Homeಮುಖಪುಟಮಹಾರಾಷ್ಟ್ರದ ನಂತರ ಗೋವಾದಲ್ಲಿಯೂ ನಮ್ಮದೆ ಸರ್ಕಾರ: BJPಗೆ ಎಚ್ಚರಿಕೆ ಕೊಟ್ಟ ಶಿವಸೇನೆಯ ಸಂಜಯ್‌ ರಾವತ್‌

ಮಹಾರಾಷ್ಟ್ರದ ನಂತರ ಗೋವಾದಲ್ಲಿಯೂ ನಮ್ಮದೆ ಸರ್ಕಾರ: BJPಗೆ ಎಚ್ಚರಿಕೆ ಕೊಟ್ಟ ಶಿವಸೇನೆಯ ಸಂಜಯ್‌ ರಾವತ್‌

- Advertisement -
- Advertisement -

ಮಹಾರಾಷ್ಟ್ರದ ನಂತರ ಗೋವಾದಲ್ಲಿಯೂ ನಮ್ಮದೇ ಸರ್ಕಾರ ರಚಿಸುತ್ತೇವೆ ಎಂದು ಶಿವಸೇನೆಯ ಸಂಜಯ್ ರೌತ್ ಬಿಜೆಪಿಗೆ ಸಂದೇಶ ನೀಡಿದ್ದಾರೆ.

ಮಹಾರಾಷ್ಟ್ರದ ನಂತರ, ಬಿಜೆಪಿ ಆಡಳಿತದ ಗೋವಾದಲ್ಲಿಯೂ ಸಹ ಪವಾಡ ನಡೆಯಲಿದೆ ಎಂದು ಶಿವಸೇನೆ ಮುಖಂಡ ಸಂಜಯ್ ರಾವತ್ ಶುಕ್ರವಾರ ಘೋಷಿಸಿದ್ದಾರೆ. ಅವರ ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು  ಎನ್‌ಸಿಪಿ ಮತ್ತು ಕಾಂಗ್ರೆಸ್ ಜೊತೆ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾದ ಕೂಡಲೇ ಸಂಜಯ್‌ ರಾವತ್‌ ಹೇಳಿಕೆ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಗೋವಾ ಫಾರ್ವರ್ಡ್ ಪಕ್ಷದ ಮಾಜಿ ಉಪಮುಖ್ಯಮಂತ್ರಿ ವಿಜಯ್ ಸರ್ದೇಸಾಯಿ ಶಿವಸೇನೆ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ರಾವತ್‌ ಹೇಳಿದ್ದಾರೆ. “ಮಹಾರಾಷ್ಟ್ರದಲ್ಲಿ ನಡೆದಂತೆಯೇ ಗೋವಾದಲ್ಲಿ ಹೊಸ ರಾಜಕೀಯ ಒಕ್ಕೂಟ ರೂಪುಗೊಳ್ಳುತ್ತಿದೆ. ಶೀಘ್ರದಲ್ಲೇ ನೀವು ಗೋವಾದಲ್ಲಿ ಒಂದು ಪವಾಡಕ್ಕೆ ಸಾಕ್ಷಿಯಾಗುತ್ತೀರಿ ಎಂದು ಸಂಜಯ್ ರಾವತ್ ಹೇಳಿದ್ದಾರೆ.

“ಇದು ದೇಶಾದ್ಯಂತ ನಡೆಯಲಿದೆ. ಮಹಾರಾಷ್ಟ್ರದ ನಂತರ ಅದು ಗೋವಾ, ನಂತರ ನಾವು ಇತರ ರಾಜ್ಯಗಳಿಗೆ ಹೋಗುತ್ತೇವೆ. ಈ ದೇಶದಲ್ಲಿ ಬಿಜೆಪಿ ಹೊರತಪಡಿಸಿದ ರಾಜಕೀಯ ಒಕ್ಕೂಟವನ್ನು ಮಾಡಲು ನಾವು ಬಯಸುತ್ತೇವೆ” ಎಂದು ಶಿವಸೇನೆ ಮುಖಂಡರು ಸಾರಿದ್ದಾರೆ.

ವಿಜಯ್ ಸರ್ದೇಸಾಯಿ ಅವರು ಸಂಜಯ್ ರಾವತ್ ಅವರನ್ನು ಭೇಟಿ ಮಾಡಿರುವುದನ್ನು ದೃಢಪಡಿಸಿದ್ದಾರೆ. “ಕೇವಲ ಘೋಷಣೆಯ ನಂತರ ಸರ್ಕಾರಗಳು ಬದಲಾಗುವುದಿಲ್ಲ. ಅದು ಇದ್ದಕ್ಕಿದ್ದಂತೆ ಸಂಭವಿಸುತ್ತದೆ. ಮಹಾರಾಷ್ಟ್ರದಲ್ಲಿ ಏನಾಯಿತು, ಗೋವಾದಲ್ಲಿಯೂ ಸಹ ಆಗಬೇಕು. ಪ್ರತಿಪಕ್ಷಗಳು ಒಗ್ಗೂಡಬೇಕು. ನಾವು ಸಂಜಯ್ ರೌತ್ ಅವರನ್ನು ಭೇಟಿ ಮಾಡಿದ್ದೇವೆ. ಮಹಾರಾಷ್ಟ್ರದಲ್ಲಿ ರಚನೆಯಾದ ‘ಮಹಾ ವಿಕಾಸ್ ಅಘಾಡಿ’ ಗೋವಾಕ್ಕೂ ಕೂಡ ವಿಸ್ತರಿಸಬೇಕು” ಎಂದಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದ 19ನೇ ಸಿಎಂ ಆಗಿ ಉದ್ಧವ್‌ ಠಾಕ್ರೆ ಪ್ರಮಾಣ ವಚನ ಸ್ವೀಕಾರ: ಮೊದಲ ಬಾರಿಗೆ ಠಾಕ್ರೆ ಸರ್ಕಾರ್‌ ಶುರು

