Homeಮುಖಪುಟತಮಿಳುನಾಡು: 1 ಗಂಟೆಗಳ ಕಾಲ ಕಾರ್ಯನಿರ್ವಹಿಸದ ಮತಯಂತ್ರ ಸಂಗ್ರಹಿಸಿಟ್ಟಿದ್ದ 'ಸ್ಟ್ರಾಂಗ್ ರೂಂ' ಹೊರಗಿನ ಸಿಸಿಟಿವಿ

ತಮಿಳುನಾಡು: 1 ಗಂಟೆಗಳ ಕಾಲ ಕಾರ್ಯನಿರ್ವಹಿಸದ ಮತಯಂತ್ರ ಸಂಗ್ರಹಿಸಿಟ್ಟಿದ್ದ ‘ಸ್ಟ್ರಾಂಗ್ ರೂಂ’ ಹೊರಗಿನ ಸಿಸಿಟಿವಿ

- Advertisement -
- Advertisement -

ತಮಿಳುನಾಡಿನ ಈರೋಡ್ ಸಂಸದೀಯ ಕ್ಷೇತ್ರದಲ್ಲಿ ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್‌ಗಳು (ಇವಿಎಂ) ಮತ್ತು ವೋಟರ್ ವೆರಿಫೈಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿಪಿಎಟಿ) ಯಂತ್ರಗಳನ್ನು ಸಂಗ್ರಹಿಸಿಟ್ಟಿದ್ದ ‘ಸ್ಟ್ರಾಂಗ್ ರೂಂ’ ಹೊರಗೆ ಇರಿಸಲಾದ ಸಿಸಿಟಿವಿ ಕ್ಯಾಮೆರಾ ಸೋಮವಾರ ನಸುಕಿನ ವೇಳೆ ಒಂದು ಗಂಟೆಯ ಕಾಲ ಸಮರ್ಪಕವಾಗಿ ಕಾರ್ಯನಿರ್ವಹಿಸಿಲ್ಲ ಎಂದು ವರದಿಯಾಗಿದೆ.

ಚಿತ್ತೋಡಿನ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ಟ್ರಾಂಗ್ ರೂಮ್ ಇತ್ತು. ಈರೋಡ್ ಜಿಲ್ಲಾ ಚುನಾವಣಾ ಅಧಿಕಾರಿ (ಡಿಇಒ) ರಾಜ ಗೋಪಾಲ್ ಸುಂಕರ ಪ್ರಕಾರ, ಸ್ಟ್ರಾಂಗ್ ರೂಮ್‌ನ ಹೊರಗಿನ ಸಿಸಿಟಿವಿ ಕ್ಯಾಮೆರಾಗಳಲ್ಲಿ ದೋಷವನ್ನು ಒಂದು ಗಂಟೆಯಲ್ಲಿ ಸರಿಪಡಿಸಲಾಗಿದೆ. ಸ್ಟ್ರಾಂಗ್ ರೂಮ್‌ನ ಹೊರಗಿನ ಎಲ್ಲಾ ಕ್ಯಾಮೆರಾಗಳು ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದ್ದಾರೆ.

ನೀಲಗಿರಿ ಲೋಕಸಭಾ ಕ್ಷೇತ್ರದ ಉದಗಮಂಡಲಂನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಮತ ಎಣಿಕೆ ಕೇಂದ್ರದಲ್ಲಿ ಇದೇ ರೀತಿಯ ಸಮಸ್ಯೆ ವರದಿಯಾಗಿದ್ದು, ಏಪ್ರಿಲ್ 27ರಂದು ಇವಿಎಂಗಳನ್ನು ಹೊಂದಿರುವ ಆರು ಸ್ಟ್ರಾಂಗ್ ರೂಮ್‌ಗಳಲ್ಲಿನ ಸಿಸಿಟಿವಿ ಕ್ಯಾಮೆರಾಗಳು 20 ನಿಮಿಷಗಳ ಕಾಲ ಯಾವುದೇ ದೃಶ್ಯವನ್ನು ದಾಖಲಿಸದೆ ಖಾಲಿಯಾಗಿದೆ.

