Homeಮುಖಪುಟತಮಿಳುನಾಡು: 1 ಗಂಟೆಗಳ ಕಾಲ ಕಾರ್ಯನಿರ್ವಹಿಸದ ಮತಯಂತ್ರ ಸಂಗ್ರಹಿಸಿಟ್ಟಿದ್ದ 'ಸ್ಟ್ರಾಂಗ್ ರೂಂ' ಹೊರಗಿನ ಸಿಸಿಟಿವಿ

ತಮಿಳುನಾಡು: 1 ಗಂಟೆಗಳ ಕಾಲ ಕಾರ್ಯನಿರ್ವಹಿಸದ ಮತಯಂತ್ರ ಸಂಗ್ರಹಿಸಿಟ್ಟಿದ್ದ ‘ಸ್ಟ್ರಾಂಗ್ ರೂಂ’ ಹೊರಗಿನ ಸಿಸಿಟಿವಿ

- Advertisement -
- Advertisement -

ತಮಿಳುನಾಡಿನ ಈರೋಡ್ ಸಂಸದೀಯ ಕ್ಷೇತ್ರದಲ್ಲಿ ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್‌ಗಳು (ಇವಿಎಂ) ಮತ್ತು ವೋಟರ್ ವೆರಿಫೈಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿಪಿಎಟಿ) ಯಂತ್ರಗಳನ್ನು ಸಂಗ್ರಹಿಸಿಟ್ಟಿದ್ದ ‘ಸ್ಟ್ರಾಂಗ್ ರೂಂ’ ಹೊರಗೆ ಇರಿಸಲಾದ ಸಿಸಿಟಿವಿ ಕ್ಯಾಮೆರಾ ಸೋಮವಾರ ನಸುಕಿನ ವೇಳೆ ಒಂದು ಗಂಟೆಯ ಕಾಲ ಸಮರ್ಪಕವಾಗಿ ಕಾರ್ಯನಿರ್ವಹಿಸಿಲ್ಲ ಎಂದು ವರದಿಯಾಗಿದೆ.

ಚಿತ್ತೋಡಿನ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ಟ್ರಾಂಗ್ ರೂಮ್ ಇತ್ತು. ಈರೋಡ್ ಜಿಲ್ಲಾ ಚುನಾವಣಾ ಅಧಿಕಾರಿ (ಡಿಇಒ) ರಾಜ ಗೋಪಾಲ್ ಸುಂಕರ ಪ್ರಕಾರ, ಸ್ಟ್ರಾಂಗ್ ರೂಮ್‌ನ ಹೊರಗಿನ ಸಿಸಿಟಿವಿ ಕ್ಯಾಮೆರಾಗಳಲ್ಲಿ ದೋಷವನ್ನು ಒಂದು ಗಂಟೆಯಲ್ಲಿ ಸರಿಪಡಿಸಲಾಗಿದೆ. ಸ್ಟ್ರಾಂಗ್ ರೂಮ್‌ನ ಹೊರಗಿನ ಎಲ್ಲಾ ಕ್ಯಾಮೆರಾಗಳು ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದ್ದಾರೆ.

ನೀಲಗಿರಿ ಲೋಕಸಭಾ ಕ್ಷೇತ್ರದ ಉದಗಮಂಡಲಂನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಮತ ಎಣಿಕೆ ಕೇಂದ್ರದಲ್ಲಿ ಇದೇ ರೀತಿಯ ಸಮಸ್ಯೆ ವರದಿಯಾಗಿದ್ದು, ಏಪ್ರಿಲ್ 27ರಂದು ಇವಿಎಂಗಳನ್ನು ಹೊಂದಿರುವ ಆರು ಸ್ಟ್ರಾಂಗ್ ರೂಮ್‌ಗಳಲ್ಲಿನ ಸಿಸಿಟಿವಿ ಕ್ಯಾಮೆರಾಗಳು 20 ನಿಮಿಷಗಳ ಕಾಲ ಯಾವುದೇ ದೃಶ್ಯವನ್ನು ದಾಖಲಿಸದೆ ಖಾಲಿಯಾಗಿದೆ.

