ವಿಸ್ತರಿಸಬೇಕು” ಎಂದಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದ 19ನೇ ಸಿಎಂ ಆಗಿ ಉದ್ಧವ್‌ ಠಾಕ್ರೆ ಪ್ರಮಾಣ ವಚನ ಸ್ವೀಕಾರ: ಮೊದಲ ಬಾರಿಗೆ ಠಾಕ್ರೆ ಸರ್ಕಾರ್‌ ಶುರು

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗೋವಾದಲ್ಲಿ ಕಾಂಗ್ರೆಸ್ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಗೋವಾ ಫಾರ್ವರ್ಡ್ ಪಕ್ಷ ಬಿಜೆಪಿ ಸರ್ಕಾರ ರಚಿಸಲು ಸಹಾಯ ಮಾಡಿತು. 2017 ರಲ್ಲಿ ಕಾಂಗ್ರೆಸ್ 17 ಸ್ಥಾನಗಳನ್ನು ಗೆದ್ದಿತ್ತು. ಆದರೆ ಬಿಜೆಪಿ ಕೇವಲ 13 ಸ್ಥಾನಗಳನ್ನು ಪಡೆದಿದ್ದರೂ ಸಹ ಅವರನ್ನು ಮೀರಿಸಿ, ಅದು ಮಿತ್ರಪಕ್ಷಗಳನ್ನು ಒಲೈಸಿ ಸರ್ಕಾರ ರಚಿಸಿತ್ತು.

ವಿಜಯ್ ಸರ್ದೇಸಾಯಿ ಅವರನ್ನು ಬಿಜೆಪಿ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯನ್ನಾಗಿ ಮಾಡಲಾಗಿತ್ತು. ಆದರೆ 10 ಕಾಂಗ್ರೆಸ್ ಶಾಸಕರು ಬಿಜೆಪಿಗೆ ಪಕ್ಷಾಂತರ ಮಾಡಿದ ನಂತರ ಜುಲೈನಲ್ಲಿ ಇತರ ಗೋವಾ ಫಾರ್ವರ್ಡ್ ಪಕ್ಷದ ಮಂತ್ರಿಗಳೊಂದಿಗೆ ವಿಜಯ್ ಸರ್ದೇಸಾಯಿ ಅವರನ್ನು ಸಹ ಸಂಪುಟದಿಂದ ತೆಗೆದುಹಾಕಲಾಯಿತು. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್‌ನಿಂದ ಪಕ್ಷಾಂತರ ಮಾಡಿದವರಿಗೆ ಕ್ಯಾಬಿನೆಟ್ ಹುದ್ದೆಗಳನ್ನು ಕೊಡಲಾಗಿದೆ. ಹಾಗಾಗಿ ವಿಜಯ್ ಸರ್ದೇಸಾಯಿ ಬಿಜೆಪಿ ವಿರುದ್ಧ ಕಿಡಿಕಾರುತ್ತಿದ್ದಾರೆ.

ಪ್ರಸ್ತುತ ಗೋವಾದ 40 ಸದಸ್ಯರ ವಿಧಾನಸಭೆಯಲ್ಲಿ ಬಿಜೆಪಿಯು 27 ಸದಸ್ಯರನ್ನು ಹೊಂದಿದ್ದು, ಬಹುಮತಕ್ಕೆ ಕನಿಷ್ಟ 21 ಸೀಟುಗಳು ಬೇಕಾಗಿದ್ದು, ಗೋವಾ ಫಾರ್ವರ್ಡ್ ಪಾರ್ಟಿ ಮತ್ತು ಶಿವಸೇನೆ ನಡುವಿನ ಯಾವುದೇ ಮೈತ್ರಿಗೆ ತುತ್ತಾಗುವ ಸಾಧ್ಯತೆಯಿಲ್ಲ. ಆದರೂ ರಾಜಕೀಯ ಬೆಳವಣಿಗೆಗಳು ಏನೇನಾಗಬಹುದು ಎಂದು ಊಹಿಸಲು ಸಾಧ್ಯವಾಗುತ್ತಿಲ್ಲ.

ತನ್ನ ಚುನಾವಣಾ ಅಫಿಡವಿಟ್‌ನಲ್ಲಿ ಎರಡು ಕ್ರಿಮಿನಲ್ ಪ್ರಕರಣಗಳನ್ನು ಮರೆಮಾಚಿದ್ದಕ್ಕಾಗಿ ದೇವೇಂದ್ರ ಫಡ್ನವೀಸ್‌ಗೆ ನ್ಯಾಯಾಲಯದ ಸಮನ್ಸ್ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಂಜಯ್‌ ರಾವತ್‌ “ನನಗೆ ಗೊತ್ತಿಲ್ಲ, ನಾವು ಈಗ ಗೋವಾ ರಾಜಕೀಯದಲ್ಲಿ ನಿರತರಾಗಿದ್ದೇವೆ. ಮಹಾರಾಷ್ಟ್ರ ರಾಜಕೀಯ ಮುಗಿದಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...