Homeಅಂತರಾಷ್ಟ್ರೀಯರಾಜೀನಾಮೆ ನಂತರವೂ ಮುಂದುವರೆದ ಪ್ರತಿಭಟನೆ: ನೌಕಾನೆಲೆಯಲ್ಲಿ ಅವಿತುಕೂತ ಮಾಜಿ ಪ್ರಧಾನಿ ಮಹಿಂದ ರಾಜಪಕ್ಸೆ

ರಾಜೀನಾಮೆ ನಂತರವೂ ಮುಂದುವರೆದ ಪ್ರತಿಭಟನೆ: ನೌಕಾನೆಲೆಯಲ್ಲಿ ಅವಿತುಕೂತ ಮಾಜಿ ಪ್ರಧಾನಿ ಮಹಿಂದ ರಾಜಪಕ್ಸೆ

- Advertisement -
- Advertisement -

ಶ್ರೀಲಂಕಾದಲ್ಲಿ ಭುಗಿಲೆದ್ದಿರುವ ಭಾರಿ ಪ್ರತಿಭಟನೆಗೆ ಬೆದರಿ ಅಲ್ಲಿನ ಮಾಜಿ ಪ್ರಧಾನಿ ಮಹಿಂದ ರಾಜಪಕ್ಸೆ ಮತ್ತು ಅವರ ಕುಟುಂಬವು ದೇಶದ ಈಶಾನ್ಯ ಭಾಗದಲ್ಲಿರುವ ಟ್ರಿಂಕೋಮಲಿಯಲ್ಲಿರುವ ನೌಕಾ ನೆಲೆಯಲ್ಲಿ ಆಶ್ರಯ ಪಡೆದಿದೆ ಎಂದು ಮೂಲಗಳನ್ನು ಉಲ್ಲೇಖಿಸಿ NDTV ವರದಿ ಮಾಡಿದೆ. ಶ್ರೀಲಂಕಾದಾದ್ಯಂತ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟಿನ ನಡುವೆ ಭಾರಿ ಪ್ರತಿಭಟನೆಗಳು ಮುಂದುವರಿದಿವೆ.

ಮಾಜಿ ಪ್ರಧಾನಿ ಮತ್ತು ಅವರ ಕುಟುಂಬವನ್ನು ಹೆಲಿಕಾಪ್ಟರ್‌ ಮೂಲಕ ನೌಕಾನೆಲೆಗೆ ಕೊಂಡೊಯ್ಯಲಾಯಿತು ಎಂದು ಎನ್‌ಡಿಟಿವಿ ಉಲ್ಲೇಖಿಸಿದೆ. ರಾಜಧಾನಿ ಕೊಲಂಬೊದಿಂದ ಸುಮಾರು 270 ಕಿಮೀ ದೂರದಲ್ಲಿರುವ ನೌಕಾ ನೆಲೆಯ ಹೊರಗೆ ಕೂಡಾ ಪ್ರತಿಭಟನೆಗಳು ನಡೆದಿವೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾರಿ ಆರ್ಥಿಕ ಬಿಕ್ಕಟ್ಟಿನ ಹಿನ್ನಲೆಯಲ್ಲಿ ವಾರಗಳಿಂದ ನಡೆಯುತ್ತಿರುವ ಪ್ರತಿಭಟನೆಗಳ ಭೀಕರ ಹಿಂಸಾಚಾರದಲ್ಲಿ ಐದು ಜನರು ಸಾವನ್ನಪ್ಪಿದ್ದಾರೆ. ಇದರ ನಂತರ ಶ್ರಿಲಂಕಾ ಆಡಳಿತ ಕರ್ಫ್ಯೂ ಜಾರಿಗೊಳಿಸಿದ್ದು, ಅದಕ್ಕಾಗಿ ಸಾವಿರಾರು ಸೈನಿಕರು ಮತ್ತು ಪೊಲೀಸರನ್ನು ನಿಯೋಜಿಸಿದೆ. ಪ್ರಧಾನಿ ರಾಜಪಕ್ಸೆ ರಾಜೀನಾಮೆಯ ನಂತರ ನಡೆದ ಹಿಂಸಾಚಾರದಲ್ಲಿ ಸುಮಾರು 200 ಮಂದಿ ನಿನ್ನೆ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ತೀವ್ರವಾದ ಪ್ರತಿಭಟನೆ: ಶ್ರೀಲಂಕಾ ಪ್ರಧಾನಿ ರಾಜೀನಾಮೆ

