Homeಮುಖಪುಟಪೂಜಾ ಖೇಡ್ಕರ್ ಬಳಿಕ ಈಗ ಮಾಜಿ ಐಎಎಸ್ ಅಧಿಕಾರಿ ಅಭಿಷೇಕ್ ಸಿಂಗ್ ಆಯ್ಕೆ ಕುರಿತು ವಿವಾದ...

ಪೂಜಾ ಖೇಡ್ಕರ್ ಬಳಿಕ ಈಗ ಮಾಜಿ ಐಎಎಸ್ ಅಧಿಕಾರಿ ಅಭಿಷೇಕ್ ಸಿಂಗ್ ಆಯ್ಕೆ ಕುರಿತು ವಿವಾದ ಸೃಷ್ಟಿ

- Advertisement -
- Advertisement -

ತರಬೇತಿ ನಿರತ (ಪ್ರೊಬೇಷನರಿ) ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರು ಉದ್ಯೋಗ ಪಡೆಯಲು ನಕಲಿ ಅಂಗವೈಕಲ್ಯ ಪ್ರಮಾಣಪತ್ರವನ್ನು ಸಲ್ಲಿಸಿದ್ದಾರೆ ಎಂಬ ಆರೋಪದ ನಡುವೆ, ಇದೀಗ ಮತ್ತೊಬ್ಬ ಮಾಜಿ ಅಧಿಕಾರಿಯನ್ನು ಅಂಗವಿಕಲತೆಯ ಮಾನದಂಡದ ಅಡಿಯಲ್ಲಿ ಆಯ್ಕೆ ಮಾಡಿರುವ ಕುರಿತು ಪ್ರಶ್ನೆಗಳು ಎದ್ದಿವೆ.

ನಟನಾಗಲು ಕಳೆದ ವರ್ಷ ರಾಜೀನಾಮೆ ನೀಡಿರುವ 2011 ರ ಬ್ಯಾಚ್ ಐಎಎಸ್ ಅಧಿಕಾರಿ ಅಭಿಷೇಕ್ ಸಿಂಗ್ ಅವರ ನೃತ್ಯ ಮತ್ತು ಜಿಮ್ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ನಂತರ ಟೀಕೆಗೆ ಒಳಗಾಗಿದ್ದಾರೆ.

ಹಲವಾರು ಬಳಕೆದಾರರು ಅಭಿಷೇಕ್ ಸಿಂಗ್ ಅವರು ಹಂಚಿಕೊಂಡಿರುವ ವಿಡಿಯೋಗಳಿಗೆ ಕಾಮೆಂಟ್ ಮಾಡಿದ್ದು, ಆಡಳಿತ ಹುದ್ದೆಗಳಲ್ಲಿನ ಆಯ್ಕೆ ಪ್ರಕ್ರಿಯೆಯಲ್ಲಿ ಹೆಚ್ಚಿನ ಪಾರದರ್ಶಕತೆ ಮತ್ತು ಉತ್ತರದಾಯಿತ್ವ ಕಾಪಾಡುವಂತೆ ಆಗ್ರಹಿಸಿದ್ದಾರೆ.

ಯುಪಿಎಸ್‌ಸಿ ಆಯ್ಕೆ ಪ್ರಕ್ರಿಯೆಯಲ್ಲಿ ರಿಯಾಯಿತಿ ಲಾಭಗಳನ್ನು ಪಡೆದುಕೊಳ್ಳಲು ಸಿಂಗ್ ತನಗೆ ಚಲನಶೀಲತೆ ಅಂಗವೈಕಲ್ಯವಿದೆ ಎಂದು ಹೇಳಿಕೊಂಡಿದ್ದರು.

ಆರೋಪಗಳಿಗೆ ಪ್ರತಿಕ್ರಿಯಿಸಿದ ಅಭಿಷೇಕ್ ಸಿಂಗ್, ಮೀಸಲಾತಿಯನ್ನು ಬೆಂಬಲಿಸುವುದಕ್ಕಾಗಿ ನನ್ನನ್ನು ಗುರಿಯಾಗಿಸಲಾಗುತ್ತಿದೆ ಎಂದು ಹೇಳಿದ್ದಾರೆ.

“ನಾನು ಯಾವುದೇ ಟೀಕೆಯಿಂದ ಪ್ರಭಾವಿತನಾಗಿರದಿದ್ದರೂ ನನ್ನ ಬೆಂಬಲಿಗರು ಕೇಳಿಕೊಂಡಿದ್ದರಿಂದ ಇದೇ ಮೊದಲ ಬಾರಿಗೆ ನನ್ನ ಟೀಕಾಕಾರರಿಗೆ ಉತ್ತರಿಸುತ್ತಿದ್ದೇನೆ. ನಾನು ಮೀಸಲಾತಿಗಳನ್ನು ಬೆಂಬಲಿಸಲು ಆರಂಭಿಸಿದಾಗಿನಿಂದ ಮೀಸಲಾತಿ ವಿರೋಧಿಗಳು ನನ್ನನ್ನು ಗುರಿಯಾಗಿಸಿಕೊಂಡಿದ್ದಾರೆ. ಅವರು ನನ್ನ ಜಾತಿ ಮತ್ತು ಉದ್ಯೋಗವನ್ನು ಪ್ರಶ್ನಿಸುತ್ತಾರೆ. ನಾನು ಪ್ರತಿಯೊಂದನ್ನೂ ಕಠಿಣ ಶ್ರಮ ಮತ್ತು ಧೈರ್ಯದಿಂದ ಸಾಧಿಸಿದ್ದೇನೆ,ಮೀಸಲಾತಿಯಿಂದಲ್ಲ” ಎಂದು ಸಿಂಗ್ ಎಕ್ಸ್ ಪೋಸ್ಟ್‌ನಲ್ಲಿ ಹೇಳಿದ್ದಾರೆ.

