Homeಮುಖಪುಟಪೂಜಾ ಖೇಡ್ಕರ್ ಬಳಿಕ ಈಗ ಮಾಜಿ ಐಎಎಸ್ ಅಧಿಕಾರಿ ಅಭಿಷೇಕ್ ಸಿಂಗ್ ಆಯ್ಕೆ ಕುರಿತು ವಿವಾದ...

ಪೂಜಾ ಖೇಡ್ಕರ್ ಬಳಿಕ ಈಗ ಮಾಜಿ ಐಎಎಸ್ ಅಧಿಕಾರಿ ಅಭಿಷೇಕ್ ಸಿಂಗ್ ಆಯ್ಕೆ ಕುರಿತು ವಿವಾದ ಸೃಷ್ಟಿ

- Advertisement -
- Advertisement -

ತರಬೇತಿ ನಿರತ (ಪ್ರೊಬೇಷನರಿ) ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರು ಉದ್ಯೋಗ ಪಡೆಯಲು ನಕಲಿ ಅಂಗವೈಕಲ್ಯ ಪ್ರಮಾಣಪತ್ರವನ್ನು ಸಲ್ಲಿಸಿದ್ದಾರೆ ಎಂಬ ಆರೋಪದ ನಡುವೆ, ಇದೀಗ ಮತ್ತೊಬ್ಬ ಮಾಜಿ ಅಧಿಕಾರಿಯನ್ನು ಅಂಗವಿಕಲತೆಯ ಮಾನದಂಡದ ಅಡಿಯಲ್ಲಿ ಆಯ್ಕೆ ಮಾಡಿರುವ ಕುರಿತು ಪ್ರಶ್ನೆಗಳು ಎದ್ದಿವೆ.

ನಟನಾಗಲು ಕಳೆದ ವರ್ಷ ರಾಜೀನಾಮೆ ನೀಡಿರುವ 2011 ರ ಬ್ಯಾಚ್ ಐಎಎಸ್ ಅಧಿಕಾರಿ ಅಭಿಷೇಕ್ ಸಿಂಗ್ ಅವರ ನೃತ್ಯ ಮತ್ತು ಜಿಮ್ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ನಂತರ ಟೀಕೆಗೆ ಒಳಗಾಗಿದ್ದಾರೆ.

ಹಲವಾರು ಬಳಕೆದಾರರು ಅಭಿಷೇಕ್ ಸಿಂಗ್ ಅವರು ಹಂಚಿಕೊಂಡಿರುವ ವಿಡಿಯೋಗಳಿಗೆ ಕಾಮೆಂಟ್ ಮಾಡಿದ್ದು, ಆಡಳಿತ ಹುದ್ದೆಗಳಲ್ಲಿನ ಆಯ್ಕೆ ಪ್ರಕ್ರಿಯೆಯಲ್ಲಿ ಹೆಚ್ಚಿನ ಪಾರದರ್ಶಕತೆ ಮತ್ತು ಉತ್ತರದಾಯಿತ್ವ ಕಾಪಾಡುವಂತೆ ಆಗ್ರಹಿಸಿದ್ದಾರೆ.

ಯುಪಿಎಸ್‌ಸಿ ಆಯ್ಕೆ ಪ್ರಕ್ರಿಯೆಯಲ್ಲಿ ರಿಯಾಯಿತಿ ಲಾಭಗಳನ್ನು ಪಡೆದುಕೊಳ್ಳಲು ಸಿಂಗ್ ತನಗೆ ಚಲನಶೀಲತೆ ಅಂಗವೈಕಲ್ಯವಿದೆ ಎಂದು ಹೇಳಿಕೊಂಡಿದ್ದರು.

ಆರೋಪಗಳಿಗೆ ಪ್ರತಿಕ್ರಿಯಿಸಿದ ಅಭಿಷೇಕ್ ಸಿಂಗ್, ಮೀಸಲಾತಿಯನ್ನು ಬೆಂಬಲಿಸುವುದಕ್ಕಾಗಿ ನನ್ನನ್ನು ಗುರಿಯಾಗಿಸಲಾಗುತ್ತಿದೆ ಎಂದು ಹೇಳಿದ್ದಾರೆ.

“ನಾನು ಯಾವುದೇ ಟೀಕೆಯಿಂದ ಪ್ರಭಾವಿತನಾಗಿರದಿದ್ದರೂ ನನ್ನ ಬೆಂಬಲಿಗರು ಕೇಳಿಕೊಂಡಿದ್ದರಿಂದ ಇದೇ ಮೊದಲ ಬಾರಿಗೆ ನನ್ನ ಟೀಕಾಕಾರರಿಗೆ ಉತ್ತರಿಸುತ್ತಿದ್ದೇನೆ. ನಾನು ಮೀಸಲಾತಿಗಳನ್ನು ಬೆಂಬಲಿಸಲು ಆರಂಭಿಸಿದಾಗಿನಿಂದ ಮೀಸಲಾತಿ ವಿರೋಧಿಗಳು ನನ್ನನ್ನು ಗುರಿಯಾಗಿಸಿಕೊಂಡಿದ್ದಾರೆ. ಅವರು ನನ್ನ ಜಾತಿ ಮತ್ತು ಉದ್ಯೋಗವನ್ನು ಪ್ರಶ್ನಿಸುತ್ತಾರೆ. ನಾನು ಪ್ರತಿಯೊಂದನ್ನೂ ಕಠಿಣ ಶ್ರಮ ಮತ್ತು ಧೈರ್ಯದಿಂದ ಸಾಧಿಸಿದ್ದೇನೆ,ಮೀಸಲಾತಿಯಿಂದಲ್ಲ” ಎಂದು ಸಿಂಗ್ ಎಕ್ಸ್ ಪೋಸ್ಟ್‌ನಲ್ಲಿ ಹೇಳಿದ್ದಾರೆ.

