Homeಮುಖಪುಟಪೂಜಾ ಖೇಡ್ಕರ್ ಬಳಿಕ ಈಗ ಮಾಜಿ ಐಎಎಸ್ ಅಧಿಕಾರಿ ಅಭಿಷೇಕ್ ಸಿಂಗ್ ಆಯ್ಕೆ ಕುರಿತು ವಿವಾದ...

ಪೂಜಾ ಖೇಡ್ಕರ್ ಬಳಿಕ ಈಗ ಮಾಜಿ ಐಎಎಸ್ ಅಧಿಕಾರಿ ಅಭಿಷೇಕ್ ಸಿಂಗ್ ಆಯ್ಕೆ ಕುರಿತು ವಿವಾದ ಸೃಷ್ಟಿ

- Advertisement -
- Advertisement -

ತರಬೇತಿ ನಿರತ (ಪ್ರೊಬೇಷನರಿ) ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರು ಉದ್ಯೋಗ ಪಡೆಯಲು ನಕಲಿ ಅಂಗವೈಕಲ್ಯ ಪ್ರಮಾಣಪತ್ರವನ್ನು ಸಲ್ಲಿಸಿದ್ದಾರೆ ಎಂಬ ಆರೋಪದ ನಡುವೆ, ಇದೀಗ ಮತ್ತೊಬ್ಬ ಮಾಜಿ ಅಧಿಕಾರಿಯನ್ನು ಅಂಗವಿಕಲತೆಯ ಮಾನದಂಡದ ಅಡಿಯಲ್ಲಿ ಆಯ್ಕೆ ಮಾಡಿರುವ ಕುರಿತು ಪ್ರಶ್ನೆಗಳು ಎದ್ದಿವೆ.

ನಟನಾಗಲು ಕಳೆದ ವರ್ಷ ರಾಜೀನಾಮೆ ನೀಡಿರುವ 2011 ರ ಬ್ಯಾಚ್ ಐಎಎಸ್ ಅಧಿಕಾರಿ ಅಭಿಷೇಕ್ ಸಿಂಗ್ ಅವರ ನೃತ್ಯ ಮತ್ತು ಜಿಮ್ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ನಂತರ ಟೀಕೆಗೆ ಒಳಗಾಗಿದ್ದಾರೆ.

ಹಲವಾರು ಬಳಕೆದಾರರು ಅಭಿಷೇಕ್ ಸಿಂಗ್ ಅವರು ಹಂಚಿಕೊಂಡಿರುವ ವಿಡಿಯೋಗಳಿಗೆ ಕಾಮೆಂಟ್ ಮಾಡಿದ್ದು, ಆಡಳಿತ ಹುದ್ದೆಗಳಲ್ಲಿನ ಆಯ್ಕೆ ಪ್ರಕ್ರಿಯೆಯಲ್ಲಿ ಹೆಚ್ಚಿನ ಪಾರದರ್ಶಕತೆ ಮತ್ತು ಉತ್ತರದಾಯಿತ್ವ ಕಾಪಾಡುವಂತೆ ಆಗ್ರಹಿಸಿದ್ದಾರೆ.

ಯುಪಿಎಸ್‌ಸಿ ಆಯ್ಕೆ ಪ್ರಕ್ರಿಯೆಯಲ್ಲಿ ರಿಯಾಯಿತಿ ಲಾಭಗಳನ್ನು ಪಡೆದುಕೊಳ್ಳಲು ಸಿಂಗ್ ತನಗೆ ಚಲನಶೀಲತೆ ಅಂಗವೈಕಲ್ಯವಿದೆ ಎಂದು ಹೇಳಿಕೊಂಡಿದ್ದರು.

ಆರೋಪಗಳಿಗೆ ಪ್ರತಿಕ್ರಿಯಿಸಿದ ಅಭಿಷೇಕ್ ಸಿಂಗ್, ಮೀಸಲಾತಿಯನ್ನು ಬೆಂಬಲಿಸುವುದಕ್ಕಾಗಿ ನನ್ನನ್ನು ಗುರಿಯಾಗಿಸಲಾಗುತ್ತಿದೆ ಎಂದು ಹೇಳಿದ್ದಾರೆ.

“ನಾನು ಯಾವುದೇ ಟೀಕೆಯಿಂದ ಪ್ರಭಾವಿತನಾಗಿರದಿದ್ದರೂ ನನ್ನ ಬೆಂಬಲಿಗರು ಕೇಳಿಕೊಂಡಿದ್ದರಿಂದ ಇದೇ ಮೊದಲ ಬಾರಿಗೆ ನನ್ನ ಟೀಕಾಕಾರರಿಗೆ ಉತ್ತರಿಸುತ್ತಿದ್ದೇನೆ. ನಾನು ಮೀಸಲಾತಿಗಳನ್ನು ಬೆಂಬಲಿಸಲು ಆರಂಭಿಸಿದಾಗಿನಿಂದ ಮೀಸಲಾತಿ ವಿರೋಧಿಗಳು ನನ್ನನ್ನು ಗುರಿಯಾಗಿಸಿಕೊಂಡಿದ್ದಾರೆ. ಅವರು ನನ್ನ ಜಾತಿ ಮತ್ತು ಉದ್ಯೋಗವನ್ನು ಪ್ರಶ್ನಿಸುತ್ತಾರೆ. ನಾನು ಪ್ರತಿಯೊಂದನ್ನೂ ಕಠಿಣ ಶ್ರಮ ಮತ್ತು ಧೈರ್ಯದಿಂದ ಸಾಧಿಸಿದ್ದೇನೆ,ಮೀಸಲಾತಿಯಿಂದಲ್ಲ” ಎಂದು ಸಿಂಗ್ ಎಕ್ಸ್ ಪೋಸ್ಟ್‌ನಲ್ಲಿ ಹೇಳಿದ್ದಾರೆ.

