Homeಮುಖಪುಟಮಹಾರಾಷ್ಟ್ರದ ನಂತರ ಗೋವಾದಲ್ಲಿಯೂ ನಮ್ಮದೆ ಸರ್ಕಾರ: BJPಗೆ ಎಚ್ಚರಿಕೆ ಕೊಟ್ಟ ಶಿವಸೇನೆಯ ಸಂಜಯ್‌ ರಾವತ್‌

ಮಹಾರಾಷ್ಟ್ರದ ನಂತರ ಗೋವಾದಲ್ಲಿಯೂ ನಮ್ಮದೆ ಸರ್ಕಾರ: BJPಗೆ ಎಚ್ಚರಿಕೆ ಕೊಟ್ಟ ಶಿವಸೇನೆಯ ಸಂಜಯ್‌ ರಾವತ್‌

- Advertisement -
- Advertisement -

ಮಹಾರಾಷ್ಟ್ರದ ನಂತರ ಗೋವಾದಲ್ಲಿಯೂ ನಮ್ಮದೇ ಸರ್ಕಾರ ರಚಿಸುತ್ತೇವೆ ಎಂದು ಶಿವಸೇನೆಯ ಸಂಜಯ್ ರೌತ್ ಬಿಜೆಪಿಗೆ ಸಂದೇಶ ನೀಡಿದ್ದಾರೆ.

ಮಹಾರಾಷ್ಟ್ರದ ನಂತರ, ಬಿಜೆಪಿ ಆಡಳಿತದ ಗೋವಾದಲ್ಲಿಯೂ ಸಹ ಪವಾಡ ನಡೆಯಲಿದೆ ಎಂದು ಶಿವಸೇನೆ ಮುಖಂಡ ಸಂಜಯ್ ರಾವತ್ ಶುಕ್ರವಾರ ಘೋಷಿಸಿದ್ದಾರೆ. ಅವರ ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು  ಎನ್‌ಸಿಪಿ ಮತ್ತು ಕಾಂಗ್ರೆಸ್ ಜೊತೆ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾದ ಕೂಡಲೇ ಸಂಜಯ್‌ ರಾವತ್‌ ಹೇಳಿಕೆ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಗೋವಾ ಫಾರ್ವರ್ಡ್ ಪಕ್ಷದ ಮಾಜಿ ಉಪಮುಖ್ಯಮಂತ್ರಿ ವಿಜಯ್ ಸರ್ದೇಸಾಯಿ ಶಿವಸೇನೆ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ರಾವತ್‌ ಹೇಳಿದ್ದಾರೆ. “ಮಹಾರಾಷ್ಟ್ರದಲ್ಲಿ ನಡೆದಂತೆಯೇ ಗೋವಾದಲ್ಲಿ ಹೊಸ ರಾಜಕೀಯ ಒಕ್ಕೂಟ ರೂಪುಗೊಳ್ಳುತ್ತಿದೆ. ಶೀಘ್ರದಲ್ಲೇ ನೀವು ಗೋವಾದಲ್ಲಿ ಒಂದು ಪವಾಡಕ್ಕೆ ಸಾಕ್ಷಿಯಾಗುತ್ತೀರಿ ಎಂದು ಸಂಜಯ್ ರಾವತ್ ಹೇಳಿದ್ದಾರೆ.

“ಇದು ದೇಶಾದ್ಯಂತ ನಡೆಯಲಿದೆ. ಮಹಾರಾಷ್ಟ್ರದ ನಂತರ ಅದು ಗೋವಾ, ನಂತರ ನಾವು ಇತರ ರಾಜ್ಯಗಳಿಗೆ ಹೋಗುತ್ತೇವೆ. ಈ ದೇಶದಲ್ಲಿ ಬಿಜೆಪಿ ಹೊರತಪಡಿಸಿದ ರಾಜಕೀಯ ಒಕ್ಕೂಟವನ್ನು ಮಾಡಲು ನಾವು ಬಯಸುತ್ತೇವೆ” ಎಂದು ಶಿವಸೇನೆ ಮುಖಂಡರು ಸಾರಿದ್ದಾರೆ.

ವಿಜಯ್ ಸರ್ದೇಸಾಯಿ ಅವರು ಸಂಜಯ್ ರಾವತ್ ಅವರನ್ನು ಭೇಟಿ ಮಾಡಿರುವುದನ್ನು ದೃಢಪಡಿಸಿದ್ದಾರೆ. “ಕೇವಲ ಘೋಷಣೆಯ ನಂತರ ಸರ್ಕಾರಗಳು ಬದಲಾಗುವುದಿಲ್ಲ. ಅದು ಇದ್ದಕ್ಕಿದ್ದಂತೆ ಸಂಭವಿಸುತ್ತದೆ. ಮಹಾರಾಷ್ಟ್ರದಲ್ಲಿ ಏನಾಯಿತು, ಗೋವಾದಲ್ಲಿಯೂ ಸಹ ಆಗಬೇಕು. ಪ್ರತಿಪಕ್ಷಗಳು ಒಗ್ಗೂಡಬೇಕು. ನಾವು ಸಂಜಯ್ ರೌತ್ ಅವರನ್ನು ಭೇಟಿ ಮಾಡಿದ್ದೇವೆ. ಮಹಾರಾಷ್ಟ್ರದಲ್ಲಿ ರಚನೆಯಾದ ‘ಮಹಾ ವಿಕಾಸ್ ಅಘಾಡಿ’ ಗೋವಾಕ್ಕೂ ಕೂಡ ವಿಸ್ತರಿಸಬೇಕು” ಎಂದಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದ 19ನೇ ಸಿಎಂ ಆಗಿ ಉದ್ಧವ್‌ ಠಾಕ್ರೆ ಪ್ರಮಾಣ ವಚನ ಸ್ವೀಕಾರ: ಮೊದಲ ಬಾರಿಗೆ ಠಾಕ್ರೆ ಸರ್ಕಾರ್‌ ಶುರು