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗೋವಾದಲ್ಲಿ ಕಾಂಗ್ರೆಸ್ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಗೋವಾ ಫಾರ್ವರ್ಡ್ ಪಕ್ಷ ಬಿಜೆಪಿ ಸರ್ಕಾರ ರಚಿಸಲು ಸಹಾಯ ಮಾಡಿತು. 2017 ರಲ್ಲಿ ಕಾಂಗ್ರೆಸ್ 17 ಸ್ಥಾನಗಳನ್ನು ಗೆದ್ದಿತ್ತು. ಆದರೆ ಬಿಜೆಪಿ ಕೇವಲ 13 ಸ್ಥಾನಗಳನ್ನು ಪಡೆದಿದ್ದರೂ ಸಹ ಅವರನ್ನು ಮೀರಿಸಿ, ಅದು ಮಿತ್ರಪಕ್ಷಗಳನ್ನು ಒಲೈಸಿ ಸರ್ಕಾರ ರಚಿಸಿತ್ತು.

ವಿಜಯ್ ಸರ್ದೇಸಾಯಿ ಅವರನ್ನು ಬಿಜೆಪಿ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯನ್ನಾಗಿ ಮಾಡಲಾಗಿತ್ತು. ಆದರೆ 10 ಕಾಂಗ್ರೆಸ್ ಶಾಸಕರು ಬಿಜೆಪಿಗೆ ಪಕ್ಷಾಂತರ ಮಾಡಿದ ನಂತರ ಜುಲೈನಲ್ಲಿ ಇತರ ಗೋವಾ ಫಾರ್ವರ್ಡ್ ಪಕ್ಷದ ಮಂತ್ರಿಗಳೊಂದಿಗೆ ವಿಜಯ್ ಸರ್ದೇಸಾಯಿ ಅವರನ್ನು ಸಹ ಸಂಪುಟದಿಂದ ತೆಗೆದುಹಾಕಲಾಯಿತು. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್‌ನಿಂದ ಪಕ್ಷಾಂತರ ಮಾಡಿದವರಿಗೆ ಕ್ಯಾಬಿನೆಟ್ ಹುದ್ದೆಗಳನ್ನು ಕೊಡಲಾಗಿದೆ. ಹಾಗಾಗಿ ವಿಜಯ್ ಸರ್ದೇಸಾಯಿ ಬಿಜೆಪಿ ವಿರುದ್ಧ ಕಿಡಿಕಾರುತ್ತಿದ್ದಾರೆ.

ಪ್ರಸ್ತುತ ಗೋವಾದ 40 ಸದಸ್ಯರ ವಿಧಾನಸಭೆಯಲ್ಲಿ ಬಿಜೆಪಿಯು 27 ಸದಸ್ಯರನ್ನು ಹೊಂದಿದ್ದು, ಬಹುಮತಕ್ಕೆ ಕನಿಷ್ಟ 21 ಸೀಟುಗಳು ಬೇಕಾಗಿದ್ದು, ಗೋವಾ ಫಾರ್ವರ್ಡ್ ಪಾರ್ಟಿ ಮತ್ತು ಶಿವಸೇನೆ ನಡುವಿನ ಯಾವುದೇ ಮೈತ್ರಿಗೆ ತುತ್ತಾಗುವ ಸಾಧ್ಯತೆಯಿಲ್ಲ. ಆದರೂ ರಾಜಕೀಯ ಬೆಳವಣಿಗೆಗಳು ಏನೇನಾಗಬಹುದು ಎಂದು ಊಹಿಸಲು ಸಾಧ್ಯವಾಗುತ್ತಿಲ್ಲ.

ತನ್ನ ಚುನಾವಣಾ ಅಫಿಡವಿಟ್‌ನಲ್ಲಿ ಎರಡು ಕ್ರಿಮಿನಲ್ ಪ್ರಕರಣಗಳನ್ನು ಮರೆಮಾಚಿದ್ದಕ್ಕಾಗಿ ದೇವೇಂದ್ರ ಫಡ್ನವೀಸ್‌ಗೆ ನ್ಯಾಯಾಲಯದ ಸಮನ್ಸ್ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಂಜಯ್‌ ರಾವತ್‌ “ನನಗೆ ಗೊತ್ತಿಲ್ಲ, ನಾವು ಈಗ ಗೋವಾ ರಾಜಕೀಯದಲ್ಲಿ ನಿರತರಾಗಿದ್ದೇವೆ. ಮಹಾರಾಷ್ಟ್ರ ರಾಜಕೀಯ ಮುಗಿದಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...