“ನಾನು ಯುನೈಟೆಡ್ ಬೈ ಬ್ಲಡ್ ಮತ್ತು ನೋ ಶೇಮ್ ಮೂವ್‌ಮೆಂಟ್‌ನಂತಹ ನನ್ನ ಉಪಕ್ರಮಗಳ ಮೂಲಕ ಸರ್ಕಾರದ ನೆರವಿಲ್ಲದೆ ಸಾಮಾಜಿಕ ಕಾರ್ಯಗಳನ್ನು ಮಾಡಿದ್ದೇನೆ. ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಜನಸಂಖ್ಯೆಗೆ ಅನುಗುಣವಾಗಿರಬೇಕು ಎಂದು ನಾನು ನಂಬಿದ್ದೇನೆ ಮತ್ತು ಆ ನಿಟ್ಟಿನಲ್ಲಿ ನಾನು ಶ್ರಮಿಸುತ್ತೇನೆ. ನಿಮ್ಮಲ್ಲಿ ಪ್ರತಿಭೆ ಇದೆ ಎಂದು ನೀವು ಭಾವಿಸಿದ್ದರೆ ಸರ್ಕಾರಿ ಉದ್ಯೋಗಗಳಿಗೆ ಪ್ರಯತ್ನಿಸುವುದನ್ನು ನಿಲ್ಲಿಸಿ ಮತ್ತು ವ್ಯವಹಾರ, ಕ್ರೀಡೆ ಅಥವಾ ನಟನೆಯಲ್ಲಿ ಏಳಿಗೆಯನ್ನು ಸಾಧಿಸಿ. ಅಲ್ಲಿ ಯಾವುದೇ ಮಿಸಲಾತಿಯಿಲ್ಲ” ಎಂದಿರುವ ಸಿಂಗ್, ನಾನು ನನ್ನ ಪ್ರತಿಭೆ, ಆತ್ಮವಿಶ್ವಾಸ ಮತ್ತು ಧೈರ್ಯದ ಬಲದಿಂದ ಮುಂದೆ ಸಾಗುತ್ತೇನೆ, ಯಾರದೇ ಕೃಪೆಯಿಂದಲ್ಲ” ಎಂದು ಹೇಳಿದ್ದಾರೆ.

ಪೂಜಾ ಖೇಡ್ಕರ್ ಅವರು ತಮ್ಮ ಖಾಸಗಿ ಆಡಿ ಕಾರಿಗೆ ಸೈರನ್ ಬಳಸಿ ವಿವಾದಕ್ಕೆ ಸಿಲುಕಿದ್ದಾರೆ. ಅಲ್ಲದೆ, ಕಿರಿಯ ಅಧಿಕಾರಿಗಳಿಗೆ ಲಭ್ಯವಿಲ್ಲದ ಪ್ರತ್ಯೇಕ ಮನೆ ಮತ್ತು ಕಾರು ಸವಲತ್ತುಗಳ ಬೇಡಿಕೆಗಳನ್ನೂ ಮುಂದಿಟ್ಟಿದ್ದಾರೆ ಎಂದು ವರದಿಯಾಗಿದೆ. 2023ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಪೂಜಾ ಖೇಡ್ಕರ್ ಹಲವು ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದಾರೆ.

ಯಪಿಎಸ್‌ಸಿಗೆ ಸಲ್ಲಿಸಿದ್ದ ಅಫಿಡವಿಟ್‌ನಲ್ಲಿ ಖೇಡ್ಕರ್ ಅವರು ದೃಷ್ಟಿ ಮತ್ತು ಮಾನಸಿಕವಾಗಿ ದುರ್ಬಲರಾಗಿರುವುದಾಗಿ ಹೇಳಿಕೊಂಡಿದ್ದರು. ಆದರೆ, ಅದನ್ನು ಖಚಿತಪಡಿಸಲು ಕಡ್ಡಾಯ ವೈದ್ಯಕೀಯ ಪರೀಕ್ಷೆಗಳಿಗೆ ಒಳಗಾಗಲು ನಿರಾಕರಿಸಿದ್ದರು.

ಪೂಜಾ ಖೇಡ್ಕರ್ ವಿರುದ್ಧದ ಆರೋಪಗಳನ್ನು ಪರಿಶೀಲಿಸಲು ಕೇಂದ್ರ ಸರ್ಕಾರ ಏಕಸದಸ್ಯ ಸಮಿತಿಯನ್ನು ರಚಿಸಿದೆ. ಪೂಜಾ ಖೇಡ್ಕರ್ ತಪ್ಪಿತಸ್ಥರೆಂದು ಕಂಡುಬಂದರೆ ಅವರನ್ನು ವಜಾಗೊಳಿಸಬಹುದು ಎಂದು ಮೂಲಗಳು ತಿಳಿಸಿವೆ. ಸತ್ಯ ಮರೆಮಾಚಿ ಸುಳ್ಳು ಹೇಳಿರುವ ಆರೋಪಗಳು ಸಾಬೀತಾದರೆ, ಅವರು ಕ್ರಿಮಿನಲ್ ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ವರದಿಯಾಗಿದೆ.

ಇದನ್ನೂ ಓದಿ : ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಪಕ್ಷವನ್ನು ನಿಷೇಧಿಸಲು ಪಾಕಿಸ್ತಾನ ಸರ್ಕಾರ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...