ಕೊಲಂಬೊದಲ್ಲಿನ ರಾಜಪಕ್ಸೆ ಅವರ ಅವರ ಅಧಿಕೃತ ನಿವಾಸಕ್ಕೆ ರಾತ್ರೋರಾತ್ರಿ ಸಾವಿರಾರು ಸರ್ಕಾರಿ ವಿರೋಧಿ ಪ್ರತಿಭಟನಾಕಾರರು ಆಗಮಿಸಿದ್ದರಿಂದ ಪೊಲೀಸರು ಅಶ್ರುವಾಯು ಮತ್ತು ಎಚ್ಚರಿಕೆಯ ಗುಂಡುಗಳನ್ನು ಸಿಡಿಸಿ ಗುಂಪನ್ನು ಹಿಮ್ಮೆಟ್ಟಿಸಿದ್ದಾರೆ. ಇದರ ನಂತರ ಇಂದು ಮುಂಜಾನೆ ಶ್ರಿಲಂಕಾ ಸೇನೆ ಕಾರ್ಯಾಚರಣೆ ನಡೆಸಿ ಅವರನ್ನು ಅಲ್ಲಿಂದ ಅವರನ್ನು ರಕ್ಷಿಸಿದ್ದಾರೆ.

“ಕನಿಷ್ಠ 10 ಪೆಟ್ರೋಲ್ ಬಾಂಬ್‌ಗಳನ್ನು ಕಾಂಪೌಂಡ್‌ಗೆ ಎಸೆಯಲಾಯಿತು” ಎಂದು ಉನ್ನತ ಭದ್ರತಾ ಅಧಿಕಾರಿಯನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ AFP ವರದಿ ಮಾಡಿದೆ.

1948 ರಲ್ಲಿ ಸ್ವತಂತ್ರಗೊಂದ ಶ್ರೀಲಂಕಾದಲ್ಲಿ ಅತ್ಯಂತ ಭೀಕರ ಆರ್ಥಿಕ ಬಿಕ್ಕಟ್ಟು ಸಂಭವಿಸಿದ್ದು ಇದರಿಂದಾಗಿ ವಿದ್ಯುತ್ ಕಡಿತ ಮತ್ತು ಕೊರತೆಗಳಿಂದ ರಾಜಪಕ್ಸೆ ಕುಟುಂಬದ ಅಧಿಕಾರವು ಅಲುಗಾಡಿದೆ.

ಇದನ್ನೂ ಓದಿ: ಆಸ್ಟ್ರೇಲಿಯಾ ಸೇರಿದಂತೆ ಮೂರು ದೇಶಗಳ ರಾಯಭಾರ ಕಚೇರಿಗಳನ್ನು ಮುಚ್ಚಿದ ಶ್ರೀಲಂಕಾ

ಶ್ರೀಲಂಕಾದ ಪ್ರಮುಖ ವಿರೋಧ ಪಕ್ಷವಾದ SJB ತನ್ನ ಅಡಿಯಲ್ಲಿ ಮಧ್ಯಂತರ ಸರ್ಕಾರವನ್ನು ರಚಿಸುವ ಅಧ್ಯಕ್ಷರ ಪ್ರಸ್ತಾಪವನ್ನು ಇಂದು ತಿರಸ್ಕರಿಸಿದೆ. ಬದಲಿಗೆ ಅದು ರಾಷ್ಟ್ರದ ಅಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದೆ.

