Homeಮುಖಪುಟಮಹಾರಾಷ್ಟ್ರದ ನಂತರ ಗೋವಾದಲ್ಲಿಯೂ ನಮ್ಮದೆ ಸರ್ಕಾರ: BJPಗೆ ಎಚ್ಚರಿಕೆ ಕೊಟ್ಟ ಶಿವಸೇನೆಯ ಸಂಜಯ್‌ ರಾವತ್‌

ಮಹಾರಾಷ್ಟ್ರದ ನಂತರ ಗೋವಾದಲ್ಲಿಯೂ ನಮ್ಮದೆ ಸರ್ಕಾರ: BJPಗೆ ಎಚ್ಚರಿಕೆ ಕೊಟ್ಟ ಶಿವಸೇನೆಯ ಸಂಜಯ್‌ ರಾವತ್‌

- Advertisement -
- Advertisement -

ಮಹಾರಾಷ್ಟ್ರದ ನಂತರ ಗೋವಾದಲ್ಲಿಯೂ ನಮ್ಮದೇ ಸರ್ಕಾರ ರಚಿಸುತ್ತೇವೆ ಎಂದು ಶಿವಸೇನೆಯ ಸಂಜಯ್ ರೌತ್ ಬಿಜೆಪಿಗೆ ಸಂದೇಶ ನೀಡಿದ್ದಾರೆ.

ಮಹಾರಾಷ್ಟ್ರದ ನಂತರ, ಬಿಜೆಪಿ ಆಡಳಿತದ ಗೋವಾದಲ್ಲಿಯೂ ಸಹ ಪವಾಡ ನಡೆಯಲಿದೆ ಎಂದು ಶಿವಸೇನೆ ಮುಖಂಡ ಸಂಜಯ್ ರಾವತ್ ಶುಕ್ರವಾರ ಘೋಷಿಸಿದ್ದಾರೆ. ಅವರ ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು  ಎನ್‌ಸಿಪಿ ಮತ್ತು ಕಾಂಗ್ರೆಸ್ ಜೊತೆ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾದ ಕೂಡಲೇ ಸಂಜಯ್‌ ರಾವತ್‌ ಹೇಳಿಕೆ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಗೋವಾ ಫಾರ್ವರ್ಡ್ ಪಕ್ಷದ ಮಾಜಿ ಉಪಮುಖ್ಯಮಂತ್ರಿ ವಿಜಯ್ ಸರ್ದೇಸಾಯಿ ಶಿವಸೇನೆ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ರಾವತ್‌ ಹೇಳಿದ್ದಾರೆ. “ಮಹಾರಾಷ್ಟ್ರದಲ್ಲಿ ನಡೆದಂತೆಯೇ ಗೋವಾದಲ್ಲಿ ಹೊಸ ರಾಜಕೀಯ ಒಕ್ಕೂಟ ರೂಪುಗೊಳ್ಳುತ್ತಿದೆ. ಶೀಘ್ರದಲ್ಲೇ ನೀವು ಗೋವಾದಲ್ಲಿ ಒಂದು ಪವಾಡಕ್ಕೆ ಸಾಕ್ಷಿಯಾಗುತ್ತೀರಿ ಎಂದು ಸಂಜಯ್ ರಾವತ್ ಹೇಳಿದ್ದಾರೆ.

“ಇದು ದೇಶಾದ್ಯಂತ ನಡೆಯಲಿದೆ. ಮಹಾರಾಷ್ಟ್ರದ ನಂತರ ಅದು ಗೋವಾ, ನಂತರ ನಾವು ಇತರ ರಾಜ್ಯಗಳಿಗೆ ಹೋಗುತ್ತೇವೆ. ಈ ದೇಶದಲ್ಲಿ ಬಿಜೆಪಿ ಹೊರತಪಡಿಸಿದ ರಾಜಕೀಯ ಒಕ್ಕೂಟವನ್ನು ಮಾಡಲು ನಾವು ಬಯಸುತ್ತೇವೆ” ಎಂದು ಶಿವಸೇನೆ ಮುಖಂಡರು ಸಾರಿದ್ದಾರೆ.

ವಿಜಯ್ ಸರ್ದೇಸಾಯಿ ಅವರು ಸಂಜಯ್ ರಾವತ್ ಅವರನ್ನು ಭೇಟಿ ಮಾಡಿರುವುದನ್ನು ದೃಢಪಡಿಸಿದ್ದಾರೆ. “ಕೇವಲ ಘೋಷಣೆಯ ನಂತರ ಸರ್ಕಾರಗಳು ಬದಲಾಗುವುದಿಲ್ಲ. ಅದು ಇದ್ದಕ್ಕಿದ್ದಂತೆ ಸಂಭವಿಸುತ್ತದೆ. ಮಹಾರಾಷ್ಟ್ರದಲ್ಲಿ ಏನಾಯಿತು, ಗೋವಾದಲ್ಲಿಯೂ ಸಹ ಆಗಬೇಕು. ಪ್ರತಿಪಕ್ಷಗಳು ಒಗ್ಗೂಡಬೇಕು. ನಾವು ಸಂಜಯ್ ರೌತ್ ಅವರನ್ನು ಭೇಟಿ ಮಾಡಿದ್ದೇವೆ. ಮಹಾರಾಷ್ಟ್ರದಲ್ಲಿ ರಚನೆಯಾದ ‘ಮಹಾ ವಿಕಾಸ್ ಅಘಾಡಿ’ ಗೋವಾಕ್ಕೂ ಕೂಡ ವಿಸ್ತರಿಸಬೇಕು” ಎಂದಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದ 19ನೇ ಸಿಎಂ ಆಗಿ ಉದ್ಧವ್‌ ಠಾಕ್ರೆ ಪ್ರಮಾಣ ವಚನ ಸ್ವೀಕಾರ: ಮೊದಲ ಬಾರಿಗೆ ಠಾಕ್ರೆ ಸರ್ಕಾರ್‌ ಶುರು