“ನಾನು ಯುನೈಟೆಡ್ ಬೈ ಬ್ಲಡ್ ಮತ್ತು ನೋ ಶೇಮ್ ಮೂವ್‌ಮೆಂಟ್‌ನಂತಹ ನನ್ನ ಉಪಕ್ರಮಗಳ ಮೂಲಕ ಸರ್ಕಾರದ ನೆರವಿಲ್ಲದೆ ಸಾಮಾಜಿಕ ಕಾರ್ಯಗಳನ್ನು ಮಾಡಿದ್ದೇನೆ. ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಜನಸಂಖ್ಯೆಗೆ ಅನುಗುಣವಾಗಿರಬೇಕು ಎಂದು ನಾನು ನಂಬಿದ್ದೇನೆ ಮತ್ತು ಆ ನಿಟ್ಟಿನಲ್ಲಿ ನಾನು ಶ್ರಮಿಸುತ್ತೇನೆ. ನಿಮ್ಮಲ್ಲಿ ಪ್ರತಿಭೆ ಇದೆ ಎಂದು ನೀವು ಭಾವಿಸಿದ್ದರೆ ಸರ್ಕಾರಿ ಉದ್ಯೋಗಗಳಿಗೆ ಪ್ರಯತ್ನಿಸುವುದನ್ನು ನಿಲ್ಲಿಸಿ ಮತ್ತು ವ್ಯವಹಾರ, ಕ್ರೀಡೆ ಅಥವಾ ನಟನೆಯಲ್ಲಿ ಏಳಿಗೆಯನ್ನು ಸಾಧಿಸಿ. ಅಲ್ಲಿ ಯಾವುದೇ ಮಿಸಲಾತಿಯಿಲ್ಲ” ಎಂದಿರುವ ಸಿಂಗ್, ನಾನು ನನ್ನ ಪ್ರತಿಭೆ, ಆತ್ಮವಿಶ್ವಾಸ ಮತ್ತು ಧೈರ್ಯದ ಬಲದಿಂದ ಮುಂದೆ ಸಾಗುತ್ತೇನೆ, ಯಾರದೇ ಕೃಪೆಯಿಂದಲ್ಲ” ಎಂದು ಹೇಳಿದ್ದಾರೆ.

ಪೂಜಾ ಖೇಡ್ಕರ್ ಅವರು ತಮ್ಮ ಖಾಸಗಿ ಆಡಿ ಕಾರಿಗೆ ಸೈರನ್ ಬಳಸಿ ವಿವಾದಕ್ಕೆ ಸಿಲುಕಿದ್ದಾರೆ. ಅಲ್ಲದೆ, ಕಿರಿಯ ಅಧಿಕಾರಿಗಳಿಗೆ ಲಭ್ಯವಿಲ್ಲದ ಪ್ರತ್ಯೇಕ ಮನೆ ಮತ್ತು ಕಾರು ಸವಲತ್ತುಗಳ ಬೇಡಿಕೆಗಳನ್ನೂ ಮುಂದಿಟ್ಟಿದ್ದಾರೆ ಎಂದು ವರದಿಯಾಗಿದೆ. 2023ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಪೂಜಾ ಖೇಡ್ಕರ್ ಹಲವು ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದಾರೆ.

ಯಪಿಎಸ್‌ಸಿಗೆ ಸಲ್ಲಿಸಿದ್ದ ಅಫಿಡವಿಟ್‌ನಲ್ಲಿ ಖೇಡ್ಕರ್ ಅವರು ದೃಷ್ಟಿ ಮತ್ತು ಮಾನಸಿಕವಾಗಿ ದುರ್ಬಲರಾಗಿರುವುದಾಗಿ ಹೇಳಿಕೊಂಡಿದ್ದರು. ಆದರೆ, ಅದನ್ನು ಖಚಿತಪಡಿಸಲು ಕಡ್ಡಾಯ ವೈದ್ಯಕೀಯ ಪರೀಕ್ಷೆಗಳಿಗೆ ಒಳಗಾಗಲು ನಿರಾಕರಿಸಿದ್ದರು.

ಪೂಜಾ ಖೇಡ್ಕರ್ ವಿರುದ್ಧದ ಆರೋಪಗಳನ್ನು ಪರಿಶೀಲಿಸಲು ಕೇಂದ್ರ ಸರ್ಕಾರ ಏಕಸದಸ್ಯ ಸಮಿತಿಯನ್ನು ರಚಿಸಿದೆ. ಪೂಜಾ ಖೇಡ್ಕರ್ ತಪ್ಪಿತಸ್ಥರೆಂದು ಕಂಡುಬಂದರೆ ಅವರನ್ನು ವಜಾಗೊಳಿಸಬಹುದು ಎಂದು ಮೂಲಗಳು ತಿಳಿಸಿವೆ. ಸತ್ಯ ಮರೆಮಾಚಿ ಸುಳ್ಳು ಹೇಳಿರುವ ಆರೋಪಗಳು ಸಾಬೀತಾದರೆ, ಅವರು ಕ್ರಿಮಿನಲ್ ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ವರದಿಯಾಗಿದೆ.

ಇದನ್ನೂ ಓದಿ : ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಪಕ್ಷವನ್ನು ನಿಷೇಧಿಸಲು ಪಾಕಿಸ್ತಾನ ಸರ್ಕಾರ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...