ಹಲವು ವಾರಗಳಿಂದ ಸರ್ಕಾರದ ವಿರುದ್ದ ಶಾಂತಿಯುತವಾದ ಪ್ರತಿಭಟನಾ ಪ್ರದರ್ಶನಗಳು ನಡೆಯುತ್ತಿದೆ. ಆದರೆ ನಿನ್ನೆ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರು ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರ ನಂತರ ಬೆಂಬಲಿಗರು ಗ್ರಾಮಾಂತರ ಪ್ರದೇಶದಿಂದ ರಾಜಧಾನಿಗೆ ನುಗ್ಗಿ ಪ್ರತಿಭಟನಾಕಾರರ ಮೇಲೆ ದೊಣ್ಣೆಗಳಿಂದ ದಾಳಿ ಮಾಡಿದ್ದರಿಂದ ಹಿಂಸಾಚಾರ ಭುಗಿಲೆದ್ದಿದೆ.

ದೇಶದ ರಾಜಧಾನಿ ಕೊಲಂಬೊದ ಹೊರಗೆ ಆಡಳಿತ ಪಕ್ಷದ ಸಂಸದ ಅಮರಕೀರ್ತಿ ಅತುಕೋರಾಲ ಅವರು ಸರ್ಕಾರಿ ವಿರೋಧಿ ಪ್ರತಿಭಟನಾಕಾರರ ಗುಂಪಿನಿಂದ ಸುತ್ತುವರಿದ ನಂತರ ಇಬ್ಬರನ್ನು ಗುಂಡಿಕ್ಕಿದ್ದರು. ಈ ವೇಳೆ 27 ವರ್ಷದ ವ್ಯಕ್ತಿಯನ್ನು ಅವರು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. “ನಂತರ ಅವರು ತನ್ನ ರಿವಾಲ್ವರ್‌ನಿಂದ ತನ್ನ ಪ್ರಾಣವನ್ನು ತೆಗೆದುಕೊಂಡಿದ್ದಾರೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು AFP ಗೆ ತಿಳಿಸಿದ್ದಾರೆ. ಸ್ಥಳದಲ್ಲಿ ಅತುಕೋರಾಲ ಅವರ ಅಂಗರಕ್ಷಕ ಕೂಡ ಶವವಾಗಿ ಪತ್ತೆಯಾಗಿದ್ದಾರೆ.

ಇದನ್ನೂ ಓದಿ: ಪ್ರತಿಭಟನೆಯನ್ನು ಹತ್ತಿಕ್ಕಲು ಭಾರತೀಯ ಸೈನಿಕರ ಆಗಮನದ ವರದಿಯನ್ನು ನಿರಾಕರಿಸಿದ ಶ್ರೀಲಂಕಾ ಸೇನೆ

ಕರ್ಫ್ಯೂಗಳ ಹೊರತಾಗಿಯೂ ಆಡಳಿತ ಪಕ್ಷದ ಉನ್ನತ ರಾಜಕಾರಣಿಗಳ ಕನಿಷ್ಠ 41 ಮನೆಗಳನ್ನು ರಾತ್ರಿಯಿಡೀ ಸುಟ್ಟು ಹಾಕಲಾಗಿದೆ. ಆ ಮನೆಗಳಲ್ಲಿ ನಿಲ್ಲಿಸಿದ್ದ ನೂರಾರು ದ್ವಿಚಕ್ರ ವಾಹನಗಳೂ ಸುಟ್ಟು ಕರಕಲಾಗಿವೆ. “ಇದು ನಾವು ಮೊದಲೇ ಮಾಡಬೇಕಾಗಿದ್ದ ಕೆಲಸ” ಎಂದು ಸಚಿವರೊಬ್ಬರ ಸುಡುವ ಮನೆಯ ಮುಂದೆ ಅಪರಿಚಿತ ವ್ಯಕ್ತಿಯೊಬ್ಬ ಸ್ಥಳೀಯ ಮಾಧ್ಯಮ ನೆಟ್ವರ್ಕ್‌ಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...