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗೋವಾದಲ್ಲಿ ಕಾಂಗ್ರೆಸ್ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಗೋವಾ ಫಾರ್ವರ್ಡ್ ಪಕ್ಷ ಬಿಜೆಪಿ ಸರ್ಕಾರ ರಚಿಸಲು ಸಹಾಯ ಮಾಡಿತು. 2017 ರಲ್ಲಿ ಕಾಂಗ್ರೆಸ್ 17 ಸ್ಥಾನಗಳನ್ನು ಗೆದ್ದಿತ್ತು. ಆದರೆ ಬಿಜೆಪಿ ಕೇವಲ 13 ಸ್ಥಾನಗಳನ್ನು ಪಡೆದಿದ್ದರೂ ಸಹ ಅವರನ್ನು ಮೀರಿಸಿ, ಅದು ಮಿತ್ರಪಕ್ಷಗಳನ್ನು ಒಲೈಸಿ ಸರ್ಕಾರ ರಚಿಸಿತ್ತು.

ವಿಜಯ್ ಸರ್ದೇಸಾಯಿ ಅವರನ್ನು ಬಿಜೆಪಿ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯನ್ನಾಗಿ ಮಾಡಲಾಗಿತ್ತು. ಆದರೆ 10 ಕಾಂಗ್ರೆಸ್ ಶಾಸಕರು ಬಿಜೆಪಿಗೆ ಪಕ್ಷಾಂತರ ಮಾಡಿದ ನಂತರ ಜುಲೈನಲ್ಲಿ ಇತರ ಗೋವಾ ಫಾರ್ವರ್ಡ್ ಪಕ್ಷದ ಮಂತ್ರಿಗಳೊಂದಿಗೆ ವಿಜಯ್ ಸರ್ದೇಸಾಯಿ ಅವರನ್ನು ಸಹ ಸಂಪುಟದಿಂದ ತೆಗೆದುಹಾಕಲಾಯಿತು. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್‌ನಿಂದ ಪಕ್ಷಾಂತರ ಮಾಡಿದವರಿಗೆ ಕ್ಯಾಬಿನೆಟ್ ಹುದ್ದೆಗಳನ್ನು ಕೊಡಲಾಗಿದೆ. ಹಾಗಾಗಿ ವಿಜಯ್ ಸರ್ದೇಸಾಯಿ ಬಿಜೆಪಿ ವಿರುದ್ಧ ಕಿಡಿಕಾರುತ್ತಿದ್ದಾರೆ.

ಪ್ರಸ್ತುತ ಗೋವಾದ 40 ಸದಸ್ಯರ ವಿಧಾನಸಭೆಯಲ್ಲಿ ಬಿಜೆಪಿಯು 27 ಸದಸ್ಯರನ್ನು ಹೊಂದಿದ್ದು, ಬಹುಮತಕ್ಕೆ ಕನಿಷ್ಟ 21 ಸೀಟುಗಳು ಬೇಕಾಗಿದ್ದು, ಗೋವಾ ಫಾರ್ವರ್ಡ್ ಪಾರ್ಟಿ ಮತ್ತು ಶಿವಸೇನೆ ನಡುವಿನ ಯಾವುದೇ ಮೈತ್ರಿಗೆ ತುತ್ತಾಗುವ ಸಾಧ್ಯತೆಯಿಲ್ಲ. ಆದರೂ ರಾಜಕೀಯ ಬೆಳವಣಿಗೆಗಳು ಏನೇನಾಗಬಹುದು ಎಂದು ಊಹಿಸಲು ಸಾಧ್ಯವಾಗುತ್ತಿಲ್ಲ.

ತನ್ನ ಚುನಾವಣಾ ಅಫಿಡವಿಟ್‌ನಲ್ಲಿ ಎರಡು ಕ್ರಿಮಿನಲ್ ಪ್ರಕರಣಗಳನ್ನು ಮರೆಮಾಚಿದ್ದಕ್ಕಾಗಿ ದೇವೇಂದ್ರ ಫಡ್ನವೀಸ್‌ಗೆ ನ್ಯಾಯಾಲಯದ ಸಮನ್ಸ್ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಂಜಯ್‌ ರಾವತ್‌ “ನನಗೆ ಗೊತ್ತಿಲ್ಲ, ನಾವು ಈಗ ಗೋವಾ ರಾಜಕೀಯದಲ್ಲಿ ನಿರತರಾಗಿದ್ದೇವೆ. ಮಹಾರಾಷ್ಟ್ರ ರಾಜಕೀಯ ಮುಗಿದಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...