Homeಮುಖಪುಟಮಹಾರಾಷ್ಟ್ರದ ನಂತರ ಗೋವಾದಲ್ಲಿಯೂ ನಮ್ಮದೆ ಸರ್ಕಾರ: BJPಗೆ ಎಚ್ಚರಿಕೆ ಕೊಟ್ಟ ಶಿವಸೇನೆಯ ಸಂಜಯ್‌ ರಾವತ್‌

ಮಹಾರಾಷ್ಟ್ರದ ನಂತರ ಗೋವಾದಲ್ಲಿಯೂ ನಮ್ಮದೆ ಸರ್ಕಾರ: BJPಗೆ ಎಚ್ಚರಿಕೆ ಕೊಟ್ಟ ಶಿವಸೇನೆಯ ಸಂಜಯ್‌ ರಾವತ್‌

- Advertisement -
- Advertisement -

ಮಹಾರಾಷ್ಟ್ರದ ನಂತರ ಗೋವಾದಲ್ಲಿಯೂ ನಮ್ಮದೇ ಸರ್ಕಾರ ರಚಿಸುತ್ತೇವೆ ಎಂದು ಶಿವಸೇನೆಯ ಸಂಜಯ್ ರೌತ್ ಬಿಜೆಪಿಗೆ ಸಂದೇಶ ನೀಡಿದ್ದಾರೆ.

ಮಹಾರಾಷ್ಟ್ರದ ನಂತರ, ಬಿಜೆಪಿ ಆಡಳಿತದ ಗೋವಾದಲ್ಲಿಯೂ ಸಹ ಪವಾಡ ನಡೆಯಲಿದೆ ಎಂದು ಶಿವಸೇನೆ ಮುಖಂಡ ಸಂಜಯ್ ರಾವತ್ ಶುಕ್ರವಾರ ಘೋಷಿಸಿದ್ದಾರೆ. ಅವರ ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು  ಎನ್‌ಸಿಪಿ ಮತ್ತು ಕಾಂಗ್ರೆಸ್ ಜೊತೆ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾದ ಕೂಡಲೇ ಸಂಜಯ್‌ ರಾವತ್‌ ಹೇಳಿಕೆ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಗೋವಾ ಫಾರ್ವರ್ಡ್ ಪಕ್ಷದ ಮಾಜಿ ಉಪಮುಖ್ಯಮಂತ್ರಿ ವಿಜಯ್ ಸರ್ದೇಸಾಯಿ ಶಿವಸೇನೆ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ರಾವತ್‌ ಹೇಳಿದ್ದಾರೆ. “ಮಹಾರಾಷ್ಟ್ರದಲ್ಲಿ ನಡೆದಂತೆಯೇ ಗೋವಾದಲ್ಲಿ ಹೊಸ ರಾಜಕೀಯ ಒಕ್ಕೂಟ ರೂಪುಗೊಳ್ಳುತ್ತಿದೆ. ಶೀಘ್ರದಲ್ಲೇ ನೀವು ಗೋವಾದಲ್ಲಿ ಒಂದು ಪವಾಡಕ್ಕೆ ಸಾಕ್ಷಿಯಾಗುತ್ತೀರಿ ಎಂದು ಸಂಜಯ್ ರಾವತ್ ಹೇಳಿದ್ದಾರೆ.

“ಇದು ದೇಶಾದ್ಯಂತ ನಡೆಯಲಿದೆ. ಮಹಾರಾಷ್ಟ್ರದ ನಂತರ ಅದು ಗೋವಾ, ನಂತರ ನಾವು ಇತರ ರಾಜ್ಯಗಳಿಗೆ ಹೋಗುತ್ತೇವೆ. ಈ ದೇಶದಲ್ಲಿ ಬಿಜೆಪಿ ಹೊರತಪಡಿಸಿದ ರಾಜಕೀಯ ಒಕ್ಕೂಟವನ್ನು ಮಾಡಲು ನಾವು ಬಯಸುತ್ತೇವೆ” ಎಂದು ಶಿವಸೇನೆ ಮುಖಂಡರು ಸಾರಿದ್ದಾರೆ.

ವಿಜಯ್ ಸರ್ದೇಸಾಯಿ ಅವರು ಸಂಜಯ್ ರಾವತ್ ಅವರನ್ನು ಭೇಟಿ ಮಾಡಿರುವುದನ್ನು ದೃಢಪಡಿಸಿದ್ದಾರೆ. “ಕೇವಲ ಘೋಷಣೆಯ ನಂತರ ಸರ್ಕಾರಗಳು ಬದಲಾಗುವುದಿಲ್ಲ. ಅದು ಇದ್ದಕ್ಕಿದ್ದಂತೆ ಸಂಭವಿಸುತ್ತದೆ. ಮಹಾರಾಷ್ಟ್ರದಲ್ಲಿ ಏನಾಯಿತು, ಗೋವಾದಲ್ಲಿಯೂ ಸಹ ಆಗಬೇಕು. ಪ್ರತಿಪಕ್ಷಗಳು ಒಗ್ಗೂಡಬೇಕು. ನಾವು ಸಂಜಯ್ ರೌತ್ ಅವರನ್ನು ಭೇಟಿ ಮಾಡಿದ್ದೇವೆ. ಮಹಾರಾಷ್ಟ್ರದಲ್ಲಿ ರಚನೆಯಾದ ‘ಮಹಾ ವಿಕಾಸ್ ಅಘಾಡಿ’ ಗೋವಾಕ್ಕೂ ಕೂಡ ವಿಸ್ತರಿಸಬೇಕು” ಎಂದಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದ 19ನೇ ಸಿಎಂ ಆಗಿ ಉದ್ಧವ್‌ ಠಾಕ್ರೆ ಪ್ರಮಾಣ ವಚನ ಸ್ವೀಕಾರ: ಮೊದಲ ಬಾರಿಗೆ ಠಾಕ್ರೆ ಸರ್ಕಾರ್‌ ಶುರು

