Homeಮುಖಪುಟಬಹುದಿನಗಳ ನಂತರ ಇಂದು ದೆಹಲಿ ಮಹಾನಗರ ಪಾಲಿಕೆಯ ಮೇಯರ್ ಚುನಾವಣೆ

ಬಹುದಿನಗಳ ನಂತರ ಇಂದು ದೆಹಲಿ ಮಹಾನಗರ ಪಾಲಿಕೆಯ ಮೇಯರ್ ಚುನಾವಣೆ

- Advertisement -
- Advertisement -

ದೆಹಲಿ ಮಹಾನಗರ ಪಾಲಿಕೆಯು ಮೇಯರ್ ಚುನಾವಣೆ ನಡೆಸಲು ಮೂರು ಭಾರಿ ಪ್ರಯತ್ನಿಸಿದಾಗಲೂ ವಿಫಲವಾದ ಹಿನ್ನೆಲೆ ಸುಪ್ರೀಂ ಕೋರ್ಟ್ ಆದೇಶದ ನಂತರ ಇಂದು (ಫೆಬ್ರವರಿ 22) ಹೊಸ ಮೇಯರ್ ಆಯ್ಕೆಗೆ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಬುಧವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ನಗರಸಭೆ ಸಭಾಂಗಣದಲ್ಲಿ ಮತದಾನ ಆರಂಭಗೊಂಡಿದ್ದು, ಮೇಯರ್, ಉಪಮೇಯರ್ ಹಾಗೂ ಸ್ಥಾಯಿ ಸಮಿತಿಯ ಆರು ಸದಸ್ಯರ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ.

ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರು ಕಳೆದ ವಾರ ಮುನ್ಸಿಪಲ್ ಹೌಸ್ ನಡೆಸಲು ಒಪ್ಪಿಗೆ ನೀಡಿದ ನಂತರ, ಮೇಯರ್, ಉಪ ಮೇಯರ್ ಮತ್ತು ಸ್ಥಾಯಿ ಸಮಿತಿಯ ಆರು ಸದಸ್ಯರ ಸ್ಥಾನಗಳಿಗೆ ಫೆಬ್ರವರಿ 22ರಂದು ಚುನಾವಣೆ ನಡೆಸಲು ನಿರ್ಧರಿಸಲಾಯಿತು.

ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಮೇಯರ್ ಅಭ್ಯರ್ಥಿ ಶೆಲ್ಲಿ ಒಬೆರಾಯ್ ಅವರು ಚುನಾವಣೆಯನ್ನು ಶೀಘ್ರವಾಗಿ ನಡೆಸುವಂತೆ ಕೋರಿ ಮನವಿ ಸಲ್ಲಿಸಿದ್ದರು. ಮನವಿಯನ್ನು ಆಲಿಸಿದ ನ್ಯಾಯಾಲಯವು, ಮೇಯರ್, ಉಪಮೇಯರ್ ಮತ್ತು ಸ್ಥಾಯಿ ಸಮಿತಿಯ ಸದಸ್ಯರ ಚುನಾವಣೆಯ ದಿನಾಂಕವನ್ನು ನಿಗದಿಪಡಿಸಲು ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) 24 ಗಂಟೆಯೊಳಗೆ ಮೊದಲ ಸಭೆಯನ್ನು ಕರೆಯಬೇಕು ಎಂದು ಫೆಬ್ರವರಿ 17ರಂದು ಸುಪ್ರೀಂ ಕೋರ್ಟ್ ಆದೇಶಿಸಿತ್ತು.

ಸರ್ವೋಚ್ಚ ನ್ಯಾಯಾಲಯವು ರಾಜ್ಯಪಾಲರಿಂದ ದೆಹಲಿ ಮಹಾನಗರ ಪಾಲಿಕೆಗೆ ನಾಮನಿರ್ದೇಶನಗೊಂಡ ಸದಸ್ಯರು ಮೇಯರ್‌ಅನ್ನು ಆಯ್ಕೆ ಮಾಡಲು ಮತ ಚಲಾಯಿಸುವಂತಿಲ್ಲ ಎಂದು ಹೇಳಿದೆ. ಇದು ಎಎಪಿಗೆ ವರವಾಗಲಿದೆ.