ಇದು ಎರಡನೇ ಘಟನೆ ಹಿನ್ನೆಲೆಯಲ್ಲಿ, ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸೋಮವಾರ ಮುಖ್ಯ ಚುನಾವಣಾ ಆಯುಕ್ತರಿಗೆ (ಸಿಇಸಿ) ಪತ್ರ ಬರೆದಿದ್ದು, ಸ್ಟ್ರಾಂಗ್ ರೂಮ್‌ಗಳ ಸುರಕ್ಷತೆಯನ್ನು ಖಾತರಿಪಡಿಸಲು ಮತ್ತು ಭದ್ರತಾ ಉಲ್ಲಂಘನೆಗಳನ್ನು ತಡೆಯಲು ತ್ವರಿತ ಮಧ್ಯಸ್ಥಿಕೆಗೆ ವಿನಂತಿಸಿದ್ದಾರೆ. ಡಿಎಂಕೆ ಸಂಘಟನಾ ಕಾರ್ಯದರ್ಶಿ ಆರ್‌ಎಸ್ ಭಾರತಿ ಸಿಸಿಟಿವಿ ಕವರೇಜ್‌ನ ಅಡಚಣೆಯನ್ನು ಉದ್ದೇಶಪೂರ್ವಕವಾಗಿ ಉಂಟುಮಾಡಿಲ್ಲ ಎಂದು ಖಚಿತಪಡಿಸಿಕೊಳ್ಳುವಂತೆ ಸಿಇಸಿಗೆ ಮನವಿ ಮಾಡಿದರು.

ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಬಳಸಿರುವ ಇವಿಎಂಗಳನ್ನು ಇರಿಸಲಾಗಿರುವ ಸ್ಟ್ರಾಂಗ್ ರೂಮ್‌ಗಳಲ್ಲಿ ಮೂರು ಹಂತದ ಭದ್ರತಾ ವ್ಯವಸ್ಥೆ ಇದೆ ಎಂದು ರಾಜಾ ವಿವರಿಸಿದರು. ಈರೋಡ್‌ನ ಎಲ್ಲಾ ಸ್ಟ್ರಾಂಗ್ ರೂಮ್‌ಗಳ ಹೊರಗೆ ಒಟ್ಟು 48 ಸಿಸಿಟಿವಿ ಕ್ಯಾಮೆರಾಗಳಿವೆ. ಪ್ರತಿ ಸ್ಟ್ರಾಂಗ್ ರೂಮ್‌ನ ಹೊರಗೆ ಎಂಟು ಕ್ಯಾಮೆರಾಗಳನ್ನು ಇರಿಸಲಾಗಿದೆ, ಇವೆಲ್ಲವೂ ನಿಯಂತ್ರಣ ಕೊಠಡಿಗೆ ಸಂಪರ್ಕ ಹೊಂದಿವೆ. ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಈ ಕುರಿತ ಸಿಸಿಟಿವಿ ದೃಶ್ಯಾವಳಿಗಳನ್ನು ಮೇಲ್ವಿಚಾರಣೆ ಮಾಡಬಹುದು ಎಂದು ಹೇಳಿದ್ದಾರೆ.

ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಮೇಲ್ವಿಚಾರಣೆಯು ಚುನಾವಣಾ ಫಲಿತಾಂಶಗಳು ಬರುವ ಜೂನ್ 4ರವರೆಗೆ ಇರುತ್ತದೆ. ಫಲಿತಾಂಶಗಳ ನಂತರ ಮೂರು ತಿಂಗಳ ಅವಧಿಗೆ ಈ ತುಣುಕನ್ನು ಸಂಗ್ರಹಿಸಲಾಗುತ್ತದೆ.

2018ರಲ್ಲಿ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಇದೇ ರೀತಿಯ ಘಟನೆ ಸಂಭವಿಸಿದೆ, ಅಲ್ಲಿ ಭೋಪಾಲ್‌ನ ಸ್ಟ್ರಾಂಗ್ ರೂಮ್‌ನಲ್ಲಿ ಸಿಸಿಟಿವಿ ಕ್ಯಾಮೆರಾಗಳು ಒಂದು ಗಂಟೆಗೂ ಹೆಚ್ಚು ಕಾಲ ಕಾರ್ಯನಿರ್ವಹಿಸುವುದನ್ನು ನಿಲ್ಲಿಸಿದ್ದವು. ಘಟನೆಯ ಕುರಿತು ಪ್ರತಿಕ್ರಿಯಿಸಿದ್ದ ಚುನಾವಣಾ ಆಯೋಗ, ಇವಿಎಂಗಳನ್ನು ಟ್ಯಾಂಪರಿಂಗ್ ಮಾಡದಿದ್ದರೂ, ಸಂಬಂಧಪಟ್ಟ ಅಧಿಕಾರಿಯ ಲೋಪವನ್ನು ಗಮನಿಸಿತ್ತು.

ಇದನ್ನು ಓದಿ: ಮಣಿಪುರ ಬೆತ್ತಲೆ ಮೆರವಣಿಗೆ: ಗಲಭೆಕೋರರ ಗುಂಪಿಗೆ ಮಹಿಳೆಯರನ್ನು ಒಪ್ಪಿಸಿದ್ದ ಪೊಲೀಸರು, ಚಾರ್ಜ್‌ಶೀಟ್‌ನಲ್ಲಿ ಮಹತ್ವದ ಅಂಶಗಳು ಉಲ್ಲೇಖ  

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...