ಇದು ಎರಡನೇ ಘಟನೆ ಹಿನ್ನೆಲೆಯಲ್ಲಿ, ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸೋಮವಾರ ಮುಖ್ಯ ಚುನಾವಣಾ ಆಯುಕ್ತರಿಗೆ (ಸಿಇಸಿ) ಪತ್ರ ಬರೆದಿದ್ದು, ಸ್ಟ್ರಾಂಗ್ ರೂಮ್‌ಗಳ ಸುರಕ್ಷತೆಯನ್ನು ಖಾತರಿಪಡಿಸಲು ಮತ್ತು ಭದ್ರತಾ ಉಲ್ಲಂಘನೆಗಳನ್ನು ತಡೆಯಲು ತ್ವರಿತ ಮಧ್ಯಸ್ಥಿಕೆಗೆ ವಿನಂತಿಸಿದ್ದಾರೆ. ಡಿಎಂಕೆ ಸಂಘಟನಾ ಕಾರ್ಯದರ್ಶಿ ಆರ್‌ಎಸ್ ಭಾರತಿ ಸಿಸಿಟಿವಿ ಕವರೇಜ್‌ನ ಅಡಚಣೆಯನ್ನು ಉದ್ದೇಶಪೂರ್ವಕವಾಗಿ ಉಂಟುಮಾಡಿಲ್ಲ ಎಂದು ಖಚಿತಪಡಿಸಿಕೊಳ್ಳುವಂತೆ ಸಿಇಸಿಗೆ ಮನವಿ ಮಾಡಿದರು.

ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಬಳಸಿರುವ ಇವಿಎಂಗಳನ್ನು ಇರಿಸಲಾಗಿರುವ ಸ್ಟ್ರಾಂಗ್ ರೂಮ್‌ಗಳಲ್ಲಿ ಮೂರು ಹಂತದ ಭದ್ರತಾ ವ್ಯವಸ್ಥೆ ಇದೆ ಎಂದು ರಾಜಾ ವಿವರಿಸಿದರು. ಈರೋಡ್‌ನ ಎಲ್ಲಾ ಸ್ಟ್ರಾಂಗ್ ರೂಮ್‌ಗಳ ಹೊರಗೆ ಒಟ್ಟು 48 ಸಿಸಿಟಿವಿ ಕ್ಯಾಮೆರಾಗಳಿವೆ. ಪ್ರತಿ ಸ್ಟ್ರಾಂಗ್ ರೂಮ್‌ನ ಹೊರಗೆ ಎಂಟು ಕ್ಯಾಮೆರಾಗಳನ್ನು ಇರಿಸಲಾಗಿದೆ, ಇವೆಲ್ಲವೂ ನಿಯಂತ್ರಣ ಕೊಠಡಿಗೆ ಸಂಪರ್ಕ ಹೊಂದಿವೆ. ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಈ ಕುರಿತ ಸಿಸಿಟಿವಿ ದೃಶ್ಯಾವಳಿಗಳನ್ನು ಮೇಲ್ವಿಚಾರಣೆ ಮಾಡಬಹುದು ಎಂದು ಹೇಳಿದ್ದಾರೆ.

ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಮೇಲ್ವಿಚಾರಣೆಯು ಚುನಾವಣಾ ಫಲಿತಾಂಶಗಳು ಬರುವ ಜೂನ್ 4ರವರೆಗೆ ಇರುತ್ತದೆ. ಫಲಿತಾಂಶಗಳ ನಂತರ ಮೂರು ತಿಂಗಳ ಅವಧಿಗೆ ಈ ತುಣುಕನ್ನು ಸಂಗ್ರಹಿಸಲಾಗುತ್ತದೆ.

2018ರಲ್ಲಿ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಇದೇ ರೀತಿಯ ಘಟನೆ ಸಂಭವಿಸಿದೆ, ಅಲ್ಲಿ ಭೋಪಾಲ್‌ನ ಸ್ಟ್ರಾಂಗ್ ರೂಮ್‌ನಲ್ಲಿ ಸಿಸಿಟಿವಿ ಕ್ಯಾಮೆರಾಗಳು ಒಂದು ಗಂಟೆಗೂ ಹೆಚ್ಚು ಕಾಲ ಕಾರ್ಯನಿರ್ವಹಿಸುವುದನ್ನು ನಿಲ್ಲಿಸಿದ್ದವು. ಘಟನೆಯ ಕುರಿತು ಪ್ರತಿಕ್ರಿಯಿಸಿದ್ದ ಚುನಾವಣಾ ಆಯೋಗ, ಇವಿಎಂಗಳನ್ನು ಟ್ಯಾಂಪರಿಂಗ್ ಮಾಡದಿದ್ದರೂ, ಸಂಬಂಧಪಟ್ಟ ಅಧಿಕಾರಿಯ ಲೋಪವನ್ನು ಗಮನಿಸಿತ್ತು.

ಇದನ್ನು ಓದಿ: ಮಣಿಪುರ ಬೆತ್ತಲೆ ಮೆರವಣಿಗೆ: ಗಲಭೆಕೋರರ ಗುಂಪಿಗೆ ಮಹಿಳೆಯರನ್ನು ಒಪ್ಪಿಸಿದ್ದ ಪೊಲೀಸರು, ಚಾರ್ಜ್‌ಶೀಟ್‌ನಲ್ಲಿ ಮಹತ್ವದ ಅಂಶಗಳು ಉಲ್ಲೇಖ  

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...