ಇದನ್ನೂ ಓದಿ: ನನ್ನ ವಿರುದ್ಧ ಸಿಬಿಐ, ಇಡಿ ಸಂಸ್ಥೆಗಳ ಸಂಪೂರ್ಣ ಅಧಿಕಾರ ಬಳಕೆ: ಕೇಂದ್ರದ ವಿರುದ್ಧ ದೆಹಲಿ ಡಿಸಿಎಂ ಆರೋಪ

ದೆಹಲಿ ಮಹಾನಗರ ಪಾಲಿಕೆ (ಡಿಎಂಸಿ) ಕಾಯಿದೆ, 1957 ರ ಪ್ರಕಾರ, ನಾಗರಿಕ ಚುನಾವಣೆಯ ನಂತರ ಸದನದ ಮೊದಲ ಅಧಿವೇಶನದಲ್ಲಿ ಮೇಯರ್ ಮತ್ತು ಉಪ ಮೇಯರ್ ಆಯ್ಕೆಯಾಗಬೇಕು. ಆದರೆ, ಡಿಸೆಂಬರ್ 4 ರಂದು ಪಾಲಿಕೆ ಚುನಾವಣೆ ನಡೆದು ಎರಡು ತಿಂಗಳಾಗಿದೆ.

ಪಾಲಿಕೆ ಚುನಾವಣೆ ಮುಗಿದ ಒಂದು ತಿಂಗಳ ನಂತರ, ಜನವರಿ 6ರಂದು ಮೊದಲ ಬಾರಿಗೆ ಸದನ ನಡೆಯಿತು. ಆದರೆ ಅಂದು ಬಿಜೆಪಿ ಮತ್ತು ಆಪ್ ಸದಸ್ಯರ ನಡುವಿನ ವಾಗ್ವಾದದ ನಂತರ ಅದನ್ನು ಮುಂದೂಡಲಾಯಿತು. ಜನವರಿ 24 ಮತ್ತು ಫೆಬ್ರವರಿ 6 ರಂದು ನಡೆದ ಎರಡನೇ ಮತ್ತು ಮೂರನೇ ಸಭೆಗಳು ಸಹ ಮೇಯರ್ ಆಯ್ಕೆಯ ಚುನಾವಣೆ ಪ್ರಕ್ರಿಯೆ ವಿಫಲವಾದವು.

ಈ ಮೇಯರ್ ಆಯ್ಕೆ ಚುನಾವಣೆಯಲ್ಲಿ 250 ಚುನಾಯಿತ ಕೌನ್ಸಿಲರ್‌ಗಳು, ಏಳು ಲೋಕಸಭೆ ಮತ್ತು ದೆಹಲಿಯ ಮೂರು ರಾಜ್ಯಸಭಾ ಸಂಸದರು ಮತ್ತು 14 ಶಾಸಕರನ್ನು ಒಳಗೊಂಡಿದೆ. ದೆಹಲಿ ಅಸೆಂಬ್ಲಿ ಸ್ಪೀಕರ್ 13 ಎಎಪಿ ಮತ್ತು ಒಬ್ಬ ಬಿಜೆಪಿ ಸದಸ್ಯರನ್ನು ಸದನಕ್ಕೆ ನಾಮನಿರ್ದೇಶನ ಮಾಡಿದ್ದಾರೆ. ಮೇಯರ್ ಚುನಾವಣೆಯಲ್ಲಿ ಒಟ್ಟು ಮತಗಳ ಸಂಖ್ಯೆ 274. ಬಿಜೆಪಿಯ 113 ಸ್ಥಾನ ಹೊಂದಿದ್ದರೆ, ಎಎಪಿ 150 ಮತಗಳನ್ನು ಹೊಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...