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗೋವಾದಲ್ಲಿ ಕಾಂಗ್ರೆಸ್ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಗೋವಾ ಫಾರ್ವರ್ಡ್ ಪಕ್ಷ ಬಿಜೆಪಿ ಸರ್ಕಾರ ರಚಿಸಲು ಸಹಾಯ ಮಾಡಿತು. 2017 ರಲ್ಲಿ ಕಾಂಗ್ರೆಸ್ 17 ಸ್ಥಾನಗಳನ್ನು ಗೆದ್ದಿತ್ತು. ಆದರೆ ಬಿಜೆಪಿ ಕೇವಲ 13 ಸ್ಥಾನಗಳನ್ನು ಪಡೆದಿದ್ದರೂ ಸಹ ಅವರನ್ನು ಮೀರಿಸಿ, ಅದು ಮಿತ್ರಪಕ್ಷಗಳನ್ನು ಒಲೈಸಿ ಸರ್ಕಾರ ರಚಿಸಿತ್ತು.

ವಿಜಯ್ ಸರ್ದೇಸಾಯಿ ಅವರನ್ನು ಬಿಜೆಪಿ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯನ್ನಾಗಿ ಮಾಡಲಾಗಿತ್ತು. ಆದರೆ 10 ಕಾಂಗ್ರೆಸ್ ಶಾಸಕರು ಬಿಜೆಪಿಗೆ ಪಕ್ಷಾಂತರ ಮಾಡಿದ ನಂತರ ಜುಲೈನಲ್ಲಿ ಇತರ ಗೋವಾ ಫಾರ್ವರ್ಡ್ ಪಕ್ಷದ ಮಂತ್ರಿಗಳೊಂದಿಗೆ ವಿಜಯ್ ಸರ್ದೇಸಾಯಿ ಅವರನ್ನು ಸಹ ಸಂಪುಟದಿಂದ ತೆಗೆದುಹಾಕಲಾಯಿತು. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್‌ನಿಂದ ಪಕ್ಷಾಂತರ ಮಾಡಿದವರಿಗೆ ಕ್ಯಾಬಿನೆಟ್ ಹುದ್ದೆಗಳನ್ನು ಕೊಡಲಾಗಿದೆ. ಹಾಗಾಗಿ ವಿಜಯ್ ಸರ್ದೇಸಾಯಿ ಬಿಜೆಪಿ ವಿರುದ್ಧ ಕಿಡಿಕಾರುತ್ತಿದ್ದಾರೆ.

ಪ್ರಸ್ತುತ ಗೋವಾದ 40 ಸದಸ್ಯರ ವಿಧಾನಸಭೆಯಲ್ಲಿ ಬಿಜೆಪಿಯು 27 ಸದಸ್ಯರನ್ನು ಹೊಂದಿದ್ದು, ಬಹುಮತಕ್ಕೆ ಕನಿಷ್ಟ 21 ಸೀಟುಗಳು ಬೇಕಾಗಿದ್ದು, ಗೋವಾ ಫಾರ್ವರ್ಡ್ ಪಾರ್ಟಿ ಮತ್ತು ಶಿವಸೇನೆ ನಡುವಿನ ಯಾವುದೇ ಮೈತ್ರಿಗೆ ತುತ್ತಾಗುವ ಸಾಧ್ಯತೆಯಿಲ್ಲ. ಆದರೂ ರಾಜಕೀಯ ಬೆಳವಣಿಗೆಗಳು ಏನೇನಾಗಬಹುದು ಎಂದು ಊಹಿಸಲು ಸಾಧ್ಯವಾಗುತ್ತಿಲ್ಲ.

ತನ್ನ ಚುನಾವಣಾ ಅಫಿಡವಿಟ್‌ನಲ್ಲಿ ಎರಡು ಕ್ರಿಮಿನಲ್ ಪ್ರಕರಣಗಳನ್ನು ಮರೆಮಾಚಿದ್ದಕ್ಕಾಗಿ ದೇವೇಂದ್ರ ಫಡ್ನವೀಸ್‌ಗೆ ನ್ಯಾಯಾಲಯದ ಸಮನ್ಸ್ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಂಜಯ್‌ ರಾವತ್‌ “ನನಗೆ ಗೊತ್ತಿಲ್ಲ, ನಾವು ಈಗ ಗೋವಾ ರಾಜಕೀಯದಲ್ಲಿ ನಿರತರಾಗಿದ್ದೇವೆ. ಮಹಾರಾಷ್ಟ್ರ ರಾಜಕೀಯ ಮುಗಿದಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...