Homeಮುಖಪುಟಪೂಜಾ ಖೇಡ್ಕರ್ ಬಳಿಕ ಈಗ ಮಾಜಿ ಐಎಎಸ್ ಅಧಿಕಾರಿ ಅಭಿಷೇಕ್ ಸಿಂಗ್ ಆಯ್ಕೆ ಕುರಿತು ವಿವಾದ...

ಪೂಜಾ ಖೇಡ್ಕರ್ ಬಳಿಕ ಈಗ ಮಾಜಿ ಐಎಎಸ್ ಅಧಿಕಾರಿ ಅಭಿಷೇಕ್ ಸಿಂಗ್ ಆಯ್ಕೆ ಕುರಿತು ವಿವಾದ ಸೃಷ್ಟಿ

- Advertisement -
- Advertisement -

ತರಬೇತಿ ನಿರತ (ಪ್ರೊಬೇಷನರಿ) ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರು ಉದ್ಯೋಗ ಪಡೆಯಲು ನಕಲಿ ಅಂಗವೈಕಲ್ಯ ಪ್ರಮಾಣಪತ್ರವನ್ನು ಸಲ್ಲಿಸಿದ್ದಾರೆ ಎಂಬ ಆರೋಪದ ನಡುವೆ, ಇದೀಗ ಮತ್ತೊಬ್ಬ ಮಾಜಿ ಅಧಿಕಾರಿಯನ್ನು ಅಂಗವಿಕಲತೆಯ ಮಾನದಂಡದ ಅಡಿಯಲ್ಲಿ ಆಯ್ಕೆ ಮಾಡಿರುವ ಕುರಿತು ಪ್ರಶ್ನೆಗಳು ಎದ್ದಿವೆ.

ನಟನಾಗಲು ಕಳೆದ ವರ್ಷ ರಾಜೀನಾಮೆ ನೀಡಿರುವ 2011 ರ ಬ್ಯಾಚ್ ಐಎಎಸ್ ಅಧಿಕಾರಿ ಅಭಿಷೇಕ್ ಸಿಂಗ್ ಅವರ ನೃತ್ಯ ಮತ್ತು ಜಿಮ್ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ನಂತರ ಟೀಕೆಗೆ ಒಳಗಾಗಿದ್ದಾರೆ.

ಹಲವಾರು ಬಳಕೆದಾರರು ಅಭಿಷೇಕ್ ಸಿಂಗ್ ಅವರು ಹಂಚಿಕೊಂಡಿರುವ ವಿಡಿಯೋಗಳಿಗೆ ಕಾಮೆಂಟ್ ಮಾಡಿದ್ದು, ಆಡಳಿತ ಹುದ್ದೆಗಳಲ್ಲಿನ ಆಯ್ಕೆ ಪ್ರಕ್ರಿಯೆಯಲ್ಲಿ ಹೆಚ್ಚಿನ ಪಾರದರ್ಶಕತೆ ಮತ್ತು ಉತ್ತರದಾಯಿತ್ವ ಕಾಪಾಡುವಂತೆ ಆಗ್ರಹಿಸಿದ್ದಾರೆ.

ಯುಪಿಎಸ್‌ಸಿ ಆಯ್ಕೆ ಪ್ರಕ್ರಿಯೆಯಲ್ಲಿ ರಿಯಾಯಿತಿ ಲಾಭಗಳನ್ನು ಪಡೆದುಕೊಳ್ಳಲು ಸಿಂಗ್ ತನಗೆ ಚಲನಶೀಲತೆ ಅಂಗವೈಕಲ್ಯವಿದೆ ಎಂದು ಹೇಳಿಕೊಂಡಿದ್ದರು.

ಆರೋಪಗಳಿಗೆ ಪ್ರತಿಕ್ರಿಯಿಸಿದ ಅಭಿಷೇಕ್ ಸಿಂಗ್, ಮೀಸಲಾತಿಯನ್ನು ಬೆಂಬಲಿಸುವುದಕ್ಕಾಗಿ ನನ್ನನ್ನು ಗುರಿಯಾಗಿಸಲಾಗುತ್ತಿದೆ ಎಂದು ಹೇಳಿದ್ದಾರೆ.

“ನಾನು ಯಾವುದೇ ಟೀಕೆಯಿಂದ ಪ್ರಭಾವಿತನಾಗಿರದಿದ್ದರೂ ನನ್ನ ಬೆಂಬಲಿಗರು ಕೇಳಿಕೊಂಡಿದ್ದರಿಂದ ಇದೇ ಮೊದಲ ಬಾರಿಗೆ ನನ್ನ ಟೀಕಾಕಾರರಿಗೆ ಉತ್ತರಿಸುತ್ತಿದ್ದೇನೆ. ನಾನು ಮೀಸಲಾತಿಗಳನ್ನು ಬೆಂಬಲಿಸಲು ಆರಂಭಿಸಿದಾಗಿನಿಂದ ಮೀಸಲಾತಿ ವಿರೋಧಿಗಳು ನನ್ನನ್ನು ಗುರಿಯಾಗಿಸಿಕೊಂಡಿದ್ದಾರೆ. ಅವರು ನನ್ನ ಜಾತಿ ಮತ್ತು ಉದ್ಯೋಗವನ್ನು ಪ್ರಶ್ನಿಸುತ್ತಾರೆ. ನಾನು ಪ್ರತಿಯೊಂದನ್ನೂ ಕಠಿಣ ಶ್ರಮ ಮತ್ತು ಧೈರ್ಯದಿಂದ ಸಾಧಿಸಿದ್ದೇನೆ,ಮೀಸಲಾತಿಯಿಂದಲ್ಲ” ಎಂದು ಸಿಂಗ್ ಎಕ್ಸ್ ಪೋಸ್ಟ್‌ನಲ್ಲಿ ಹೇಳಿದ್ದಾರೆ.