“ನಾನು ಯುನೈಟೆಡ್ ಬೈ ಬ್ಲಡ್ ಮತ್ತು ನೋ ಶೇಮ್ ಮೂವ್‌ಮೆಂಟ್‌ನಂತಹ ನನ್ನ ಉಪಕ್ರಮಗಳ ಮೂಲಕ ಸರ್ಕಾರದ ನೆರವಿಲ್ಲದೆ ಸಾಮಾಜಿಕ ಕಾರ್ಯಗಳನ್ನು ಮಾಡಿದ್ದೇನೆ. ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಜನಸಂಖ್ಯೆಗೆ ಅನುಗುಣವಾಗಿರಬೇಕು ಎಂದು ನಾನು ನಂಬಿದ್ದೇನೆ ಮತ್ತು ಆ ನಿಟ್ಟಿನಲ್ಲಿ ನಾನು ಶ್ರಮಿಸುತ್ತೇನೆ. ನಿಮ್ಮಲ್ಲಿ ಪ್ರತಿಭೆ ಇದೆ ಎಂದು ನೀವು ಭಾವಿಸಿದ್ದರೆ ಸರ್ಕಾರಿ ಉದ್ಯೋಗಗಳಿಗೆ ಪ್ರಯತ್ನಿಸುವುದನ್ನು ನಿಲ್ಲಿಸಿ ಮತ್ತು ವ್ಯವಹಾರ, ಕ್ರೀಡೆ ಅಥವಾ ನಟನೆಯಲ್ಲಿ ಏಳಿಗೆಯನ್ನು ಸಾಧಿಸಿ. ಅಲ್ಲಿ ಯಾವುದೇ ಮಿಸಲಾತಿಯಿಲ್ಲ” ಎಂದಿರುವ ಸಿಂಗ್, ನಾನು ನನ್ನ ಪ್ರತಿಭೆ, ಆತ್ಮವಿಶ್ವಾಸ ಮತ್ತು ಧೈರ್ಯದ ಬಲದಿಂದ ಮುಂದೆ ಸಾಗುತ್ತೇನೆ, ಯಾರದೇ ಕೃಪೆಯಿಂದಲ್ಲ” ಎಂದು ಹೇಳಿದ್ದಾರೆ.

ಪೂಜಾ ಖೇಡ್ಕರ್ ಅವರು ತಮ್ಮ ಖಾಸಗಿ ಆಡಿ ಕಾರಿಗೆ ಸೈರನ್ ಬಳಸಿ ವಿವಾದಕ್ಕೆ ಸಿಲುಕಿದ್ದಾರೆ. ಅಲ್ಲದೆ, ಕಿರಿಯ ಅಧಿಕಾರಿಗಳಿಗೆ ಲಭ್ಯವಿಲ್ಲದ ಪ್ರತ್ಯೇಕ ಮನೆ ಮತ್ತು ಕಾರು ಸವಲತ್ತುಗಳ ಬೇಡಿಕೆಗಳನ್ನೂ ಮುಂದಿಟ್ಟಿದ್ದಾರೆ ಎಂದು ವರದಿಯಾಗಿದೆ. 2023ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಪೂಜಾ ಖೇಡ್ಕರ್ ಹಲವು ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದಾರೆ.

ಯಪಿಎಸ್‌ಸಿಗೆ ಸಲ್ಲಿಸಿದ್ದ ಅಫಿಡವಿಟ್‌ನಲ್ಲಿ ಖೇಡ್ಕರ್ ಅವರು ದೃಷ್ಟಿ ಮತ್ತು ಮಾನಸಿಕವಾಗಿ ದುರ್ಬಲರಾಗಿರುವುದಾಗಿ ಹೇಳಿಕೊಂಡಿದ್ದರು. ಆದರೆ, ಅದನ್ನು ಖಚಿತಪಡಿಸಲು ಕಡ್ಡಾಯ ವೈದ್ಯಕೀಯ ಪರೀಕ್ಷೆಗಳಿಗೆ ಒಳಗಾಗಲು ನಿರಾಕರಿಸಿದ್ದರು.

ಪೂಜಾ ಖೇಡ್ಕರ್ ವಿರುದ್ಧದ ಆರೋಪಗಳನ್ನು ಪರಿಶೀಲಿಸಲು ಕೇಂದ್ರ ಸರ್ಕಾರ ಏಕಸದಸ್ಯ ಸಮಿತಿಯನ್ನು ರಚಿಸಿದೆ. ಪೂಜಾ ಖೇಡ್ಕರ್ ತಪ್ಪಿತಸ್ಥರೆಂದು ಕಂಡುಬಂದರೆ ಅವರನ್ನು ವಜಾಗೊಳಿಸಬಹುದು ಎಂದು ಮೂಲಗಳು ತಿಳಿಸಿವೆ. ಸತ್ಯ ಮರೆಮಾಚಿ ಸುಳ್ಳು ಹೇಳಿರುವ ಆರೋಪಗಳು ಸಾಬೀತಾದರೆ, ಅವರು ಕ್ರಿಮಿನಲ್ ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ವರದಿಯಾಗಿದೆ.

ಇದನ್ನೂ ಓದಿ : ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಪಕ್ಷವನ್ನು ನಿಷೇಧಿಸಲು ಪಾಕಿಸ್ತಾನ ಸರ್ಕಾರ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...