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗೋವಾದಲ್ಲಿ ಕಾಂಗ್ರೆಸ್ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಗೋವಾ ಫಾರ್ವರ್ಡ್ ಪಕ್ಷ ಬಿಜೆಪಿ ಸರ್ಕಾರ ರಚಿಸಲು ಸಹಾಯ ಮಾಡಿತು. 2017 ರಲ್ಲಿ ಕಾಂಗ್ರೆಸ್ 17 ಸ್ಥಾನಗಳನ್ನು ಗೆದ್ದಿತ್ತು. ಆದರೆ ಬಿಜೆಪಿ ಕೇವಲ 13 ಸ್ಥಾನಗಳನ್ನು ಪಡೆದಿದ್ದರೂ ಸಹ ಅವರನ್ನು ಮೀರಿಸಿ, ಅದು ಮಿತ್ರಪಕ್ಷಗಳನ್ನು ಒಲೈಸಿ ಸರ್ಕಾರ ರಚಿಸಿತ್ತು.

ವಿಜಯ್ ಸರ್ದೇಸಾಯಿ ಅವರನ್ನು ಬಿಜೆಪಿ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯನ್ನಾಗಿ ಮಾಡಲಾಗಿತ್ತು. ಆದರೆ 10 ಕಾಂಗ್ರೆಸ್ ಶಾಸಕರು ಬಿಜೆಪಿಗೆ ಪಕ್ಷಾಂತರ ಮಾಡಿದ ನಂತರ ಜುಲೈನಲ್ಲಿ ಇತರ ಗೋವಾ ಫಾರ್ವರ್ಡ್ ಪಕ್ಷದ ಮಂತ್ರಿಗಳೊಂದಿಗೆ ವಿಜಯ್ ಸರ್ದೇಸಾಯಿ ಅವರನ್ನು ಸಹ ಸಂಪುಟದಿಂದ ತೆಗೆದುಹಾಕಲಾಯಿತು. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್‌ನಿಂದ ಪಕ್ಷಾಂತರ ಮಾಡಿದವರಿಗೆ ಕ್ಯಾಬಿನೆಟ್ ಹುದ್ದೆಗಳನ್ನು ಕೊಡಲಾಗಿದೆ. ಹಾಗಾಗಿ ವಿಜಯ್ ಸರ್ದೇಸಾಯಿ ಬಿಜೆಪಿ ವಿರುದ್ಧ ಕಿಡಿಕಾರುತ್ತಿದ್ದಾರೆ.

ಪ್ರಸ್ತುತ ಗೋವಾದ 40 ಸದಸ್ಯರ ವಿಧಾನಸಭೆಯಲ್ಲಿ ಬಿಜೆಪಿಯು 27 ಸದಸ್ಯರನ್ನು ಹೊಂದಿದ್ದು, ಬಹುಮತಕ್ಕೆ ಕನಿಷ್ಟ 21 ಸೀಟುಗಳು ಬೇಕಾಗಿದ್ದು, ಗೋವಾ ಫಾರ್ವರ್ಡ್ ಪಾರ್ಟಿ ಮತ್ತು ಶಿವಸೇನೆ ನಡುವಿನ ಯಾವುದೇ ಮೈತ್ರಿಗೆ ತುತ್ತಾಗುವ ಸಾಧ್ಯತೆಯಿಲ್ಲ. ಆದರೂ ರಾಜಕೀಯ ಬೆಳವಣಿಗೆಗಳು ಏನೇನಾಗಬಹುದು ಎಂದು ಊಹಿಸಲು ಸಾಧ್ಯವಾಗುತ್ತಿಲ್ಲ.

ತನ್ನ ಚುನಾವಣಾ ಅಫಿಡವಿಟ್‌ನಲ್ಲಿ ಎರಡು ಕ್ರಿಮಿನಲ್ ಪ್ರಕರಣಗಳನ್ನು ಮರೆಮಾಚಿದ್ದಕ್ಕಾಗಿ ದೇವೇಂದ್ರ ಫಡ್ನವೀಸ್‌ಗೆ ನ್ಯಾಯಾಲಯದ ಸಮನ್ಸ್ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಂಜಯ್‌ ರಾವತ್‌ “ನನಗೆ ಗೊತ್ತಿಲ್ಲ, ನಾವು ಈಗ ಗೋವಾ ರಾಜಕೀಯದಲ್ಲಿ ನಿರತರಾಗಿದ್ದೇವೆ. ಮಹಾರಾಷ್ಟ್ರ ರಾಜಕೀಯ ಮುಗಿದಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...