“ನಾನು ಯುನೈಟೆಡ್ ಬೈ ಬ್ಲಡ್ ಮತ್ತು ನೋ ಶೇಮ್ ಮೂವ್‌ಮೆಂಟ್‌ನಂತಹ ನನ್ನ ಉಪಕ್ರಮಗಳ ಮೂಲಕ ಸರ್ಕಾರದ ನೆರವಿಲ್ಲದೆ ಸಾಮಾಜಿಕ ಕಾರ್ಯಗಳನ್ನು ಮಾಡಿದ್ದೇನೆ. ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಜನಸಂಖ್ಯೆಗೆ ಅನುಗುಣವಾಗಿರಬೇಕು ಎಂದು ನಾನು ನಂಬಿದ್ದೇನೆ ಮತ್ತು ಆ ನಿಟ್ಟಿನಲ್ಲಿ ನಾನು ಶ್ರಮಿಸುತ್ತೇನೆ. ನಿಮ್ಮಲ್ಲಿ ಪ್ರತಿಭೆ ಇದೆ ಎಂದು ನೀವು ಭಾವಿಸಿದ್ದರೆ ಸರ್ಕಾರಿ ಉದ್ಯೋಗಗಳಿಗೆ ಪ್ರಯತ್ನಿಸುವುದನ್ನು ನಿಲ್ಲಿಸಿ ಮತ್ತು ವ್ಯವಹಾರ, ಕ್ರೀಡೆ ಅಥವಾ ನಟನೆಯಲ್ಲಿ ಏಳಿಗೆಯನ್ನು ಸಾಧಿಸಿ. ಅಲ್ಲಿ ಯಾವುದೇ ಮಿಸಲಾತಿಯಿಲ್ಲ” ಎಂದಿರುವ ಸಿಂಗ್, ನಾನು ನನ್ನ ಪ್ರತಿಭೆ, ಆತ್ಮವಿಶ್ವಾಸ ಮತ್ತು ಧೈರ್ಯದ ಬಲದಿಂದ ಮುಂದೆ ಸಾಗುತ್ತೇನೆ, ಯಾರದೇ ಕೃಪೆಯಿಂದಲ್ಲ” ಎಂದು ಹೇಳಿದ್ದಾರೆ.

ಪೂಜಾ ಖೇಡ್ಕರ್ ಅವರು ತಮ್ಮ ಖಾಸಗಿ ಆಡಿ ಕಾರಿಗೆ ಸೈರನ್ ಬಳಸಿ ವಿವಾದಕ್ಕೆ ಸಿಲುಕಿದ್ದಾರೆ. ಅಲ್ಲದೆ, ಕಿರಿಯ ಅಧಿಕಾರಿಗಳಿಗೆ ಲಭ್ಯವಿಲ್ಲದ ಪ್ರತ್ಯೇಕ ಮನೆ ಮತ್ತು ಕಾರು ಸವಲತ್ತುಗಳ ಬೇಡಿಕೆಗಳನ್ನೂ ಮುಂದಿಟ್ಟಿದ್ದಾರೆ ಎಂದು ವರದಿಯಾಗಿದೆ. 2023ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಪೂಜಾ ಖೇಡ್ಕರ್ ಹಲವು ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದಾರೆ.

ಯಪಿಎಸ್‌ಸಿಗೆ ಸಲ್ಲಿಸಿದ್ದ ಅಫಿಡವಿಟ್‌ನಲ್ಲಿ ಖೇಡ್ಕರ್ ಅವರು ದೃಷ್ಟಿ ಮತ್ತು ಮಾನಸಿಕವಾಗಿ ದುರ್ಬಲರಾಗಿರುವುದಾಗಿ ಹೇಳಿಕೊಂಡಿದ್ದರು. ಆದರೆ, ಅದನ್ನು ಖಚಿತಪಡಿಸಲು ಕಡ್ಡಾಯ ವೈದ್ಯಕೀಯ ಪರೀಕ್ಷೆಗಳಿಗೆ ಒಳಗಾಗಲು ನಿರಾಕರಿಸಿದ್ದರು.

ಪೂಜಾ ಖೇಡ್ಕರ್ ವಿರುದ್ಧದ ಆರೋಪಗಳನ್ನು ಪರಿಶೀಲಿಸಲು ಕೇಂದ್ರ ಸರ್ಕಾರ ಏಕಸದಸ್ಯ ಸಮಿತಿಯನ್ನು ರಚಿಸಿದೆ. ಪೂಜಾ ಖೇಡ್ಕರ್ ತಪ್ಪಿತಸ್ಥರೆಂದು ಕಂಡುಬಂದರೆ ಅವರನ್ನು ವಜಾಗೊಳಿಸಬಹುದು ಎಂದು ಮೂಲಗಳು ತಿಳಿಸಿವೆ. ಸತ್ಯ ಮರೆಮಾಚಿ ಸುಳ್ಳು ಹೇಳಿರುವ ಆರೋಪಗಳು ಸಾಬೀತಾದರೆ, ಅವರು ಕ್ರಿಮಿನಲ್ ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ವರದಿಯಾಗಿದೆ.

ಇದನ್ನೂ ಓದಿ : ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಪಕ್ಷವನ್ನು ನಿಷೇಧಿಸಲು ಪಾಕಿಸ್ತಾನ ಸರ್ಕಾರ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...